ಯಾಕಂದರೆ ಪರಲೋಕರಾಜ್ಯವು ದೂರ ದೇಶಕ್ಕೆ ಪ್ರಯಾಣಮಾಡುವ ಒಬ್ಬ ಮನುಷ್ಯನು ತನ್ನ ಸ್ವಂತ ಸೇವಕರನ್ನು ಕರೆದು ಅವರಿಗೆ ತನ್ನ ಆಸ್ತಿಯನ್ನು ಒಪ್ಪಿಸಿದಂತೆ ಇದೆ.
Cross references
ಮತ್ತೊಂದು ಸಾಮ್ಯವನ್ನು ಕೇಳಿರಿ: ಒಬ್ಬ ಮನೇ ಯಜಮಾನನು ದ್ರಾಕ್ಷೇತೋಟವನ್ನು ನೆಟ್ಟು ಅದರ ಸುತ್ತಲೂ ಬೇಲಿಹಾಕಿ ಅದರೊಳಗೆ ತೊಟ್ಟಿಯನ್ನು ಅಗೆದು ಗೋಪುರವನ್ನು ಕಟ್ಟಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ದೂರದೇಶಕ್ಕೆ ಹೋದನು.
ಯಾಕಂದರೆ ಪರಲೋಕರಾಜ್ಯವು ದೂರ ದೇಶಕ್ಕೆ ಪ್ರಯಾಣಮಾಡುವ ಒಬ್ಬ ಮನುಷ್ಯನು ತನ್ನ ಸ್ವಂತ ಸೇವಕರನ್ನು ಕರೆದು ಅವರಿಗೆ ತನ್ನ ಆಸ್ತಿಯನ್ನು ಒಪ್ಪಿಸಿದಂತೆ ಇದೆ.
ಮನುಷ್ಯಕುಮಾರನು ದೂರದ ಪ್ರಯಾಣವನ್ನು ಕೈಕೊಂಡು ತನ್ನ ಮನೆಯನ್ನು ಬಿಟ್ಟು ತನ್ನ ಸೇವಕರಿಗೆ ಅಧಿಕಾರವನ್ನು ಮತ್ತು ಪ್ರತಿಯೊ ಬ್ಬನಿಗೆ ಅವನವನ ಕೆಲಸವನ್ನು ಕೊಟ್ಟು ಬಾಗಲು ಕಾಯು ವವನಿಗೆ ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇದ್ದಾನೆ.
ತರುವಾಯ ಆತನು ತನ್ನ ಶಿಷ್ಯರಿಗೂ
ಅದೇ ನಂದರೆ--ಕೀರ್ತಿವಂತನಾದ ಒಬ್ಬಾನೊಬ್ಬ ಮನುಷ್ಯನು ತನಗೋಸ್ಕರ ರಾಜ್ಯವನ್ನು ಪಡೆದುಕೊಂಡು ತಿರಿಗಿ ಬರುವದಕ್ಕಾಗಿ ದೂರ ದೇಶಕ್ಕೆ ಹೊರಟುಹೋದನು.
ಇದಲ್ಲದೆ ಆತನು ಜನರಿಗೆ ಈ ಸಾಮ್ಯವನ್ನು ಹೇಳುವದಕ್ಕೆ ಪ್ರಾರಂಭಿಸಿ--ಒಬ್ಬಾನೊಬ್ಬ ಮನುಷ್ಯನು ದ್ರಾಕ್ಷೇತೋಟವನ್ನು ನೆಟ್ಟು ಅದನ್ನು ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ಬಹುಕಾಲದ ವರೆಗೆ ಒಂದು ದೂರ ದೇಶಕ್ಕೆ ಹೊರಟುಹೋದನು.
ಹೀಗೆ ಕೃಪೆಗನುಸಾರವಾಗಿ ನಮಗೆ ವಿಧವಿಧವಾದ ವರಗಳು ಕೊಡಲ್ಪಟ್ಟಿರಲು ಅವುಗಳಲ್ಲಿ ಅದು ಪ್ರವಾದನೆ ಯಾಗಿದ್ದರೆ ನಂಬಿಕೆಯ ಪ್ರಮಾಣಕ್ಕೆ ತಕ್ಕಂತೆ ಪ್ರವಾದಿಸೋಣ.
ಹಾಗಾದರೆ ಪೌಲನು ಯಾರು? ಅಪೊಲ್ಲೋಸನು ಯಾರು? ಅವರು ಸೇವಕರು, ಅವರ ಮುಖಾಂತರ ನೀವು ನಂಬುವವರಾದಿರಿ; ಕರ್ತನು ಒಬ್ಬೊಬ್ಬನಿಗೆ ದಯಪಾಲಿಸಿದ ಪ್ರಕಾರ ಅವರು ಸೇವೆ ಮಾಡುವವ ರಾಗಿದ್ದಾರೆ.
ಒಬ್ಬನು ನಮ್ಮನ್ನು ಕ್ರಿಸ್ತನ ಸೇವಕರೆಂತಲೂ ದೇವರ ಮರ್ಮಗಳ ವಿಷಯದಲ್ಲಿ ಮನೆವಾರ್ತೆಯವರೆಂತಲೂ ಎಣಿಸಲಿ.
ವರಗಳಲ್ಲಿ ಬೇರೆ ಬೇರೆ ವಿಧಗಳುಂಟು. ಆದರೆ ಆತ್ಮನು ಒಬ್ಬನೇ;
ಆದರೆ ಪವಿತ್ರಾತ್ಮನ ಪ್ರಕಟನೆಯು ಪ್ರತಿಯೊಬ್ಬನ ಪ್ರಯೋಜನಕ್ಕಾಗಿ ಕೊಡಲ್ಪಟ್ಟಿದೆ.
ಪರಿಶುದ್ಧರನ್ನು ಯೋಗ್ಯಸ್ಥಿತಿಗೆ ತರುವ ಕೆಲಸಕ್ಕೋಸ್ಕರವೂ ಸೇವೆಯ ಕೆಲಸಕ್ಕೋಸ್ಕರವೂ ಕ್ರಿಸ್ತನ ದೇಹವು ಅಭಿವೃದ್ಧಿಯಾಗುವದಕ್ಕೂಸ್ಕರವೂ
ಗುಣುಗುಟ್ಟದೆ ಒಬ್ಬರಿಗೊಬ್ಬರು ಅತಿಥಿ ಸತ್ಕಾರ ಮಾಡಿರಿ.