ಅವರಲ್ಲಿ ಐದುಮಂದಿ ಬುದ್ಧಿವಂತೆಯರೂ ಐದು ಮಂದಿ ಬುದ್ಧಿಹೀನರೂ ಇದ್ದರು.
Cross references
ಪ್ರವಾದಿಯಾದ ಯೆರೆವಿಾಯನು ಯೆಹೂ ದದ ಸಮಸ್ತ ಜನರಿಗೂ ಯೆರೂಸಲೇಮಿನ ಎಲ್ಲಾ ನಿವಾಸಿಗಳಿಗೂ ತಿಳಿಸಿದ್ದು ಏನಂದರೆ--
ಆದದರಿಂದ ಯಾವನಾದರೂ ನಾನು ಹೇಳುವ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವವನನ್ನು ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಹೋಲಿಸುವೆನು.
ಯಾವನಾದರೂ ರಾಜ್ಯದ ವಾಕ್ಯವನ್ನು ಕೇಳಿ ಗ್ರಹಿಸದೆ ಇರುವಾಗ ಕೆಡುಕನು ಬಂದು ಅವನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಬಿಡು ವನು; ದಾರಿಯ ಮಗ್ಗುಲಲ್ಲಿ ಬೀಜವನ್ನು ಅಂಗೀಕರಿ ಸಿದವನು ಇವನೇ.
ಹೊಲವು ಈ ಲೋಕ; ಒಳ್ಳೇ ಬೀಜವು ರಾಜ್ಯದ ಮಕ್ಕಳಾಗಿದ್ದಾರೆ; ಆದರೆ ಹಣಜಿಯು ಕೆಡುಕನ ಮಕ್ಕಳಾಗಿದ್ದಾರೆ.
ಪರಲೋಕರಾಜ್ಯವು ಸಮುದ್ರದಲ್ಲಿ ಬೀಸಲ್ಪಟ್ಟು ಎಲ್ಲಾ ತರವಾದದ್ದನ್ನು (ಮಾನುಗಳನ್ನು) ಕೂಡಿಸಿದ ಬಲೆಗೆ ಹೋಲಿಕೆಯಾಗಿದೆ.
ಆಗ ಆ ಸೇವಕರು ಹೆದ್ದಾರಿಗಳಿಗೆ ಹೋಗಿ ತಾವು ಕಂಡವರ ನ್ನೆಲ್ಲಾ ಅಂದರೆ ಕೆಟ್ಟವರನ್ನೂ ಒಳ್ಳೆಯವರನ್ನೂ ಒಟ್ಟು ಗೂಡಿಸಿದರು; ಹೀಗೆ ಮದುವೆಗೆ ಅತಿಥಿಗಳು ತುಂಬಿ ಕೊಂಡರು.
ಹಾಗಾದರೆ ತನ್ನ ಮನೆಯಲ್ಲಿದ್ದವರಿಗೆ ತಕ್ಕ ಕಾಲ ದಲ್ಲಿ ಆಹಾರ ಕೊಡುವಂತೆ ಅವರ ಮೇಲೆ ತನ್ನ ಯಜಮಾನನು ನೇಮಿಸಿದ ಅಧಿಕಾರಿಯೂ ನಂಬಿಗಸ್ತನೂ ಜ್ಞಾನಿಯೂ ಆದ ಸೇವಕನು ಯಾರು?
ಇದಲ್ಲದೆ ಸಹೋದರರೇ, ನೀವು ಈ ವಿಷಯಗಳನ್ನು ಅರಿಯದವರಾಗಿರ ಬಾರದೆಂದು ನನ್ನ ಅಪೇಕ್ಷೆಯಲ್ಲ; ಅದೇನಂದರೆ--ನಮ್ಮ ಪಿತೃಗಳೆಲ್ಲರೂ ಮೇಘದ ಕೆಳಗೆ ಇದ್ದು ಸಮುದ್ರವನ್ನು ದಾಟಿದರು;
ಅವರು ನಮ್ಮಿಂದ ಹೊರಟುಹೋದರು; ಆದರೆ ಅವರು ನಮ್ಮವ ರಾಗಿರಲಿಲ್ಲ. ಯಾಕಂದರೆ ಅವರು ನಮ್ಮವರಾಗಿದ್ದರೆ ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟು ಹೋದದರಿಂದ ಅವರೆಲ್ಲರೂ ನಮ್ಮವರಲ್ಲವೆಂಬದು ತೋರಿಬಂತು.
ನೀವು ಇದನ್ನು ಒಂದು ಸಾರಿ ತಿಳಿದವರಾಗಿದ್ದರೂ ನಾನು ಅದನ್ನೇ ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅದು ಯಾವದಂದರೆ--ಕರ್ತನು (ತನ್ನ) ಪ್ರಜೆಯನ್ನು ಐಗುಪ್ತದೇಶದೊಳಗಿಂದ ರಕ್ಷಿಸಿ ದರೂ ತರುವಾಯ ಅವರೊಳಗೆ ನಂಬದೆ ಹೋದ ವರನ್ನು ಸಂಹಾರ ಮಾಡಿದನು.