Home Bibles ಮತ್ತಾಯ 25:30 · ಕನ್ನಡ ಬೈಬಲ್
ಮತ್ತಾಯ 25:30 · ಕನ್ನಡ ಬೈಬಲ್

ಮತ್ತು ನಿಷ್ಪ್ರಯೋ ಜಕನಾದ ಈ ಸೇವಕನನ್ನು ನೀವು ಹೊರಗೆ ಕತ್ತಲೆಯಲ್ಲಿ ಹಾಕಿರಿ; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು ಅಂದನು.

Cross references

ಯೆರೆಮಿಯ 15:1

ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--

ಯೆಹೆಜ್ಕೇಲ 15:2

ಮನುಷ್ಯಪುತ್ರನೇ, ದ್ರಾಕ್ಷೇಗಿಡವು ಬೇರೆ ಗಿಡಗಳಿಗಿಂತಲೂ ಇಲ್ಲವೆ ಅಡವಿ ಯಲ್ಲಿರುವ ಮರಗಳ ಕೊಂಬೆಗಳಿಗಿಂತಲೂ ಹೆಚ್ಚೇನು?

ಮತ್ತಾಯ 3:10

ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಆದದರಿಂದ ಒಳ್ಳೇ ಫಲವನ್ನು ಫಲಿಸದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿ ಯಲ್ಲಿ ಹಾಕಲ್ಪಡುವದು.

ಮತ್ತಾಯ 5:13

ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ತನ್ನ ರುಚಿಯನ್ನು ಕಳೆದುಕೊಂಡರೆ ಅದಕ್ಕೆ ಇನ್ನಾತ ರಿಂದ ರುಚಿ ಬಂದೀತು? ಅಂದಿನಿಂದ ಅದು ನಿಷ್ಪ್ರಯೋಜನವಾದದ್ದಾಗಿ ಹೊರಗೆ ಬಿಸಾಡಲ್ಪಟ್ಟು ಜನರಿಂದ ತುಳಿದಾಡಲ್ಪಡುವದು.

ಮತ್ತಾಯ 8:12

ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಯಲ್ಲಿ ದೊಬ್ಬಲ್ಪಡುವರು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.

ಮತ್ತಾಯ 13:42

ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.

ಮತ್ತಾಯ 13:50

ಮತ್ತು ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು; ಅಲ್ಲಿ ಗೋಳಾಟವೂ ಹಲ್ಲುಕಡಿಯೋಣವೂ ಇರುವವು ಎಂದು ಹೇಳಿದನು.

ಮತ್ತಾಯ 22:13

ತರುವಾಯ ಅರಸನು ಸೇವಕರಿಗೆ--ಅವನ ಕೈ ಕಾಲುಗಳನ್ನು ಕಟ್ಟಿ ತಕ್ಕೊಂಡು ಹೋಗಿ ಹೊರಗೆ ಕತ್ತಲೆಯಲ್ಲಿ ಹಾಕಿರಿ; ಅಲ್ಲಿ ಗೋಳಾಟವೂ ಹಲ್ಲುಕಡಿಯೋಣವೂ ಇರುವವು.

ಮತ್ತಾಯ 24:51

ಅವನನ್ನು ಛೇದಿಸಿ ಕಪಟಿಗಳೊಂದಿಗೆ ಅವನ ಪಾಲನ್ನು ನೇಮಿಸುವನು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.

ಲೂಕ 13:28

ಆದರೆ ನೀವು ಅಬ್ರಹಾಮ ಇಸಾಕ ಯಾಕೋಬ ಮತ್ತು ಎಲ್ಲಾ ಪ್ರವಾದಿಗಳು ದೇವರರಾಜ್ಯದಲ್ಲಿ ಇರುವದನ್ನೂ ನೀವು ಮಾತ್ರ ಹೊರಗೆ ದೊಬ್ಬಲ್ಪಟ್ಟಿರುವದನ್ನೂ ನೋಡು ವಾಗ ಅಲ್ಲಿ ನಿಮಗೆ ಗೋಳಾಟವೂ ಹಲ್ಲುಕಡಿ ಯೋಣವೂ ಇರುವವು.

ಲೂಕ 14:34

ಉಪ್ಪು ಒಳ್ಳೇದು; ಆದರೆ ಉಪ್ಪು ತನ್ನ ರುಚಿ ಯನ್ನು ಕಳೆದುಕೊಂಡರೆ ಅದಕ್ಕೆ ಇನ್ನಾತರಿಂದ ರುಚಿ ಬಂದೀತು?ಅದು ಭೂಮಿಗಾದರೂ ತಿಪ್ಪೆ ಗಾದರೂ ಪ್ರಯೋಜನವಿಲ್ಲ; ಅದನ್ನು ಜನರು ಹೊರಗೆ ಹಾಕುತ್ತಾರೆ. ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು.

ಯೋಹಾನ 15:6

ಒಬ್ಬನು ನನ್ನಲ್ಲಿ ನೆಲೆಗೊಂಡಿರದಿದ್ದರೆ ಅವನು ಕೊಂಬೆಯಂತೆ ಬಿಸಾಡಲ್ಪಟ್ಟು ಒಣಗಿ ಹೋಗುವದರಿಂದ ಜನರು ಅವುಗಳನ್ನು ಕೂಡಿಸಿ ಬೆಂಕಿಯೊಳಗೆ ಹಾಕುವರು; ಅವು ಸುಡಲ್ಪಡುವವು.

ತೀತ 3:14

ಅಗತ್ಯ ವಾದ ಕೊರತೆಗಳನ್ನು ನೀಗಿಸುವ ಸತ್ಕ್ರಿಯೆಗಳನ್ನು ಮಾಡುವದ ಕ್ಕಾಗಿ ನಮ್ಮವರು ಸಹ ಕಲಿತುಕೊಳ್ಳಲಿ; ಹೀಗೆ ಅವರು ನಿಷ್ಪಲರಾಗಿರುವದಿಲ್ಲ.ನನ್ನೊಂದಿಗಿರುವವರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ. ನಂಬಿಕೆಯಲ್ಲಿ ನಮ್ಮನ್ನು ಪ್ರೀತಿಸುವವರಿಗೆ ವಂದನೆ ಹೇಳು. ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್‌.

ಹೆಬ್ರಿಯರಿಗೆ 6:7

ಭೂಮಿಯು ತನ್ನ ಮೇಲೆ ಅನೇಕಾವರ್ತಿ ಸುರಿಯುವ ಮಳೆಯನ್ನು ಹೀರಿಕೊಂಡು ಅದು ಯಾರ ನಿಮಿತ್ತವಾಗಿ ವ್ಯವಸಾಯ ಮಾಡಲ್ಪಡುತ್ತದೋ ಅವರಿಗೆ ಅನುಕೂಲ ವಾದ ಬೆಳೆಯನ್ನು ಕೊಟ್ಟರೆ ದೇವರ ಆಶೀರ್ವಾದವನ್ನು ಹೊಂದುತ್ತದೆ;

2 ಪೇತ್ರ 2:17

ಇವರು ನೀರಿಲ್ಲದ ಭಾವಿಗಳೂ ಬಿರುಗಾಳಿಯಿಂದ ಬಡಿಸಿಕೊಂಡು ಹಾರಿ ಹೋಗುವ ಮೇಘಗಳೂ ಆಗಿದ್ದಾರೆ. ಇಂಥವರ ಪಾಲಿಗೆ ನಿರಂತರವಾದ ಕಾರ್ಗತ್ತಲು ಇಟ್ಟಿರುವದು.

ಯೂದ 1:13

ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚು ತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರ ಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲ ಇಟ್ಟಿರುವದು.

ಪ್ರಕಟನೆ 3:15

ನೀನು ತಣ್ಣಗೂ ಬೆಚ್ಚಗೂ ಅಲ್ಲದಿರುವ ನಿನ್ನ ಕ್ರಿಯೆಗಳನ್ನು ನಾನು ಬಲ್ಲೆನು; ನೀನು ತಣ್ಣಗಾಗಲಿ ಬೆಚ್ಚಗಾಗಲಿ ಇರಬೇಕೆಂಬದು ನನ್ನ ಇಷ್ಟವಾಗಿತ್ತು.

ಪ್ರಕಟನೆ 21:8

ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.

Interlinear

Choose Theme