ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ;
Cross references
ನಾನು ನಿನ್ನನ್ನು ದೊಡ್ಡ ಜನಾಂಗವಾಗ ಮಾಡಿ ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರನ್ನು ದೊಡ್ಡ ದಾಗಿ ಮಾಡುವೆನು, ನೀನು ಆಶೀರ್ವಾದವಾಗಿರುವಿ.
ಕರ್ತನು ಆ ಜನಾಂಗಗಳನ್ನೆಲ್ಲಾ ನಿಮ್ಮ ಮುಂದೆ ಹೊರಡಿಸುವನು; ನೀವು ನಿಮಗಿಂತ ಬಲವುಳ್ಳ ದೊಡ್ಡ ಜನಾಂಗಗಳನ್ನು ಸ್ವಾಧೀನ ಮಾಡಿಕೊಳ್ಳುವಿರಿ.
ಆದಾಗ್ಯೂ ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.
ಬಾಗಲುಗಳೇ, ನಿಮ್ಮ ತಲೆಗಳನ್ನು ಎತ್ತಿರಿ; ನಿತ್ಯ ದ್ವಾರಗಳೇ, ಎತ್ತಲ್ಪಡಿರಿ; ಮಹಿಮೆಯುಳ್ಳ ಅರಸನು ಒಳಗೆ ಬರುತ್ತಾನೆ.
ಕರ್ತನಿಗೆ ಭಯ ಪಡುವವರಾದ ಹಿರಿಯರ ಸಂಗಡ ಕಿರಿಯರನ್ನು ಆಶೀರ್ವದಿಸುವನು.
ಆಗ ನಾನು--ಅಯ್ಯೋ, ನಾನು ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು, ನಾನು ಹೊಲಸು ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು; ಆದರೂ ಸೈನ್ಯಗಳ ಕರ್ತನಾದ ಅರಸನನ್ನು ನನ್ನ ಕಣ್ಣುಗಳು ಕಂಡವಲ್ಲಾ ಅಂದೆನು.
ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು, ಅಧಿಪತಿಗಳು ನ್ಯಾಯ ದಿಂದ ದೊರೆತನಮಾಡುವರು.
ಕರ್ತನು ನಮ್ಮ ನ್ಯಾಯಾ ಧಿಪತಿಯಾಗಿದ್ದಾನೆ, ಕರ್ತನು ನಮಗೆ ಆಜ್ಞೆ ಕೊಡು ವಾತನು, ಕರ್ತನೇ ನಮ್ಮ ರಾಜನು; ಆತನೇ ನಮ್ಮನ್ನು ರಕ್ಷಿಸುವನು.
ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈ ಒಳ್ಳೇ ಅಂಜೂರದ ಹಣ್ಣುಗಳ ಹಾಗೆ ನಾನು ಈ ಸ್ಥಳದಿಂದ ಕಸ್ದೀಯರ ದೇಶಕ್ಕೆ ಒಳ್ಳೇದಕ್ಕಾಗಿ ಕಳುಹಿಸಿದ ಯೆಹೂದದ ಸೆರೆಯವರನ್ನು ಪರಾಮರಿ ಸುವೆನು.
ನನ್ನ ಸೇವಕನಾದ ದಾವೀದನು ಅವರ ಮೇಲೆ ಅರಸನಾಗಿರುವನು; ಅವರೆಲ್ಲರಿಗೂ ಒಬ್ಬನೇ ಕುರುಬನಿರುವನು ನನ್ನ ನ್ಯಾಯನಿಯಮ ಗಳನ್ನೇ ಅನುಸರಿಸುವಂತೆ ಮಾಡುವೆನು.
ಆದದರಿಂದ ನೀನು ತಿಳಿಯಬೇಕಾದದ್ದು ಏನಂದರೆ --ಯೆರೂಸಲೇಮನ್ನು ತಿರಿಗಿ ಸ್ಥಾಪಿಸಿ ಕಟ್ಟಲು ಆಜ್ಞೆ ಹೊರಡುವದು ಮೊದಲುಗೊಂಡು ಅಭಿಷಿಕ್ತನಾದ (ಮೆಸ್ಸೀಯನ) ಪ್ರಭುವಿನ ವರೆಗೂ ಏಳು ವಾರಗಳು ಕಳೆಯಬೇಕು. ಅದು ಪುನಃ ಸ್ಥಾಪಿಸಲ್ಪಟ್ಟು ಅರವತ್ತೆರಡು ವಾರಗಳು ಇರುವದು. ಅದಕ್ಕೆ ಬೀದಿಯೂ ಗೋಡೆ ಗಳೂ ಕಷ್ಟಕಾಲದಲ್ಲಿ ಕಟ್ಟಲ್ಪಡುವದು.
ಕರ್ತನು ನಿನ್ನ ನ್ಯಾಯ ತೀರ್ವಿಕೆಗಳನ್ನು ದೂರಮಾಡಿ ನಿನ್ನ ಶತ್ರು ವನ್ನು ತೆಗೆದುಹಾಕಿದ್ದಾನೆ; ಇಸ್ರಾಯೇಲಿನ ಅರಸನಾದ ಕರ್ತನು ನಿನ್ನ ಮಧ್ಯದಲ್ಲಿ ಇದ್ದಾನೆ; ಇನ್ನು ಮೇಲೆ ನೀನು ಕೇಡನ್ನು ನೋಡುವದಿಲ್ಲ.
ಚೀಯೋನ್ ಕುಮಾರ್ತೆಯೇ, ಬಹಳವಾಗಿ ಉಲ್ಲಾಸಪಡು; ಯೆರೂಸಲೇಮಿನ ಕುಮಾರ್ತೆಯೇ, ಆರ್ಭಟಿಸು; ಇಗೋ, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನೀತಿವಂತನಾಗಿಯೂ ರಕ್ಷಿಸುವಾತ ನಾಗಿಯೂ ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಯ ಮರಿಯ ಮೇಲೆ ಹತ್ತಿದವನಾಗಿಯೂ ಬರು ತ್ತಾನೆ.
ನೀವು ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪ ವಾಗಿದೆ ಎಂದು ಹೇಳಿದನು.
ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಯಾಕಂದರೆ ಪರಲೋಕರಾಜ್ಯವು ಅವರದು.
ಆದದರಿಂದ ಯಾವನಾದರೂ ಈ ಆಜ್ಞೆಗಳಲ್ಲಿ ಚಿಕ್ಕದಾದ ಒಂದನ್ನು ಮಾರಿ ಹಾಗೆಯೇ ಜನರಿಗೆ ಬೋಧಿಸಿದರೆ ಅವನು ಪರಲೋಕರಾಜ್ಯದಲ್ಲಿ ಅಲ್ಪನೆಂದು ಕರೆಯಲ್ಪಡುವನು; ಯಾವನಾದರೂ ಇವುಗಳನ್ನು ಕೈಕೊಂಡು ಬೋಧಿಸಿದರೆ ಅವನೇ ಪರಲೋಕ ರಾಜ್ಯದಲ್ಲಿ ದೊಡ್ಡವನೆಂದು ಕರೆಯಲ್ಪಡು ವನು.
ಹೀಗೆ--ಸಾಮ್ಯಗಳನ್ನು ಹೇಳುವಂತೆ ನನ್ನ ಬಾಯಿ ತೆರೆಯುವೆನು; ಲೋಕದ ಅಸ್ತಿವಾರದಿಂದ ಮರೆಯಾಗಿ ಇಡಲ್ಪಟ್ಟವುಗಳನ್ನು ನಾನು ಹೊರಪಡಿಸುವೆನು ಎಂದು ಪ್ರವಾದಿಯಿಂದ ಹೇಳಲ್ಪಟ್ಟದ್ದು ನೆರವೇರಿತು.
ಮತ್ತು ತನ್ನ ಮನೆಗಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ತಂದೆಯನ್ನಾಗಲೀ ತಾಯಿಯನ್ನಾಗಲೀ ಮಕ್ಕಳನ್ನಾಗಲೀ ಭೂಮಿಯನ್ನಾಗಲೀ ನನ್ನ ಹೆಸರಿ ನಿಮಿತ್ತವಾಗಿ ಬಿಟ್ಟುಬಿಡುವ ಪ್ರತಿಯೊಬ್ಬನು ನೂರರಷ್ಟು ಹೊಂದಿಕೊಳ್ಳುವನು; ಮತ್ತು ನಿತ್ಯಜೀವವನ್ನು ಬಾಧ್ಯ ವಾಗಿ ಹೊಂದುವನುಆದರೆ ಮೊದಲನೆಯ ವರಾದ ಬಹುಮಂದಿ ಕಡೆಯವರಾಗುವರು; ಮತ್ತು ಕಡೆಯವರಾದವರು ಮೊದಲನೆಯವರಾಗುವರು.
ಮತ್ತು ಆತನು ಅವರಿಗೆ--ನನ್ನ ಪಾತ್ರೆಯಲ್ಲಿ ನೀವು ಕುಡಿಯು ವದು ಮತ್ತು ನಾನು ಹೊಂದುವ ಬಾಪ್ತಿಸ್ಮವನ್ನು ನೀವು ಹೊಂದುವದು ನಿಜ; ಆದರೆ ನನ್ನ ಬಲಗಡೆಯಲ್ಲಾ ಗಲೀ ಎಡಗಡೆಯಲ್ಲಾಗಲೀ ಕೂತುಕೊಳ್ಳುವಂತೆ ಅನುಗ್ರಹಿಸುವದು ನನ್ನದಲ್ಲ; ಆದರೆ ನನ್ನ ತಂದೆಯಿಂದ ಯಾರಿಗೋಸ್ಕರ ಅದು ಸಿ
ಇಗೋ, ನಿನ್ನ ಅರಸನು ಸಾತ್ವಿಕನು, ಆತನು ಕತ್ತೆಯನ್ನೂ ಕತ್ತೆಯ ಮರಿಯನ್ನೂ ಹತ್ತಿದವನಾಗಿ ನಿನ್ನ ಬಳಿಗೆ ಬರುತ್ತಾನೆ ಎಂದು ಚೀಯೋನ್ ಕುಮಾರ್ತೆಗೆ ಹೇಳಿರಿ ಎಂಬದೇ.
ತರುವಾಯ ಅರಸನು ಅತಿಥಿಗಳನ್ನು ನೋಡುವದಕ್ಕಾಗಿ ಒಳಗೆ ಬಂದು ಮದುವೆಯ ಉಡು ಪಿಲ್ಲದೆ ಇದ್ದ ಒಬ್ಬ ಮನುಷ್ಯನನ್ನು ಅಲ್ಲಿ ಕಂಡನು.
ಆಗ ಅವನ ಯಜಮಾನನು ಅವನಿಗೆ--ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇದನ್ನು ಮಾಡಿದ್ದೀ. ಸ್ವಲ್ಪವಾದವುಗಳಲ್ಲಿ ನೀನು ನಂಬಿಗಸ್ತ ನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು.
ಆಗ ಅವನ ಯಜಮಾನನು ಅವನಿಗೆ--ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇ ದನ್ನು ಮಾಡಿದ್ದೀ; ಸ್ವಲ್ಪವಾದವುಗಳಲ್ಲಿ ನೀನು ನಂಬಿಗ ಸ್ತನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು.
ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ.
ಇದಲ್ಲದೆ ಆತನ ತಲೆಯ ಮೇಲ್ಭಾಗದಲ್ಲಿ--ಇವನು ಯೆಹೂದ್ಯರ ಅರಸನಾದ ಯೇಸು ಎಂದು ಆತನ ವಿಷಯವಾದ ಅಪರಾಧವನ್ನು ಬರೆಯಿಸಿದರು.
ಆದರೆ ನನ್ನ ಬಲಗಡೆಯಲ್ಲಿ ಮತ್ತು ನನ್ನ ಎಡಗಡೆಯಲ್ಲಿ ಕೂತು ಕೊಳ್ಳುವಂತೆ ಅನುಗ್ರಹ ಮಾಡುವದು ನನ್ನದಲ್ಲ; ಅದು ಯಾರಿ ಗೋಸ್ಕರ ಸಿದ್ಧಮಾಡಲ್ಪಟ್ಟಿದೆಯೋ ಅವರಿಗೆ ಕೊಡ ಲ್ಪಡುವದು ಅಂದನು.
ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಿ; ಆತನಿಗೆ ಯೇಸು ಎಂದು ಹೆಸರಿಡಬೇಕು.
ಆದರೆ ಆತನು--ಹೌದು, ಇದಕ್ಕಿಂ ತಲೂ ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯು ವವರೇ ಧನ್ಯರು ಎಂದು ಹೇಳಿದನು.
ಚಿಕ್ಕ ಹಿಂಡೇ, ಭಯಪಡಬೇಡ; ಯಾಕಂದರೆ ನಿಮಗೆ ರಾಜ್ಯವನ್ನು ಕೊಡುವದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.
ಕರ್ತನ ಹೆಸರಿನಲ್ಲಿ ಬರುವ ಅರ ಸನು ಸ್ತುತಿಹೊಂದಲಿ; ಪರಲೋಕದಲ್ಲಿ ಸಮಾಧಾನ, ಮತ್ತು ಅತ್ಯುನ್ನತದಲ್ಲಿ ಮಹಿಮೆ ಎಂದು ಹೇಳಿದರು.
ನತಾನ ಯೇಲನು ಪ್ರತ್ಯುತ್ತರವಾಗಿ ಆತನಿಗೆ--ರಬ್ಬಿಯೇ, ನೀನು ದೇವರಕುಮಾರನು; ನೀನು ಇಸ್ರಾಯೇಲಿನ ಅರಸನು ಅಂದನು.
ಖರ್ಜೂರದ ಗರಿಗಳನ್ನು ತಕ್ಕೊಂಡು ಆತನನ್ನು ಎದುರುಗೊಳ್ಳುವದಕ್ಕೆ ಹೊರಗೆ ಬಂದು--ಹೊಸನ್ನ, ಕರ್ತನ ಹೆಸರಿನಲ್ಲಿ ಬರುವ ಇಸ್ರಾಯೇಲಿನ ಅರಸನು ಆಶೀರ್ವದಿಸಲ್ಪಡಲಿ ಎಂದು ಕೂಗಿದರು.
ನನ್ನ ತಂದೆಯ ಮನೆಯಲ್ಲಿ ಬಹಳ ಭವನ ಗಳಿವೆ; ಇಲ್ಲದಿದ್ದರೆ ನಾನು ನಿಮಗೆ ಹೇಳುತ್ತಿದ್ದೆನು, ನಾನು ನಿಮಗೆ ಸ್ಥಳವನ್ನು ಸಿದ್ಧಮಾಡುವದಕ್ಕೆ ಹೋಗು ತ್ತೇನಲ್ಲಾ.
ಆದರೆ ಅವರು--ತೆಗೆದುಹಾಕು, ತೆಗೆದುಹಾಕು, ಅವನನ್ನು ಶಿಲುಬೆಗೆ ಹಾಕು ಅಂದರು. ಅದಕ್ಕೆ ಪಿಲಾತನು ಅವರಿಗೆ--ನಿಮ್ಮ ಅರಸನನ್ನು ಶಿಲುಬೆಗೆ ಹಾಕಲೋ ಅಂದಾಗ ಪ್ರಧಾನಯಾಜಕರು--ಕೈಸರನೇ ಹೊರತು ನಮಗೆ ಬೇರೆ ಅರಸನಿಲ್ಲ ಎಂದು ಉತ್ತರ ಕೊಟ್ಟರು.
ಇದಲ್ಲದೆ ಪಿಲಾತನು ಒಂದು ಶಿರೋನಾಮವನ್ನು ಬರೆಯಿಸಿ ಅದನ್ನು ಶಿಲುಬೆಯ ಮೇಲೆ ಇರಿಸಿದನು. ಆ ಬರಹವು ಏನಂದರೆ--ಯೆಹೂದ್ಯರ ಅರಸನಾದ ನಜರೇತಿನ ಯೇಸು ಎಂಬದೇ.
ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ದ್ರೋಹಗಳಿಂದ ತಿರು ಗಿಸಿ ಆಶೀರ್ವದಿಸುವದಕ್ಕಾಗಿ ದೇವರು ತನ್ನ ಮಗನಾದ ಯೇಸುವನ್ನು ಎಬ್ಬಿಸಿ ಮೊದಲು ಆತನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಿದನು.
ದೇವರು ತನ್ನ ಕಾರ್ಯಗಳನ್ನೆಲ್ಲಾ ಲೋಕಾದಿಯಿಂದ ತಿಳಿದಿದ್ದಾನೆ.
ಮಕ್ಕಳಾ ಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತ ನೊಂದಿಗೆ ಸಹ ಬಾಧ್ಯರು; ಆತನೊಂದಿಗೆ ಶ್ರಮೆ ಯನ್ನನುಭವಿಸುವದಾದರೆ ಒಟ್ಟಾಗಿ ನಾವು ಸಹ ಮಹಿಮೆಯನ್ನು ಹೊಂದುವೆವು.
ಆದರೆ ಬರೆದಿರುವ ಪ್ರಕಾರ--ದೇವರು ತನ್ನನ್ನು ಪ್ರೀತಿಸು ವವರಿಗಾಗಿ ಸಿದ್ಧಮಾಡಿರುವಂಥವುಗಳನ್ನು ಕಣ್ಣು ಕಾಣಲಿಲ್ಲ, ಕಿವಿ ಕೇಳಲಿಲ್ಲ, ಇಲ್ಲವೆ ಅವು ಮನುಷ್ಯನ ಹೃದಯದಲ್ಲಿ ಸೇರಲಿಲ್ಲ.