ಯಾಕಂದರೆ ನಾನು ಹಸಿದಿದ್ದೆನು, ನೀವು ನನಗೆ ಊಟವನ್ನು ಕೊಟ್ಟಿರಿ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವದಕ್ಕೆ ಕೊಟ್ಟಿರಿ; ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಕ್ಕೆ ಸೇರಿಸಿಕೊಂಡಿರಿ;
Cross references
ಆಗ ತನ್ನ ಕಣ್ಣುಗಳನ್ನೆತ್ತಿ ನೋಡಲು ಅಗೋ, ಮೂವರು ಪುರುಷರು ಅವನ ಪಕ್ಕದಲ್ಲಿ ನಿಂತಿದ್ದರು. ಅವನು ಅವರನ್ನು ನೋಡಿ ಅವರಿಗೆ ಎದುರಾಗಿ ಗುಡಾರದ ಬಾಗಲಿನಿಂದ ಓಡಿಬಂದು ನೆಲದ ವರೆಗೂ ಬೊಗ್ಗಿ--
ದೂತರಿಬ್ಬರು ಸಾಯಂಕಾಲದಲ್ಲಿ ಸೊದೋಮ್ಗೆ ಬಂದಾಗ ಲೋಟನು ಸೊದೋ ಮ್ನ ಬಾಗಲಲ್ಲಿ ಕೂತಿದ್ದನು. ಲೋಟನು ಅವರನ್ನು ಎದುರುಗೊಳ್ಳುವದಕ್ಕೆ ಎದ್ದು ನೆಲದ ಮಟ್ಟಿಗೆ ಬೊಗ್ಗಿ
ನಿನ್ನ ದೇವರಾದ ಕರ್ತನು ನಿನಗೆ ಕೊಡುವ ನಿನ್ನ ದೇಶದಲ್ಲಿ ನಿನ್ನ ಬಾಗಲುಗಳ ಒಂದರಲ್ಲಿ ನಿನ್ನ ಸಹೋದರರಲ್ಲಿ ಒಬ್ಬನಾಗಿರುವ ಬಡವನು ನಿನ್ನಲ್ಲಿದ್ದರೆ ನಿನ್ನ ಹೃದಯವನ್ನು ಕಠಿಣಮಾಡಿಕೊಳ್ಳಬೇಡ. ನಿನ್ನ ಕೈಯನ್ನು ನಿನ್ನ ಬಡ ಸಹೋದರನಿಗೆ ಮುಚ್ಚಿಕೊಳ್ಳ ಬೇಡ.
ಅವಳು ತಕ್ಕೊಂಡು ಬರಲು ಹೋಗು ತ್ತಿರುವಾಗ ಅವನು ಅವಳನ್ನು ಕರೆದು--ನೀನು ದಯ ಮಾಡಿ ನಿನ್ನ ಕೈಯಲ್ಲಿ ರೊಟ್ಟಿಯ ತುಂಡನ್ನು ನನಗೆ ತಕ್ಕೊಂಡು ಬಾ ಅಂದನು.
ನಾಶವಾಗುವದಕ್ಕೆ ಸಿದ್ಧವಾದವನ ಆಶೀರ್ವಾದವು ನನ್ನ ಮೇಲೆ ಬರು ತ್ತಿತ್ತು; ವಿಧವೆಯ ಹೃದಯವು ಸಂತೋಷದಿಂದ ಹಾಡುವಂತೆ ನಾನು ಮಾಡಿದೆನು.
ನಾನು ಬಡವರ ಇಷ್ಟವನ್ನು ಹಿಂತೆಗೆದಿದ್ದರೆ ವಿಧ ವೆಯ ಕಣ್ಣುಗಳನ್ನು ನಿರಾಶೆಪಡಿಸಿದ್ದರೆ,
ಪರದೇಶಸ್ಥನು ಬೀದಿ ಯಲ್ಲಿ ಇಳುಕೊಳ್ಳಲಿಲ್ಲ; ಆದರೆ ನನ್ನ ಬಾಗಲನ್ನು ಮಾರ್ಗಸ್ಥರಿಗೆ ತೆರೆಯುತ್ತಾ ಇದ್ದೆನು.
ಒಳ್ಳೇಮನುಷ್ಯನು ದಯೆ ತೋರಿಸಿ ಸಾಲಕೊಡುತ್ತಾನೆ; ತನ್ನ ಕಾರ್ಯಗಳನ್ನು ನ್ಯಾಯದಿಂದ ನಡಿಸುವನು.
ನಿನ್ನ ಆಸ್ತಿಯಿಂದಲೂ ಅಭಿವೃದ್ಧಿಯ ಎಲ್ಲಾ ಪ್ರಥಮ ಫಲಗಳಿಂದಲೂ ಕರ್ತನನ್ನು ಸನ್ಮಾನಿಸು.
ಚದುರಿಸಿದಾಗ್ಯೂ ವೃದ್ಧಿಯಾಗುತ್ತದೆ; ಬೇಕಾದದ್ದಕ್ಕಿಂತ ಹೆಚ್ಚಿನದನ್ನು ಬಿಗಿಹಿಡಿಯುವಂಥದ್ದು ಬಡತನಕ್ಕೆ ನಡಿಸುತ್ತದೆ.
ತನ್ನ ನೆರೆಯವನನ್ನು ಅವಮಾನ ಮಾಡುವವನು ಪಾಪ ಮಾಡುತ್ತಾನೆ; ಬಡವರ ಮೇಲೆ ಕನಿಕರ ತೋರಿ ಸುವವನು ಧನ್ಯನು.
ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನನ್ನು ಹೀನೈಸುವನು; ಆತನನ್ನು ಸನ್ಮಾನಿಸುವವನು ಬಡವರನ್ನು ಕನಿಕರಿಸುತ್ತಾನೆ.
ಬಡವರಿಗೆ ದಯೆತೋರಿಸು ವವನು. ಕರ್ತನಿಗೆ ಸಾಲ ಕೊಡುತ್ತಾನೆ; ಅವನು ಕೊಟ್ಟದ್ದನ್ನು ಆತನು ತಿರುಗಿ ಅವನಿಗೆ ಕೊಡುತ್ತಾನೆ.
ದಯಾದೃಷ್ಟಿಯುಳ್ಳವನು ಆಶೀ ರ್ವಾದವನ್ನು ಹೊಂದುವನು; ತನಗಿದ್ದ ಆಹಾರದಲ್ಲಿ ಬಡವರಿಗೆ ಕೊಡುತ್ತಾನೆ.
ನಿನ್ನ ಶತ್ರು ಹಸಿದಿದ್ದರೆ ತಿನ್ನುವ ದಕ್ಕೆ ಅವನಿಗೆ ರೊಟ್ಟಿ ಕೊಡು; ಅವನು ಬಾಯಾರಿದ್ದರೆ ಕುಡಿಯುವದಕ್ಕೆ ನೀರು ಕೊಡು.
ನಿನ್ನ ರೊಟ್ಟಿಯನ್ನು ನೀರಿನ ಮೇಲೆ ಹಾಕು, ಬಹಳ ದಿನಗಳ ಮೇಲೆ ಅದು ನಿನಗೆ ಸಿಗುವದು.
ನಿನ್ನ ರೊಟ್ಟಿಯನ್ನು ಹಸಿದವರಿಗೆ ಹಂಚುವದೂ ಅಲೆಯು ತ್ತಿರುವ ಬಡವರನ್ನು ನಿನ್ನ ಮನೆಗೆ ಬರಮಾಡಿ ಕೊಳ್ಳುವದೂ ಬೆತ್ತಲೆಯವರನ್ನು ಕಂಡಾಗೆಲ್ಲ ಅವರಿಗೆ ಹೊದಿಸುವದೂ ನಿನ್ನ ಸ್ವಂತ ಶರೀರದಂತಿರುವವ ನಿಗೆ ನಿನ್ನನ್ನು ಮರೆಮಾಡಿಕೊಳ್ಳದಿರುವದೂ ಇದೇ ಅಲ್ಲವೋ?
ಯಾರನ್ನೂ ಉಪದ್ರಪಡಿಸದೆ, ಸಾಲ ಮಾಡಿದವನ ಒತ್ತೆಯನ್ನು ಹಿಂದಕ್ಕೆ ಕೊಟ್ಟು, ಹಿಂಸಿಸಿ, ಸುಲಿಗೆ ಮಾಡದೆ, ಹಸಿದವನಿಗೆ ತನ್ನ ರೊಟ್ಟಿಯನ್ನು ಕೊಟ್ಟು ಮತ್ತು ಬೆತ್ತಲೆ ಯಿರುವವನಿಗೆ ಬಟ್ಟೆಯನ್ನು ಹೊದಿಸಿ,
ಇಲ್ಲವೆ ಯಾರಿಗೂ ತೊಂದರೆಪಡಿಸದೆ, ಒತ್ತೆಯನ್ನು ಹಿಡಿಯದೆ, ಇಲ್ಲವೆ ಹಿಂಸೆಯಿಂದ ಸುಲಿಗೆ ಮಾಡದೆ, ಹಸಿದವನಿಗೆ ತನ್ನ ರೊಟ್ಟಿಯನ್ನು ಕೊಟ್ಟು ಬೆತ್ತಲೆಯಾದವನಿಗೆ ವಸ್ತ್ರ ವನ್ನು ಹೊದಿಸಿ,
ಆದದರಿಂದ ಓ ಅರಸನೇ, ನನ್ನ ಆಲೋಚನೆಯು ನಿನಗೆ ಸಮ್ಮತಿ ಯಾಗಿ ನಿನ್ನ ಪಾಪಗಳನ್ನು ನೀತಿಯಿಂದ ಅಳಿಸಿ ನಿನ್ನ ಅನ್ಯಾಯಗಳನ್ನು ಬಡವರಿಗೆ ದಯೆ ತೋರಿಸುವದ ರಿಂದ ಬಿಟ್ಟುಬಿಡು. ಒಂದು ವೇಳೆ ಇದರಿಂದ ನಿನ್ನ ನೆಮ್ಮದಿಯು ಹೆಚ್ಚಾಗಬಹುದು.
ಮನುಷ್ಯನೇ, ಉತ್ತಮವಾದ ದ್ದನ್ನು ನಿನಗೆ ಆತನು ತಿಳಿಸಿದ್ದಾನೆ; ಹೌದು, ನ್ಯಾಯ ವನ್ನು ಮಾಡುವದೂ ಕರುಣೆಯನ್ನು ಪ್ರೀತಿಮಾಡು ವದೂ ನಿನ್ನ ದೇವರ ಸಂಗಡ ವಿನಯವಾಗಿ ನಡ ಕೊಳ್ಳುವದೂ ಇದನ್ನೇ ಹೊರತು ಕರ್ತನು ಇನ್ನೇನು ನಿನ್ನಿಂದ ಕೇಳುತ್ತಾನೆ.
ನಿಮ್ಮನ್ನು ಅಂಗೀಕರಿಸಿಕೊಳ್ಳುವವನು ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ; ಮತ್ತು ನನ್ನನ್ನು ಅಂಗೀಕರಿಸಿ ಕೊಳ್ಳುವವನು ನನ್ನನ್ನು ಕಳುಹಿಸಿದಾತನನ್ನು ಅಂಗೀಕರಿಸಿ ಕೊಳ್ಳುತ್ತಾನೆ.
ಅದಕ್ಕೆ ಅರಸನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನೀವು ಈ ನನ್ನ ಸಹೋದರ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡಿದ್ದು ನನಗೂ ಮಾಡಿದಂತಾಯಿತು ಅಂದನು.
ನಾನು ಹಸಿದವನಾಗಿದ್ದೆನು, ನೀವು ನನಗೆ ಊಟಕ್ಕೆ ಕೊಡಲಿಲ್ಲ; ನಾನು ಬಾಯಾರಿದವನಾಗಿದ್ದೆನು, ನೀವು ನನಗೆ ಕುಡಿ ಯುವದಕ್ಕೆ ಕೊಡಲಿಲ್ಲ.
ಬಡವರು ಯಾವಾಗಲೂ ನಿಮ್ಮ ಸಂಗಡ ಇರುತ್ತಾರೆ; ಆದರೆ ನಾನು ಯಾವಾಗಲೂ ನಿಮ್ಮ ಸಂಗಡ ಇರುವದಿಲ್ಲ.
ಯಾಕಂದರೆ ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ; ನಿಮಗೆ ಮನಸ್ಸಿದ್ದರೆ ನೀವು ಅವರಿಗೆ ಯಾವಾಗಲಾದರೂ ಉಪಕಾರ ಮಾಡಬಹುದು; ಆದರೆ ನಾನು ಯಾವಾ ಗಲೂ ನಿಮ್ಮ ಬಳಿಯಲ್ಲಿ ಇರುವದಿಲ್ಲ.
ಆದರೆ ನಿಮಗೆ ಇರುವವುಗಳಲ್ಲಿ ನೀವು ದಾನಾಕೊಡಿರಿ; ಆಗ ಇಗೋ, ನಿಮಗೆ ಎಲ್ಲವು ಗಳು ಶುದ್ಧವಾಗಿರುವವು.
ಆತನು ತನ್ನನ್ನು ಕರೆದವನಿಗೆ ಸಹ ಹೇಳಿದ್ದೇ ನಂದರೆ--ನೀನು ಮಧ್ಯಾಹ್ನದ ಊಟಕ್ಕೆ ಇಲ್ಲವೆ ಸಾಯಂಕಾಲದ ಊಟಕ್ಕೆ ಸಿದ್ಧಪಡಿಸಿದಾಗ ನಿನ್ನ ಸ್ನೇಹಿತರನ್ನಾಗಲೀ ನಿನ್ನ ಸಹೋದರರನ್ನಾಗಲೀ ನಿನ್ನ ಬಂಧುಗಳನ್ನಾಗಲೀ ಇಲ್ಲವೆ ಐಶ್ವರ್ಯವಂತರಾದ ನೆರೆಯವರನ್ನಾಗಲೀ ಕರೆಯಬೇಡ; ಯಾಕಂದರೆ ಅ
ಯೂದನು ಹಣದ ಚೀಲವನ್ನು ಇಟ್ಟುಕೊಂಡ ದ್ದರಿಂದ ಯೇಸು ಅವನಿಗೆ--ಹಬ್ಬಕ್ಕೆ ನಮಗೆ ಬೇಕಾದವು ಗಳನ್ನು ಕೊಂಡುಕೋ ಎಂತಲೋ ಇಲ್ಲವೆ ಬಡವರಿಗೆ ಏನಾದರೂ ಕೊಡು ಎಂತಲೋ ಅವನಿಗೆ ಆತನು ಹೇಳಿದನೆಂದು ಅವರಲ್ಲಿ ಕೆಲವರು ನೆನಸಿದರು.
ನಂಬಿದ್ದ ಸಮೂಹದವರ ಹೃದಯವೂ ಪ್ರಾಣವೂ ಒಂದೇ ಆಗಿತ್ತು; ಇದಲ್ಲದೆ ಅವರಲ್ಲಿ ಯಾವನೂ ತನ್ನಗಿದ್ದ ಯಾವದೊಂದನ್ನೂ ತನ್ನ ಸ್ವಂತ ದ್ದೆಂದು ಹೇಳಲಿಲ್ಲ; ಆದರೆ ಎಲ್ಲವೂ ಅವರಿಗೆ ಹುದು ವಾಗಿತ್ತು.
ಯೊಪ್ಪದಲ್ಲಿ ತಬಿಥಾ ಎಂಬ ಒಬ್ಬ ಶಿಷ್ಯಳಿದ್ದಳು; ಆ ಹೆಸರಿಗೆ ದೊರ್ಕ ಎಂದರ್ಥ. ಆಕೆಯು ಸತ್ಕ್ರಿಯೆ ಗಳನ್ನೂ ದಾನಗಳನ್ನೂ ಬಹಳವಾಗಿ ಮಾಡುತ್ತಿದ್ದಳು.
ಕೊರ್ನೇಲ್ಯನೇ, ನಿನ್ನ ಪ್ರಾರ್ಥನೆಯು ಕೇಳಬಂತು. ನಿನ್ನ ದಾನಗಳು ದೇವರ ಸನ್ನಿಧಾನದಲ್ಲಿ ನೆನಪಿಗೆ ಬಂದವು.
ಆಗ ಶಿಷ್ಯರಲ್ಲಿ ಪ್ರತಿಯೊಬ್ಬನು ಯೂದಾಯದಲ್ಲಿದ್ದ ಸಹೊದರರಿಗೆ ತಮ್ಮತಮ್ಮ ಶಕ್ತ್ಯಾನುಸಾರ ದ್ರವ್ಯ ಸಹಾಯ ಕಳುಹಿಸಬೇಕೆಂದು ನಿಶ್ಚಯಿಸಿಕೊಂಡರು.ಹಾಗೆಯೇ ಮಾಡಿ ಅದನ್ನು ಬಾರ್ನಬ ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿದರು.
ಆಕೆಯೂ ಆಕೆಯ ಮನೆಯವರೂ ಬಾಪ್ತಿಸ್ಮ ಮಾಡಿಸಿಕೊಂಡ ಮೇಲೆ--ನಾನು ಕರ್ತನಿಗೆ ನಂಬಿಗಸ್ತಳಾದವಳೆಂದು ನೀವು ತೀರ್ಮಾನಿಸಿದರೆ ನನ್ನ ಮನೆಗೆ ಬಂದು ಇರಬೇಕು ಎಂದು ಆಕೆಯು ನಮ್ಮನ್ನು ಬೇಡಿಕೊಂಡು ಬಲವಂತಮಾಡಿದಳು.
ಪರಿಶುದ್ಧರ ಕೊರತೆಯ ಪ್ರಕಾರ ಹಂಚಿರಿ; ಅತಿಥಿಸತ್ಕಾರವನ್ನು ಮಾಡಿರಿ.
ಹಾಗಾದರೆ ನಿನ್ನ ವೈರಿಯು ಹಸಿದಿದ್ದರೆ ಅವನಿಗೆ ಊಟಕ್ಕೆ ಬಡಿಸು; ಬಾಯಾರಿದ್ದರೆ ಕುಡಿಯುವದಕ್ಕೆ ಕೊಡು. ಹೀಗೆ ಮಾಡುವದರಿಂದ ಅವನ ತಲೆಯ ಮೇಲೆ ಕೆಂಡಗಳನ್ನು ಕೂಡಿಸಿಟ್ಟಂತಾಗುವದು.ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೇತನದಿಂದ ಕೆಟ್ಟತನವನ್ನು ಸೋಲಿಸು.
ನನಗೂ ಸಮಸ್ತ ಸಭೆಗೂ ಅತಿಥಿಸತ್ಕಾರವನ್ನು ಮಾಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾನೆಯ ಮೇಲ್ವಿಚಾರಕ ನಾಗಿರುವ ಎರಸ್ತನೂ ಸಹೋದರನಾದ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.
ಇದಲ್ಲದೆ ಸಹೋದರರೇ, ಮಕೆದೋನ್ಯದ ಸಭೆಗಳಿಗೆ ಅನುಗ್ರಹಿಸಲ್ಪಟ್ಟ ದೇವರ ಕೃಪೆಯನ್ನು ನಿಮಗೆ ತಿಳಿಸುತ್ತೇನೆ.
ಆದದರಿಂದ ನೀವು ಎಲ್ಲವುಗಳಲ್ಲಿ ಅಂದರೆ ನಂಬಿಕೆಯಲ್ಲಿಯೂ ಮಾತಿ ನಲ್ಲಿಯೂ ಜ್ಞಾನದಲ್ಲಿಯೂ ಎಲ್ಲಾ ಆಸಕ್ತಿಯಲ್ಲಿಯೂ ನಮ್ಮ ಕಡೆಗಿರುವ ನಿಮ್ಮ ಪ್ರೀತಿಯಲ್ಲಿಯೂ ಸಮೃದ್ಧರಾಗಿರುವಂತೆಯೇ ಈ ಕೃಪೆಯಲ್ಲಿಯೂ ಸಮೃದ್ಧರಾಗಿರ್ರಿ.
ಪ್ರತಿಯೊಬ್ಬನು ತನ್ನ ಹೃದಯದಲ್ಲಿ ನಿರ್ಣಯಿಸಿ ಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲಾತ್ಕಾರದಿಂದಾಗಲಿ ಯಾರೂ ಕೊಡಬಾರದು; ಯಾಕಂದರೆ ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿ ಮಾಡುತ್ತಾನೆ.