Home Bibles ಮತ್ತಾಯ 25:41 · ಕನ್ನಡ ಬೈಬಲ್
ಮತ್ತಾಯ 25:41 · ಕನ್ನಡ ಬೈಬಲ್

ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ.

Cross references

ದ್ವಿತೀಯೋಪದೇಶಕಾಂಡ 27:15

ಕರ್ತನಿಗೆ ಅಸಹ್ಯ ವಾಗಿರುವ ವಿಗ್ರಹವನ್ನಾಗಲಿ ಎರಕ ಹೊಯಿದದ್ದ ನ್ನಾಗಲಿ ಮಾಡಿಕೊಂಡು ಶಿಲ್ಪಿಯ ಕೈಯಿಂದ ಮಾಡಿಸಿಗುಪ್ತವಾಗಿ ನಿಲ್ಲಿಸುವವನಿಗೆ ಶಾಪ. ಜನವೆಲ್ಲಾ ಉತ್ತರ ಕೊಟ್ಟು ಆಮೆನ್‌ ಎಂದು ಹೇಳಲಿ.

ದ್ವಿತೀಯೋಪದೇಶಕಾಂಡ 28:16

ಪಟ್ಟಣದಲ್ಲಿ ನಿನಗೆ ಶಾಪ; ಹೊಲದಲ್ಲಿ ನಿನಗೆ ಶಾಪ;

ಕೀರ್ತನೆಗಳು 6:8

ಅಕ್ರಮ ಮಾಡುವವರೇ, ನನ್ನ ಬಳಿಯಿಂದ ತೊಲ ಗಿರಿ; ಅಳುವ ನನ್ನ ಸ್ವರವನ್ನು ಕರ್ತನು ಕೇಳಿದ್ದಾನೆ;

ಕೀರ್ತನೆಗಳು 119:21

ನಿನ್ನ ಆಜ್ಞೆಗಳಿಂದ ತಪ್ಪಿಹೋಗುವ ಶಾಪಗ್ರಸ್ಥರಾದ ಅಹಂಕಾರಿಗಳನ್ನು ನೀನು ಗದರಿಸಿದ್ದೀ.

ಕೀರ್ತನೆಗಳು 119:115

ಕೇಡು ಮಾಡುವವರೇ, ನನ್ನಿಂದ ತೊಲಗಿರಿ; ನನ್ನ ದೇವರ ಆಜ್ಞೆಗಳನ್ನು ಕೈಕೊಳ್ಳುವೆನು.

ಕೀರ್ತನೆಗಳು 139:19

ಓ ದೇವರೇ, ನಿಶ್ಚಯವಾಗಿ ನೀನು ದುಷ್ಟನನ್ನು ಕೊಂದುಹಾಕುವಿ; ರಕ್ತ ಪ್ರಿಯರೇ, ನನ್ನಿಂದ ತೊಲ ಗಿರಿ.

ಯೆಶಾಯ 66:24

ಅವರು ಮುಂದೆ ಹೋಗಿ ನನಗೆ ವಿರೋಧವಾಗಿ ದ್ರೋಹ ಮಾಡಿದ ಮನುಷ್ಯರ ಹೆಣಗಳನ್ನು ನೋಡುವರು; ಯಾಕಂದರೆ ಅವರ ಹುಳ ಸಾಯುವದಿಲ್ಲ; ಅವರ ಬೆಂಕಿ ಆರುವದಿಲ್ಲ; ಅವರು ಎಲ್ಲಾ ಮನುಷ್ಯರಿಗೆ ಹೇಸಿಕೆಯಾಗುವರು.

ಯೆರೆಮಿಯ 17:5

ಆಗ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--

ಮತ್ತಾಯ 3:12

ಒನೆಯುವ ಮೊರವನ್ನು ಆತನು ತನ್ನ ಕೈಯಲ್ಲಿ ಹಿಡಿದಿದ್ದಾನೆ; ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ತನ್ನ ಗೋಧಿಯನ್ನು ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಟ್ಟುಬಿಡುವನು ಎಂದು ಹೇಳಿದನು.

ಮತ್ತಾಯ 5:22

ನಾನು ನಿಮಗೆ ಹೇಳುವದೇನಂದರೆ-- ನಿಷ್ಕಾರಣವಾಗಿ ತನ್ನ ಸಹೋದರನ ಮೇಲೆ ಯಾವನಾದರೂ ಸಿಟ್ಟುಗೊಂಡರೆ ಅವನು ನ್ಯಾಯತೀರ್ಪಿನ ಅಪಾಯಕ್ಕೆ ಒಳಗಾಗುವನು; ಮತ್ತು ಯಾವನಾದರೂ ತನ್ನ ಸಹೋದರನಿಗೆ-- ವ್ಯರ್ಥವಾದವನೇ ಎಂದು ಹೇಳಿದರೆ ಅವನು ನ್ಯಾಯಸಭೆಯ ಅಪಾಯಕ್ಕೆ ಒಳಗಾಗುವನು

ಮತ್ತಾಯ 7:23

ಆಗ ನಾನು ಅವರಿಗೆ--ನಾನು ನಿಮ್ಮನ್ನು ಎಂದಿಗೂ ಅರಿಯೆನು; ದುಷ್ಟತನ ಮಾಡುವ ನೀವು ನನ್ನಿಂದ ತೊಲಗಿ ಹೋಗಿರಿ ಎಂದು ಹೇಳಿಬಿಡುವೆನು.

ಮತ್ತಾಯ 13:40

ಹೇಗೆ ಹಣಜಿಯನ್ನು ಕೂಡಿಸಿ ಬೆಂಕಿಯಲ್ಲಿ ಸುಡು ವರೋ ಹಾಗೆಯೇ ಈ ಲೋಕಾಂತ್ಯದಲ್ಲಿ ಆಗುವದು.

ಮತ್ತಾಯ 13:42

ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.

ಮತ್ತಾಯ 13:50

ಮತ್ತು ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು; ಅಲ್ಲಿ ಗೋಳಾಟವೂ ಹಲ್ಲುಕಡಿಯೋಣವೂ ಇರುವವು ಎಂದು ಹೇಳಿದನು.

ಮತ್ತಾಯ 18:8

ಆದದರಿಂದ ನಿನ್ನ ಕೈಯಾಗಲೀ ಕಾಲಾಗಲೀ ನಿನ್ನನ್ನು ಅಭ್ಯಂತರಪಡಿಸಿದರೆ ಅವುಗಳನ್ನು ಕಡಿದು ನಿನ್ನಿಂದ ಬಿಸಾಡಿಬಿಡು; ನೀನು ಎರಡು ಕೈಯುಳ್ಳವನಾಗಿ ಇಲ್ಲವೆ ಎರಡು ಕಾಲುಳ್ಳವನಾಗಿ ನಿತ್ಯವಾದ ಬೆಂಕಿಗೆ ಹಾಕಲ್ಪಡುವದಕ್ಕಿಂತ ಕುಂಟ ನಾಗಿ ಇಲ್ಲವೆ ಊನನಾಗಿ ಜೀವದಲ್ಲಿ ಪ್ರವೇಶಿಸುವದು ನಿನಗೆ ಒಳ್ಳೇದು.

ಮತ್ತಾಯ 25:46

ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು.

ಮಾರ್ಕ 9:43

ನಿನ್ನ ಕೈ ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಡಿದುಹಾಕು; ಯಾಕಂದರೆ ಎರಡು ಕೈಗಳು ಳ್ಳವನಾಗಿ ಎಂದಿಗೂ ಆರದ ಬೆಂಕಿಯ ನರಕದೊಳಗೆ ಹೋಗುವದಕ್ಕಿಂತ ಅಂಗಹೀನನಾಗಿ ಜೀವದಲ್ಲಿ ಸೇರು ವದು ನಿನಗೆ ಒಳ್ಳೇದು;

ಮಾರ್ಕ 9:44

ಅಲ್ಲಿ ಅವರ ಹುಳವು ಸಾಯುವದಿಲ್ಲ ಮತ್ತು ಬೆಂಕಿಯು ಆರುವದಿಲ್ಲ.

ಲೂಕ 13:27

ಆದರೆ ಆತನು--ನೀವು ಎಲ್ಲಿ ಯವರೋ ನಾನರಿಯೆ; ಅಕ್ರಮ ಮಾಡುವವರಾದ ನೀವೆಲ್ಲರೂ ನನ್ನಿಂದ ಹೊರಟುಹೋಗಿರಿ ಎಂದು ಹೇಳುವನೆಂದು ನಾನು ನಿಮಗೆ ಹೇಳುತ್ತೇನೆ.

ಲೂಕ 16:24

ಅವನು--ತಂದೆಯಾದ ಅಬ್ರಹಾ ಮನೇ, ನನ್ನ ಮೇಲೆ ಕರುಣೆ ಇಟ್ಟು ಲಾಜರನು ತನ್ನ ತುದಿಬೆರಳನ್ನು ನೀರಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡುವಂತೆ ಅವನನ್ನು ಕಳುಹಿಸು; ಯಾಕಂದರೆ ನಾನು ಈ ಉರಿಯಲ್ಲಿ ಯಾತನೆಪಡುತ್ತಾ ಇದ್ದೇನೆ ಎಂದು ಕೂಗಿ ಹೇಳಿದನು.

ಯೋಹಾನ 8:44

ನೀವು ನಿಮ್ಮ ತಂದೆಯಾದ ಸೈತಾನನಿಗೆ ಸಂಬಂಧಪಟ್ಟವರಾಗಿದ್ದೀರಿ. ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡುವದಕ್ಕೆ ಇಚ್ಛೈಸುತ್ತೀರಿ; ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯ ದಲ್ಲಿ ನಿಲ್ಲಲಿಲ್ಲ. ಯಾಕಂದರೆ ಅವನಲ್ಲಿ ಸತ್ಯವೇ ಇಲ್ಲ; ಅವನು ಸುಳ್ಳಾಡುವಾಗ ತನ್ನ ಸ್ವಂತವಾದವುಗಳಿಂದ ಮಾ

ರೋಮಾಪುರದವರಿಗೆ 9:22

ಹೀಗಿರಲು ದೇವರು ತನ್ನ ಕೋಪವನ್ನು ತೋರಿಸುವದಕ್ಕೂ ತನ್ನ ಬಲವನ್ನು ಪ್ರಸಿದ್ಧಿಪಡಿಸುವದಕ್ಕೂ ಮನಸ್ಸುಳ್ಳವನಾಗಿ ನಾಶನಕ್ಕೆ ಯೋಗ್ಯವಾಗಿರುವ ಕೋಪದ ಪಾತ್ರೆಗಳಿಗಾಗಿ ಬಹು ದೀರ್ಘಶಾಂತಿಯಿಂದ ತಾಳಿಕೊಂಡು

ಗಲಾತ್ಯದವರಿಗೆ 3:10

ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರ ಮಾಡಿಕೊಳ್ಳುವವ ರೆಲ್ಲರೂ ಶಾಪಾಧೀನರಾಗಿದ್ದಾರೆ. ಹೇಗಂದರೆ, ನ್ಯಾಯ ಪ್ರಮಾಣದ ಗ್ರಂಥದೊಳಗೆ ಬರೆದಿರುವವುಗಳನ್ನೆಲ್ಲಾ ನಿತ್ಯವೂ ಕೈಕೊಳ್ಳದಿರುವ ಪ್ರತಿಯೊಬ್ಬನು ಶಾಪಗ್ರಸ್ತ ನೆಂದು ಬರೆದದೆ.

2 ತೆಸಲೋನಿಕದವರಿಗೆ 1:9

ಅಂಥವರು ಕರ್ತನ ಸಾನಿಧ್ಯದಿಂದಲೂ ಬಲವುಳ್ಳ ಆತನ ಮಹಿಮೆಯಿಂದಲೂ ನಿತ್ಯ ನಾಶನವೆಂಬ ಶಿಕ್ಷೆ ಯನ್ನು ಹೊಂದುವರು.

ಹೆಬ್ರಿಯರಿಗೆ 6:8

ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ ತಿರಸ್ಕರಿಸಲ್ಪಟ್ಟು ಶಾಪಕ್ಕೆ ಗುರಿಯಾಗುತ್ತದೆ. ಅದರ ಅಂತ್ಯವು ಸುಡಲ್ಪಡುವದೇ.

2 ಪೇತ್ರ 2:4

ಹೇಗೆಂದರೆ ದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯ ತೀರ್ಪನ್ನು ಹೊಂದುವದಕ್ಕೆ ಇಡಲ್ಪಟ್ಟವರಾಗಿರ ಬೇಕೆಂದು ಕತ್ತಲೆಯ ಸಂಕೋಲೆಗಳಿಗೆ ಒಪ್ಪಿಸಿದನು.

1 ಯೋಹಾನ 3:10

ಇವರು ದೇವರ ಮಕ್ಕಳೆಂಬದೂ ಅವರು ಸೈತಾನನ ಮಕ್ಕಳೆಂಬದೂ ಇದರಿಂದ ವ್ಯಕ್ತವಾಗುತ್ತದೆ. ನೀತಿಯನ್ನು ಅನುಸರಿಸದವನೂ ತನ್ನ ಸಹೋದರನನ್ನು ಪ್ರೀತಿಸದವನೂ ದೇವರಿಗೆ ಸಂಬಂಧಪಟ್ಟವನಲ್ಲ.

ಯೂದ 1:6

ತಮ್ಮ ಮೊದಲಿನ ಸ್ಥಿತಿಯನ್ನು ಕಾಪಾಡದೆ ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೂತರಿಗೆ ಆತನು ನಿತ್ಯವಾದ ಬೇಡಿಗಳನ್ನು ಹಾಕಿ ಮಹಾ ದಿನದ ತೀರ್ಪಿಗಾಗಿ ಅವರನ್ನು ಕತ್ತಲೆ ಯೊಳಗೆ ಕಾದಿಟ್ಟಿದ್ದಾನೆ.

ಪ್ರಕಟನೆ 12:7

ಇದಲ್ಲದೆ ಪರಲೋಕದಲ್ಲಿ ಯುದ್ಧ ನಡೆಯಿತು. ವಿಾಕಾಯೇಲನೂ ಅವನ ದೂತರೂ ಘಟಸರ್ಪಕ್ಕೆ ವಿರೋಧವಾಗಿ ಯುದ್ಧಮಾಡಿದರು; ಘಟಸರ್ಪನೂ ಅವನ ದೂತರೂ ಯುದ್ದಮಾಡಿ ಸೋತು ಹೋದರು.

ಪ್ರಕಟನೆ 14:10

ಅಂಥವನು ದೇವರ ಕೋಪವೆಂಬ ಪಾತ್ರೆ ಯಲ್ಲಿ ಏನೂ ಬೆರಸದೆ ಹಾಕಿದ ಆತನ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೂತರ ಮುಂದೆಯೂ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದ ಮತ್ತು ಗಂಧಕದಿಂದ ಯಾತನೆಪಡು ವನು.

ಪ್ರಕಟನೆ 20:10

ಇದಲ್ಲದೆ ಅವರನ್ನು ಮರುಳುಗೊಳಿಸಿದ ಸೈತಾನನು ಬೆಂಕಿ ಗಂಧಕಗಳುರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು; ಅಲ್ಲಿ ಮೃಗವೂ ಸುಳ್ಳು ಪ್ರವಾದಿಯೂ ಕೂಡ ಇದ್ದಾರೆ; ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆಪಡುತ್ತಿರುವರು.

Interlinear

Choose Theme