ಆದರೆ ಯೇಸು ಅದನ್ನು ತಿಳಿದವನಾಗಿ ಅವರಿಗೆ --ನೀವು ಯಾಕೆ ಈ ಸ್ತ್ರೀಯನ್ನು ತೊಂದರೆಪಡಿಸುತ್ತೀರಿ? ಯಾಕಂದರೆ ಈಕೆಯು ನನಗಾಗಿ ಒಳ್ಳೇಕಾರ್ಯವನ್ನು ಮಾಡಿದ್ದಾಳೆ;
Cross references
ನನ್ನ ಮೇಲೆ ಒಳ್ಳೇದಾಗಿದ್ದ ನನ್ನ ದೇವರ ಕೈಯನ್ನೂ ಅರಸನು ನನಗೆ ಹೇಳಿದ ಮಾತುಗಳನ್ನೂ ಅವರಿಗೆ ತಿಳಿಸಿದೆನು. ಆಗ ಅವರು--ನಾವು ಎದ್ದು ಕಟ್ಟುವೆವು ಎಂದು ಹೇಳಿ ತಮ್ಮ ಕೈಗಳನ್ನು ಈ ಒಳ್ಳೇ ಕೆಲಸಕ್ಕೆ ಬಲಪಡಿಸಿದರು.
ದೇವರಿಗೋಸ್ಕರ ನೀವು ದುಷ್ಟತನದಿಂದ ಮಾತನಾಡುವಿರೋ? ಆತನಿಗೋ ಸ್ಕರ ಮೋಸದ ನುಡಿಗಳನ್ನಾಡುವಿರೋ?
ಆದರೆ ಯೇಸು --ಈಕೆಯನ್ನು ಬಿಟ್ಟುಬಿಡಿರಿ; ಈಕೆಗೆ ನೀವು ಯಾಕೆ ತೊಂದರೆ ಕೊಡುತ್ತೀರಿ? ಈಕೆಯು ನನಗೆ ಒಳ್ಳೇ ಕಾರ್ಯವನ್ನು ಮಾಡಿದ್ದಾಳೆ.
ತರುವಾಯ ಆತನು ಆ ಸ್ತ್ರೀಯ ಕಡೆಗೆ ತಿರುಗಿಕೊಂಡು ಸೀಮೋನ ನಿಗೆ--ಈ ಸ್ತ್ರೀಯನ್ನು ನೋಡಿದೆಯಾ? ನಾನು ನಿನ್ನ ಮನೆಯೊಳಗೆ ಪ್ರವೇಶಿಸಿದಾಗ ನನ್ನ ಪಾದಗಳಿಗೆ ನೀನು ನೀರು ಕೊಡಲಿಲ್ಲ; ಇವಳಾದರೋ ನನ್ನ ಪಾದ ಗಳನು ಕಣ್ಣೀರಿನಿಂದ ತೊಳೆದು ತನ್ನ ತಲೇಕೂದಲಿನಿಂದ ಅವುಗಳನ್ನು ಒರೆ
ದೇವರು ಸಕಲ ವಿಧವಾದ ಕೃಪೆಯನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವದಕ್ಕೆ ಶಕ್ತನಾದ್ದರಿಂದ ನೀವು ಯಾವಾ ಗಲೂ ಎಲ್ಲಾ ವಿಷಯಗಳಲ್ಲಿ ಪರಿಪೂರ್ಣತೆ ಯುಳ್ಳವರಾಗಿ ಸಕಲಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರುವಿರಿ.
ಅದು ಸುವಾರ್ತೆಯೇ ಅಲ್ಲ, ಆದರೆ ಕೆಲವರು ನಿಮ್ಮನ್ನು ಕಳವಳಪಡಿಸುತ್ತಾ ಕ್ರಿಸ್ತನ ಸುವಾರ್ತೆಯನ್ನು ಮಾರ್ಪಡಿಸುವದಕ್ಕೆ ಪ್ರಯತ್ನಿಸುತ್ತಾರೆ.
ನಿಮ್ಮನ್ನು ಕಳವಳಪಡಿಸುವವರು ಛೇದಿಸ ಲ್ಪಡುವದೇ ನನ್ನ ಇಷ್ಟ.
ಇನ್ನು ಮೇಲೆ ಯಾರೂ ನನ್ನನ್ನು ಕಳವಳ ಪಡಿಸಬಾರದು; ಯಾಕಂದರೆ ನಾನು ನನ್ನ ದೇಹದಲ್ಲಿ ಕರ್ತನಾದ ಯೇಸುವಿನ ಗುರುತುಗಳನ್ನು ಹೊಂದಿದವ ನಾಗಿದ್ದೇನೆ.ಸಹೋದರರೇ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗಿರಲಿ. ಆಮೆನ್.
ದೇವರು ಮುಂದಾಗಿ ನೇಮಿಸಿದ ಸತ್ಕ್ರಿಯೆ ಗಳಲ್ಲಿ ನಾವು ನಡೆಯುವಂತೆ ಕ್ರಿಸ್ತ ಯೇಸುವಿನಲ್ಲಿ ಸೃಷ್ಟಿಸಲ್ಪಟ್ಟವರಾದ ನಾವು ಆತನ ಕೆಲಸವಾಗಿದ್ದೇವೆ.
ಕರ್ತನಿಗೆ ಯೋಗ್ಯರಾಗಿ ನಡೆದು ಎಲ್ಲಾ ವಿಧದಲ್ಲಿ ಆತನನ್ನು ಸಂತೋಷಪಡಿ ಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯ ವೆಂಬ ಫಲವನ್ನು ಕೊಡುತ್ತಾ ದೇವರ ಜ್ಞಾನದಲ್ಲಿ ಅಭಿವೃದ್ಧಿಯಾಗುತ್ತಿರಬೇಕೆಂತಲೂ
ನಿಮ್ಮ ಹೃದಯಗಳನ್ನು ಸಂತೈಸಿ ಸಕಲ ಸದ್ವಾಕ್ಯದಲ್ಲಿಯೂ ಸತ್ಕಾರ್ಯದಲ್ಲಿಯೂ ದೃಢಪಡಿಸಲಿ.
ಸಭಾಧ್ಯಕ್ಷನ ಉದ್ಯೋಗವನ್ನು ಪಡಕೊಳ್ಳ ಬೇಕೆಂದು ಆಶಿಸುವವನು ಒಳ್ಳೇ ಕೆಲಸ ವನ್ನು ಅಪೇಕ್ಷಿಸುವವನಾಗಿದ್ದಾನೆಂಬ ಮಾತು ಸತ್ಯವಾದ ದ್ದಾಗಿದೆ.
ಸತ್ಕ್ರಿಯೆಗಳನ್ನು ಮಾಡುವವಳೆಂದು ಹೆಸರುಗೊಂಡ ವಳೂ ಆಗಿರಬೇಕು; ಆಕೆಯು ಮಕ್ಕಳನ್ನು ಸಾಕಿದವಳಾ ಗಲಿ ಅತಿಥಿಸತ್ಕಾರವನ್ನು ಮಾಡಿದವಳಾಗಲಿ ಪರಿಶುದ್ಧರ ಪಾದಗಳನ್ನು ತೊಳೆದವಳಾಗಲಿ ಸಂಕಟದಲ್ಲಿ ಬಿದ್ದವರಿಗೆ ಸಹಾಯ ಮಾಡಿದವಳಾಗಲಿ ಎಲ್ಲಾ ಸತ್ಕಾರ್ಯಗಳಲಿ ಆಸಕ್ತಿಯುಳ್ಳವಳಾಗಲಿ ಆಗಿರ
ಒಬ್ಬನು ತನ್ನನ್ನು ಇಂಥವುಗಳಿಂದ ಶುದ್ಧಪಡಿಸಿಕೊಂಡರೆ ಅವನು ಪ್ರತಿಷ್ಠಿತನೂ ಯಜಮಾನನ ಬಳಿಕೆಗೆ ಯೋಗ್ಯನೂ ಸಕಲಸತ್ಕಾರ್ಯಕ್ಕೆ ಸಿದ್ಧನೂ ಆಗಿದ್ದು ಗೌರವಕ್ಕೆ ಪಾತ್ರೆಯಾಗಿರುವನು.
ಅವರು ತಾವು ದೇವರನ್ನು ಅರಿತವರೆಂದು ಹೇಳಿ ಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯ ರೂ ಸತ್ಕಾರ್ಯಗಳಿಗೆಲ್ಲಾ ಭ್ರಷ್ಟರೂ ಆಗಿರುವದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುವರು.
ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
ದೊರೆತನಗಳಿಗೂ ಅಧಿಕಾರಿಗಳಿಗೂ ಒಳಗಾಗಿ ನ್ಯಾಯಾಧಿಪತಿಗಳಿಗೆ ವಿಧೇಯ ರಾಗಿರಬೇಕೆಂತಲೂ ಪ್ರತಿಯೊಂದು ಸತ್ಕ್ರಿಯೆಗೆ ಸಿದರಾಗಿರಬೇಕೆಂತಲೂ
ಇದು ನಂಬತಕ್ಕ ಮಾತಾ ಗಿದೆ. ದೇವರಲ್ಲಿ ನಂಬಿಕೆ ಇಟ್ಟಿರುವವರು ಸತ್ಕ್ರಿಯೆಗಳನ್ನು ಮಾಡುವದರಲ್ಲಿ ಜಾಗರೂಕರಾಗಿರುವಂತೆ ನೀನು ಈ ಮಾತುಗಳನ್ನು ಯಾವಾಗಲೂ ದೃಢವಾಗಿ ಹೇಳಬೇಕೆಂದು ಅಪೇಕ್ಷಿಸುತ್ತೇನೆ. ಇವು ಮನುಷ್ಯರಿಗೆ ಉತ್ತಮವೂ ಪ್ರಯೋಜನಕರವೂ ಆಗಿವೆ.
ಅಗತ್ಯ ವಾದ ಕೊರತೆಗಳನ್ನು ನೀಗಿಸುವ ಸತ್ಕ್ರಿಯೆಗಳನ್ನು ಮಾಡುವದ ಕ್ಕಾಗಿ ನಮ್ಮವರು ಸಹ ಕಲಿತುಕೊಳ್ಳಲಿ; ಹೀಗೆ ಅವರು ನಿಷ್ಪಲರಾಗಿರುವದಿಲ್ಲ.ನನ್ನೊಂದಿಗಿರುವವರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ. ನಂಬಿಕೆಯಲ್ಲಿ ನಮ್ಮನ್ನು ಪ್ರೀತಿಸುವವರಿಗೆ ವಂದನೆ ಹೇಳು. ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್.
ನಿಮ್ಮನ್ನು ಸಕಲ ಸತ್ಕಾರ್ಯಗಳಲ್ಲಿ ಆತನ ಚಿತ್ತವನ್ನು ಮಾಡುವಂತೆ ಪರಿಪೂರ್ಣ ಮಾಡಲಿ. ತನ್ನ ದೃಷ್ಟಿಯಲ್ಲಿ ಮೆಚ್ಚಿಕೆಯಾದ ದ್ದನ್ನು ಯೇಸು ಕ್ರಿಸ್ತನ ಮೂಲಕ ನಿಮ್ಮಲ್ಲಿ ನಡಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.
ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ; ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ ಸತ್ಕ್ರಿಯೆಗಳನ್ನು ಕಣ್ಣಾರೆಕಂಡು ದರ್ಶಿಸುವ ದಿನದಲ್ಲಿ ದೇವರನ್ನು ಕೊಂಡಾಡುವರು.