ನಾನು ಆತನನ್ನು ನಿಮಗೆ ಒಪ್ಪಿಸಿಕೊಟ್ಟರೆ ನೀವು ನನಗೆ ಏನು ಕೊಡುತ್ತೀರಿ ಅಂದನು. ಆಗ ಅವರು ಅವನೊಂದಿಗೆ ಮೂವತ್ತು ಬೆಳ್ಳಿಯ ನಾಣ್ಯಗಳಿಗೆ ಒಪ್ಪಂದ ಮಾಡಿಕೊಂಡರು.
Cross references
ಆಗ ಯೆಹೂದನು ತನ್ನ ಸಹೋದರರಿಗೆ--ನಾವು ನಮ್ಮ ಸಹೋದರನನ್ನು ಕೊಂದುಹಾಕಿ ಅವನ ರಕ್ತವನ್ನು ಮರೆಮಾಡುವದರಲ್ಲಿ ಲಾಭವೇನು?
ಮಾರ್ಗ ದಿಂದ ಆಕೆಯ ಕಡೆಗೆ ತಿರುಗಿಕೊಂಡು ಅವನು--ನನ್ನನ್ನು ನಿನ್ನ ಬಳಿಗೆ ಬರಗೊಡಿಸು ಅಂದನು. (ಯಾಕಂದರೆ ಅವಳು ತನ್ನ ಸೊಸೆಯೆಂದು ಅವನಿಗೆ ತಿಳಿದಿರಲಿಲ್ಲ). ಅವಳು--ನೀನು ನನ್ನ ಬಳಿಗೆ ಬಂದರೆ ನನಗೆ ಏನು ಕೊಡುವಿ ಅಂದಳು.
ದಾಸನನ್ನಾದರೂ ದಾಸಿಯನ್ನಾದರೂ ಎತ್ತು ತಿವಿ ದರೆ ಅವರ ಯಜಮಾನನಿಗೆ ಮೂವತ್ತು ಶೆಕೆಲ್ ಬೆಳ್ಳಿಯನ್ನು ಕೊಟ್ಟು ಎತ್ತನ್ನು ಕಲ್ಲೆಸೆದು ಕೊಲ್ಲಬೇಕು.
ಹೆಣ್ಣಾಗಿದ್ದರೆ ನೀನು ನೇಮಿಸುವ ಕ್ರಯವು ಮೂವತ್ತು ಶೇಕೆಲುಗಳಾಗಿರಬೇಕು.
ಅವಳ ಬಳಿಗೆ ಫಿಲಿಷ್ಟಿಯರ ಅಧಿಪತಿಗಳು ಬಂದು ಅವಳಿಗೆ--ನೀನು ಅವನನ್ನು ಮರುಳುಗೊಳಿಸಿ, ನಾವು ಅವನನ್ನು ಯಾವ ಪ್ರಕಾರ ಗೆದ್ದು ಕಟ್ಟಿ ಬಾಧಿಸಬಹುದೆಂದು ಅವನ ದೊಡ್ಡ ಶಕ್ತಿ ಯಾವದರಲ್ಲಿ ಅದೆ ಎಂದೂ ನೋಡು; ನಾವು ಒಬ್ಬೊಬ್ಬರು ನಿನಗೆ ಸಾವಿರದ ನೂರು ಬೆಳ್ಳಿಯ ನಾಣ್ಯ ಗಳನ್ನು ಕೊಡುವೆವು ಅಂದರು.
ವಿಾಕನು ಅವನಿಗೆ--ನೀನು ನನ್ನ ಬಳಿಯಲ್ಲಿ ವಾಸಮಾಡಿ ನನಗೆ ತಂದೆಯಾಗಿಯೂ ಯಾಜಕನಾ ಗಿಯೂ ಇರು; ನಾನು ನಿನಗೆ ವರುಷಕ್ಕೆ ಹತ್ತು ಬೆಳ್ಳಿಯ ನಾಣ್ಯಗಳನ್ನೂ ಒಂದು ದುಸ್ತು ವಸ್ತ್ರಗಳನ್ನೂ ಆಹಾರ ವನ್ನೂ ಕೊಡುವೆನು ಅಂದನು. ಹಾಗೆಯೇ ಲೇವಿಯನು ಹೋದನು. ಲೇವಿಯು ಆ ಮನುಷ್ಯನ ಬಳಿಯಲ್ಲಿ ವಾಸವಾಗಿರುವದಕ್ಕೆ ಸಮ್ಮತಿಪಟ್ಟನು.
ಅವರು ಅವನಿಗೆನೀನು ಸುಮ್ಮನೆ ಇರು; ನಿನ್ನ ಬಾಯಿಯ ಮೇಲೆ ನಿನ್ನ ಕೈಹಾಕಿಕೊಂಡು ನಮ್ಮ ಸಂಗಡ ಬಂದು ನಮಗೆ ತಂದೆಯಾಗಿಯೂ ಯಾಜಕನಾಗಿಯೂ ಇರು. ನೀನು ಒಬ್ಬನ ಮನೆಗೆ ಯಾಜಕನಾಗಿರುವದು ಒಳ್ಳೇದೋ ಅಥವಾ ಇಸ್ರಾಯೇಲಿನಲ್ಲಿ ಒಂದು ಗೋತ್ರಕ್ಕೂ ಒಂದು ಕುಟುಂಬಕ್ಕೂ ಯಾಜಕನಾಗಿರುವದು ಒಳ್ಳೇದೋ ಅಂದರು.
ಹೌದು, ಎಂದಿಗೂ ಸಾಕೆನ್ನದ ಹೊಟ್ಟೇಬಾಕ ನಾಯಿಗಳು, ಅವರು ಗ್ರಹಿಕೆಯಿಲ್ಲದ ಕುರುಬರು; ಅವರೆಲ್ಲರು ತಮ್ಮ ತಮ್ಮ ಸ್ವಂತ ಮಾರ್ಗಕ್ಕೂ ಪ್ರತಿಯೊಬ್ಬನು ತನಗೆ ಲಾಭ ಸಿಕ್ಕುವ ಕಡೆಗೂ ತಿರುಗಿ ಕೊಳ್ಳುವನು.ಬನ್ನಿರಿ, ನಾನು ದ್ರಾಕ್ಷಾರಸವನ್ನು ತರುವೆನು; ನಮ್ಮನ್ನು ನಾವೇ ಅಮಲೇರುವ ಮದ್ಯದಿಂದ ತುಂಬಿಸಿ ಕೊಳ್ಳುವ! ನಾಳೆಯು ಈ ದಿವಸದಂತೆಯೇ ಬಹಳ ಸಮೃದ್ಧಿಯಾಗಿರುವದು.
ಆಗ ನಾನು ಅವರಿಗೆ--ನಿಮ್ಮ ಕಣ್ಣುಗಳಲ್ಲಿ ಒಳ್ಳೇದಾಗಿ ತೋರಿದರೆ ನನ್ನ ಸಂಬಳವನ್ನು ಕೊಡಿರಿ, ಇಲ್ಲದಿದ್ದರೆ ಬಿಡಿರಿ ಅಂದೆನು. ಆಗ ಅವರು ನನ್ನ ಸಂಬಳಕ್ಕಾಗಿ ಮೂವತ್ತು ರೂಪಾಯಿಗಳನ್ನು ತೂಕಮಾಡಿದರು.
ಆಗ ಆತನನ್ನು ಹಿಡುಕೊಟ್ಟ ಯೂದನು ಆತನಿಗೆ ಮರಣದಂಡನೆಯ ತೀರ್ಪಾದದ್ದನ್ನು ನೋಡಿ ಪಶ್ಚಾ ತ್ತಾಪಪಟ್ಟು ಆ ಮೂವತ್ತು ಬೆಳ್ಳಿಯ ನಾಣ್ಯಗಳನು ತಿರಿಗಿ ಪ್ರಧಾನ ಯಾಜಕರ ಮತ್ತು ಹಿರಿಯರ ಬಳಿಗೆ ತಂದು
ಈ ಮನುಷ್ಯನು ತನ್ನ ದ್ರೋಹದ ಫಲದಿಂದ ಹೊಲವನ್ನು ಕೊಂಡುಕೊಂಡನು; ತಲೆ ಕೆಳಗಾಗಿ ಬಿದ್ದು ಅವನ ಹೊಟ್ಟೆ ಒಡೆದು ಕರುಳು ಗಳೆಲ್ಲಾ ಹೊರಬಿದ್ದವು.
ಅವನು ಕುಡಿಯುವವನಾಗಿರಬಾರದು. ಹೊಡೆದಾಡುವವನಾಗಿರಬಾರದು, ದ್ರವ್ಯಾಶೆಯುಳ್ಳವ ನಾಗಿರಬಾರದು; ಆದರೆ ತಾಳ್ಮೆಯುಳ್ಳವನೂ ಕುತರ್ಕ ಮಾಡದವನೂ ದುರಾಶೆಯಿಲ್ಲದವನೂ ಆಗಿರಬೇಕು.
ಆದರೆ ಐಶ್ವರ್ಯವಂತರಾಗ ಬೇಕೆಂದು ಮನಸ್ಸು ಮಾಡುವವರು ಶೋಧನೆಯಲ್ಲಿಯೂ ಉರ್ಲಿನಲ್ಲಿಯೂ ಸಿಕ್ಕಿಕೊಂಡು ಅನೇಕ ಬುದ್ಧಿಹೀನತೆಯ ಮತ್ತು ಹಾನಿಕರವಾದ ದುರಾಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ನಾಶನಗಳಲ್ಲಿ ಮುಳುಗಿಸುತ್ತವೆ.
ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತು ಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸ ಬೇಕೆಂದಿರುವರು. ಅಂಥವರಿಗೆ ಬಹಳ ಕಾಲದಿಂದಿದ್ದ ತೀರ್ಪು ತಡವಾಗುವದಿಲ್ಲ. ಅವರಿಗಾಗುವ ನಾಶನವು ತೂಕಡಿಸುವದಿಲ್ಲ.
ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲ ಚಿತ್ತರನ್ನು ಮರುಳು ಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ.