Home Bibles ಮತ್ತಾಯ 26:24 · ಕನ್ನಡ ಬೈಬಲ್
ಮತ್ತಾಯ 26:24 · ಕನ್ನಡ ಬೈಬಲ್

ಮನುಷ್ಯಕುಮಾರನು ತನ್ನ ವಿಷಯದಲ್ಲಿ ಬರೆದಿರುವ ಪ್ರಕಾರ ಹೋಗುತ್ತಾನೆ; ಆದರೆ ಮನುಷ್ಯಕುಮಾರನು ಯಾವನಿಂದ ಹಿಡಿದು ಕೊಡಲ್ಪಡುತ್ತಾನೋ ಆ ಮನುಷ್ಯನಿಗೆ ಅಯ್ಯೋ! ಆ ಮನುಷ್ಯನು ಹುಟ್ಟದೆ ಹೋಗಿದ್ದರೆ ಅವನಿಗೆ ಒಳ್ಳೇದಾಗುತ್ತಿತ್ತು ಅಂದನು.

Cross references

ಆದಿಕಾಂಡ 3:15

ನಿನಗೂ ಸ್ತ್ರೀಗೂ ನಿನ್ನ ಸಂತತಿಗೂ ಸ್ತ್ರೀ ಸಂತತಿಗೂ ಹಗೆತನ ಇಡುವೆನು; ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು, ಕಚ್ಚುವಿ ಅಂದನು.

ಕೀರ್ತನೆಗಳು 22:1

ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ? ನೀನು ಯಾಕೆ ನನಗೆ ಸಹಾಯ ಮಾಡದೆಯೂ ನನ್ನ ಕೂಗಿಗೆ ಕಿವಿ ಗೊಡದೆಯೂ ದೂರವಾಗಿದ್ದೀ.

ಕೀರ್ತನೆಗಳು 55:15

ಮರಣವು ಅವರನ್ನು ಹಿಡಿ ಯಲಿ; ತ್ವರಿತವಾಗಿ ನರಕಕ್ಕೆ ಅವರು ಇಳಿದುಹೋಗಲಿ; ಅವರ ವಾಸಸ್ಥಳದಲ್ಲಿಯೂ ಮಧ್ಯದಲ್ಲಿಯೂ ದುಷ್ಟತನ ಇದೆ.

ಕೀರ್ತನೆಗಳು 55:23

ಓ ದೇವರೇ, ನೀನು ಅವರನ್ನು ನಾಶನದ ಕುಣಿಯಲ್ಲಿ ಇಳಿಯ ಮಾಡುವಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಯದ ದಿವಸಗಳಲ್ಲಿ ಅರ್ದದಷ್ಟಾದರೂ ಜೀವಿ ಸುವದಿಲ್ಲ; ನಾನು ನಿನ್ನಲ್ಲಿ ಭರವಸವಿಡುತ್ತೇನೆ.

ಕೀರ್ತನೆಗಳು 69:1

ಓ ದೇವರೇ ನನ್ನನ್ನು ರಕ್ಷಿಸು; ನೀರು ನನ್ನ ಪ್ರಾಣದ ವರೆಗೂ ಬಂದಿದೆ.

ಕೀರ್ತನೆಗಳು 109:6

ದುಷ್ಟನನ್ನು ಅವನ ಮೇಲೆ ನೇಮಿಸು; ಸೈತಾನನು ಅವನ ಬಲಗಡೆಯಲ್ಲಿ ನಿಂತುಕೊಳ್ಳಲಿ.

ಯೆಶಾಯ 50:5

ಕರ್ತನಾದ ದೇವರು ನನ್ನ ಕಿವಿಯನ್ನು ತೆರೆದಿದ್ದಾನೆ. ನಾನು ಎದುರುಬೀಳಲಿಲ್ಲ ಇಲ್ಲವೆ ವಿಮುಖನಾಗಲೂ ಇಲ್ಲ.

ಯೆಶಾಯ 53:1

ನಮ್ಮ ಸುದ್ಧಿಯನ್ನು ಯಾರು ನಂಬಿದ್ದಾರೆ? ಕರ್ತನ ತೋಳು ಯಾರಿಗೆ ಪ್ರಕಟವಾ ಯಿತು?

ದಾನಿಯೇಲ 9:26

ಅರವತ್ತೆರಡು ವಾರಗಳಾದ ಮೇಲೆ ಮೆಸ್ಸೀಯನು ಛೇದಿಸಲ್ಪಡುವನು. ಆದರೆ ತನಗೆ ಅಲ್ಲ; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವದು. ಅಂತ್ಯದ ವರೆಗೂ ಯುದ್ಧವಾಗಿ ನಾಶನಗಳು ಸಂಭವಿಸುವವು.ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.

ಜೆಕರ್ಯ 12:10

ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನೂ ಬಿನ್ನಹಗಳ ಆತ್ಮವನ್ನೂ ಒಯ್ಯುವೆನು; ಇರಿದವರು ಆತನನ್ನು ದೃಷ್ಟಿಸಿ ನೋಡುವರು; ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ ಆತನ ನಿಮಿತ್ತ ಗೋಳಾಡುವರು; ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆಪಡು ವರು.

ಜೆಕರ್ಯ 13:7

ಓ ಕತ್ತಿಯೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ, ಎಚ್ಚರವಾಗು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಕುರುಬನನ್ನು ಹೊಡೆ, ಆಗ ಕುರಿಗಳು ಚದರಿ ಹೋಗುವವು; ಆದರೆ ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು ಎಂದು ಹೇಳುತ್ತಾನೆ.

ಮತ್ತಾಯ 18:7

ತೊಡಕುಗಳ ನಿಮಿತ್ತವಾಗಿ ಲೋಕಕ್ಕೆ ಅಯ್ಯೋ! ಯಾಕಂದರೆ ತೊಡಕುಗಳು ಬಂದೇ ಬರುವವು; ಆದರೆ ಯಾವ ಮನುಷ್ಯನಿಂದ ತೊಡಕು ಬರುವದೋ ಅವನಿಗೆ ಅಯ್ಯೋ!

ಮತ್ತಾಯ 26:54

ಹಾಗಾದರೆ ಇವುಗಳು ಹೀಗೆ ಆಗಬೇಕೆಂಬ ಬರಹಗಳು ನೆರವೇರು ವದು ಹೇಗೆ ಅಂದನು.

ಮತ್ತಾಯ 26:56

ಆದರೆ ಪ್ರವಾದಿಗಳ ಬರಹಗಳು ನೆರವೇರುವಂತೆ ಇದೆಲ್ಲಾ ಆಯಿತು ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.

ಮತ್ತಾಯ 27:3

ಆಗ ಆತನನ್ನು ಹಿಡುಕೊಟ್ಟ ಯೂದನು ಆತನಿಗೆ ಮರಣದಂಡನೆಯ ತೀರ್ಪಾದದ್ದನ್ನು ನೋಡಿ ಪಶ್ಚಾ ತ್ತಾಪಪಟ್ಟು ಆ ಮೂವತ್ತು ಬೆಳ್ಳಿಯ ನಾಣ್ಯಗಳನು ತಿರಿಗಿ ಪ್ರಧಾನ ಯಾಜಕರ ಮತ್ತು ಹಿರಿಯರ ಬಳಿಗೆ ತಂದು

ಮಾರ್ಕ 9:12

ಆತನು ಅವರಿಗೆ ಪ್ರತ್ಯುತ್ತರವಾಗಿ-- ನಿಜವಾಗಿಯೂ ಎಲೀಯನು ಮೊದಲು ಬಂದು ಎಲ್ಲವುಗಳನ್ನು ಯಥಾಸ್ಥಾನಪಡಿಸುತ್ತಾನೆ; ಆದರೆ ಮನುಷ್ಯಕುಮಾರನು ಬಹಳ ಶ್ರಮೆಗಳನ್ನನುಭವಿ ಸುವದು ಮತ್ತು ತಿರಸ್ಕರಿಸಲ್ಪಡುವದು ಅಗತ್ಯವೆಂದು ಆತನ ವಿಷಯವಾಗಿ ಬರೆದಿರುವದು ಹೇಗೆ?

ಮಾರ್ಕ 14:21

ತನ್ನ ವಿಷಯವಾಗಿ ಬರೆದಿರುವ ಪ್ರಕಾರ ಮನುಷ್ಯ ಕುಮಾರನು ನಿಜವಾಗಿಯೂ ಹೋಗುತ್ತಾನೆ; ಆದರೆ ಯಾವನಿಂದ ಮನುಷ್ಯಕುಮಾರನು ಹಿಡುಕೊಡಲ್ಪಡು ತ್ತಾನೋ ಆ ಮನುಷ್ಯನಿಗೆ ಅಯ್ಯೋ! ಆ ಮನುಷ್ಯನು ಹುಟ್ಟದೆಹೋಗಿದ್ದರೆ ಅವನಿಗೆ ಒಳ್ಳೇದಾಗುತ್ತಿತ್ತು ಎಂದು ಹೇಳಿದನು.

ಲೂಕ 22:22

ನಿರ್ಧರಿಸ ಲ್ಪಟ್ಟಂತೆಯೇ ಮನುಷ್ಯಕುಮಾರನು ನಿಜವಾಗಿಯೂ ಹೋಗುತ್ತಾನೆ; ಆದರೆ ಆತನನ್ನು ಹಿಡುಕೊಡುವ ಆ ಮನುಷ್ಯನಿಗೆ ಅಯ್ಯೋ! ಎಂದು ಹೇಳಿದನು.

ಲೂಕ 24:25

ಆಗ ಆತನು ಅವರಿಗೆ--ಓ ಬುದ್ದಿಹೀನರೇ, ಪ್ರವಾದಿಗಳು ಹೇಳಿ ದ್ದೆಲ್ಲವನ್ನು ನಂಬುವದರಲ್ಲಿ ಮಂದ ಹೃದಯದವರೇ,

ಲೂಕ 24:46

ಅವರಿಗೆ--ಕ್ರಿಸ್ತನು ಹೀಗೆ ಶ್ರಮೆಪಟ್ಟು ಸತ್ತವರೊಳಗಿಂದ ಮೂರನೆಯ ದಿನದಲ್ಲಿ ಎದ್ದು ಬರುವದು ಅಗತ್ಯವಾಗಿತ್ತೆಂತಲೂ

ಯೋಹಾನ 17:12

ನಾನು ಅವರೊಂದಿಗೆ ಲೋಕದಲ್ಲಿದ್ದಾಗ ನಿನ್ನ ಹೆಸರಿನಲ್ಲಿ ಅವರನ್ನು ಕಾಪಾಡಿದೆನು; ನೀನು ನನಗೆ ಕೊಟ್ಟವರನ್ನು ನಾನು ಕಾಪಾಡಿದ್ದೇನೆ; ಬರಹವು ನೆರವೇರುವ ಹಾಗೆ ಆ ನಾಶನದ ಮಗನೇ ಹೊರತು ಅವರಲ್ಲಿ ಒಬ್ಬನೂ ನಾಶವಾಗಲಿಲ್ಲ.

ಯೋಹಾನ 19:24

ಆದದ ರಿಂದ ಅವರು--ನಾವು ಅದನ್ನು ಹರಿಯುವದು ಬೇಡ; ಆದರೆ ಅದು ಯಾರಿಗಾಗುವದೋ ಎಂದು ಅದಕ್ಕೋಸ್ಕರ ಚೀಟು ಹಾಕಿಕೊಳ್ಳೋಣ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು; ಹೀಗೆ--ನನ್ನ ಬಟ್ಟೆಯನ್ನು ಅವರು ತಮ್ಮೊಳಗೆ ಪಾಲುಮಾಡಿ ಕೊಂಡರು; ನನ್ನ ಮೇಲಂಗಿಗೋಸ್ಕರ ಚೀಟು ಹಾಕಿ ದರ

ಯೋಹಾನ 19:28

ಇದಾದ ಮೇಲೆ ಯೇಸು ಆಗ ಎಲ್ಲವೂ ಪೂರೈಸಲ್ಪಟ್ಟಿತೆಂದು ತಿಳಿದು ಬರಹವು ನೆರವೇರು ವಂತೆ--ನನಗೆ ನೀರಡಿಕೆಯಾಗಿದೆ ಅಂದನು.

ಯೋಹಾನ 19:36

ಯಾಕಂದರೆ--ಆತನ ಒಂದು ಎಲುಬಾದರೂ ಮುರಿಯಲ್ಪಡಬಾರದು ಎಂಬ ಬರಹವು ನೆರವೇರುವಂತೆ ಇವುಗಳು ಸಂಭವಿಸಿದವು.

ಅಪೋಸ್ತಲರ ಕೃತ್ಯಗಳು 1:16

ಜನರೇ, ಸಹೋದ ರರೇ, ಯೇಸುವನ್ನು ಹಿಡಿದವರಿಗೆ ದಾರಿ ತೋರಿಸಿದ ಯೂದನ ವಿಷಯವಾಗಿ ಮೊದಲು ದಾವೀದನ ಬಾಯಿಂದ ಪವಿತ್ರಾತ್ಮನು ಹೇಳಿದ್ದ ಬರಹವು ನೆರ ವೇರುವದು ಅವಶ್ಯವಾಗಿತ್ತು.

ಅಪೋಸ್ತಲರ ಕೃತ್ಯಗಳು 2:23

ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್‌ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ.

ಅಪೋಸ್ತಲರ ಕೃತ್ಯಗಳು 4:28

ನಿನ್ನ ಹಸ್ತವು ಮತ್ತು ನಿನ್ನ ಸಂಕಲ್ಪವು ಮೊದಲೇ ನಿಶ್ಚಯಿಸಿದ್ದನ್ನು ಮಾಡಿದರು.

ಅಪೋಸ್ತಲರ ಕೃತ್ಯಗಳು 13:27

ಯೆರೂ ಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿ ಗಳೂ ಆತನನ್ನಾಗಲೀ ಪ್ರತಿ ಸಬ್ಬತ್‌ದಿನದಲ್ಲಿ ಪಾರಾ ಯಣವಾಗುವ ಪ್ರವಾದಿಗಳ ವಾಕ್ಯಗಳನ್ನಾಗಲೀ ಗ್ರಹಿಸದೆ ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ವಾಕ್ಯಗಳನ್ನೇ ನೆರವೇರಿಸಿದರು.

ಅಪೋಸ್ತಲರ ಕೃತ್ಯಗಳು 17:2

ಪೌಲನು ತನ್ನ ಪದ್ಧತಿಯ ಪ್ರಕಾರ ಅಲ್ಲಿದ್ದವರ ಬಳಿಗೆ ಹೋಗಿ ಮೂರು ಸಬ್ಬತ್‌ ದಿನಗಳಲ್ಲಿ ಬರಹಗಳಿಂದ ಅವರ ಸಂಗಡ ವಾದಿಸಿ

ಅಪೋಸ್ತಲರ ಕೃತ್ಯಗಳು 26:22

ಹೀಗೆ ನಾನು ದೇವರ ಸಹಾಯವನ್ನು ಹೊಂದಿ ಈ ದಿವಸದವರೆಗೆ ಜೀವದಿಂದಿದ್ದು ಪ್ರವಾದಿಗಳೂ ಮೋಶೆಯೂ ಸಂಭವಿಸುವವೆಂದು ಹೇಳಿದವುಗಳನ್ನೇ ಹೊರತು ಮತ್ತೆ ಯಾವ ವಿಷಯಗಳನ್ನೂ ಹೇಳದೆ ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷೀಕರಿಸುವವ ನಾಗಿದ್ದೇನೆ.

ಅಪೋಸ್ತಲರ ಕೃತ್ಯಗಳು 28:23

ಅವರು ಅವನಿಗೆ ಒಂದು ದಿನವನ್ನು ನೇಮಿಸಿ ದಾಗ ಅನೇಕರು ಅವನ ನಿವಾಸಕ್ಕೆ ಬಂದರು; ಆಗ ಬೆಳಗಿನಿಂದ ಸಾಯಂಕಾಲದವರೆಗೆ ಮೋಶೆಯ ನ್ಯಾಯ ಪ್ರಮಾಣದಿಂದಲೂ ಪ್ರವಾದನೆಗಳಿಂದಲೂ ಯೇಸು ವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಅವರಿಗೆ ದೇವರ ರಾಜ್ಯವನ್ನು ವಿವರಿಸಿ ಸಾಕ್ಷೀಕರಿಸಿದನು.

1 ಕೊರಿಂಥದವರಿಗೆ 15:3

ನಾನು ಸಹ ಎಲ್ಲಾದಕ್ಕಿಂತಲೂ ಮೊದಲು ಹೊಂದಿದ್ದನ್ನು ನಿಮಗೆ ತಿಳಿಸಿದ್ದೇನೆ. ಅದೇನಂದರೆ, ಬರಹದ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳಿಗಾಗಿ ಸತ್ತನು.

1 ಪೇತ್ರ 1:10

ನಿಮಗೆ ಬರಬೇಕಾಗಿದ್ದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು.

Interlinear

Choose Theme