ಆಮೇಲೆ ಯೇಸು ಅವರಿಗೆ--ನೀವೆಲ್ಲರೂ ಈ ರಾತ್ರಿ ನನ್ನ ವಿಷಯದಲ್ಲಿ ಅಭ್ಯಂತರಪಡುವಿರಿ; ಯಾಕಂದರೆ-- ನಾನು ಕುರುಬನನ್ನು ಹೊಡೆಯುವೆನು; ಮಂದೆ ಯ ಕುರಿಗಳು ಚದರಿಹೋಗುವವು ಎಂದು ಬರೆದದೆ;
Cross references
ನನ್ನ ಸಹೋದರರು ಹಳ್ಳದ ಹಾಗೆ ಮೋಸ ಮಾಡಿದ್ದಾರೆ; ಹಳ್ಳಗಳ ಪ್ರವಾಹದಂತೆ ಹಾದು ಹೋಗುತ್ತಾರೆ.
ನನ್ನ ಸಹೋದರರನ್ನು ನನಗೆ ದೂರ ಮಾಡು ತ್ತಾನೆ; ನನ್ನ ಪರಿಚಯದ ಸ್ನೇಹಿತರು ನನಗೆ ಅನ್ಯರೇ ಆದರು.
ನನ್ನ ಪ್ರಿಯರೂ ಸ್ನೇಹಿತರೂ ನನ್ನ ಹುಣ್ಣನ್ನು ನೋಡಿ ಓರೆಯಾಗಿ ನಿಲ್ಲುತ್ತಾರೆ; ನನ್ನ ನೆರೆಯವರು ದೂರದಲ್ಲಿ ನಿಂತಿದ್ದಾರೆ.
ನಿಂದೆಯು ನನ್ನ ಹೃದಯವನ್ನು ಮುರಿದದೆ; ಭಾರದಿಂದ ನಾನು ತುಂಬಿದವನಾಗಿದ್ದೇನೆ, ಕನಿಕರಕ್ಕೋಸ್ಕರ ಕೆಲವರನ್ನು ನಿರೀಕ್ಷಿಸಿದೆನು, ಆದರೆ ಒಬ್ಬರೂ ಕಾಣಲಿಲ್ಲ. ಆದರಿಸುವವರಿಗೋಸ್ಕರ ಸಹ ಎದುರು ನೋಡಿದೆನು: ಆದರೆ ಯಾರೂ ಸಿಕ್ಕಲಿಲ್ಲ.
ಪ್ರಿಯನನ್ನೂ ಸ್ನೇಹಿತನನೂ ನನಗೆ ದೂರ ಮಾಡಿದ್ದೀ; ನನ್ನ ಕತ್ತಲೆಯ ಸ್ಥಳವೇ ನನ್ನ ಪರಿಚಿತರು.
ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು.
ನಾನು ನನ್ನ ಪ್ರಿಯರನ್ನು ಕರೆದೆನು, ಆದರೆ ಅವರು ನನ್ನನ್ನು ಮೋಸಗೊಳಿಸಿದರು; ನನ್ನ ಯಾಜಕರೂ ಹಿರಿ ಯರೂ ತಮ್ಮ ಪ್ರಾಣವನ್ನು ಉಳಿಸಿಕೊಳ್ಳುವದಕ್ಕೆ ರೊಟ್ಟಿ ಯನ್ನು ಹುಡುಕುತ್ತಾ ನಗರದಲ್ಲಿ ಸತ್ತುಹೋದರು.
ಅವು ಚದರಿಹೋದವು; ಯಾಕಂದರೆ ಅಲ್ಲಿ ಕುರುಬ ರಿಲ್ಲ; ಅವರು ಚದರಿಹೋದಾಗ ಬಯಲಿನಲ್ಲಿರುವ ಎಲ್ಲಾ ಮೃಗಗಳಿಗೆ ಆಹಾರವಾದವು.
ಓ ಕತ್ತಿಯೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ, ಎಚ್ಚರವಾಗು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಕುರುಬನನ್ನು ಹೊಡೆ, ಆಗ ಕುರಿಗಳು ಚದರಿ ಹೋಗುವವು; ಆದರೆ ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು ಎಂದು ಹೇಳುತ್ತಾನೆ.
ನನ್ನ ವಿಷಯವಾಗಿ ಸಂಶಯಪಡದವನೇ ಧನ್ಯನು ಅಂದನು.
ಆಗ ನಿಮ್ಮನ್ನು ಸಂಕಟಪಡಿ ಸುವದಕ್ಕಾಗಿ ಒಪ್ಪಿಸುವರು; ಮತ್ತು ನಿಮ್ಮನ್ನು ಕೊಲ್ಲು ವರು. ಇದಲ್ಲದೆ ನನ್ನ ಹೆಸರಿನ ನಿಮಿತ್ತವಾಗಿ ಎಲ್ಲಾ ಜನಾಂಗಗಳವರು ನಿಮ್ಮನ್ನು ಹಗೆ ಮಾಡುವರು.
ಆದರೆ ಪ್ರವಾದಿಗಳ ಬರಹಗಳು ನೆರವೇರುವಂತೆ ಇದೆಲ್ಲಾ ಆಯಿತು ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.
ಆಗ ಯೇಸು ಅವರಿಗೆ--ಈ ರಾತ್ರಿ ನೀವೆಲ್ಲರೂ ನನ್ನ ದೆಸೆಯಿಂದ ಅಭ್ಯಂತರಪಡುವಿರಿ; ಯಾಕಂದರೆನಾನು ಕುರುಬನನ್ನು ಹೊಡೆಯುವೆನು, ಕುರಿಗಳು ಚದರಿಸಲ್ಪ ಡುವವು ಎಂದು ಬರೆದದೆ.
ತರುವಾಯ ಕರ್ತನು--ಸೀಮೋನನೇ, ಸೀಮೋ ನನೇ, ಇಗೋ, ಸೈತಾನನು ನಿಮ್ಮನ್ನು ಗೋಧಿಯಂತೆ ಒನೆಯಬೇಕೆಂದು ಅಪೇಕ್ಷೆಪಟ್ಟಿದ್ದಾನೆ.
ಇಗೋ, ಒಬ್ಬೊಬ್ಬನು ತನ್ನ ತನ್ನ ಸ್ಥಳಕ್ಕೆ ಚದರಿ ಹೋಗಿ ನನ್ನನ್ನು ಒಂಟಿಗನಾಗಿ ಬಿಡುವ ಗಳಿಗೆ ಬರುವದು. ಹೌದು, ಈಗಲೇ ಬಂದಿದೆ. ಆದಾಗ್ಯೂ ನಾನು ಒಂಟಿಗನಲ್ಲ; ತಂದೆಯು ನನ್ನ ಸಂಗಡ ಇದ್ದಾನೆ.ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.