ತಿರಿಗಿ ಆತನು ಎರಡನೆಯ ಸಾರಿ ಹೋಗಿ ಪ್ರಾರ್ಥಿಸುತ್ತಾ--ಓ ನನ್ನ ತಂದೆಯೇ, ನಾನು ಈ ಪಾತ್ರೆಯಲ್ಲಿ ಕುಡಿಯದ ಹೊರತು ಇದು ನನ್ನನ್ನು ಬಿಟ್ಟು ಹೋಗಕೂಡದಾಗಿದ್ದರೆ ನಿನ್ನ ಚಿತ್ತವೇ ಆಗಲಿ ಅಂದನು.
Cross references
ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ? ನೀನು ಯಾಕೆ ನನಗೆ ಸಹಾಯ ಮಾಡದೆಯೂ ನನ್ನ ಕೂಗಿಗೆ ಕಿವಿ ಗೊಡದೆಯೂ ದೂರವಾಗಿದ್ದೀ.
ಓ ದೇವರೇ ನನ್ನನ್ನು ರಕ್ಷಿಸು; ನೀರು ನನ್ನ ಪ್ರಾಣದ ವರೆಗೂ ಬಂದಿದೆ.
ನಿನ್ನ ಮುಖವನ್ನು ನಿನ್ನ ಸೇವಕನಿಗೆ ಮರೆಮಾಡಬೇಡ; ನಾನು ಇಕ್ಕಟ್ಟಿನಲ್ಲಿದ್ದೇನೆ; ಬೇಗ ನನಗೆ ಉತ್ತರಕೊಡು.
ನನ್ನ ರಕ್ಷಣೆಯ ದೇವರಾದ ಓ ಕರ್ತನೇ, ಹಗಲಿರುಳು ನಿನ್ನ ಮುಂದೆ ಕೂಗುತ್ತೇನೆ.
ಆಮೇಲೆ ಆತನು ಸ್ವಲ್ಪದೂರ ಹೋಗಿ ಅಡ್ಡಬಿದ್ದು ಪ್ರಾರ್ಥಿ ಸುತ್ತಾ--ಓ ನನ್ನ ತಂದೆಯೇ, ಸಾಧ್ಯವಾದರೆ ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಲಿ; ಆದಾಗ್ಯೂ ನನ್ನ ಚಿತ್ತದಂತಲ್ಲ; ನಿನ್ನ ಚಿತ್ತದಂತೆಯೇ ಆಗಲಿ ಅಂದನು.
ಆತನು ತಿರಿಗಿ ಹೊರಟು ಹೋಗಿ ಅದೇ ಮಾತುಗಳನ್ನು ಹೇಳುತ್ತಾ ಪ್ರಾರ್ಥಿಸಿ ದನು.
ಯಾಕಂದರೆ ನಮಗಿ ರುವ ಮಹಾಯಾಜಕನು ನಮ್ಮ ನಿರ್ಬಲಾವಸ್ಥೆಯನ್ನು ಕುರಿತು ಅನುತಾಪವಿಲ್ಲದವನಲ್ಲ; ಆತನು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿ ಯಾದರೂ ಪಾಪರಹಿತನಾಗಿದ್ದನು.ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.
ಆತನು ತನ್ನ ಶರೀರದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತನಾಗಿರುವಾತನಿಗೆ ಬಲ ವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ಭಯಪಟ್ಟದ್ದರಲ್ಲಿ ಕೇಳಲ್ಪ ಟ್ಟನು.