ಆದರೆ ಯೇಸು ಸುಮ್ಮನಿದ್ದನು. ಆಗ ಮಹಾಯಾಜಕನು ಪ್ರತ್ಯುತ್ತರವಾಗಿ ಆತನಿಗೆ--ನೀನು ದೇವಕುಮಾರನಾದ ಕ್ರಿಸ್ತನಾದರೆ ಅದನ್ನು ನಮಗೆ ಹೇಳಬೇಕೆಂದು ಜೀವಸ್ವರೂಪನಾದ ದೇವರ ಆಣೆಯನ್ನು ನಿನಗೆ ಇಡುತ್ತೇನೆ ಅಂದನು.
Cross references
ಯಾವನಾದರೂ ಆಣೆಯಿಡುವದನ್ನು ಕೇಳಿ ಸಾಕ್ಷಿಯಾಗಿದ್ದು ಪಾಪಮಾಡಿದರೆ ಅವನು ಅದನ್ನು ನೋಡಿಯೂ ಇಲ್ಲವೆ ತಿಳಿದೂ ಹೇಳದಿದ್ದರೆ ಅವನು ತನ್ನ ಅಪರಾಧವನ್ನು ಹೊತ್ತುಕೊಳ್ಳಬೇಕು.
ಆಗ ಯಾಜಕನು ಅವಳನ್ನು ಪ್ರಮಾಣಮಾಡಿಸಿ ಹೇಳಬೇಕಾದದ್ದು: ಒಬ್ಬ ಮನುಷ್ಯನು ನಿನ್ನ ಸಂಗಡ ಮಲಗದೆ ನೀನು ಅಪವಿತ್ರಳಾಗಿ ನಿನ್ನ ಗಂಡನನ್ನು ಬಿಟ್ಟು ಜಾರತ್ವಮಾಡದೆ ಇದ್ದರೆ ಶಪಿಸುವ ಈ ಕಹಿಯಾದ ನೀರಿಗೆ ನಿರಪರಾಧಿಯಾಗು.
ಆದರೆ ಇಸ್ರಾಯೇಲ್ಯರು ಆ ದಿವಸದಲ್ಲಿ ಬಹಳ ಬಳಲಿಹೋದರು. ಯಾಕಂದರೆ ಸೌಲನು--ನಾನು ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವ ಹಾಗೆ ಸಾಯಂಕಾ ಲದ ವರೆಗೆ ಯಾವನು ಆಹಾರ ತಿನ್ನುತ್ತಾನೋ ಅವನು ಶಪಿಸಲ್ಪಡಲಿ ಎಂದು ಆಣೆ ಇಟ್ಟದ್ದರಿಂದ ಜನರೆಲ್ಲರೂ ಆಹಾರದ ರುಚಿ ನೋಡದೆ ಇದ್ದರು.
ಜನರು ಆ ಅಡವಿಯಲ್ಲಿ ಹೋಗುವಾಗ ಇಗೋ, ಜೇನು ತುಪ್ಪ ಸುರಿಯುತ್ತಿತ್ತು; ಆದರೆ ಜನರು ಆ ಆಣೆಯ ನಿಮಿತ್ತ ಭಯಪಟ್ಟದ್ದ ರಿಂದ ಒಬ್ಬನಾದರೂ ತನ್ನ ಬಾಯಿಗೆ ಹಾಕಿಕೊಳ್ಳಲಿಲ್ಲ.
ಆಗ ಜನರಲ್ಲಿ ಒಬ್ಬನು ಅವನಿಗೆ--ಈ ಹೊತ್ತು ಆಹಾರ ತಿನ್ನುವವನು ಶಪಿಸಲ್ಪಡಲಿ ಎಂದು ನಿನ್ನ ತಂದೆಯು ಜನರಿಗೆ ಕಟ್ಟುನಿಟ್ಟಾಗಿ ಆಣೆ ಇಟ್ಟಿದ್ದಾನೆ. ಅದಕ್ಕೋಸ್ಕರ ಜನರು ದಣಿದು ಹೋಗಿದ್ದಾರೆ ಅಂದನು.
ಆಗ ಅರಸನು ಅವನಿಗೆ--ನೀನು ಕರ್ತನ ಹೆಸರಿನಲ್ಲಿ ಸತ್ಯವನ್ನಲ್ಲದೆ ಬೇರೊಂದು ನನಗೆ ಹೇಳಬಾರದೆಂದು ನಾನು ಎಷ್ಟು ಸಾರಿ ನಿನಗೆ ಆಣೆ ಇಡಬೇಕು ಅಂದನು.
ಆಗ ಅರಸನು ಅವನಿಗೆ--ನೀನು ಕರ್ತನ ಹೆಸರಿನಲ್ಲಿ ಸತ್ಯ ವನ್ನಲ್ಲದೆ ಬೇರೊಂದು ನನಗೆ ಹೇಳಬಾರದೆಂದು ನಾನು ಎಷ್ಟುಸಾರಿ ನಿನಗೆ ಆಣೆ ಇಡಬೇಕು ಅಂದನು.
ಆದಾಗ್ಯೂ ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.
ನನ್ನ ಪ್ರಾಣವನ್ನು ಹುಡುಕುವವರು ಬಲೆ ಒಡ್ಡುತ್ತಾರೆ; ನನ್ನ ಕೇಡನ್ನು ಹುಡುಕುವವರು ಕೇಡಿನ ಮಾತುಗಳನ್ನಾಡುತ್ತಾರೆ; ದಿನವೆಲ್ಲಾ ಮೋಸಗಳನ್ನು ಕಲ್ಪಿಸುತ್ತಾರೆ.
ಕಳ್ಳರೊಂದಿಗೆ ಪಾಲು ಗಾರನು ತನ್ನನ್ನು ತಾನೇ ಹಗೆಮಾಡುತ್ತಾನೆ; ಅವನು ಶಾಪವನ್ನು ಕೇಳಿತಿಳಿಸುವದಿಲ್ಲ.
ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.
ಆತನು ಪೀಡಿಸಲ್ಪಟ್ಟವನೂ ಮತ್ತು ಹಿಂಸಿಸಲ್ಪಟ್ಟವನೂ ಆಗಿದ್ದನು. ಆದರೂ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ; ವಧಿಸುವದಕ್ಕೆ ತರಲ್ಪ ಡುವ ಕುರಿಮರಿಯಂತೆಯೂ ಉಣ್ಣೆ ಕತ್ತರಿಸುವವರ ಮುಂದೆ ಇದ್ದ ಕುರಿಯ ಹಾಗೆಯೂ ಆತನು ಮೌನ ವಾಗಿದ್ದನು. ಹೀಗೆ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ.
ಆಗ ಶದ್ರಕ್ ಮೇಷಕ್ ಅಬೇದ್ ನೆಗೋ ಎಂಬವರು ಅರಸನಿಗೆ ಪ್ರತ್ಯುತ್ತರವಾಗಿ--ಓ ನೆಬೂಕದ್ನೆಚ್ಚರನೇ, ಈ ವಿಷಯದಲ್ಲಿ ನಾವು ನಿನಗೆ ಉತ್ತರಕೊಡುವ ಅವಶ್ಯಕತೆ ಇಲ್ಲ.
ಅದಕ್ಕೆ ಸೀಮೋನ ಪೇತ್ರನು ಪ್ರತ್ಯುತ್ತರ ವಾಗಿ--ನೀನು ಕ್ರಿಸ್ತನು, ಜೀವವುಳ್ಳ ದೇವರಕುಮಾರನು ಎಂದು ಹೇಳಿದನು.
ಆದರೆ ಯೇಸು ಸುಮ್ಮನಿದ್ದನು. ಆಗ ಮಹಾಯಾಜಕನು ಪ್ರತ್ಯುತ್ತರವಾಗಿ ಆತನಿಗೆ--ನೀನು ದೇವಕುಮಾರನಾದ ಕ್ರಿಸ್ತನಾದರೆ ಅದನ್ನು ನಮಗೆ ಹೇಳಬೇಕೆಂದು ಜೀವಸ್ವರೂಪನಾದ ದೇವರ ಆಣೆಯನ್ನು ನಿನಗೆ ಇಡುತ್ತೇನೆ ಅಂದನು.
ಆಗ ಪ್ರಧಾನ ಯಾಜಕರೂ ಹಿರಿಯರೂ ಆತನ ಮೇಲೆ ದೂರು ಹೇಳುತ್ತಿರುವಾಗ ಆತನು ಏನು ಉತ್ತರ ಕೊಡಲಿಲ್ಲ.
ಆತನು ಒಂದು ಮಾತಿಗಾದರೂ ಅವನಿಗೆ ಉತ್ತರಕೊಡದೆ ಇದ್ದದರಿಂದ ಅಧಿಪತಿಯು ಅತ್ಯಾಶ್ಚರ್ಯಪಟ್ಟನು.
ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ, ನಿನ್ನನ್ನು ನೀನೇ ರಕ್ಷಿಸಿಕೋ; ಮತ್ತು ನೀನು ದೇವಕುಮಾರನಾಗಿದ್ದರೆ ಶಿಲುಬೆಯಿಂದ ಕೆಳಗೆ ಇಳಿದು ಬಾ ಅಂದರು.
ಇವನು ದೇವರಲ್ಲಿ ವಿಶ್ವಾಸವಿಟ್ಟವನು; ದೇವರಿಗೆ ಇಷ್ಟವಿದ್ದರೆ ಆತನು ಇವನನ್ನು ಈಗ ಬಿಡಿಸಲಿ; ಯಾಕಂದರೆ ಆತನು--ನಾನು ದೇವಕುಮಾರನು ಎಂದು ಹೇಳಿದ್ದಾನೆ ಅಂದರು.
ಆಗ ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ಬೇರೆ ಸಂಭವಗಳು ನಡೆದದ್ದನ್ನೂ ನೋಡಿ ಬಹಳವಾಗಿ ಭಯಪಟ್ಟು-- ನಿಜವಾಗಿಯೂ ಈತನು ದೇವಕುಮಾರನಾಗಿದ್ದನು ಅಂದರು
ಆದರೆ ಆತನು ಏನೂ ಉತ್ತರ ಕೊಡದೆ ಮೌನವಾಗಿದ್ದನು; ತಿರಿಗಿ ಮಹಾಯಾಜಕನು--ನೀನು ಆ ಕ್ರಿಸ್ತನೋ? ಸ್ತುತಿಹೊಂದುವಾತನ ಕುಮಾರನೋ ಎಂದು ಆತನನ್ನು ಕೇಳಿದನು.
ಬೆಳಗಾದ ಕೂಡಲೆ ಜನರ ಹಿರಿಯರೂ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಒಟ್ಟಾಗಿ ಬಂದು ಆತನನ್ನು ತಮ್ಮ ಆಲೋಚನಾ ಸಭೆಗೆ ಸಾಗಿಸಿಕೊಂಡು ಹೋಗಿ--
ನಾನು ನೋಡಿ ಈತನೇ ದೇವರಮಗನೆಂದು ಸಾಕ್ಷಿ ಕೊಟ್ಟಿದ್ದೇನೆ ಅಂದನು.
ನತಾನ ಯೇಲನು ಪ್ರತ್ಯುತ್ತರವಾಗಿ ಆತನಿಗೆ--ರಬ್ಬಿಯೇ, ನೀನು ದೇವರಕುಮಾರನು; ನೀನು ಇಸ್ರಾಯೇಲಿನ ಅರಸನು ಅಂದನು.
ದೇವರು ಲೋಕವನ್ನು ಎಷ್ಟೋ ಪ್ರೀತಿಮಾಡಿ ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದವನಾಗಿರುವನು.
ಆದದರಿಂದ ಆತನು ಸಬ್ಬತ್ತನ್ನು ವಿಾರಿದ್ದು ಮಾತ್ರವಲ್ಲದೆ ದೇವರನ್ನು ತನ್ನ ಸ್ವಂತ ತಂದೆ ಎಂದು ಕರೆದು ತನ್ನನ್ನು ದೇವರಿಗೆ ಸಮಾನ ಮಾಡಿಕೊಂಡ ಕಾರಣ ಯೆಹೂದ್ಯರು ಆತನನ್ನು ಕೊಲ್ಲುವದಕ್ಕೆ ಇನ್ನಷ್ಟು ಪ್ರಯತ್ನ ಮಾಡಿದರು.
ನೀನು ಜೀವವುಳ್ಳ ದೇವರಮಗನಾದ ಆ ಕ್ರಿಸ್ತನೆಂದು ನಾವು ಖಂಡಿತವಾಗಿ ನಂಬಿದ್ದೇವೆ ಅಂದನು.
ತರುವಾಯ ಅವರು ಆತನಿಗೆ--ನೀನು ಯಾರಾಗಿದ್ದೀ ಅಂದರು. ಅದಕ್ಕೆ ಯೇಸು ಅವರಿಗೆ--ಮೊದಲಿನಿಂದಲೂ ನಾನು ನಿಮಗೆ ಹೇಳಿದಂತವನೇ.
ಆಗ ಯೆಹೂದ್ಯರು ಆತನ ಸುತ್ತಲು ಬಂದು ಆತನಿಗೆ--ಇನ್ನು ಎಷ್ಟರ ವರೆಗೆ ನಮ್ಮನ್ನು ಸಂದೇಹಪಡಿಸುತ್ತೀ? ನೀನು ಕ್ರಿಸ್ತ ನಾಗಿದ್ದರೆ ನಮಗೆ ಸ್ಪಷ್ಟವಾಗಿ ಹೇಳು ಅಂದರು.
ನಾನು ಮತ್ತು ನನ್ನ ತಂದೆಯು ಒಂದಾಗಿದ್ದೇವೆ ಎಂದು ಉತ್ತರಕೊಟ್ಟನು.
ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ನಾನು ದೇವರ ಮಗನಾಗಿದ್ದೇನೆಂದು ಹೇಳಿದ್ದಕ್ಕೆ--ನೀನು ದೇವ ದೂಷಣೆ ಮಾಡುತ್ತೀ ಎಂದು ನೀವು ಅನ್ನುತ್ತೀರೋ?
ಆದದರಿಂದ ಪಿಲಾತನು ಆತನಿಗೆ--ಹಾಗಾದರೆ ನೀನು ಅರಸನೋ ಅನ್ನಲು ಯೇಸು ಪ್ರತ್ಯುತ್ತರವಾಗಿ--ನಾನು ಅರಸ ನಾಗಿದ್ದೇನೆಂದು ನೀನೇ ಹೇಳುತ್ತೀ. ನಾನು ಸತ್ಯಕ್ಕೆ ಸಾಕ್ಷಿಕೊಡುವದಕ್ಕೋಸ್ಕರ ಹುಟ್ಟಿ ಅದಕ್ಕೋಸ್ಕರವೇ ಲೋಕಕ್ಕೆ ಬಂದೆನು; ಸತ್ಯಕ್ಕೆ ಸಂಬಂಧಿಸಿದ ಪ್ರತಿಯೊ ಬ್ಬನು ನನ್ನ ಸ್ವರವನು
ಯೆಹೂದ್ಯರು ಪ್ರತ್ಯುತ್ತರವಾಗಿ ಅವ ನಿಗೆ--ನಮ್ಮಲ್ಲಿ ಒಂದು ನ್ಯಾಯಪ್ರಮಾಣವಿದೆ ಮತ್ತು ನಮ್ಮ ಆ ನ್ಯಾಯಪ್ರಮಾಣದ ಪ್ರಕಾರ ಅವನು ಸಾಯಲೇಬೇಕು; ಯಾಕಂದರೆ ಅವನು ತನ್ನನ್ನು ದೇವರಮಗನೆಂದು ಮಾಡಿಕೊಂಡಿದ್ದಾನೆ ಅಂದರು.
ತಿರಿಗಿ ನ್ಯಾಯಾಲಯ ದೊಳಗೆ ಹೋಗಿ ಯೇಸುವಿಗೆ--ನೀನು ಎಲ್ಲಿಂದ ಬಂದವನು ಎಂದು ಆತನನ್ನು ಕೇಳಿದನು. ಆದರೆ ಯೇಸು ಅವನಿಗೆ ಉತ್ತರಕೊಡಲಿಲ್ಲ.
ಆದರೆ ಯೇಸುವೇ ದೇವಕುಮಾರ ನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕ ಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲ್ಪಟ್ಟಿವೆ.
ಅವನು ಓದುತ್ತಿದ್ದ ಬರಹದ ಭಾಗವು ಯಾವ ದಂದರೆ--ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆ ಆತನು ಒಯ್ಯಲ್ಪಟ್ಟನು; ಕುರಿಮರಿಯು ಉಣ್ಣೆ ಕತ್ತರಿಸು ವವನ ಮುಂದೆ ಮೌನವಾಗಿರುವಂತೆ ಆತನು ತನ್ನ ಬಾಯಿತೆರೆಯಲೇ ಇಲ್ಲ.
ಬೈಯುವವರನ್ನು ಆತನು ಪ್ರತಿಯಾಗಿ ಬೈಯಲಿಲ್ಲ; ಆತನು ಬಾಧೆಯನ್ನನು ಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವಾತನಿಗೆ ತನ್ನನ್ನು ಒಪ್ಪಿಸಿದನು.
ಆ ಸಾಕ್ಷಿ ಯಾವದಂದರೆ ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದನು.ಈ ಜೀವವು ಆತನ ಮಗನಲ್ಲಿ ಅದೆ ಎಂಬದೇ.