ಆದರೆ ಅವನು ಎಲ್ಲರ ಮುಂದೆ-- ನೀನು ಏನು ಹೇಳುತ್ತಿಯೋ ನಾನು ಅರಿಯೆನು ಎಂದು ಅಲ್ಲಗಳೆದನು.
Cross references
ಕೇಡು ಮಾಡುವವರೇ, ನನ್ನಿಂದ ತೊಲಗಿರಿ; ನನ್ನ ದೇವರ ಆಜ್ಞೆಗಳನ್ನು ಕೈಕೊಳ್ಳುವೆನು.
ತನ್ನ ಹೃದಯದಲ್ಲಿಯೇ ಭರವಸವಿ ಡುವವನು ಬುದ್ಧಿಹೀನನು; ಜ್ಞಾನದಿಂದ ನಡೆಯುವ ವನು ತಪ್ಪಿಸಿಕೊಳ್ಳುವನು.
ಮನುಷ್ಯನ ಗರ್ವವು ತನ್ನನ್ನು ಹೀನಸ್ಥಿತಿಗೆ ತರುವದು; ಆತ್ಮದಲ್ಲಿ ದೀನರಾಗಿರುವವರು ಸನ್ಮಾನಹೊಂದುವರು.
ಮನುಷ್ಯನ ಭಯವು ಉರುಲನ್ನು ತರುತ್ತದೆ; ಕರ್ತನಲ್ಲಿ ಭರವಸ ವಿಡುವವನು ಕ್ಷೇಮದಿಂದಿರುವನು.
ನೀನು ಸುಳ್ಳು ಹೇಳಿ ನನ್ನನ್ನು ಜ್ಞಾಪಕ ಮಾಡದೆ ಇಲ್ಲವೆ ಅದನ್ನು ಮನಸ್ಸಿಗೆ ತಾರದೆ ಇರುವಾಗ ಯಾರಿಗೆ ಅಂಜಿಕೊಂಡು ಭಯಪಟ್ಟಿ?
ಇದಲ್ಲದೆ ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿಯೂ ಒಂದು ರಾಜ್ಯದ ವಿಷಯವಾಗಿಯೂ ಅದನ್ನು ಕಟ್ಟುವದಕ್ಕೂ ನೆಡುವದಕ್ಕೂ ಮಾತನಾಡುತ್ತೇನೋ
ಯೇಸು ಅವ ನಿಗೆ--ಈ ರಾತ್ರಿಯಲ್ಲಿ ಹುಂಜ ಕೂಗುವದಕ್ಕಿಂತ ಮುಂಚೆ ಮೂರು ಸಾರಿ ನನ್ನನ್ನು ಅಲ್ಲಗಳೆಯುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು.
ಆತನು ತನ್ನ ಶಿಷ್ಯರ ಬಳಿಗೆ ಬಂದಾಗ ಅವರು ನಿದ್ರೆ ಮಾಡುವದನ್ನು ಕಂಡು ಪೇತ್ರನಿಗೆ--ಏನು ನೀವು ಒಂದು ಗಳಿಗೆಯಾದರೂ ನನ್ನೊಡನೆ ಎಚ್ಚರವಾಗಿರಲಾರಿರಾ?
ಇಗೋ, ಯೇಸುವಿನ ಸಂಗಡ ಇದ್ದವರಲ್ಲಿ ಒಬ್ಬನು ಕೈಚಾಚಿ ತನ್ನ ಕತ್ತಿಯನ್ನು ಹಿರಿದು ಮಹಾ ಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕಡಿದುಹಾಕಿದನು.
ಆದರೆ ಪ್ರವಾದಿಗಳ ಬರಹಗಳು ನೆರವೇರುವಂತೆ ಇದೆಲ್ಲಾ ಆಯಿತು ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.
ಆದರೆ ಪೇತ್ರನು ಮಹಾ ಯಾಜಕನ ಭವನದವರೆಗೆ ದೂರದಿಂದ ಆತನನ್ನು ಹಿಂಬಾಲಿಸಿ ಒಳಗೆ ಹೋಗಿ ಅಂತ್ಯವೇನಾಗುವದೆಂದು ನೋಡಲು ಸೇವಕರೊಂದಿಗೆ ಕೂತುಕೊಂಡನು.
ಆದರೆ ಅವನು ಆತನನ್ನು ಅಲ್ಲ ಗಳೆದು--ಸ್ತ್ರೀಯೇ, ನಾನು ಅವನನ್ನು ಅರಿಯೆನು ಅಂದನು.
ಒಳ್ಳೆಯದು, ಅವರು ನಂಬದೆ ಹೋದದರಿಂದ ಮುರಿದುಹಾಕಲ್ಪಟ್ಟರು, ನೀನು ನಿಂತಿರುವದು ನಂಬಿಕೆಯಿಂದಲೇ, ಗರ್ವ ಪಡಬೇಡ, ಭಯದಿಂದಿರು;
ಆದಕಾರಣ ನಿಂತಿದ್ದೇನೆಂದು ನೆನಸುವವನು ಬೀಳ ದಂತೆ ಎಚ್ಚರಿಕೆಯಾಗಿರಲಿ.
ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.