ಆದರೆ ಆತನ ಶಿಷ್ಯರು ಇದನ್ನು ನೋಡಿ ಕೋಪ ಗೊಂಡು--ಈ ನಷ್ಟವು ಯಾವ ಉದ್ದೇಶಕ್ಕೆ?
Cross references
ಅದಕ್ಕೆ ಅವನು--ನೀವು ಮೈಗಳ್ಳರು, ನೀವು ಮೈಗಳ್ಳರಾದ ಕಾರಣ--ನಾವು ಹೋಗಿ ಕರ್ತನಿಗೆ ಬಲಿಯರ್ಪಿಸುತ್ತೇವೆ ಎಂದು ಅನ್ನುತ್ತೀರಿ.
ಆದರೆ ಅವನು ಆ ಮನುಷ್ಯರ ಸಂಗಡ ಮಾತನಾಡುತ್ತಿರು ವದನ್ನು ಅವನ ಹಿರಿಯ ಸಹೋದರನಾದ ಎಲೀಯಾ ಬನು ಕೇಳಿ ಅವನ ಮೇಲೆ ಕೋಪಗೊಂಡು--ನೀನು ಇಲ್ಲಿಗೆ ಬಂದದ್ದೇನು? ಅಡವಿಯಲ್ಲಿರುವ ಆ ಸ್ವಲ್ಪ ಕುರಿಗಳನ್ನು ಯಾರ ವಶಕ್ಕೆ ಒಪ್ಪಿಸಿ ಬಂದೆ? ನಿನ್ನ ಗರ್ವವನ್ನೂ ನಿನ್ನ ಹೃದಯದ ಅಹಂಕಾರವನ್ನೂ ನಾನು ಬಲ್ಲೆನು; ನೀನು ಯುದ್ಧವನ್ನು ನೋಡಲು ಇಳಿದು ಬಂದಿದ್ದೀ ಅಂದನು.
ತಿರುಗಿ ಎಲ್ಲಾ ಪ್ರಯಾಸಕ್ಕಾಗಿಯೂ ಪ್ರತಿಯೊಂದು ಒಳ್ಳೆಯ ಕಾರ್ಯಕ್ಕಾಗಿಯೂ ಮನುಷ್ಯನು ತನ್ನ ನೆರೆಯವನ ಮೇಲೆ ಅಸೂಯೆ ಪಡುತ್ತಾನೆಂದೂ ನಾನು ತಿಳುಕೊಂಡೆನು. ಇದೂ ಕೂಡ ವ್ಯರ್ಥವೂ ಪ್ರಾಣಕ್ಕೆ ಆಯಾಸಕರವೂ ಆಗಿದೆ.
ನಾವು ಧಾನ್ಯವನ್ನು ಮಾರುವ ಹಾಗೆ ಅಮಾವಾಸ್ಯೆಯು ಗೋಧಿ ಯನ್ನು ಇಡುವ ಹಾಗೆ ಸಬ್ಬತ್ತು ಯಾವಾಗ ತೀರುವದೆಂದೂ ಎಫವನ್ನು ಚಿಕ್ಕದಾಗಿಯು ಶೆಕೇಲನ್ನು ದೊಡ್ಡದಾಗಿಯು ಕಳ್ಳತ್ರಾಸುಗಳನ್ನು ಮೋಸಕ್ಕಾಗಿ ಮಾಡೋಣವೆಂದೂ
ಸೈನ್ಯಗಳ ಕರ್ತನು ಮಾತನಾಡಿ ಹೀಗೆ ಹೇಳುತ್ತಾನೆ, ಏನಂದರೆ--ಕಾಲವು ಅಂದರೆ ಕರ್ತನ ಆಲಯವನ್ನು ಕಟ್ಟುವ ಕಾಲವು ಬರಲಿಲ್ಲ ಎಂದು ಈ ಜನರು ಅನ್ನು ತ್ತಾರೆ.
ನನ್ನ ಬಲಿಪೀಠದ ಮೇಲೆ ಅಪವಿತ್ರವಾದ ರೊಟ್ಟಿಯನ್ನು ಅರ್ಪಿಸಿ--ಯಾವದರಲ್ಲಿ ನಿನ್ನನ್ನು ನಾವು ಅಪವಿತ್ರ ಮಾಡಿದ್ದೇವೆಂದು ಹೇಳುತ್ತೀರಿ. ಕರ್ತನ ಮೇಜು ಹೀನವಾದದ್ದೆಂದು ನೀವು ಹೇಳುವದರಿಂದಲೇ.
ಇದಲ್ಲದೆ ನೀವು--ಇಗೋ, ಎಂಥಾ ಪ್ರಯಾಸ ಎಂದು ಹೇಳಿ ಅದರ ಮೇಲೆ ಊದಿಬಿಟ್ಟಿರಿ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಹರಿಯಲ್ಪಟ್ಟದ್ದನ್ನೂ ಕುಂಟಾದದ್ದನ್ನೂ ರೋಗವುಳ್ಳದ್ದನ್ನೂ ಕಾಣಿಕೆಯಾಗಿ ತಂದಿರಿ; ಇಂಥದ್ದನ್ನು ನಾನು ನಿಮ್ಮ ಕೈಯಿಂದ ಅಂಗೀ ಕರಿಸಬಹುದೋ ಎಂದು ಕರ್ತನು ಹೇಳುತ್ತಾನೆ.ಆದರೆ ತನ್ನ ಮಂದೆಯಲ್ಲಿ ಗಂಡು ಇರಲಾಗಿ ಪ್ರಮಾಣ ಮಾಡಿ ಕರ್ತನಿಗೆ ಕೆಟ್ಟು ಹೋದದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ; ನಾನು ಮಹಾ ಅರಸನು, ನನ್ನ ಹೆಸರು ಅನ್ಯಜನಾಂಗಗಳಲ್ಲಿ ಭಯಂಕರ ವಾದದ್ದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಆದರೆ ಅಲ್ಲಿದ್ದ ಕೆಲವರು ತಮ್ಮೊಳಗೆ ಕೋಪಗೊಂಡು--ಈ ತೈಲವನ್ನು ನಷ್ಟ ಮಾಡಿದ್ದೇಕೆ?
ಆಗ ಆತನ ಶಿಷ್ಯರಲ್ಲಿ ಒಬ್ಬನು ಅಂದರೆ ಆತನನ್ನು ಹಿಡಿದು ಕೊಡುವದಕ್ಕಿದ್ದ ಸೀಮೋನನ ಮಗನಾದ ಯೂದ ಇಸ್ಕರಿಯೋತನು--