ಬೆಳಗಾದಾಗ ಎಲ್ಲಾ ಪ್ರಧಾನ ಯಾಜಕರೂ ಜನರ ಹಿರಿಯರೂ ಯೇಸುವನ್ನು ಕೊಲ್ಲಿಸುವದಕ್ಕೆ ಆತನಿಗೆ ವಿರೋಧವಾಗಿ ಆಲೋಚನೆ ಮಾಡಿಕೊಂಡರು.
Cross references
ಆಗ ಸಂಸೋನನು ಅಲ್ಲಿಗೆ ಬಂದಿದ್ದಾನೆಂದು ಗಾಜದವರಿಗೆ ಗೊತ್ತಾಗಲು ಅವರು ಅವನನ್ನು ಸುತ್ತಿಕೊಂಡು ರಾತ್ರಿಯೆಲ್ಲಾ ಪಟ್ಟಣದ ಬಾಗಲಲ್ಲಿ ಅವನಿಗಾಗಿ ಹೊಂಚಿಕೊಂಡಿದ್ದು ರಾತ್ರಿ ಯೆಲ್ಲಾ ಸುಮ್ಮನಿದ್ದು--ಹೊತ್ತಾರೆ ಬೆಳಕಾದಾಗ ಅವ ನನ್ನು ಕೊಂದುಹಾಕುವೆವು ಅಂದರು.
ಆದರೆ ದಾವೀದನಿಗಾಗಿ ಕಾದುಕೊಂಡಿದ್ದು ಉದಯ ದಲ್ಲಿ ಅವನನ್ನು ಕೊಂದುಹಾಕುವ ಹಾಗೆ ಸೌಲನು ಅವನ ಮನೆಗೆ ದೂತರನ್ನು ಕಳುಹಿಸಿದನು. ಆಗ ಅವನ ಹೆಂಡತಿಯಾದ ವಿಾಕಲಳು ಅವನಿಗೆ--ನೀನು ಈ ರಾತ್ರಿಯಲ್ಲಿ ನಿನ್ನ ಪ್ರಾಣವನ್ನು ತಪ್ಪಿಸಿಕೊಳ್ಳದೆ ಹೋದರೆ ನಾಳೆ ಕೊಲ್ಲಲ್ಪಡುವಿ ಎಂದು ಹೇಳಿ
ಕರ್ತನಿಗೆ ವಿರೋಧ ವಾಗಿಯೂ ಆತನ ಅಭಿಷಕ್ತನಿಗೆ ವಿರೋಧವಾಗಿಯೂ ಭೂರಾಜರು ನಿಂತುಕೊಳ್ಳುತ್ತಾರೆ; ಪ್ರಭುಗಳು ಒಟ್ಟಾಗಿ ಆಲೋಚಿಸುತ್ತಾರೆ.
ಕೇಡು ಮಾಡದಿದ್ದರೆ ಅವರು ನಿದ್ರೆಹೋಗುವದಿಲ್ಲ; ಯಾರ ನ್ನಾದರೂ ಬೀಳಿಸದೆ ಇದ್ದರೆ ಅವರ ನಿದ್ರೆಗೆ ಭಂಗ ವಾಗುವದು.
ಅಪರಾಧವನ್ನು ಯೋಚಿಸಿ, ತಮ್ಮ ಹಾಸಿಗೆಗಳ ಮೇಲೆ ಕೆಟ್ಟದ್ದನ್ನು ನಡಿಸುವವರಿಗೆ ಅಯ್ಯೋ! ಹೊತ್ತಾರೆ ಬೆಳಕಾಗುವಾಗ ಅದನ್ನು ಮಾಡುತ್ತಾರೆ; ಅದು ಅವರ ಕೈವಶದಲ್ಲಿದೆ.
ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ.
ಆಗ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಜನರ ಹಿರಿಯರೂ ಒಟ್ಟಾಗಿ ಸೇರಿ ಕಾಯಫನೆಂಬ ಮಹಾಯಾಜಕನ ಭವನಕ್ಕೆ ಬಂದು
ಬೆಳಗಾದ ಕೂಡಲೆ ಪ್ರಧಾನ ಯಾಜಕರು ಹಿರಿಯರ ಶಾಸ್ತ್ರಿಗಳ ಮತ್ತು ಸಭೆಯವ ರೆಲ್ಲರೊಂದಿಗೆ ಆಲೋಚನೆ ಮಾಡಿಕೊಂಡು ಯೇಸು ವನ್ನು ಕಟ್ಟಿತೆಗೆದುಕೊಂಡು ಹೋಗಿ ಪಿಲಾತನಿಗೆ ಒಪ್ಪಿಸಿ ದರು.
ಬೆಳಗಾದ ಕೂಡಲೆ ಜನರ ಹಿರಿಯರೂ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಒಟ್ಟಾಗಿ ಬಂದು ಆತನನ್ನು ತಮ್ಮ ಆಲೋಚನಾ ಸಭೆಗೆ ಸಾಗಿಸಿಕೊಂಡು ಹೋಗಿ--
ಆಗ ಜನಸಮೂಹವೆಲ್ಲವೂ ಎದ್ದು ಆತನನ್ನು ಪಿಲಾತನ ಬಳಿಗೆ ತೆಗೆದು ಕೊಂಡು ಹೋದರು.
ಆಮೇಲೆ ಅವರು ಯೇಸುವನ್ನು ಕಾಯಫನ ಬಳಿಯಿಂದ ನ್ಯಾಯಾಲಯಕ್ಕೆ ಸಾಗಿಸಿಕೊಂಡು ಹೋದರು. ಆಗ ಮುಂಜಾನೆಯಾಗಿತ್ತು. ತಾವು ಮೈಲಿಗೆಯಾಗಿ ಪಸ್ಕದ ಊಟ ಮಾಡುವದಕ್ಕೆ ಅಡ್ಡಿಯಾದೀತೆಂದು ಅವರು ನ್ಯಾಯಾಲಯದ ಒಳಗೆ ಹೋಗಲಿಲ್ಲ.
ಅದನ್ನು ಕೇಳಿದಾಗ ಅವರು ಒಮ್ಮನಸ್ಸಿನಿಂದ ದೇವರಿಗೆ--ಕರ್ತನೇ, ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಉಂಟು ಮಾಡಿದ ದೇವರು ನೀನೇ;
ಅವರು ಅದನ್ನು ಕೇಳಿದವರಾಗಿ ಬೆಳಗಿನ ಜಾವದಲ್ಲಿಯೇ ದೇವಾಲಯದೊಳಕ್ಕೆ ಪ್ರವೇಶಿಸಿ ಬೋಧಿಸಿದರು. ಇತ್ತ ಮಹಾಯಾಜಕನೂ ಅವನ ಕೂಡ ಇದ್ದವರೂ ಬಂದು ಆಲೋಚನಾ ಸಭೆಯನ್ನೂ ಇಸ್ರಾಯೇಲ್ ಮಕ್ಕಳ ಶಾಸನ ಸಭೆಯನ್ನೂ ಕೂಡಿಸಿ ಅಪೊಸ್ತಲರನ್ನು ಕರತರುವದಕ್ಕಾಗಿ ಸೆರೆ ಮನೆಗೆ ಕಳುಹಿಸಿದರು