ಅವರು ಹೊರಗೆ ಬರುತ್ತಿರುವಾಗ ಕುರೇನ್ಯನಾದ ಸೀಮೋನನೆಂಬ ಮನುಷ್ಯನನ್ನು ಕಂಡು ಆತನ ಶಿಲುಬೆಯನ್ನು ಹೊರುವಂತೆ ಅವನನ್ನು ಬಲವಂತ ಮಾಡಿದರು.
Cross references
ಜನರು ಪಾಪಮಾಡುವ ಹಾಗೆ ಅಭಿಷಿಕ್ತನಾದ ಯಾಜಕನು ಪಾಪಮಾಡಿದರೆ ಅವನು ತನ್ನ ಪಾಪಕ್ಕಾಗಿ ದೋಷವಿಲ್ಲದ ಒಂದು ಎಳೇ ಹೋರಿಯನ್ನು ಪಾಪದ ಬಲಿಗಾಗಿ ಕರ್ತನಿಗೆ ತರಬೇಕು.
ಇಡೀ ಹೋರಿಯನ್ನು ಪಾಳೆಯದ ಆಚೆಗಿರುವ ಶುದ್ಧವಾದ ಸ್ಥಳಕ್ಕೆ ಅಂದರೆ ಬೂದಿ ಚೆಲ್ಲುವ ಸ್ಥಳಕ್ಕೆ ತಂದು ಅದನ್ನು ಕಟ್ಟಿಗೆಯ ಮೇಲೆ ಬೆಂಕಿಯಿಂದ ಸುಡ ಬೇಕು. ಅದನ್ನು ಬೂದಿ ಚೆಲ್ಲುವ ಸ್ಥಳದಲ್ಲಿ ಸುಡಬೇಕು.
ಅವನು ಮೊದಲನೆಯ ಹೋರಿಯನ್ನು ಸುಟ್ಟಂತೆಯೇ ಈ ಹೋರಿಯನ್ನು ಪಾಳೆಯದ ಆಚೆಗೆ ತೆಗೆದುಕೊಂಡುಹೋಗಿ ಸುಡ ಬೇಕು. ಅದು ಸಭೆಗೆ ಪಾಪದ ಬಲಿಯಾಗಿ ಇರುವದು.
ಆಗ ಕರ್ತನು ಮೋಶೆಗೆ--ಆ ಮನುಷ್ಯನು ಖಂಡಿತವಾ ಗಿಯೂ ಸಾಯಲೇಬೇಕು; ಸಭೆಯೆಲ್ಲಾ ಪಾಳೆಯದ ಹೊರಗೆ ಅವನನ್ನು ಕಲ್ಲೆಸೆಯಬೇಕು ಎಂದು ಹೇಳಿದನು.
ನೀನು ದೇವರನ್ನೂ ಅರಸನನ್ನೂ ದೂಷಿ ಸಿದಿ ಎಂದು ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಲು ಅವನ ಮುಂದೆ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರನ್ನು ನಿಲ್ಲಿಸಿರಿ; ತರುವಾಯ ಅವನನ್ನು ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಕಲ್ಲೆಸೆಯಿರಿ ಎಂದು ಬರೆದಿತ್ತು.
ಆಗ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರು ಬಂದು ಅವನಿಗೆದುರಾಗಿ ಕುಳಿತು ಕೊಂಡರು; ಈ ಬೆಲಿಯಾಳನ ಮನುಷ್ಯರು ಜನರ ಸಮ್ಮುಖದಲ್ಲಿ ನಾಬೋತನಿಗೆ ವಿರೋಧವಾಗಿ--ಈ ನಾಬೋತನು ದೇವರನ್ನೂ ಅರಸನನ್ನೂ ದೂಷಿಸಿದ ನೆಂದು ಸಾಕ್ಷಿ ಹೇಳಿದರು. ಆಗ ಅವನನ್ನು ಪಟ್ಟಣದ ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಅವರು ಅವನಿಗೆ ಕಲ್ಲೆಸೆದರು. ಅವನು ಸತ್ತನು.
ಮತ್ತು ಯಾವನಾದರೂ ಒಂದು ಮೈಲು ಹೋಗುವಂತೆ ನಿನ್ನನ್ನು ಬಲವಂತ ಮಾಡಿದರೆ ಅವನೊಂದಿಗೆ ಎರಡು ಮೈಲು ಹೋಗು.
ತರುವಾಯ ಯೇಸು ತನ್ನ ಶಿಷ್ಯರಿಗೆ--ಯಾವ ನಾದರೂ ನನ್ನ ಹಿಂದೆ ಬರುವದಕ್ಕೆ ಅಪೇಕ್ಷಿಸಿದರೆ ಅವನು ತನ್ನನ್ನು ತಾನೇ ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
ಅಲೆಕ್ಸಾಂದ್ರ ಮತ್ತು ರೂಫ ಎಂಬವರ ತಂದೆಯಾದ ಕುರೇನ್ಯದ ಸೀಮೋನ ಎಂಬವನು ಗ್ರಾಮದಿಂದ ಬಂದು ಹಾದುಹೋಗುತ್ತಿರುವಾಗ ಆತನ ಶಿಲುಬೆಯನ್ನು ಹೊರುವಂತೆ ಅವರು ಅವನನ್ನು ಬಲವಂತ ಮಾಡಿದರು.
ಅವರು ಆತನನ್ನು ತೆಗೆದುಕೊಂಡು ಹೋಗುತ್ತಿ ರುವಾಗ ಹೊಲದಿಂದ ಬರುತ್ತಿದ್ದ ಕುರೇನ್ಯದವನಾದ ಸೀಮೋನನೆಂಬವನನ್ನು ಹಿಡಿದು ಅವನ ಮೇಲೆ ಶಿಲು ಬೆಯನ್ನು ಇಟ್ಟು ಯೇಸುವಿನ ಹಿಂದೆ ಹೊತ್ತುಕೊಂಡು ಹೋಗುವಂತೆ ಮಾಡಿದರು.
ಆತನು ತನ್ನ ಶಿಲುಬೆಯನ್ನು ಹೊತ್ತುಕೊಂಡು ಕಪಾಲವೆಂದು ಕರೆಯಲ್ಪಟ್ಟ ಸ್ಥಳಕ್ಕೆ ಹೋದನು. ಅದು ಇಬ್ರಿಯ ಭಾಷೆಯಲ್ಲಿ ಗೊಲ್ಗೊಥಾ (ಬುರುಡೆಗಳ ಸ್ಥಳ) ಎಂದು ಕರೆಯಲ್ಪಡುತ್ತದೆ.
ಫ್ರುಗ್ಯ, ಪಂಫುಲ್ಯ, ಐಗುಪ್ತದಲ್ಲಿದ್ದವರು, ಕುರೇನದ ಮಗ್ಗುಲಲ್ಲಿ ರುವ ಲಿಬ್ಯದ ಪ್ರಾಂತ್ಯದವರು, ರೋಮದ ಪ್ರವಾಸಿ ಗಳು, ಯೆಹೂದ್ಯರು, ಯೆಹೂದ್ಯ ಮತಾವಲಂಬಿಗಳು,
ಆಗ ಲಿಬೆರ್ತೀನ ಎಂಬ ಸಭಾಮಂದಿರದಲ್ಲಿಯೂ ಕುರೇನ್ಯ ಅಲೆಕ್ಸಾಂದ್ರಿಯ ಕಿಲಿಕ್ಯ ಆಸ್ಯದವರ ಸಭಾಮಂದಿರ ದಲ್ಲಿಯೂ ಕೆಲವರು ಎದ್ದು ಸ್ತೆಫನನೊಂದಿಗೆ ತರ್ಕ ಮಾಡುತ್ತಿದ್ದರು.
ಅವನನ್ನು ಊರಹೊರಕ್ಕೆ ನೂಕಿಕೊಂಡು ಹೋಗಿ ಕಲ್ಲೆಸೆದರು. ಸಾಕ್ಷಿಯವರು ತಮ್ಮ ಬಟ್ಟೆಗಳನ್ನು ತೆಗೆದು ಸೌಲನೆಂಬ ಒಬ್ಬ ಯೌವನಸ್ಥನ ಪಾದಗಳ ಬಳಿಯಲ್ಲಿ ಇಟ್ಟರು.
ಅವರಲ್ಲಿ ಕೆಲವರು ಕುಪ್ರ ಮತ್ತು ಕುರೇನ್ಯದವರಾಗಿದ್ದರು. ಅವರು ಅಂತಿಯೋಕ್ಯಕ್ಕೆ ಬಂದು ಗ್ರೀಕರ ಸಂಗಡ ಮಾತನಾಡಿ ಕರ್ತನಾದ ಯೇಸುವಿನ ವಿಷಯವಾಗಿ ಸಾರಿದರು.
ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಕೆಲವರು ಪ್ರವಾದಿಗಳೂ ಬೋಧಕರೂ ಇದ್ದರು; ಯಾರಾರೆಂದರೆ, ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಚತುರಾಧಿ ಪತಿಯಾದ ಹೆರೋದನೊಂದಿಗೆ ಬೆಳೆದ ಮೆನಹೇನ ಮತ್ತು ಸೌಲ ಇವರೇ.
ಮಹಾಯಾಜಕನು ಪಾಪದ ನಿಮಿತ್ತವಾಗಿ ಪಶುಗಳ ರಕ್ತವನ್ನು ತೆಗೆದುಕೊಂಡು ಪವಿತ್ರ ಸ್ಥಾನದೊಳಗೆ ಹೋಗಲು ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಡಲ್ಪಡುತ್ತವಲ್ಲಾ;