ಅವನು--ನಾನು ನಿರಪರಾಧದ ರಕ್ತವನ್ನು ಹಿಡುಕೊಟ್ಟು ಪಾಪಮಾಡಿದ್ದೇನೆ ಅಂದನು. ಅದಕ್ಕೆ ಅವರು--ಅದು ನಮಗೇನು? ನೀನೇ ಅದನ್ನು ನೋಡಿಕೋ ಅಂದರು.
Cross references
ಆಗ ಅವರು--ನಿಶ್ಚಯವಾಗಿ ನಮ್ಮ ಸಹೋದರನ ಅಪರಾಧವು ನಮ್ಮ ಮೇಲೆ ಇದೆ. ಅವನು ನಮ್ಮನ್ನು ಬೇಡಿಕೊಂಡಾಗ ಅವನ ಪ್ರಾಣ ಸಂಕಟವನ್ನು ನೋಡಿಯೂ ಕೇಳದೆ ಹೋದೆವು. ಆದಕಾರಣ ಈ ಸಂಕಟವು ನಮ್ಮ ಮೇಲೆ ಬಂದಿತು ಎಂದು ಅಂದುಕೊಂಡರು.
ಆಗ ಫರೋಹನು ಮೋಶೆ ಆರೋನರನ್ನು ಕರೇ ಕಳುಹಿಸಿ ಅವರಿಗೆ--ಈ ಸಾರಿ ನಾನು ಪಾಪಮಾಡಿ ದ್ದೇನೆ. ಕರ್ತನು ನೀತಿವಂತನು, ನಾನೂ ನನ್ನ ಜನರೂ ದುಷ್ಟರಾಗಿದ್ದೇವೆ.
ಆಗ ಫರೋಹನು ಮೋಶೆ ಆರೋನರನ್ನು ತ್ವರೆಯಾಗಿ ಕರೆಯಿಸಿ ಅವರಿಗೆ--ನಾನು ನಿಮ್ಮ ದೇವ ರಾದ ಕರ್ತನಿಗೂ ನಿಮಗೂ ವಿರೋಧವಾಗಿ ಪಾಪ ಮಾಡಿದ್ದೇನೆ.
ಫರೋಹನು ರಾತ್ರಿಯಲ್ಲಿ ಮೋಶೆ ಆರೋನರನ್ನು ಕರೆಯಿಸಿ ಅವರಿಗೆ--ನೀವು ಎದ್ದು ನನ್ನ ಜನರೊ ಳಗಿಂದ ಹೊರಟು ಹೋಗಿರಿ; ನೀವು ಹೇಳಿದ ಹಾಗೆಯೇ ಕರ್ತನನ್ನು ಸೇವಿಸುವದಕ್ಕೆ ನೀವೂ ಇಸ್ರಾಯೇಲ್ ಮಕ್ಕಳೂ ಹೋಗಿಬಿಡಿರಿ.
ಆಗ ಸೌಲನು ಸಮುವೇಲನಿಗೆ--ನಾನು ಕರ್ತನ ವಾಕ್ಯವನ್ನೂ ನಿನ್ನ ಮಾತುಗಳನ್ನೂ ವಿಾರಿ ಪಾಪಮಾಡಿದೆನು. ನಾನು ಜನರಿಗೆ ಭಯಪಟ್ಟು ಅವರ ಮಾತನ್ನು ಕೇಳಿದೆನು.
ಅದಕ್ಕವನು--ನಾನು ಪಾಪವನ್ನು ಮಾಡಿದೆನು; ಆದರೆ ಈಗ ನೀನು ದಯಮಾಡಿ ನನ್ನ ಜನರ ಹಿರಿಯರ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನನ್ನು ಗೌರವಿಸು ನಾನು ನಿನ್ನ ದೇವರಾದ ಕರ್ತನನ್ನು ಆರಾಧಿಸುವ ಹಾಗೆ ನೀನು ನನ್ನ ಸಂಗಡ ಹಿಂದಿರುಗಿ ಬಾ ಅಂದನು.
ಸಮುವೇಲನು ಅವನಿಗೆ--ಕರ್ತನು ನಿನ್ನನ್ನು ಬಿಟ್ಟುಹೋಗಿ ನಿನಗೆ ಶತ್ರುವಾಗಿರುವಾಗ ನೀನು ನನ್ನನ್ನು ಕೇಳುವದು ಯಾಕೆ? ಕರ್ತನು ನನ್ನ ಮುಖಾಂತರ ಹೇಳಿದ ಹಾಗೆಯೇ ನಿನಗೆ ಮಾಡಿದ್ದಾನೆ;
ಆದರೆ ಅಹಾಬನು ಆ ಮಾತುಗಳನ್ನು ಕೇಳಿದಾಗ ಏನಾಯಿತಂದರೆ, ಅವನು ತನ್ನ ವಸ್ತ್ರಗಳನ್ನು ಹರಿದು ತನ್ನ ಶರೀರದ ಮೇಲೆ ಗೋಣಿಯನ್ನು ಹಾಕಿಕೊಂಡು ಉಪವಾಸಮಾಡಿ ಗೋಣಿಯಲ್ಲಿ ಮಲಗಿಕೊಂಡು ಮೆಲ್ಲಗೆ ನಡೆದನು.
ಇದಲ್ಲದೆ ಅವನು ಚೆಲ್ಲಿದ ನಿರಪರಾಧದ ರಕ್ತದ ನಿಮಿತ್ತ ಇದು ಉಂಟಾಯಿತು. ಅವನು ನಿರಪರಾಧದ ರಕ್ತದಿಂದ ಯೆರೂಸಲೇಮನ್ನು ತುಂಬಿಸಿದ್ದನು. ಕರ್ತನು ಅದನ್ನು ಮನ್ನಿಸಲೊಲ್ಲದೆ ಇದ್ದನು.
ಆದರೆ ನೀವು ಸುಳ್ಳನ್ನು ಕಲ್ಪಿಸುವವರು; ನೀವೆಲ್ಲರೂ ವ್ಯರ್ಥ ವೈದ್ಯರೇ.
ಇವುಗಳ ಹಾಗೆ ಅನೇಕವಾದ ವುಗಳನ್ನು ಕೇಳಿದ್ದೇನೆ. ನೀವೆಲ್ಲರೂ ಕಾಟದ ಆದರಣೆ ಕೊಡುವವರೇ.
ತನ್ನ ಜ್ಞಾನಕ್ಕನುಸಾರವಾಗಿ ಒಬ್ಬ ಮನುಷ್ಯನು ಹೊಗ ಳಲ್ಪಡುವನು; ವಕ್ರಹೃದಯವುಳ್ಳವನು ತಿರಸ್ಕರಿಸಲ್ಪಡು ವನು.
ನಾನು ಅವರನ್ನು ಕಳುಹಿಸಲಿಲ್ಲವೆಂದು ಕರ್ತನು ಅನ್ನುತ್ತಾನೆ; ಆದಾಗ್ಯೂ ಅವರು ನಾನು ನಿಮ್ಮನ್ನು ಓಡಿಸಿಬಿಡುವ ಹಾಗೆಯೂ ನೀವೂ ನಿಮಗೆ ಪ್ರವಾದಿಸುವ ಪ್ರವಾದಿಗಳೂ ನಾಶವಾಗುವ ಹಾಗೆಯೂ ನನ್ನ ಹೆಸರಿನಲ್ಲಿ ನಿಮಗೆ ಸುಳ್ಳಾಗಿ ಪ್ರವಾದಿಸುತ್ತಾರೆ.
ಆದದರಿಂದ ಅವರು ಕರ್ತನಿಗೆ ಕೂಗಿ ಹೇಳಿದ್ದೇನಂದರೆ--ಓ ಕರ್ತನೇ, ನಾವು ಈ ಮನುಷ್ಯನ ಜೀವದ ನಿಮಿತ್ತ ನಾಶವಾಗದಿರಲಿ; ಅಪರಾಧವಿಲ್ಲದ ರಕ್ತವನ್ನು ನಮ್ಮ ಮೇಲೆ ಹೊರಿಸಬೇಡ; ಓ ಕರ್ತನೇ, ನೀನು ನಿನ್ನ ಚಿತ್ತಕ್ಕೆ ಬಂದ ಹಾಗೆ ಮಾಡಿದ್ದೀ ಅಂದರು.
ಅವನು ನ್ಯಾಯಾಸನದ ಮೇಲೆ ಕೂತಿದ್ದಾಗ ಅವನ ಹೆಂಡತಿಯು ಅವ ನಿಗೆ--ನೀನು ಆ ನೀತಿವಂತನ ಗೊಡವೆಗೆ ಹೋಗ ಬೇಡ; ಯಾಕಂದರೆ ಈ ದಿವಸ ನಾನು ಸ್ವಪ್ನದಲ್ಲಿ ಆತನ ವಿಷಯವಾಗಿ ಬಹಳ ಕಷ್ಟಪಟ್ಟಿದ್ದೇನೆ ಎಂದು ಹೇಳಿಕಳುಹಿಸಿದಳು.
ಆಗ ಅಧಿಪತಿಯು--ಯಾಕೆ? ಆತನು ಕೆಟ್ಟದ್ದೇನು ಮಾಡಿ ದ್ದಾನೆ ಅಂದನು. ಆದರೆ ಅವರು--ಆತನನ್ನು ಶಿಲುಬೆಗೆ ಹಾಕಿಸು ಎಂದು ಹೆಚ್ಚಾಗಿ ಕೂಗಿಕೊಂಡರು.
ಆಗ ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ಬೇರೆ ಸಂಭವಗಳು ನಡೆದದ್ದನ್ನೂ ನೋಡಿ ಬಹಳವಾಗಿ ಭಯಪಟ್ಟು-- ನಿಜವಾಗಿಯೂ ಈತನು ದೇವಕುಮಾರನಾಗಿದ್ದನು ಅಂದರು
ಆದರೆ ಅಬ್ರಹಾ ಮನು--ಮಗನೇ, ನೀನು ನಿನ್ನ ಜೀವಿತಕಾಲದಲ್ಲಿ ನಿನ್ನ ಒಳ್ಳೆಯವುಗಳನ್ನು ಹೊಂದಿದಿ; ಅದೇ ರೀತಿಯಲ್ಲಿ ಲಾಜರನು ಕೆಟ್ಟವುಗಳನ್ನು ಹೊಂದಿದ್ದನ್ನು ನೆನಪಿಗೆ ತಂದುಕೋ. ಆದರೆ ಈಗ ಅವನು ಆದರಣೆ ಹೊಂದುತ್ತಾ ಇದ್ದಾನೆ; ನೀನು ಯಾತನೆಪಡುತ್ತಾ ಇದ್ದೀ.
ಆದರೆ ಅವನು ಮೂರನೆಯ ಸಾರಿ ಅವ ರಿಗೆ--ಯಾಕೆ? ಈತನು ಕೆಟ್ಟದ್ದೇನು ಮಾಡಿದ್ದಾನೆ? ಈತನಲ್ಲಿ ಮರಣಕ್ಕೆ ಕಾರಣವಾದದ್ದೇನೂ ನನಗೆ ಕಾಣ ಲಿಲ್ಲ; ಆದದರಿಂದ ನಾನು ಈತನನ್ನು ಹೊಡಿಸಿ ಬಿಟ್ಟು ಬಿಡುತ್ತೇನೆ ಅಂದನು.
ನಾವಂತೂ ನ್ಯಾಯವಾಗಿಯೇ ನಮ್ಮ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಹೊಂದುತ್ತಾ ಇದ್ದೇವೆ; ಈತನಾದರೋ ತಪ್ಪಾದದ್ದೇನೂ ಮಾಡಲಿಲ್ಲ ಅಂದನು.
ಆಗ ಶತಾಧಿ ಪತಿಯು ನಡೆದದ್ದನ್ನು ನೋಡಿ--ನಿಶ್ಚಯವಾಗಿ ಈತನು ನೀತಿವಂತನಾಗಿದ್ದನು ಎಂದು ಹೇಳಿ ದೇವರನ್ನು ಮಹಿಮೆಪಡಿಸಿದನು.
ಯೆಹೂದ್ಯರು ಪ್ರತ್ಯುತ್ತರವಾಗಿ ಅವ ನಿಗೆ--ನಮ್ಮಲ್ಲಿ ಒಂದು ನ್ಯಾಯಪ್ರಮಾಣವಿದೆ ಮತ್ತು ನಮ್ಮ ಆ ನ್ಯಾಯಪ್ರಮಾಣದ ಪ್ರಕಾರ ಅವನು ಸಾಯಲೇಬೇಕು; ಯಾಕಂದರೆ ಅವನು ತನ್ನನ್ನು ದೇವರಮಗನೆಂದು ಮಾಡಿಕೊಂಡಿದ್ದಾನೆ ಅಂದರು.
ಮರಣದಂಡನೆಗೆ ಕಾರಣವೇನೂ ತಮಗೆ ಸಿಕ್ಕದಿದ್ದರೂ ಆತನನ್ನು ಕೊಲ್ಲಿಸಬೇಕೆಂದು ಪಿಲಾತನನ್ನು ಕೇಳಿಕೊಂಡರು.
ಆದರೆ ನೀವು ಮಾಡುವ ವಿವಾದದ ಮಾತುಗಳೂ ಹೆಸರುಗಳೂ ನಿಮ್ಮ ನ್ಯಾಯಪ್ರಮಾಣದ ವಿಷಯವಾಗಿರುವದಾದರೆ ಅವುಗಳನ್ನು ನೀವೇ ನೋಡಿಕೊಳ್ಳಿರಿ; ಇಂಥ ವಿಷಯ ಗಳನ್ನು ವಿಚಾರಣೆ ಮಾಡುವದಕ್ಕೆ ನನಗಂತೂ ಮನಸ್ಸಿಲ್ಲ ಎಂದು ಹೇಳಿ
ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.
ಅವರು ಕಪಟದಲ್ಲಿ ಸುಳ್ಳಾಡುವವರೂ ತಮ್ಮ ಮನಸ್ಸಾಕ್ಷಿಯ ಮೇಲೆ ಕಾಸಿದ ಕಬ್ಬಿಣದಿಂದ ಬರೆ ಹಾಕಲ್ಪಟ್ಟವರೂ ಆಗಿದ್ದು
ಅವರು ತಾವು ದೇವರನ್ನು ಅರಿತವರೆಂದು ಹೇಳಿ ಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯ ರೂ ಸತ್ಕಾರ್ಯಗಳಿಗೆಲ್ಲಾ ಭ್ರಷ್ಟರೂ ಆಗಿರುವದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುವರು.
ಇಂಥವನೇ ನಮಗೆ ಬೇಕಾದ ಮಹಾ ಯಾಜಕನು. ಈತನು ಪರಿಶುದ್ಧನೂ ಕೇಡು ಮಾಡ ದವನೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವಾತನು ಆಕಾಶಗಳಿಗಿಂತ ಉನ್ನತವಾಗಿ ಮಾಡಲ್ಪಟ್ಟಾತನೂ ಆಗಿದ್ದಾನೆ.
ಆದರೆ ಪೂರ್ಣಾಂಗವಾದ ನಿಷ್ಕಳಂಕ ಕುರಿಮರಿಯ ರಕ್ತ ದಿಂದಲೋ ಎಂಬಂತೆ ಕ್ರಿಸ್ತನ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.
ಕೆಡುಕ ನಾಗಿದ್ದು ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನ ನಂತೆ ಅಲ್ಲ. ಯಾವ ಕಾರಣದಿಂದ ಅವನನ್ನು ಕೊಂದು ಹಾಕಿದನು? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದದರಿಂದಲೇ.
ಈ ಇಬ್ಬರು ಪ್ರವಾದಿಗಳು ಭೂಮಿಯ ಮೇಲೆ ವಾಸ ಮಾಡುವವರನ್ನು ಯಾತನೆ ಪಡಿಸಿದ್ದರಿಂದ ಇವರ ವಿಷಯದಲ್ಲಿ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ದಾನಗಳನ್ನು ಕಳುಹಿಸುವರು ಎಂದು ಹೇಳಿದನು.