Home Bibles ಮತ್ತಾಯ 27:4 · ಕನ್ನಡ ಬೈಬಲ್
ಮತ್ತಾಯ 27:4 · ಕನ್ನಡ ಬೈಬಲ್

ಅವನು--ನಾನು ನಿರಪರಾಧದ ರಕ್ತವನ್ನು ಹಿಡುಕೊಟ್ಟು ಪಾಪಮಾಡಿದ್ದೇನೆ ಅಂದನು. ಅದಕ್ಕೆ ಅವರು--ಅದು ನಮಗೇನು? ನೀನೇ ಅದನ್ನು ನೋಡಿಕೋ ಅಂದರು.

Cross references

ಆದಿಕಾಂಡ 42:21

ಆಗ ಅವರು--ನಿಶ್ಚಯವಾಗಿ ನಮ್ಮ ಸಹೋದರನ ಅಪರಾಧವು ನಮ್ಮ ಮೇಲೆ ಇದೆ. ಅವನು ನಮ್ಮನ್ನು ಬೇಡಿಕೊಂಡಾಗ ಅವನ ಪ್ರಾಣ ಸಂಕಟವನ್ನು ನೋಡಿಯೂ ಕೇಳದೆ ಹೋದೆವು. ಆದಕಾರಣ ಈ ಸಂಕಟವು ನಮ್ಮ ಮೇಲೆ ಬಂದಿತು ಎಂದು ಅಂದುಕೊಂಡರು.

ನಿರ್ಗಮಕಾಂಡ 9:27

ಆಗ ಫರೋಹನು ಮೋಶೆ ಆರೋನರನ್ನು ಕರೇ ಕಳುಹಿಸಿ ಅವರಿಗೆ--ಈ ಸಾರಿ ನಾನು ಪಾಪಮಾಡಿ ದ್ದೇನೆ. ಕರ್ತನು ನೀತಿವಂತನು, ನಾನೂ ನನ್ನ ಜನರೂ ದುಷ್ಟರಾಗಿದ್ದೇವೆ.

ನಿರ್ಗಮಕಾಂಡ 10:16

ಆಗ ಫರೋಹನು ಮೋಶೆ ಆರೋನರನ್ನು ತ್ವರೆಯಾಗಿ ಕರೆಯಿಸಿ ಅವರಿಗೆ--ನಾನು ನಿಮ್ಮ ದೇವ ರಾದ ಕರ್ತನಿಗೂ ನಿಮಗೂ ವಿರೋಧವಾಗಿ ಪಾಪ ಮಾಡಿದ್ದೇನೆ.

ನಿರ್ಗಮಕಾಂಡ 12:31

ಫರೋಹನು ರಾತ್ರಿಯಲ್ಲಿ ಮೋಶೆ ಆರೋನರನ್ನು ಕರೆಯಿಸಿ ಅವರಿಗೆ--ನೀವು ಎದ್ದು ನನ್ನ ಜನರೊ ಳಗಿಂದ ಹೊರಟು ಹೋಗಿರಿ; ನೀವು ಹೇಳಿದ ಹಾಗೆಯೇ ಕರ್ತನನ್ನು ಸೇವಿಸುವದಕ್ಕೆ ನೀವೂ ಇಸ್ರಾಯೇಲ್‌ ಮಕ್ಕಳೂ ಹೋಗಿಬಿಡಿರಿ.

1 ಸಮುವೇಲ 15:24

ಆಗ ಸೌಲನು ಸಮುವೇಲನಿಗೆ--ನಾನು ಕರ್ತನ ವಾಕ್ಯವನ್ನೂ ನಿನ್ನ ಮಾತುಗಳನ್ನೂ ವಿಾರಿ ಪಾಪಮಾಡಿದೆನು. ನಾನು ಜನರಿಗೆ ಭಯಪಟ್ಟು ಅವರ ಮಾತನ್ನು ಕೇಳಿದೆನು.

1 ಸಮುವೇಲ 15:30

ಅದಕ್ಕವನು--ನಾನು ಪಾಪವನ್ನು ಮಾಡಿದೆನು; ಆದರೆ ಈಗ ನೀನು ದಯಮಾಡಿ ನನ್ನ ಜನರ ಹಿರಿಯರ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನನ್ನು ಗೌರವಿಸು ನಾನು ನಿನ್ನ ದೇವರಾದ ಕರ್ತನನ್ನು ಆರಾಧಿಸುವ ಹಾಗೆ ನೀನು ನನ್ನ ಸಂಗಡ ಹಿಂದಿರುಗಿ ಬಾ ಅಂದನು.

1 ಸಮುವೇಲ 28:16

ಸಮುವೇಲನು ಅವನಿಗೆ--ಕರ್ತನು ನಿನ್ನನ್ನು ಬಿಟ್ಟುಹೋಗಿ ನಿನಗೆ ಶತ್ರುವಾಗಿರುವಾಗ ನೀನು ನನ್ನನ್ನು ಕೇಳುವದು ಯಾಕೆ? ಕರ್ತನು ನನ್ನ ಮುಖಾಂತರ ಹೇಳಿದ ಹಾಗೆಯೇ ನಿನಗೆ ಮಾಡಿದ್ದಾನೆ;

1 ಅರಸುಗಳು 21:27

ಆದರೆ ಅಹಾಬನು ಆ ಮಾತುಗಳನ್ನು ಕೇಳಿದಾಗ ಏನಾಯಿತಂದರೆ, ಅವನು ತನ್ನ ವಸ್ತ್ರಗಳನ್ನು ಹರಿದು ತನ್ನ ಶರೀರದ ಮೇಲೆ ಗೋಣಿಯನ್ನು ಹಾಕಿಕೊಂಡು ಉಪವಾಸಮಾಡಿ ಗೋಣಿಯಲ್ಲಿ ಮಲಗಿಕೊಂಡು ಮೆಲ್ಲಗೆ ನಡೆದನು.

2 ಅರಸುಗಳು 24:4

ಇದಲ್ಲದೆ ಅವನು ಚೆಲ್ಲಿದ ನಿರಪರಾಧದ ರಕ್ತದ ನಿಮಿತ್ತ ಇದು ಉಂಟಾಯಿತು. ಅವನು ನಿರಪರಾಧದ ರಕ್ತದಿಂದ ಯೆರೂಸಲೇಮನ್ನು ತುಂಬಿಸಿದ್ದನು. ಕರ್ತನು ಅದನ್ನು ಮನ್ನಿಸಲೊಲ್ಲದೆ ಇದ್ದನು.

ಯೋಬ 13:4

ಆದರೆ ನೀವು ಸುಳ್ಳನ್ನು ಕಲ್ಪಿಸುವವರು; ನೀವೆಲ್ಲರೂ ವ್ಯರ್ಥ ವೈದ್ಯರೇ.

ಯೋಬ 16:2

ಇವುಗಳ ಹಾಗೆ ಅನೇಕವಾದ ವುಗಳನ್ನು ಕೇಳಿದ್ದೇನೆ. ನೀವೆಲ್ಲರೂ ಕಾಟದ ಆದರಣೆ ಕೊಡುವವರೇ.

ಸಾಮೇತಿಗಳು 12:8

ತನ್ನ ಜ್ಞಾನಕ್ಕನುಸಾರವಾಗಿ ಒಬ್ಬ ಮನುಷ್ಯನು ಹೊಗ ಳಲ್ಪಡುವನು; ವಕ್ರಹೃದಯವುಳ್ಳವನು ತಿರಸ್ಕರಿಸಲ್ಪಡು ವನು.

ಯೆರೆಮಿಯ 26:15

ನಾನು ಅವರನ್ನು ಕಳುಹಿಸಲಿಲ್ಲವೆಂದು ಕರ್ತನು ಅನ್ನುತ್ತಾನೆ; ಆದಾಗ್ಯೂ ಅವರು ನಾನು ನಿಮ್ಮನ್ನು ಓಡಿಸಿಬಿಡುವ ಹಾಗೆಯೂ ನೀವೂ ನಿಮಗೆ ಪ್ರವಾದಿಸುವ ಪ್ರವಾದಿಗಳೂ ನಾಶವಾಗುವ ಹಾಗೆಯೂ ನನ್ನ ಹೆಸರಿನಲ್ಲಿ ನಿಮಗೆ ಸುಳ್ಳಾಗಿ ಪ್ರವಾದಿಸುತ್ತಾರೆ.

ಯೋನ 1:14

ಆದದರಿಂದ ಅವರು ಕರ್ತನಿಗೆ ಕೂಗಿ ಹೇಳಿದ್ದೇನಂದರೆ--ಓ ಕರ್ತನೇ, ನಾವು ಈ ಮನುಷ್ಯನ ಜೀವದ ನಿಮಿತ್ತ ನಾಶವಾಗದಿರಲಿ; ಅಪರಾಧವಿಲ್ಲದ ರಕ್ತವನ್ನು ನಮ್ಮ ಮೇಲೆ ಹೊರಿಸಬೇಡ; ಓ ಕರ್ತನೇ, ನೀನು ನಿನ್ನ ಚಿತ್ತಕ್ಕೆ ಬಂದ ಹಾಗೆ ಮಾಡಿದ್ದೀ ಅಂದರು.

ಮತ್ತಾಯ 27:19

ಅವನು ನ್ಯಾಯಾಸನದ ಮೇಲೆ ಕೂತಿದ್ದಾಗ ಅವನ ಹೆಂಡತಿಯು ಅವ ನಿಗೆ--ನೀನು ಆ ನೀತಿವಂತನ ಗೊಡವೆಗೆ ಹೋಗ ಬೇಡ; ಯಾಕಂದರೆ ಈ ದಿವಸ ನಾನು ಸ್ವಪ್ನದಲ್ಲಿ ಆತನ ವಿಷಯವಾಗಿ ಬಹಳ ಕಷ್ಟಪಟ್ಟಿದ್ದೇನೆ ಎಂದು ಹೇಳಿಕಳುಹಿಸಿದಳು.

ಮತ್ತಾಯ 27:23

ಆಗ ಅಧಿಪತಿಯು--ಯಾಕೆ? ಆತನು ಕೆಟ್ಟದ್ದೇನು ಮಾಡಿ ದ್ದಾನೆ ಅಂದನು. ಆದರೆ ಅವರು--ಆತನನ್ನು ಶಿಲುಬೆಗೆ ಹಾಕಿಸು ಎಂದು ಹೆಚ್ಚಾಗಿ ಕೂಗಿಕೊಂಡರು.

ಮತ್ತಾಯ 27:54

ಆಗ ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ಬೇರೆ ಸಂಭವಗಳು ನಡೆದದ್ದನ್ನೂ ನೋಡಿ ಬಹಳವಾಗಿ ಭಯಪಟ್ಟು-- ನಿಜವಾಗಿಯೂ ಈತನು ದೇವಕುಮಾರನಾಗಿದ್ದನು ಅಂದರು

ಲೂಕ 16:25

ಆದರೆ ಅಬ್ರಹಾ ಮನು--ಮಗನೇ, ನೀನು ನಿನ್ನ ಜೀವಿತಕಾಲದಲ್ಲಿ ನಿನ್ನ ಒಳ್ಳೆಯವುಗಳನ್ನು ಹೊಂದಿದಿ; ಅದೇ ರೀತಿಯಲ್ಲಿ ಲಾಜರನು ಕೆಟ್ಟವುಗಳನ್ನು ಹೊಂದಿದ್ದನ್ನು ನೆನಪಿಗೆ ತಂದುಕೋ. ಆದರೆ ಈಗ ಅವನು ಆದರಣೆ ಹೊಂದುತ್ತಾ ಇದ್ದಾನೆ; ನೀನು ಯಾತನೆಪಡುತ್ತಾ ಇದ್ದೀ.

ಲೂಕ 23:22

ಆದರೆ ಅವನು ಮೂರನೆಯ ಸಾರಿ ಅವ ರಿಗೆ--ಯಾಕೆ? ಈತನು ಕೆಟ್ಟದ್ದೇನು ಮಾಡಿದ್ದಾನೆ? ಈತನಲ್ಲಿ ಮರಣಕ್ಕೆ ಕಾರಣವಾದದ್ದೇನೂ ನನಗೆ ಕಾಣ ಲಿಲ್ಲ; ಆದದರಿಂದ ನಾನು ಈತನನ್ನು ಹೊಡಿಸಿ ಬಿಟ್ಟು ಬಿಡುತ್ತೇನೆ ಅಂದನು.

ಲೂಕ 23:41

ನಾವಂತೂ ನ್ಯಾಯವಾಗಿಯೇ ನಮ್ಮ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಹೊಂದುತ್ತಾ ಇದ್ದೇವೆ; ಈತನಾದರೋ ತಪ್ಪಾದದ್ದೇನೂ ಮಾಡಲಿಲ್ಲ ಅಂದನು.

ಲೂಕ 23:47

ಆಗ ಶತಾಧಿ ಪತಿಯು ನಡೆದದ್ದನ್ನು ನೋಡಿ--ನಿಶ್ಚಯವಾಗಿ ಈತನು ನೀತಿವಂತನಾಗಿದ್ದನು ಎಂದು ಹೇಳಿ ದೇವರನ್ನು ಮಹಿಮೆಪಡಿಸಿದನು.

ಯೋಹಾನ 19:7

ಯೆಹೂದ್ಯರು ಪ್ರತ್ಯುತ್ತರವಾಗಿ ಅವ ನಿಗೆ--ನಮ್ಮಲ್ಲಿ ಒಂದು ನ್ಯಾಯಪ್ರಮಾಣವಿದೆ ಮತ್ತು ನಮ್ಮ ಆ ನ್ಯಾಯಪ್ರಮಾಣದ ಪ್ರಕಾರ ಅವನು ಸಾಯಲೇಬೇಕು; ಯಾಕಂದರೆ ಅವನು ತನ್ನನ್ನು ದೇವರಮಗನೆಂದು ಮಾಡಿಕೊಂಡಿದ್ದಾನೆ ಅಂದರು.

ಅಪೋಸ್ತಲರ ಕೃತ್ಯಗಳು 13:28

ಮರಣದಂಡನೆಗೆ ಕಾರಣವೇನೂ ತಮಗೆ ಸಿಕ್ಕದಿದ್ದರೂ ಆತನನ್ನು ಕೊಲ್ಲಿಸಬೇಕೆಂದು ಪಿಲಾತನನ್ನು ಕೇಳಿಕೊಂಡರು.

ಅಪೋಸ್ತಲರ ಕೃತ್ಯಗಳು 18:15

ಆದರೆ ನೀವು ಮಾಡುವ ವಿವಾದದ ಮಾತುಗಳೂ ಹೆಸರುಗಳೂ ನಿಮ್ಮ ನ್ಯಾಯಪ್ರಮಾಣದ ವಿಷಯವಾಗಿರುವದಾದರೆ ಅವುಗಳನ್ನು ನೀವೇ ನೋಡಿಕೊಳ್ಳಿರಿ; ಇಂಥ ವಿಷಯ ಗಳನ್ನು ವಿಚಾರಣೆ ಮಾಡುವದಕ್ಕೆ ನನಗಂತೂ ಮನಸ್ಸಿಲ್ಲ ಎಂದು ಹೇಳಿ

ರೋಮಾಪುರದವರಿಗೆ 3:19

ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.

1 ತಿಮೋಥೆಯ 4:2

ಅವರು ಕಪಟದಲ್ಲಿ ಸುಳ್ಳಾಡುವವರೂ ತಮ್ಮ ಮನಸ್ಸಾಕ್ಷಿಯ ಮೇಲೆ ಕಾಸಿದ ಕಬ್ಬಿಣದಿಂದ ಬರೆ ಹಾಕಲ್ಪಟ್ಟವರೂ ಆಗಿದ್ದು

ತೀತ 1:16

ಅವರು ತಾವು ದೇವರನ್ನು ಅರಿತವರೆಂದು ಹೇಳಿ ಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯ ರೂ ಸತ್ಕಾರ್ಯಗಳಿಗೆಲ್ಲಾ ಭ್ರಷ್ಟರೂ ಆಗಿರುವದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುವರು.

ಹೆಬ್ರಿಯರಿಗೆ 7:26

ಇಂಥವನೇ ನಮಗೆ ಬೇಕಾದ ಮಹಾ ಯಾಜಕನು. ಈತನು ಪರಿಶುದ್ಧನೂ ಕೇಡು ಮಾಡ ದವನೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವಾತನು ಆಕಾಶಗಳಿಗಿಂತ ಉನ್ನತವಾಗಿ ಮಾಡಲ್ಪಟ್ಟಾತನೂ ಆಗಿದ್ದಾನೆ.

1 ಪೇತ್ರ 1:19

ಆದರೆ ಪೂರ್ಣಾಂಗವಾದ ನಿಷ್ಕಳಂಕ ಕುರಿಮರಿಯ ರಕ್ತ ದಿಂದಲೋ ಎಂಬಂತೆ ಕ್ರಿಸ್ತನ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.

1 ಯೋಹಾನ 3:12

ಕೆಡುಕ ನಾಗಿದ್ದು ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನ ನಂತೆ ಅಲ್ಲ. ಯಾವ ಕಾರಣದಿಂದ ಅವನನ್ನು ಕೊಂದು ಹಾಕಿದನು? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದದರಿಂದಲೇ.

ಪ್ರಕಟನೆ 11:10

ಈ ಇಬ್ಬರು ಪ್ರವಾದಿಗಳು ಭೂಮಿಯ ಮೇಲೆ ವಾಸ ಮಾಡುವವರನ್ನು ಯಾತನೆ ಪಡಿಸಿದ್ದರಿಂದ ಇವರ ವಿಷಯದಲ್ಲಿ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ದಾನಗಳನ್ನು ಕಳುಹಿಸುವರು ಎಂದು ಹೇಳಿದನು.

Interlinear

Choose Theme