Home Bibles ಮತ್ತಾಯ 27:40 · ಕನ್ನಡ ಬೈಬಲ್
ಮತ್ತಾಯ 27:40 · ಕನ್ನಡ ಬೈಬಲ್

ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ, ನಿನ್ನನ್ನು ನೀನೇ ರಕ್ಷಿಸಿಕೋ; ಮತ್ತು ನೀನು ದೇವಕುಮಾರನಾಗಿದ್ದರೆ ಶಿಲುಬೆಯಿಂದ ಕೆಳಗೆ ಇಳಿದು ಬಾ ಅಂದರು.

Cross references

ಆದಿಕಾಂಡ 37:19

ಅವರು--ಇಗೋ, ಈ ಕನಸಿನವನು ಬರುತ್ತಿದ್ದಾನೆ;

ಮತ್ತಾಯ 4:3

ಆಗ ಆ ಶೋಧಕನು ಆತನ ಬಳಿಗೆ ಬಂದು--ನೀನು ದೇವಕುಮಾರನಾಗಿದ್ದರೆ ಈ ಕಲ್ಲುಗಳು ರೊಟ್ಟಿಯಾಗುವಂತೆ ಅಪ್ಪಣೆಕೊಡು ಅಂದನು.

ಮತ್ತಾಯ 4:6

ನೀನು ದೇವ ಕುಮಾರನಾಗಿದ್ದರೆ ನೀನಾಗಿಯೇ ಕೆಳಗೆ ದುಮುಕು; ಯಾಕಂದರೆ--ಯಾವ ಸಮಯದಲ್ಲಿಯಾದರೂ ನಿನ್ನ ಕಾಲು ಕಲ್ಲಿಗೆ ಅಪ್ಪಳಿಸದಂತೆ ಆತನು ತನ್ನ ದೂತರಿಗೆ ನಿನ್ನ ವಿಷಯವಾಗಿ ಅಪ್ಪಣೆ ಕೊಡುವನು; ಮತ್ತು ಅವರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು ಎಂದು ಬರೆದದೆ ಅಂದ

ಮತ್ತಾಯ 16:4

ವ್ಯಭಿಚಾರಿ ಯಾದ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತದೆ; ಆದರೆ ಪ್ರವಾದಿಯಾದ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಕೊಡಲ್ಪಡುವದಿಲ್ಲ ಎಂದು ಹೇಳಿದನು. ತರುವಾಯ ಆತನು ಅವರನ್ನು ಬಿಟ್ಟು ಹೊರಟುಹೋದನು.

ಮತ್ತಾಯ 26:61

ನಾನು ದೇವಾಲಯ ವನ್ನು ಕೆಡವಿ ಮೂರು ದಿವಸಗಳಲ್ಲಿ ಕಟ್ಟಬಲ್ಲೆನೆಂದು ಇವನು ಹೇಳಿದನು ಅಂದರು.

ಮತ್ತಾಯ 26:63

ಆದರೆ ಯೇಸು ಸುಮ್ಮನಿದ್ದನು. ಆಗ ಮಹಾಯಾಜಕನು ಪ್ರತ್ಯುತ್ತರವಾಗಿ ಆತನಿಗೆ--ನೀನು ದೇವಕುಮಾರನಾದ ಕ್ರಿಸ್ತನಾದರೆ ಅದನ್ನು ನಮಗೆ ಹೇಳಬೇಕೆಂದು ಜೀವಸ್ವರೂಪನಾದ ದೇವರ ಆಣೆಯನ್ನು ನಿನಗೆ ಇಡುತ್ತೇನೆ ಅಂದನು.

ಮತ್ತಾಯ 27:42

ಇವನು ಬೇರೆಯವರನ್ನು ರಕ್ಷಿಸಿದನು, ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು.ಇವನು ಇಸ್ರಾಯೇಲಿನ ಅರಸನಾಗಿದ್ದರೆ ಈಗಲೇ ಶಿಲುಬೆಯಿಂದ ಕೆಳಗಿಳಿದು ಬರಲಿ; ಆಗ ನಾವು ಅವನನ್ನು ನಂಬುವೆವು;

ಮತ್ತಾಯ 27:54

ಆಗ ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ಬೇರೆ ಸಂಭವಗಳು ನಡೆದದ್ದನ್ನೂ ನೋಡಿ ಬಹಳವಾಗಿ ಭಯಪಟ್ಟು-- ನಿಜವಾಗಿಯೂ ಈತನು ದೇವಕುಮಾರನಾಗಿದ್ದನು ಅಂದರು

ಲೂಕ 14:29

ಒಂದು ವೇಳೆ ಹಾಗೆ ಲೆಕ್ಕ ಮಾಡದೆ ಅವನು ಅದಕ್ಕೆ ಅಸ್ತಿವಾರ ಹಾಕಿದ ಮೇಲೆ ಅದನ್ನು ಪೂರೈಸದಿದ್ದರೆ ನೋಡುವವರೆಲ್ಲರೂ ಅವನಿಗೆ ಹಾಸ್ಯ ಮಾಡುವದಕ್ಕೆ ಆರಂಭಿಸಿ--

ಲೂಕ 16:31

ಆದರೆ ಅವನು--ಅವರು ಮೋಶೆಯು ಮತ್ತು ಪ್ರವಾದಿಗಳು ಹೇಳಿದ್ದನ್ನು ಕೇಳದೆ ಹೋದರೆ ಸತ್ತವರೊಳಗಿಂದ ಒಬ್ಬನು ಎದ್ದರೂ ಅವರು ಒಪ್ಪುವದಿಲ್ಲ ಎಂದು ಅವನಿಗೆ ಹೇಳಿದನು.

ಯೋಹಾನ 2:19

ಯೇಸು ಪ್ರತ್ಯುತ್ತರವಾಗಿ ಅವರಿಗೆ--ಈ ದೇವಾಲ ಯವನ್ನು ಕೆಡವಿದರೆ ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು ಅಂದನು.

ಪ್ರಕಟನೆ 11:10

ಈ ಇಬ್ಬರು ಪ್ರವಾದಿಗಳು ಭೂಮಿಯ ಮೇಲೆ ವಾಸ ಮಾಡುವವರನ್ನು ಯಾತನೆ ಪಡಿಸಿದ್ದರಿಂದ ಇವರ ವಿಷಯದಲ್ಲಿ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ದಾನಗಳನ್ನು ಕಳುಹಿಸುವರು ಎಂದು ಹೇಳಿದನು.

Interlinear

Choose Theme