ಆದದರಿಂದ ನೀವು ಹೋಗಿ ಎಲ್ಲಾ ಜನಾಂಗಗಳಿಗೆ ಬೋಧಿಸಿ ತಂದೆಯ, ಮಗನ, ಪರಿಶುದ್ಧಾತ್ಮನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿರಿ;ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
Cross references
ತರುವಾಯ ದೇವರು--ನಮ್ಮ ರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯನನ್ನು ಮಾಡೋಣ; ಅವರು ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯ ಮೇಲೆಯೂ ದೊರೆತನಮಾಡಲಿ ಅಂದನು.
ಕರ್ತನು ನಿನ್ನನ್ನು ಆಶೀರ್ವದಿಸಲಿ, ನಿನ್ನನ್ನು ಕಾಪಾಡಲಿ.
ಲೋಕದಂತ್ಯದಲ್ಲಿರುವ ಎಲ್ಲಾ ಜನರು ಜ್ಞಾಪಕ ಮಾಡಿ ಕರ್ತನ ಕಡೆಗೆ ತಿರಿಗಿಕೊಳ್ಳುವರು; ಜನಾಂಗ ಗಳ ಗೋತ್ರಗಳೆಲ್ಲರೂ ನಿನ್ನ ಮುಂದೆ ಆರಾಧಿಸುವರು.
ರ್ತನು ತನ್ನ ರಕ್ಷಣೆಯನ್ನು ತಿಳಿಯ ಮಾಡಿದ್ದಾನೆ; ತನ್ನ ನೀತಿಯನ್ನು ಜನಾಂಗಗಳ ದೃಷ್ಟಿಗೆ ಬಹಿರಂಗವಾಗಿ ಪ್ರಕಟಮಾಡಿದ್ದಾನೆ.
ಇಗೋ, ನಾನು ಆಧಾರವಾಗಿರುವ ನನ್ನ ಸೇವಕನು; ನಾನು ಆದುಕೊಂಡವನಲ್ಲಿ ನನ್ನ ಆತ್ಮ ಆನಂದಿಸುವದು. ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಅನ್ಯಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು.
ನನ್ನ ಸವಿಾಪಕ್ಕೆ ಬಂದು ಇದನ್ನು ಕೇಳಿರಿ; ಆದಿಯಿಂದಲೂ ನಾನು ಗುಟ್ಟಾಗಿ ಮಾತಾಡಲಿಲ್ಲ, ಅಂದಿನಿಂದಲೂ ಅಲ್ಲಿ ನಾನು ಇದ್ದೇನೆ; ಈಗ ದೇವರಾದ ಕರ್ತನು ಆತನ ಆತ್ಮ ದೊಡನೆ ನನ್ನನ್ನು ಕಳುಹಿಸಿದ್ದಾನೆ.
ಆತನೇ ಈಗ ಹೀಗನ್ನುತ್ತಾನೆ--ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬನ ಕುಲಗಳನ್ನು ಉನ್ನತಪಡಿ ಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪ ಕಾರ್ಯವೇ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯ ವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೆ ಬೆಳಕನ್ನಾಗಿ ದಯಪಾಲಿಸುವೆನು.
ಕರ್ತನು ತನ್ನ ಪರಿ ಶುದ್ಧವಾದ ಬಾಹುವನ್ನು ಸಕಲ ಜನಾಂಗಗಳ ಕಣ್ಣು ಗಳಿಗೆ ತೋರಮಾಡಿದ್ದಾನೆ. ಭೂಮಿಯ ಅಂತ್ಯದವ ರೆಲ್ಲಾ ನಮ್ಮ ದೇವರ ರಕ್ಷಣೆಯನ್ನು ನೋಡುವರು.
ನಾನು ಅವರ ಕ್ರಿಯೆಗಳನ್ನೂ ಅವರ ಆಲೋಚನೆಗಳನ್ನೂ ಬಲ್ಲೆನು. ಎಲ್ಲಾ ಜನಾಂಗ ಗಳನ್ನೂ ಭಾಷೆಯವರನ್ನೂ ಇನ್ನು ಮುಂದೆ ಒಟ್ಟಿಗೆ ಬರಮಾಡುವೆನು; ಆಗ ಅವರು ಬಂದು ನನ್ನ ಮಹಿ ಮೆಯನ್ನು ನೋಡುವರು.
ಯೇಸು ಬಾಪ್ತಿಸ್ಮ ಮಾಡಿಸಿಕೊಂಡು ನೀರಿನಿಂದ ಮೇಲಕ್ಕೆ ಬಂದ ಕೂಡಲೆ ಇಗೋ, ಆತನಿಗೆ ಆಕಾಶಗಳು ತೆರೆಯಲ್ಪಟ್ಟು ದೇವರ ಆತ್ಮನು ಪಾರಿವಾಳದ ಹಾಗೆ ಆತನ ಮೇಲೆ ಇಳಿದುಬರುವದನ್ನು ಆತನು ಕಂಡನು.ಆಗ--ಇಗೋ, ಈತನು ಪ್ರಿಯ ನಾಗಿರುವ ನನ್ನ ಮಗನು; ಈತನನ್ನು ನಾನು ಬಹಳ ವಾಗಿ ಮೆಚ್ಚಿದ್ದೇನೆ ಎಂದು ಪರಲೋಕದಿಂದ ಹೇಳುವ ಧ್ವನಿಯಾಯಿತು.
ಆತನು ಅವರಿಗೆ--ಆದಕಾರಣ ಪರಲೋಕ ರಾಜ್ಯದ ವಿಷಯವಾಗಿ ಶಿಕ್ಷಣಹೊಂದಿದ ಪ್ರತಿಯೊಬ್ಬ ಶಾಸ್ತ್ರಿಯು ತನ್ನ ಬೊಕ್ಕಸದೊಳಗಿಂದ ಹೊಸ ಮತ್ತು ಹಳೆಯ ವಸ್ತುಗಳನ್ನು ಹೊರಗೆ ತರುವ ಒಬ್ಬ ಮನೇ ಯಜಮಾನನಿಗೆ ಹೋಲಿಕೆಯಾಗಿದ್ದಾನೆ ಅಂದನು.
ಆತನು ಅವರಿಗೆ--ನೀವು ಸಮಸ್ತ ಲೋಕಕ್ಕೆ ಹೋಗಿ ಎಲ್ಲಾ ಸೃಷ್ಟಿಗೆ ಸುವಾರ್ತೆಯನ್ನು ಸಾರಿರಿ.
ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ.
ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲವನ್ನು ಹೊಂದುವಿರಿ; ಯೆರೂಸಲೇಮಿನಲ್ಲಿಯೂ ಎಲ್ಲಾ ಯೂದಾಯದ ಲ್ಲಿಯೂ ಸಮಾರ್ಯದಲ್ಲಿಯೂ ಭೂಮಿಯ ಕಟ್ಟ ಕಡೆಯವರೆಗೂ ನೀವು ನನಗೆ ಸಾಕ್ಷಿಗಳಾಗಿರುವಿರಿ ಎಂದು ಹೇಳಿದನು.
ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.
ಆಗ ಅವನ ಮಾತನ್ನು ಸಂತೋಷವಾಗಿ ಅಂಗೀಕರಿಸಿದವರು ಬಾಪ್ತಿಸ್ಮ ಮಾಡಿಸಿಕೊಂಡರು. ಅದೇ ದಿನದಲ್ಲಿ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಸಲ್ಪಟ್ಟರು.
ಆದರೆ ಫಿಲಿಪ್ಪನು ದೇವರ ರಾಜ್ಯದ ವಿಷಯದಲ್ಲಿಯೂ ಯೇಸು ಕ್ರಿಸ್ತನ ಹೆಸರಿನ ವಿಷಯ ದಲ್ಲಿಯೂ ಸಾರುತ್ತಾ ಇರಲು ಗಂಡಸರೂ ಹೆಂಗಸರೂ ನಂಬಿ ಬಾಪ್ತಿಸ್ಮ ಮಾಡಿಸಿಕೊಂಡರು.
ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿನ ಬಳಿಗೆ ಬಂದರು. ಕಂಚುಕಿಯು--ಅಗೋ, ನೀರು; ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕೆ ನನಗೆ ಅಡ್ಡಿ ಏನು ಅಂದನು.
ಅದಕ್ಕೆ ಫಿಲಿಪ್ಪನು--ನೀನು ನಿನ್ನ ಹೃದಯಪೂರ್ವಕವಾಗಿ ನಂಬುವದಾದರೆ ಆಗ ಬಹುದು ಎಂದು ಹೇಳಿದನು. ಅದಕ್ಕೆ ಅವನು ಪ್ರತ್ಯು ತ್ತರವಾಗಿ--ಯೇಸು ಕ್ರಿಸ್ತನನ್ನು ದೇವಕುಮಾರನೆಂದು ನಾನು ನಂಬುತ್ತೇನೆ ಎಂದು ಹೇಳಿ
ಆಗ ಅವನ ಕಣ್ಣುಗಳಿಂದ ಪರೆಗಳಂತಿದ್ದವುಗಳು ಬಿದ್ದ ಕೂಡಲೆ ಅವನು ದೃಷ್ಟಿ ಹೊಂದಿದವನಾಗಿ ಎದ್ದು ಬಾಪ್ತಿಸ್ಮ ಮಾಡಿಸಿಕೊಂಡನು.
ನಮ್ಮ ಹಾಗೆಯೇ ಪವಿತ್ರಾತ್ಮನನ್ನು ಹೊಂದಿದ ಇವರಿಗೆ ನೀರಿನ ಬಾಪ್ತಿಸ್ಮವಾಗದಂತೆ ಯಾರಾದರೂ ಅಭ್ಯಂತರ ಮಾಡಾರೇ ಎಂದು ಹೇಳಿ--ಅವರು ಕರ್ತನ ಹೆಸರಿನಲ್ಲಿ ಬಾಪ್ತಿಸ್ಮ ಹೊಂದುವಂತೆ ಅಪ್ಪಣೆಕೊಟ್ಟನು. ಅಮೇಲೆ ಅವನು ಇನ್ನೂ ಕೆಲವು ದಿವಸ ಇರಬೇಕೆಂದು ಅವರು ಬೇಡಿಕೊಂಡರು.
ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ.
ಆ ಪಟ್ಟಣದವರಿಗೆ ಸುವಾರ್ತೆಯನ್ನು ಸಾರಿ ಅನೇಕರಿಗೆ ಬೋಧಿಸಿದ ಮೇಲೆ ಪುನಃ ಹಿಂತಿರುಗಿ ಲುಸ್ತ್ರಕ್ಕೂ ಇಕೋನ್ಯಕ್ಕೂ ಅಂತಿಯೋಕ್ಯಕ್ಕೂ ಬಂದು ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿದರು.
ಆಕೆಯೂ ಆಕೆಯ ಮನೆಯವರೂ ಬಾಪ್ತಿಸ್ಮ ಮಾಡಿಸಿಕೊಂಡ ಮೇಲೆ--ನಾನು ಕರ್ತನಿಗೆ ನಂಬಿಗಸ್ತಳಾದವಳೆಂದು ನೀವು ತೀರ್ಮಾನಿಸಿದರೆ ನನ್ನ ಮನೆಗೆ ಬಂದು ಇರಬೇಕು ಎಂದು ಆಕೆಯು ನಮ್ಮನ್ನು ಬೇಡಿಕೊಂಡು ಬಲವಂತಮಾಡಿದಳು.
ಆಗ ಅವನು ಅವರಿಗೆ--ನೀವು ಯಾವದಕ್ಕಾಗಿ ಬಾಪ್ತಿಸ್ಮ ಮಾಡಿಸಿಕೊಂಡಿರಿ ಎಂದು ಕೇಳಿದನು. ಅದಕ್ಕವರು--ಯೋಹಾನನ ಬಾಪ್ತಿಸ್ಮಕ್ಕನುಸಾರವಾಗಿ ಮಾಡಿಸಿ ಕೊಂಡೆವು ಎಂದು ಹೇಳಿದರು.
ಆದಕಾರಣ ದೇವರ ರಕ್ಷಣೆಯು ಅನ್ಯಜನಾಂಗದವರಿಗೆ ಕಳುಹಿಸಲ್ಪಟ್ಟಿದೆ; ಅದನ್ನು ಅವರು ಕೇಳುವರು ಎಂಬದಾಗಿ ನಿಮಗೆ ತಿಳಿದಿರಲಿ ಅಂದನು.
ಯೇಸು ಕ್ರಿಸ್ತನಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡವರಾದ ನಾವೆಲ್ಲರು ಆತನ ಮರಣದಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡೆವೆಂದು ನಿಮಗೆ ತಿಳಿಯದೋ?
ಆದರೆ--ಅವರು ಕೇಳಲಿಲ್ಲವೇನು ಎಂದು ನಾನು ಕೇಳುತ್ತೇನೆ. ಹೌದು ನಿಜವೇ, ಅವರ ಧ್ವನಿಯು ಭೂಮಿಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯ ವರೆಗೂ ವ್ಯಾಪಿಸಿದವು.
ಕ್ರಿಸ್ತನು ವಿಭಾಗವಾಗಿದ್ದಾನೋ? ನಿಮಗೋಸ್ಕರ ಶಿಲುಬೆಗೆ ಹಾಕಿಸಿಕೊಂಡವನು ಪೌಲನೋ? ನೀವು ಪೌಲನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಂಡಿರೋ?
ವರಗಳಲ್ಲಿ ಬೇರೆ ಬೇರೆ ವಿಧಗಳುಂಟು. ಆದರೆ ಆತ್ಮನು ಒಬ್ಬನೇ;
ಸತ್ತವರು ಏಳುವದೇ ಇಲ್ಲವಾದರೆ ಸತ್ತವರಿ ಗೋಸ್ಕರ ಬಾಪ್ತಿಸ್ಮ ಮಾಡಿಸಿಕೊಳ್ಳುವವರು ಏನು ಮಾಡುವರು? ಹಾಗಿದ್ದರೆ ಸತ್ತವರಿಗೊಸ್ಕರ ಅವರು ಬಾಪ್ತಿಸ್ಮ ಮಾಡಿಸಿಕೊಳ್ಳುವದು ಯಾಕೆ?
ಕರ್ತನಾದ ಯೇಸುಕ್ರಿಸ್ತನ ಕೃಪೆಯೂ ದೇವರ ಪ್ರೀತಿಯೂ ಪವಿತ್ರಾತ್ಮನ ಅನ್ಯೋನ್ಯತೆಯೂ ನಿಮ್ಮೆಲ್ಲರ ಸಂಗಡವಿರಲಿ. ಆಮೆನ್.
ಹೇಗಂದರೆ ಕ್ರಿಸ್ತನಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡಿರುವ ನೀವೆಲ್ಲರು ಕ್ರಿಸ್ತನನ್ನು ಧರಿಸಿ ಕೊಂಡಿರಿ.
ಆತನ ಮೂಲಕ ನಾವೂ ನೀವೂ ಒಬ್ಬ ಆತ್ಮನನ್ನೇ ಹೊಂದಿದವರಾಗಿ ತಂದೆಯ ಬಳಿಗೆ ಪ್ರವೇಶಿಸುವದಕ್ಕೆ ಮಾರ್ಗವಾಯಿತು.
ಪೌಲನೆಂಬ ನಾನು ಈ ಸುವಾರ್ತೆಗೆ ಸೇವಕನಾದೆನು; ನೀವು ಕೇಳಿದಂಥ ಮತ್ತು ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲ್ಪಟ್ಟಂಥ ಸುವಾರ್ತೆಯಿಂದ ಉಂಟಾದ ನಿರೀಕ್ಷೆ ಯನ್ನು ಬಿಟ್ಟು ತೊಲಗಿಹೋಗದೆ ಅಸ್ತಿವಾರದ ಮೇಲೆ ನಿಂತು ಸ್ಥಿರವಾಗಿದ್ದು ನಂಬಿಕೆಯಲ್ಲಿ ನೆಲೆಗೊಂಡಿರು ವದಾದರೆ
ಆ ನೀರಿಗೆ ಅನುರೂಪವಾದ ಬಾಪ್ತಿಸ್ಮವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ; (ಅದು ಮೈಕೊಳೆಯನ್ನು ಹೋಗಲಾಡಿ ಸುವಂಥದ್ದಲ್ಲ. ಆದರೆ ದೇವರ ಕಡೆಗಿರುವ ನಮ್ಮ ಒಳ್ಳೇ ಮನಸ್ಸಾಕ್ಷಿಯ ಉತ್ತರವಾಗಿದೆ).ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.
ಪರಲೋಕದಲ್ಲಿ ಸಾಕ್ಷಿಕೊಡುವವರು ಮೂವರಿದ್ದಾರೆ; ಅವರು ಯಾರಂದರೆ ತಂದೆಯು, ವಾಕ್ಯವು ಮತ್ತು ಪರಿಶುದ್ಧಾತ್ಮನು; ಮೂವರಾಗಿರುವ ಇವರು ಒಂದಾಗಿದ್ದಾರೆ.
ಯೋಹಾನನು ಆಸ್ಯದಲ್ಲಿರುವ ಏಳು ಸಭೆಗ ಳಿಗೆ--ಇರುವಾತನೂ ಇದ್ದಾತನೂ ಬರುವಾತನೂ ಆಗಿರುವಾತನಿಂದಲೂ ಆತನ ಸಿಂಹಾಸನದ ಮುಂದಿ ರುವ ಏಳು ಆತ್ಮಗಳಿಂದಲೂ ನಂಬತಕ್ಕ ಸಾಕ್ಷಿಯೂ ಸತ್ತವರೊಳಗಿಂದ ಮೊದಲು ಎದ್ದು ಬಂದಾತನೂ ಭೂರಾಜರ ಪ್ರಭುವೂ ಆಗಿರುವ ಯೇಸು ಕ್ರಿಸ್ತ ನಿಂದ