Home Bibles ಮತ್ತಾಯ 28:19 · ಕನ್ನಡ ಬೈಬಲ್
ಮತ್ತಾಯ 28:19 · ಕನ್ನಡ ಬೈಬಲ್

ಆದದರಿಂದ ನೀವು ಹೋಗಿ ಎಲ್ಲಾ ಜನಾಂಗಗಳಿಗೆ ಬೋಧಿಸಿ ತಂದೆಯ, ಮಗನ, ಪರಿಶುದ್ಧಾತ್ಮನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿರಿ;ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್‌.

Cross references

ಆದಿಕಾಂಡ 1:26

ತರುವಾಯ ದೇವರು--ನಮ್ಮ ರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯನನ್ನು ಮಾಡೋಣ; ಅವರು ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯ ಮೇಲೆಯೂ ದೊರೆತನಮಾಡಲಿ ಅಂದನು.

ಅಂಕೆಗಳ ಪುಸ್ತಕ 6:24

ಕರ್ತನು ನಿನ್ನನ್ನು ಆಶೀರ್ವದಿಸಲಿ, ನಿನ್ನನ್ನು ಕಾಪಾಡಲಿ.

ಕೀರ್ತನೆಗಳು 22:27

ಲೋಕದಂತ್ಯದಲ್ಲಿರುವ ಎಲ್ಲಾ ಜನರು ಜ್ಞಾಪಕ ಮಾಡಿ ಕರ್ತನ ಕಡೆಗೆ ತಿರಿಗಿಕೊಳ್ಳುವರು; ಜನಾಂಗ ಗಳ ಗೋತ್ರಗಳೆಲ್ಲರೂ ನಿನ್ನ ಮುಂದೆ ಆರಾಧಿಸುವರು.

ಕೀರ್ತನೆಗಳು 98:2

ರ್ತನು ತನ್ನ ರಕ್ಷಣೆಯನ್ನು ತಿಳಿಯ ಮಾಡಿದ್ದಾನೆ; ತನ್ನ ನೀತಿಯನ್ನು ಜನಾಂಗಗಳ ದೃಷ್ಟಿಗೆ ಬಹಿರಂಗವಾಗಿ ಪ್ರಕಟಮಾಡಿದ್ದಾನೆ.

ಯೆಶಾಯ 42:1

ಇಗೋ, ನಾನು ಆಧಾರವಾಗಿರುವ ನನ್ನ ಸೇವಕನು; ನಾನು ಆದುಕೊಂಡವನಲ್ಲಿ ನನ್ನ ಆತ್ಮ ಆನಂದಿಸುವದು. ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಅನ್ಯಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು.

ಯೆಶಾಯ 48:16

ನನ್ನ ಸವಿಾಪಕ್ಕೆ ಬಂದು ಇದನ್ನು ಕೇಳಿರಿ; ಆದಿಯಿಂದಲೂ ನಾನು ಗುಟ್ಟಾಗಿ ಮಾತಾಡಲಿಲ್ಲ, ಅಂದಿನಿಂದಲೂ ಅಲ್ಲಿ ನಾನು ಇದ್ದೇನೆ; ಈಗ ದೇವರಾದ ಕರ್ತನು ಆತನ ಆತ್ಮ ದೊಡನೆ ನನ್ನನ್ನು ಕಳುಹಿಸಿದ್ದಾನೆ.

ಯೆಶಾಯ 49:6

ಆತನೇ ಈಗ ಹೀಗನ್ನುತ್ತಾನೆ--ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬನ ಕುಲಗಳನ್ನು ಉನ್ನತಪಡಿ ಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪ ಕಾರ್ಯವೇ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯ ವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೆ ಬೆಳಕನ್ನಾಗಿ ದಯಪಾಲಿಸುವೆನು.

ಯೆಶಾಯ 52:10

ಕರ್ತನು ತನ್ನ ಪರಿ ಶುದ್ಧವಾದ ಬಾಹುವನ್ನು ಸಕಲ ಜನಾಂಗಗಳ ಕಣ್ಣು ಗಳಿಗೆ ತೋರಮಾಡಿದ್ದಾನೆ. ಭೂಮಿಯ ಅಂತ್ಯದವ ರೆಲ್ಲಾ ನಮ್ಮ ದೇವರ ರಕ್ಷಣೆಯನ್ನು ನೋಡುವರು.

ಯೆಶಾಯ 66:18

ನಾನು ಅವರ ಕ್ರಿಯೆಗಳನ್ನೂ ಅವರ ಆಲೋಚನೆಗಳನ್ನೂ ಬಲ್ಲೆನು. ಎಲ್ಲಾ ಜನಾಂಗ ಗಳನ್ನೂ ಭಾಷೆಯವರನ್ನೂ ಇನ್ನು ಮುಂದೆ ಒಟ್ಟಿಗೆ ಬರಮಾಡುವೆನು; ಆಗ ಅವರು ಬಂದು ನನ್ನ ಮಹಿ ಮೆಯನ್ನು ನೋಡುವರು.

ಮತ್ತಾಯ 3:16

ಯೇಸು ಬಾಪ್ತಿಸ್ಮ ಮಾಡಿಸಿಕೊಂಡು ನೀರಿನಿಂದ ಮೇಲಕ್ಕೆ ಬಂದ ಕೂಡಲೆ ಇಗೋ, ಆತನಿಗೆ ಆಕಾಶಗಳು ತೆರೆಯಲ್ಪಟ್ಟು ದೇವರ ಆತ್ಮನು ಪಾರಿವಾಳದ ಹಾಗೆ ಆತನ ಮೇಲೆ ಇಳಿದುಬರುವದನ್ನು ಆತನು ಕಂಡನು.ಆಗ--ಇಗೋ, ಈತನು ಪ್ರಿಯ ನಾಗಿರುವ ನನ್ನ ಮಗನು; ಈತನನ್ನು ನಾನು ಬಹಳ ವಾಗಿ ಮೆಚ್ಚಿದ್ದೇನೆ ಎಂದು ಪರಲೋಕದಿಂದ ಹೇಳುವ ಧ್ವನಿಯಾಯಿತು.

ಮತ್ತಾಯ 13:52

ಆತನು ಅವರಿಗೆ--ಆದಕಾರಣ ಪರಲೋಕ ರಾಜ್ಯದ ವಿಷಯವಾಗಿ ಶಿಕ್ಷಣಹೊಂದಿದ ಪ್ರತಿಯೊಬ್ಬ ಶಾಸ್ತ್ರಿಯು ತನ್ನ ಬೊಕ್ಕಸದೊಳಗಿಂದ ಹೊಸ ಮತ್ತು ಹಳೆಯ ವಸ್ತುಗಳನ್ನು ಹೊರಗೆ ತರುವ ಒಬ್ಬ ಮನೇ ಯಜಮಾನನಿಗೆ ಹೋಲಿಕೆಯಾಗಿದ್ದಾನೆ ಅಂದನು.

ಮಾರ್ಕ 16:15

ಆತನು ಅವರಿಗೆ--ನೀವು ಸಮಸ್ತ ಲೋಕಕ್ಕೆ ಹೋಗಿ ಎಲ್ಲಾ ಸೃಷ್ಟಿಗೆ ಸುವಾರ್ತೆಯನ್ನು ಸಾರಿರಿ.

ಲೂಕ 24:47

ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ.

ಅಪೋಸ್ತಲರ ಕೃತ್ಯಗಳು 1:8

ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲವನ್ನು ಹೊಂದುವಿರಿ; ಯೆರೂಸಲೇಮಿನಲ್ಲಿಯೂ ಎಲ್ಲಾ ಯೂದಾಯದ ಲ್ಲಿಯೂ ಸಮಾರ್ಯದಲ್ಲಿಯೂ ಭೂಮಿಯ ಕಟ್ಟ ಕಡೆಯವರೆಗೂ ನೀವು ನನಗೆ ಸಾಕ್ಷಿಗಳಾಗಿರುವಿರಿ ಎಂದು ಹೇಳಿದನು.

ಅಪೋಸ್ತಲರ ಕೃತ್ಯಗಳು 2:38

ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.

ಅಪೋಸ್ತಲರ ಕೃತ್ಯಗಳು 2:41

ಆಗ ಅವನ ಮಾತನ್ನು ಸಂತೋಷವಾಗಿ ಅಂಗೀಕರಿಸಿದವರು ಬಾಪ್ತಿಸ್ಮ ಮಾಡಿಸಿಕೊಂಡರು. ಅದೇ ದಿನದಲ್ಲಿ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಸಲ್ಪಟ್ಟರು.

ಅಪೋಸ್ತಲರ ಕೃತ್ಯಗಳು 8:12

ಆದರೆ ಫಿಲಿಪ್ಪನು ದೇವರ ರಾಜ್ಯದ ವಿಷಯದಲ್ಲಿಯೂ ಯೇಸು ಕ್ರಿಸ್ತನ ಹೆಸರಿನ ವಿಷಯ ದಲ್ಲಿಯೂ ಸಾರುತ್ತಾ ಇರಲು ಗಂಡಸರೂ ಹೆಂಗಸರೂ ನಂಬಿ ಬಾಪ್ತಿಸ್ಮ ಮಾಡಿಸಿಕೊಂಡರು.

ಅಪೋಸ್ತಲರ ಕೃತ್ಯಗಳು 8:36

ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿನ ಬಳಿಗೆ ಬಂದರು. ಕಂಚುಕಿಯು--ಅಗೋ, ನೀರು; ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕೆ ನನಗೆ ಅಡ್ಡಿ ಏನು ಅಂದನು.

ಅಪೋಸ್ತಲರ ಕೃತ್ಯಗಳು 8:37

ಅದಕ್ಕೆ ಫಿಲಿಪ್ಪನು--ನೀನು ನಿನ್ನ ಹೃದಯಪೂರ್ವಕವಾಗಿ ನಂಬುವದಾದರೆ ಆಗ ಬಹುದು ಎಂದು ಹೇಳಿದನು. ಅದಕ್ಕೆ ಅವನು ಪ್ರತ್ಯು ತ್ತರವಾಗಿ--ಯೇಸು ಕ್ರಿಸ್ತನನ್ನು ದೇವಕುಮಾರನೆಂದು ನಾನು ನಂಬುತ್ತೇನೆ ಎಂದು ಹೇಳಿ

ಅಪೋಸ್ತಲರ ಕೃತ್ಯಗಳು 9:18

ಆಗ ಅವನ ಕಣ್ಣುಗಳಿಂದ ಪರೆಗಳಂತಿದ್ದವುಗಳು ಬಿದ್ದ ಕೂಡಲೆ ಅವನು ದೃಷ್ಟಿ ಹೊಂದಿದವನಾಗಿ ಎದ್ದು ಬಾಪ್ತಿಸ್ಮ ಮಾಡಿಸಿಕೊಂಡನು.

ಅಪೋಸ್ತಲರ ಕೃತ್ಯಗಳು 10:47

ನಮ್ಮ ಹಾಗೆಯೇ ಪವಿತ್ರಾತ್ಮನನ್ನು ಹೊಂದಿದ ಇವರಿಗೆ ನೀರಿನ ಬಾಪ್ತಿಸ್ಮವಾಗದಂತೆ ಯಾರಾದರೂ ಅಭ್ಯಂತರ ಮಾಡಾರೇ ಎಂದು ಹೇಳಿ--ಅವರು ಕರ್ತನ ಹೆಸರಿನಲ್ಲಿ ಬಾಪ್ತಿಸ್ಮ ಹೊಂದುವಂತೆ ಅಪ್ಪಣೆಕೊಟ್ಟನು. ಅಮೇಲೆ ಅವನು ಇನ್ನೂ ಕೆಲವು ದಿವಸ ಇರಬೇಕೆಂದು ಅವರು ಬೇಡಿಕೊಂಡರು.

ಅಪೋಸ್ತಲರ ಕೃತ್ಯಗಳು 13:46

ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ.

ಅಪೋಸ್ತಲರ ಕೃತ್ಯಗಳು 14:21

ಆ ಪಟ್ಟಣದವರಿಗೆ ಸುವಾರ್ತೆಯನ್ನು ಸಾರಿ ಅನೇಕರಿಗೆ ಬೋಧಿಸಿದ ಮೇಲೆ ಪುನಃ ಹಿಂತಿರುಗಿ ಲುಸ್ತ್ರಕ್ಕೂ ಇಕೋನ್ಯಕ್ಕೂ ಅಂತಿಯೋಕ್ಯಕ್ಕೂ ಬಂದು ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿದರು.

ಅಪೋಸ್ತಲರ ಕೃತ್ಯಗಳು 16:15

ಆಕೆಯೂ ಆಕೆಯ ಮನೆಯವರೂ ಬಾಪ್ತಿಸ್ಮ ಮಾಡಿಸಿಕೊಂಡ ಮೇಲೆ--ನಾನು ಕರ್ತನಿಗೆ ನಂಬಿಗಸ್ತಳಾದವಳೆಂದು ನೀವು ತೀರ್ಮಾನಿಸಿದರೆ ನನ್ನ ಮನೆಗೆ ಬಂದು ಇರಬೇಕು ಎಂದು ಆಕೆಯು ನಮ್ಮನ್ನು ಬೇಡಿಕೊಂಡು ಬಲವಂತಮಾಡಿದಳು.

ಅಪೋಸ್ತಲರ ಕೃತ್ಯಗಳು 19:3

ಆಗ ಅವನು ಅವರಿಗೆ--ನೀವು ಯಾವದಕ್ಕಾಗಿ ಬಾಪ್ತಿಸ್ಮ ಮಾಡಿಸಿಕೊಂಡಿರಿ ಎಂದು ಕೇಳಿದನು. ಅದಕ್ಕವರು--ಯೋಹಾನನ ಬಾಪ್ತಿಸ್ಮಕ್ಕನುಸಾರವಾಗಿ ಮಾಡಿಸಿ ಕೊಂಡೆವು ಎಂದು ಹೇಳಿದರು.

ಅಪೋಸ್ತಲರ ಕೃತ್ಯಗಳು 28:28

ಆದಕಾರಣ ದೇವರ ರಕ್ಷಣೆಯು ಅನ್ಯಜನಾಂಗದವರಿಗೆ ಕಳುಹಿಸಲ್ಪಟ್ಟಿದೆ; ಅದನ್ನು ಅವರು ಕೇಳುವರು ಎಂಬದಾಗಿ ನಿಮಗೆ ತಿಳಿದಿರಲಿ ಅಂದನು.

ರೋಮಾಪುರದವರಿಗೆ 6:3

ಯೇಸು ಕ್ರಿಸ್ತನಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡವರಾದ ನಾವೆಲ್ಲರು ಆತನ ಮರಣದಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡೆವೆಂದು ನಿಮಗೆ ತಿಳಿಯದೋ?

ರೋಮಾಪುರದವರಿಗೆ 10:18

ಆದರೆ--ಅವರು ಕೇಳಲಿಲ್ಲವೇನು ಎಂದು ನಾನು ಕೇಳುತ್ತೇನೆ. ಹೌದು ನಿಜವೇ, ಅವರ ಧ್ವನಿಯು ಭೂಮಿಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯ ವರೆಗೂ ವ್ಯಾಪಿಸಿದವು.

1 ಕೊರಿಂಥದವರಿಗೆ 1:13

ಕ್ರಿಸ್ತನು ವಿಭಾಗವಾಗಿದ್ದಾನೋ? ನಿಮಗೋಸ್ಕರ ಶಿಲುಬೆಗೆ ಹಾಕಿಸಿಕೊಂಡವನು ಪೌಲನೋ? ನೀವು ಪೌಲನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಂಡಿರೋ?

1 ಕೊರಿಂಥದವರಿಗೆ 12:4

ವರಗಳಲ್ಲಿ ಬೇರೆ ಬೇರೆ ವಿಧಗಳುಂಟು. ಆದರೆ ಆತ್ಮನು ಒಬ್ಬನೇ;

1 ಕೊರಿಂಥದವರಿಗೆ 15:29

ಸತ್ತವರು ಏಳುವದೇ ಇಲ್ಲವಾದರೆ ಸತ್ತವರಿ ಗೋಸ್ಕರ ಬಾಪ್ತಿಸ್ಮ ಮಾಡಿಸಿಕೊಳ್ಳುವವರು ಏನು ಮಾಡುವರು? ಹಾಗಿದ್ದರೆ ಸತ್ತವರಿಗೊಸ್ಕರ ಅವರು ಬಾಪ್ತಿಸ್ಮ ಮಾಡಿಸಿಕೊಳ್ಳುವದು ಯಾಕೆ?

2 ಕೊರಿಂಥದವರಿಗೆ 13:14

ಕರ್ತನಾದ ಯೇಸುಕ್ರಿಸ್ತನ ಕೃಪೆಯೂ ದೇವರ ಪ್ರೀತಿಯೂ ಪವಿತ್ರಾತ್ಮನ ಅನ್ಯೋನ್ಯತೆಯೂ ನಿಮ್ಮೆಲ್ಲರ ಸಂಗಡವಿರಲಿ. ಆಮೆನ್‌.

ಗಲಾತ್ಯದವರಿಗೆ 3:27

ಹೇಗಂದರೆ ಕ್ರಿಸ್ತನಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡಿರುವ ನೀವೆಲ್ಲರು ಕ್ರಿಸ್ತನನ್ನು ಧರಿಸಿ ಕೊಂಡಿರಿ.

ಎಫೆಸದವರಿಗೆ 2:18

ಆತನ ಮೂಲಕ ನಾವೂ ನೀವೂ ಒಬ್ಬ ಆತ್ಮನನ್ನೇ ಹೊಂದಿದವರಾಗಿ ತಂದೆಯ ಬಳಿಗೆ ಪ್ರವೇಶಿಸುವದಕ್ಕೆ ಮಾರ್ಗವಾಯಿತು.

ಕೊಲೊಸ್ಸೆಯವರಿಗೆ 1:23

ಪೌಲನೆಂಬ ನಾನು ಈ ಸುವಾರ್ತೆಗೆ ಸೇವಕನಾದೆನು; ನೀವು ಕೇಳಿದಂಥ ಮತ್ತು ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲ್ಪಟ್ಟಂಥ ಸುವಾರ್ತೆಯಿಂದ ಉಂಟಾದ ನಿರೀಕ್ಷೆ ಯನ್ನು ಬಿಟ್ಟು ತೊಲಗಿಹೋಗದೆ ಅಸ್ತಿವಾರದ ಮೇಲೆ ನಿಂತು ಸ್ಥಿರವಾಗಿದ್ದು ನಂಬಿಕೆಯಲ್ಲಿ ನೆಲೆಗೊಂಡಿರು ವದಾದರೆ

1 ಪೇತ್ರ 3:21

ಆ ನೀರಿಗೆ ಅನುರೂಪವಾದ ಬಾಪ್ತಿಸ್ಮವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ; (ಅದು ಮೈಕೊಳೆಯನ್ನು ಹೋಗಲಾಡಿ ಸುವಂಥದ್ದಲ್ಲ. ಆದರೆ ದೇವರ ಕಡೆಗಿರುವ ನಮ್ಮ ಒಳ್ಳೇ ಮನಸ್ಸಾಕ್ಷಿಯ ಉತ್ತರವಾಗಿದೆ).ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.

1 ಯೋಹಾನ 5:7

ಪರಲೋಕದಲ್ಲಿ ಸಾಕ್ಷಿಕೊಡುವವರು ಮೂವರಿದ್ದಾರೆ; ಅವರು ಯಾರಂದರೆ ತಂದೆಯು, ವಾಕ್ಯವು ಮತ್ತು ಪರಿಶುದ್ಧಾತ್ಮನು; ಮೂವರಾಗಿರುವ ಇವರು ಒಂದಾಗಿದ್ದಾರೆ.

ಪ್ರಕಟನೆ 1:4

ಯೋಹಾನನು ಆಸ್ಯದಲ್ಲಿರುವ ಏಳು ಸಭೆಗ ಳಿಗೆ--ಇರುವಾತನೂ ಇದ್ದಾತನೂ ಬರುವಾತನೂ ಆಗಿರುವಾತನಿಂದಲೂ ಆತನ ಸಿಂಹಾಸನದ ಮುಂದಿ ರುವ ಏಳು ಆತ್ಮಗಳಿಂದಲೂ ನಂಬತಕ್ಕ ಸಾಕ್ಷಿಯೂ ಸತ್ತವರೊಳಗಿಂದ ಮೊದಲು ಎದ್ದು ಬಂದಾತನೂ ಭೂರಾಜರ ಪ್ರಭುವೂ ಆಗಿರುವ ಯೇಸು ಕ್ರಿಸ್ತ ನಿಂದ

Interlinear

Choose Theme