ಮತ್ತು ಇಗೋ, ಅಲ್ಲಿ ಮಹಾಭೂಕಂಪ ಉಂಟಾಯಿತು; ಯಾಕಂದರೆ ಕರ್ತನ ದೂತನು ಪರಲೋಕದಿಂದ ಇಳಿದು ಬಂದು ಬಾಗಲಿನಿಂದ ಕಲ್ಲನ್ನು ಉರುಳಿಸಿ ಅದರ ಮೇಲೆ ಕೂತುಕೊಂಡನು.
Cross references
ಆಗ ಇಗೋ, ದೇವಾಲಯದ ತೆರೆಯು ಮೇಲಿನಿಂದ ಕೆಳಗಿನವರೆಗೆ ಹರಿದು ಎರಡು ಭಾಗವಾಯಿತು; ಭೂಮಿಯು ಕಂಪಿಸಿತು; ಮತ್ತು ಬಂಡೆ ಗಳು ಸೀಳಿದವು;
ಅವರು--ಸಮಾಧಿಯ ಬಾಗಲಿನಿಂದ ಆ ಕಲ್ಲನ್ನು ನಮಗೋಸ್ಕರ ಯಾರು ಉರುಳಿಸುವರು ಎಂದು ತಮ್ಮತಮ್ಮೊಳಗೆ ಮಾತನಾಡಿ ಕೊಂಡರು.
ಆಗ ಸಮಾಧಿಯಿಂದ ಕಲ್ಲು ಉರುಳಿಸಲ್ಪಟ್ಟದ್ದನ್ನು ಅವರು ಕಂಡರು.
ವಾರದ ಮೊದಲನೆಯ ದಿನದಲ್ಲಿ ಮಗ್ದಲದ ಮರಿಯಳು ಬೆಳಿಗ್ಗೆ ಇನ್ನೂ ಕತ್ತಲಿರುವಾಗಲೇ ಸಮಾಧಿಯ ಬಳಿಗೆ ಬಂದು ಸಮಾಧಿಯಿಂದ ಕಲ್ಲು ತೆಗೆದುಹಾಕಲ್ಪಟ್ಟಿರುವದನ್ನು ಕಂಡಳು.
ಯೇಸು ವಿನ ದೇಹವನ್ನು ಇಟ್ಟಿದ್ದ ಸ್ಥಳದಲ್ಲಿ ಬಿಳೀವಸ್ತ್ರಗಳನ್ನು ಧರಿಸಿದ್ದ ಇಬ್ಬರು ದೂತರು, ಒಬ್ಬನು ತಲೆಯ ಕಡೆಗೂ ಮತ್ತೊಬ್ಬನು ಪಾದಗಳ ಕಡೆಗೂ, ಕೂತಿರುವದನ್ನು ಕಂಡಳು.
ಆಗ ಆಕಸ್ಮಾತ್ತಾಗಿ ಮಹಾಭೂಕಂಪವುಂಟಾಯಿತು; ಸೆರೆಮನೆಯ ಅಸ್ತಿ ವಾರಗಳು ಕದಲಿದವು. ಅದೇ ಕ್ಷಣದಲ್ಲಿ ಕದಗಳೆಲ್ಲಾ ತೆರೆದವು, ಎಲ್ಲರ ಬೇಡಿಗಳು ಕಳಚಿಬಿದ್ದವು.
ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ
ಪರಲೋಕದಿಂದ ಕಳುಹಿಸಲ್ಪಟ್ಟ ಪರಿಶುದ್ಧಾತ್ಮನಿಂದ ನಿಮಗೆ ಸುವಾರ್ತೆಯನ್ನು ಸಾರಿದವರು ಈಗ ನಿಮಗೆ ತಿಳಿಸುವಂಥ ಮತ್ತು ದೂತರು ಕಣ್ಣಿಟ್ಟು ನೋಡಬೇಕೆಂದು ಅಪೇಕ್ಷಿಸುವಂಥ ಕಾರ್ಯಗಳಲ್ಲಿ ತಮಗೋಸ್ಕರವಲ್ಲ ನಮಗೋಸ್ಕರವೇ ಸೇವೆ ಮಾಡಿದರೆಂದು ಅವರಿಗೆ ಪ್ರಕಟವಾಯಿತು.
ಆಗ ಪರಲೋಕದಲ್ಲಿ ದೇವಾಲಯವು ತೆರೆಯ ಲ್ಪಟ್ಟಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.