ಒನೆಯುವ ಮೊರವನ್ನು ಆತನು ತನ್ನ ಕೈಯಲ್ಲಿ ಹಿಡಿದಿದ್ದಾನೆ; ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ತನ್ನ ಗೋಧಿಯನ್ನು ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಟ್ಟುಬಿಡುವನು ಎಂದು ಹೇಳಿದನು.
Cross references
ಅವರು ಗಾಳಿಯ ಮುಂದೆ ಇರುವ ಹುಲ್ಲಿನ ಹಾಗೆಯೂ ಬಿರುಗಾಳಿಯು ಬಡ ಕೊಂಡು ಹೋಗುವ ಹೊಟ್ಟಿನ ಹಾಗೆಯೂ ಇದ್ದಾರೆ.
ಭಕ್ತಿಹೀನರು ಹಾಗಲ್ಲ, ಅವರು ಗಾಳಿ ಬಡು ಕೊಂಡು ಹೋಗುವ ಹೊಟ್ಟಿನ ಹಾಗೆ ಇದ್ದಾರೆ.
ಅವರು ಗಾಳಿಯ ಮುಂದಿನ ಹೊಟ್ಟಿನ ಹಾಗೆ ಆಗಲಿ; ಕರ್ತನ ದೂತನು ಅವರನ್ನು ಹಿಂದಟ್ಟಲಿ, ಸೆಲಾ.
ನಿಮ್ಮಲ್ಲಿನ ಬಲಿಷ್ಠನೇ ಸಣಬಿನ ನಾರು, ಅದನ್ನು ಮಾಡುವವನು ಕಿಡಿ, ಅವೆರಡೂ ಸೇರಿ ಯಾರೂ ಆರಿಸಲಾಗದಂತೆ ಅವು ಸುಟ್ಟುಹೋಗುವವು.
ಅವರು ಸೈನ್ಯಗಳ ಕರ್ತನ ನ್ಯಾಯ ಪ್ರಮಾಣವನ್ನು ನಿರಾಕರಿಸಿದ್ದರಿಂದಲೂ ಇಸ್ರಾಯೇ ಲಿನ ಪರಿಶುದ್ಧನ ವಾಕ್ಯವನ್ನು ಅಸಡ್ಡೆಮಾಡಿದ್ದ ರಿಂದಲೂ ಬೆಂಕಿಯು ಕೊಳ್ಳಿಯನ್ನು ನುಂಗಿಬಿಡುವ ಹಾಗೂ ಜ್ವಾಲೆಯು ಹೊಟ್ಟನ್ನು ಸುಟ್ಟುಬಿಡುವಂತೆಯೂ ಅದರ ಬೇರು ಕೊಳೆಯುವಂತೆಯೂ ಚಿಗುರು ಅವರ ಧೂಳಿನಂತೆಯೂ ತೂರಿಹೋಗುವವು.
ಮಹಾ ಜಲಪ್ರವಾಹ ಗಳು ಘೋಷಿಸುವಂತೆ ಜನಾಂಗಗಳು ಘೋಷಿಸು ತ್ತವೆ. ಆದರೆ ದೇವರು ಅವರನ್ನು ಗದರಿಸುತ್ತಲೇ ಅವರು ದೂರ ಓಡಿಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ ಸುಂಟರಗಾಳಿಯಿಂದ ಸುತ್ತಿ ಯಾಡುವ ದೂಳಿನಂತೆಯೂ ಅಟ್ಟಲ್ಪಡುವರು.ಇಗೋ, ಸಾಯಂಕಾಲದಲ್ಲಿ ಭಯಭ್ರಾಂತಿ; ಉದ ಯಕ್ಕೆ ಮುಂಚೆ ಅವನು ಇಲ್ಲದಂತಾಗುವನು. ನಮ್ಮನ್ನು ಸೂರೆಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆ ಹೊಡೆಯುವವರ ಪಾಡು ಇದೇ.
ರೊಟ್ಟಿಯ ಕಾಳನ್ನು ಕುಟ್ಟುವನೋ? ಅವನು ಯಾವಾಗಲೂ ಅದನ್ನು ಒಕ್ಕುವದಿಲ್ಲ; ಇಲ್ಲವೇ ಅವನ ಬಂಡಿಯ ಚಕ್ರದಿಂದ ಅದರ ಮೇಲೆ ಒಡೆಯುವದಿಲ್ಲ, ಅಥವಾ ಅವನ ಕುದುರೆ ಸವಾರರಿಂದ ಕುಣಿಸುವದಿಲ್ಲ.ಈ ವಿವೇಕವು ಸಹ ಅತಿಶಯಾಲೋಚನಾಪರನೂ ಕಾರ್ಯಸಾಧಕ ಜ್ಞಾನಶ್ರೇಷ್ಠನೂ ಆಗಿರುವ ಸೈನ್ಯಗಳ ಕರ್ತನಿಂದಲೇ ಹೊರಡುತ್ತದೆ.
ಹೊಲ ಉಳುವ ಎತ್ತುಗಳು, ಪ್ರಾಯದ ಕತ್ತೆಗಳು, ಮರದಿಂದಲೂ ಕವೇ ಕೋಲಿನಿಂದಲೂ ತೂರಿದ ಮೇವನ್ನು ತಿನ್ನುವವು.
ನೀನು ಅವುಗಳನ್ನು ತೂರಲು ಗಾಳಿಯು ಅವುಗಳನ್ನು ಬಡಿದುಕೊಂಡು ಹೋಗುವದು, ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವದು; ನೀನಂತೂ ಕರ್ತನಲ್ಲಿ ಸಂತೋಷಿಸಿ, ಇಸ್ರಾಯೇಲಿನ ಪರಿಶುದ್ಧನಲ್ಲಿ ಮಹಿಮೆಹೊಂದುವಿ.
ಅವರು ಮುಂದೆ ಹೋಗಿ ನನಗೆ ವಿರೋಧವಾಗಿ ದ್ರೋಹ ಮಾಡಿದ ಮನುಷ್ಯರ ಹೆಣಗಳನ್ನು ನೋಡುವರು; ಯಾಕಂದರೆ ಅವರ ಹುಳ ಸಾಯುವದಿಲ್ಲ; ಅವರ ಬೆಂಕಿ ಆರುವದಿಲ್ಲ; ಅವರು ಎಲ್ಲಾ ಮನುಷ್ಯರಿಗೆ ಹೇಸಿಕೆಯಾಗುವರು.
ಆ ಸಮಯದಲ್ಲಿ ಈ ಜನರಿಗೂ ಯೆರೂಸಲೇಮಿಗೂ ಹೇಳಲ್ಪಡುವದೇನಂದರೆ--ಒಣ ಗಾಳಿಯು ಅರಣ್ಯದ ಉನ್ನತ ಸ್ಥಳಗಳಿಂದ ನನ್ನ ಜನರ ಕುಮಾರಿಯ ಕಡೆಗೆ ಬರುತ್ತದೆ. ಅದು ತೂರುವದಕ್ಕೂ ಶುದ್ಧಮಾಡುವದಕ್ಕೂ ಆಗತಕ್ಕದ್ದಲ್ಲ.
ಸುಗ್ಗಿ ಹೋಯಿತು, ಬೇಸಿಗೆಕಾಲ ತೀರಿತು; ಆದರೆ ನಾವು ರಕ್ಷಿಸಲ್ಪಡಲಿಲ್ಲ.
ಸತ್ತವರ ವಿಷಯದಲ್ಲಿ ಅವರನ್ನು ಆದರಿಸುವ ಹಾಗೆ ಜನರು ಹರಿದುಕೊಳ್ಳುವದಿಲ್ಲ; ಅವರ ತಂದೆ ತಾಯಿಗಳ ವಿಷಯವಾದರೋ ಅವರಿಗೆ ಆದರಣೆಯ ಪಾತ್ರೆಯನ್ನು ಕುಡಿಯಲು ಕೊಡುವದಿಲ್ಲ.
ಅವನು ಯೆಹೋಯಾಕೀಮನು ಮಾಡಿದ್ದೆಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.
ದಕ್ಷಿಣದ ಅರಣ್ಯಕ್ಕೆ ಹೇಳಬೇಕಾದ ದ್ದೇನಂದರೆ--ಕರ್ತನ ವಾಕ್ಯವನ್ನು ಕೇಳು, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನಲ್ಲಿ ಬೆಂಕಿ ಹಚ್ಚುತ್ತೇನೆ; ಅದು ನಿನ್ನಲ್ಲಿರುವ ಎಲ್ಲಾ ಹಸೀ ಮರಗಳನ್ನು ಮತ್ತು ಎಲ್ಲಾ ಒಣಮರಗಳನ್ನು ತಿಂದುಬಿಡುವದು; ಉರಿಯುವ ಉರಿ ಆರಿಹೋಗು ವದಿಲ್ಲ; ದಕ್ಷಿಣ ಮೊದಲುಗೊಂಡು ಉತ್ತರದ ವರೆಗೂ ಎಲ್ಲಾ ಮುಖಗಳು ಅದರಲ್ಲಿ ಸುಟ್ಟು ಹೋಗುವವು.
ಆದದರಿಂದ ಅವರು ಪ್ರಾತಃ ಕಾಲದ ಮೇಘದ ಹಾಗೆಯೂ ಬೇಗನೆ ಮಾಯ ವಾಗುವ ಇಬ್ಬನಿ ಹಾಗೆಯೂ ಸುಳಿಗಾಳಿಯು ನೆಲದಿಂದ ಬಡಿದುಕೊಂಡು ಹೋಗುವ ಹೊಟ್ಟಿನ ಹಾಗೆಯೂ ಚಿಮಿಣಿಗೆಯಿಂದ ಹೊರಡುವ ಹೊಗೆಯ ಹಾಗೆಯೂ ಇರುವರು.
ಇಗೋ, ಮೊರದಲ್ಲಿ ಧಾನ್ಯವನ್ನು ಕೇರುವಂತೆ ನಾನು ಆಜ್ಞಾಪಿಸಿ ಇಸ್ರಾಯೇಲಿನ ಮನೆತನದವ ರನ್ನು ಎಲ್ಲಾ ಜನಾಂಗಗಳಲ್ಲಿ ಕೇರುವೆನು; ಆದಾಗ್ಯೂ ಒಂದು ಕಾಳಾದರೂ ನೆಲಕ್ಕೆ ಬೀಳುವದಿಲ್ಲ.
ಆದರೆ ಆತನ ಬರುವಿಕೆಯ ದಿವಸದಲ್ಲಿ ಯಾರು ಉಳಿದಾರು? ಆತನು ಪ್ರತ್ಯಕ್ಷವಾಗುವಾಗ ಯಾರು ನಿಲ್ಲುವರು? ಆತನು ಅಕ್ಕಸಾಲಿಗನ ಬೆಂಕಿಯ ಹಾಗೆಯೂ ಅಗಸನ ಚೌಳಿನ ಹಾಗೆಯೂ ಇದ್ದಾನೆ.
ಇಗೋ, ಆ ದಿನವು ಬರುತ್ತದೆ; ಅದು ಒಲೆಯ ಹಾಗೆ ಉರಿಯುವದು; ಆಗ ಗರ್ವಿಷ್ಠರೆಲ್ಲರೂ ಹೌದು, ಕೆಟ್ಟದ್ದನ್ನು ಮಾಡುವವ ರೆಲ್ಲರೂ ಹುಲ್ಲಿನಂತಿರುವರು; ಬರುವ ಆ ದಿನವು ಅವರನ್ನು ಸುಟ್ಟುಬಿಡುವದು; ಬೇರನ್ನಾದರೂ ಕೊಂಬೆ ಯನ್ನಾದರೂ ಅವರಿಗೆ ಬಿಡದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಸುಗ್ಗೀಕಾಲದ ವರೆಗೆ ಎರಡೂ ಜೊತೆಯಲ್ಲಿ ಬೆಳೆಯಲಿ; ಸುಗ್ಗೀಕಾಲದಲ್ಲಿ ನಾನು ಕೊಯ್ಯುವವರಿಗೆ--ಮೊದಲು ಹಣಜಿಯನ್ನು ಕೂಡಿಸಿ ಅದನ್ನು ಸುಡುವದಕ್ಕೆ ಹೊರೆ ಕಟ್ಟಿರಿ; ಆದರೆ ಗೋದಿಯನ್ನು ನನ್ನ ಕಣಜದಲ್ಲಿ ಕೂಡಿಸಿರಿ ಎಂದು ಹೇಳುವೆನು ಅಂದನು.
ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿ ಸುವನು; ಅವರು ಆತಂಕ ಮಾಡುವ ಎಲ್ಲವುಗಳನ್ನೂ ದುಷ್ಟತನ ಮಾಡುವವರನ್ನೂ ಆತನ ರಾಜ್ಯದೊಳಗಿಂದ ಕೂಡಿಸಿ ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು;
ತರುವಾಯ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ.
ಹಾಗೆಯೇ ಲೋಕಾಂತ್ಯ ದಲ್ಲಿ ಇರುವದು; ದೂತರು ಹೊರಟುಬಂದು ನೀತಿವಂತರ ಮಧ್ಯದಿಂದ ಕೆಡುಕರನ್ನು ಪ್ರತ್ಯೇಕಿಸುವರು.
ನಿನ್ನ ಕೈ ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಡಿದುಹಾಕು; ಯಾಕಂದರೆ ಎರಡು ಕೈಗಳು ಳ್ಳವನಾಗಿ ಎಂದಿಗೂ ಆರದ ಬೆಂಕಿಯ ನರಕದೊಳಗೆ ಹೋಗುವದಕ್ಕಿಂತ ಅಂಗಹೀನನಾಗಿ ಜೀವದಲ್ಲಿ ಸೇರು ವದು ನಿನಗೆ ಒಳ್ಳೇದು;
ಅಲ್ಲಿ ಅವರ ಹುಳವು ಸಾಯುವದಿಲ್ಲ ಮತ್ತು ಬೆಂಕಿಯು ಆರುವದಿಲ್ಲ.
ಆತನ ಮೊರವು ಆತನ ಕೈಯಲ್ಲಿದೆ. ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ಗೋದಿಯನ್ನು ತನ್ನ ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಡುವನು ಎಂದು ಹೇಳಿದನು.
ನನ್ನಲ್ಲಿ ಫಲಫಲಿಸದ ಪ್ರತಿಯೊಂದು ಕೊಂಬೆಯನ್ನು ಆತನು ತೆಗೆದುಹಾಕುತ್ತಾನೆ; ಫಲಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚಾಗಿ ಫಲಕೊಡುವ ಹಾಗೆ ಅದನ್ನು ಶುದ್ಧಿ ಮಾಡುತ್ತಾನೆ.