ನೀವು ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪ ವಾಗಿದೆ ಎಂದು ಹೇಳಿದನು.
Cross references
ಅವರು ಸೆರೆ ಒಯ್ಯಲ್ಪಟ್ಟ ದೇಶದಲ್ಲಿ ಪಶ್ಚಾತ್ತಾಪಪಟ್ಟು ತಿರುಗಿ ಕೊಂಡು ತಾವು ಪಾಪಮಾಡಿ ವಕ್ರಬುದ್ಧಿಯಿಂದ ನಡೆದು ದ್ರೋಹಮಾಡಿದೆವೆಂದು ತಮ್ಮನ್ನು ಸೆರೆಯಾಗಿ ಒಯ್ಯುವವರ ದೇಶದಲ್ಲಿ ನಿನಗೆ ವಿಜ್ಞಾಪನೆಮಾಡಿ ಅವರನ್ನು ಸೆರೆಯಾಗಿ ಒಯ್ದ ಶತ್ರುಗಳ ದೇಶದಲ್ಲಿ ತಮ್ಮ ಪೂರ್ಣಹೃದಯದಿಂದಲೂ
ಅದು ನಿನ್ನ ಬೀಜವನ್ನು ಮನೆಗೆ ತರುವದೆಂದೂ ನಿನ್ನ ಕಣದಲ್ಲಿ ಕೂಡಿಸುವದೆಂದೂ ಅದನ್ನು ನಂಬುವಿಯೋ?
ಆದದರಿಂದ ನನ್ನನ್ನು ಅಸಹ್ಯಿಸಿಕೊಂಡು ದೂಳಿಯ ಲ್ಲಿಯೂ ಬೂದಿಯಲ್ಲಿಯೂ ಪಶ್ಚಾತ್ತಾಪ ಪಡುತ್ತೇನೆ ಅಂದನು.
ಆದದರಿಂದ ಇಸ್ರಾಯೇಲಿನ ಮನೆತನದವರೇ, ನಿಮ್ಮ ನಿಮ್ಮ ಮಾರ್ಗಗಳ ಪ್ರಕಾರ ನ್ಯಾಯತೀರಿಸುವೆನಂದು ದೇವ ರಾದ ಕರ್ತನು ಹೇಳುತ್ತಾನೆ; ನಿಮ್ಮ ದುಷ್ಟತ್ವಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು ಪಶ್ಚಾತ್ತಾಪಪಡಿರಿ; ಆಗ ಅಕ್ರಮ ಗಳು ನಿಮ್ಮನ್ನು ಆಳುವದಿಲ್ಲ.
ಅವರಿಗೆ ಹೀಗೆ ಹೇಳು ಎಂದು ದೇವರಾದ ಕರ್ತನು ಹೇಳುತ್ತಾನೆ --ನನ್ನ ಜೀವದಾಣೆ, ನನಗೆ ದುಷ್ಟನ ಸಾವಿನಿಂದ ಸಂತೋಷ ಸಿಗುವದಿಲ್ಲ; ಆದರೆ ಆ ದುಷ್ಟನು ದುರ್ಮಾ ರ್ಗದಿಂದ ತಿರುಗಿಕೊಂಡು ಜೀವಿಸುವದಾದರೆ ಅದರಲ್ಲಿಯೇ ನನಗೆ ಸಂತೋಷಸಿಗುವದು; ಇಸ್ರಾ ಯೇಲಿನ ಮನೆತನದವರೇ, ನೀವು ನಿಮ್ಮ ನಿಮ್ಮ ದುಷ್ಟಮಾರ್ಗಗಳನ್ನು ಬಿಟ್ಟು ತಿರುಗಿರಿ, ನೀವು ತಿರುಗಿ ಕೊಳ್ಳಿರಿ. ನೀವು ಸಾಯುವದು ಯಾಕೆ?
ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.
ಅಂದಿನಿಂದ ಯೇಸು--ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪಿಸಿತು ಎಂದು ಸಾರಿ ಹೇಳುವದಕ್ಕೆ ಪ್ರಾರಂಭಿಸಿದನು.
ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಯಾಕಂದರೆ ಪರಲೋಕರಾಜ್ಯವು ಅವರದು.
ನೀತಿಯ ನಿಮಿತ್ತವಾಗಿ ಹಿಂಸಿಸಲ್ಪಡುವವರು ಧನ್ಯರು; ಯಾಕಂದರೆ ಪರಲೋಕರಾಜ್ಯವು ಅವರದು.
ಆದದರಿಂದ ಯಾವನಾದರೂ ಈ ಆಜ್ಞೆಗಳಲ್ಲಿ ಚಿಕ್ಕದಾದ ಒಂದನ್ನು ಮಾರಿ ಹಾಗೆಯೇ ಜನರಿಗೆ ಬೋಧಿಸಿದರೆ ಅವನು ಪರಲೋಕರಾಜ್ಯದಲ್ಲಿ ಅಲ್ಪನೆಂದು ಕರೆಯಲ್ಪಡುವನು; ಯಾವನಾದರೂ ಇವುಗಳನ್ನು ಕೈಕೊಂಡು ಬೋಧಿಸಿದರೆ ಅವನೇ ಪರಲೋಕ ರಾಜ್ಯದಲ್ಲಿ ದೊಡ್ಡವನೆಂದು ಕರೆಯಲ್ಪಡು ವನು.
ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರು ವಂತೆ ಭೂಲೋಕದಲ್ಲಿಯೂ ನೆರೆವೇರಲಿ.
ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.
ನೀವು ಹೋಗುವಾಗ-- ಪರಲೋಕ ರಾಜ್ಯವು ಸಮಾಪವಾಯಿತು ಎಂದು ಸಾರಿ ಹೇಳಿರಿ.
ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಸ್ತ್ರೀಯರಲ್ಲಿ ಹುಟ್ಟಿದವರೊ ಳಗೆ ಬಾಪ್ತಿಸ್ಮ ಮಾಡಿಸುವ ಯೋಹಾನನಿಗಿಂತ ದೊಡ್ಡವನು ಏಳಲಿಲ್ಲ; ಆದಾಗ್ಯೂ ಪರಲೋಕ ರಾಜ್ಯದಲ್ಲಿ ಅತ್ಯಲ್ಪನಾದವನು ಅವನಿಗಿಂತಲೂ ದೊಡ್ಡ ವನಾಗಿದ್ದಾನೆ.
ತರುವಾಯ ತಾನು ಹೆಚ್ಚಾದ ಮಹತ್ಕಾರ್ಯ ಗಳನ್ನು ನಡಿಸಿದ ಪಟ್ಟಣಗಳು ಮಾನಸಾಂತರಪಡದೆ ಇದ್ದದರಿಂದ ಆತನು ಅವುಗಳನ್ನು ಗದರಿಸತೊ ಡಗಿ --
ನ್ಯಾಯವಿಚಾರಣೆಯಲ್ಲಿ ನಿನೆವೆಯ ಜನರು ಈ ಸಂತತಿಯೊಂದಿಗೆ ಎದ್ದು ಅವರನ್ನು ಖಂಡಿಸು ವರು; ಯಾಕಂದರೆ ಯೋನನು ಸಾರಿದಾಗ ಅವರು ಮಾನಸಾಂತರಪಟ್ಟರು; ಮತ್ತು ಇಗೋ, ಇಲ್ಲಿ ಯೋನ ನಿಗಿಂತಲೂ ದೊಡ್ಡವನಿದ್ದಾನೆ.
ಆತನು ಪ್ರತ್ಯುತ್ತರವಾಗಿ ಅವ ರಿಗೆ--ಪರಲೋಕರಾಜ್ಯದ ಮರ್ಮಗಳನ್ನು ತಿಳುಕೊಳ್ಳು ವದಕ್ಕೆ ನಿಮಗೆ ಕೊಡಲ್ಪಟ್ಟಿದೆ; ಆದರೆ ಅವರಿಗೆ ಕೊಡ ಲ್ಪಟ್ಟಿಲ್ಲ.
ಆತನು ಮತ್ತೊಂದು ಸಾಮ್ಯವನ್ನು ಹೇಳಿದ್ದೇ ನಂದರೆ--ಪರಲೋಕ ರಾಜ್ಯವು ಒಳ್ಳೇ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ್ದ ಒಬ್ಬ ಮನುಷ್ಯನಿಗೆ ಹೋಲಿಕೆ ಯಾಗಿದೆ.
ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದ್ದೇನಂದರೆ--ಒಬ್ಬ ಮನುಷ್ಯನು ತಕ್ಕೊಂಡು ಹೋಗಿ ತನ್ನ ಹೊಲದಲ್ಲಿ ಬಿತ್ತಿದ್ದ ಸಾಸಿವೆ ಕಾಳಿಗೆ ಪರಲೋಕರಾಜ್ಯವು ಹೋಲಿಕೆಯಾಗಿದೆ.
ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದ್ದೇನಂದರೆ--ಒಬ್ಬ ಸ್ತ್ರೀಯು ಹುಳಿಯನ್ನು ತಕ್ಕೊಂಡು ಮೂರು ಸೇರು ಹಿಟ್ಟೆಲ್ಲಾ ಹುಳಿಯಾಗುವ ತನಕ ಅದರಲ್ಲಿ ಅಡಗಿಸಿಟ್ಟ ಹುಳಿಗೆ ಪರಲೋಕ ರಾಜ್ಯವು ಹೋಲಿಕೆಯಾಗಿದೆ.
ಪರಲೋಕರಾಜ್ಯವು ಹೊಲದಲ್ಲಿ ಬಚ್ಚಿಟ್ಟಿದ ಸಂಪತ್ತಿಗೆ ಹೋಲಿಕೆಯಾಗಿದೆ; ಅದನ್ನು ಒಬ್ಬ ಮನು ಷ್ಯನು ಕಂಡುಕೊಂಡು ಬಚ್ಚಿಟ್ಟು ಅದರ ಸಂತೋಷದ ನಿಮಿತ್ತ ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಳ್ಳುತ್ತಾನೆ.
ಪರಲೋಕರಾಜ್ಯವು ಸಮುದ್ರದಲ್ಲಿ ಬೀಸಲ್ಪಟ್ಟು ಎಲ್ಲಾ ತರವಾದದ್ದನ್ನು (ಮಾನುಗಳನ್ನು) ಕೂಡಿಸಿದ ಬಲೆಗೆ ಹೋಲಿಕೆಯಾಗಿದೆ.
ಆತನು ಅವರಿಗೆ--ಆದಕಾರಣ ಪರಲೋಕ ರಾಜ್ಯದ ವಿಷಯವಾಗಿ ಶಿಕ್ಷಣಹೊಂದಿದ ಪ್ರತಿಯೊಬ್ಬ ಶಾಸ್ತ್ರಿಯು ತನ್ನ ಬೊಕ್ಕಸದೊಳಗಿಂದ ಹೊಸ ಮತ್ತು ಹಳೆಯ ವಸ್ತುಗಳನ್ನು ಹೊರಗೆ ತರುವ ಒಬ್ಬ ಮನೇ ಯಜಮಾನನಿಗೆ ಹೋಲಿಕೆಯಾಗಿದ್ದಾನೆ ಅಂದನು.
ಅದೇ ಸಮಯದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು--ಪರಲೋಕ ರಾಜ್ಯದಲ್ಲಿ ಅತಿ ದೊಡ್ಡವನು ಯಾರು ಎಂದು ಕೇಳಿದರು.
ಆದದರಿಂದ ಪರಲೋಕ ರಾಜ್ಯವು ತನ್ನ ಸೇವಕರಿಂದ ಲೆಕ್ಕವನ್ನು ತಕ್ಕೊಳ್ಳಬೇಕೆಂದಿದ್ದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.
ತನ್ನ ದ್ರಾಕ್ಷೇ ತೋಟಕ್ಕೆ ಕೂಲಿಯಾಳು ಗಳನ್ನು ಕರೆಯುವದಕ್ಕಾಗಿ ಬೆಳಿಗ್ಗೆ ಹೊರಟ ಮನೇ ಯಜಮಾನನಿಗೆ ಪರಲೋಕರಾಜ್ಯವು ಹೋಲಿ ಕೆಯಾಗಿದೆ.
ಅವನು ಪ್ರತ್ಯುತ್ತರವಾಗಿ--ನಾನು ಹೋಗುವದಿಲ್ಲ ಎಂದು ಹೇಳಿ ತರುವಾಯ ಪಶ್ಚಾ ತ್ತಾಪಪಟ್ಟು ಹೋದನು.
ಪರಲೋಕ ರಾಜ್ಯವು ತನ್ನ ಮಗನ ಮದುವೆ ಮಾಡಿದ ಒಬ್ಬಾನೊಬ್ಬ ಅರಸನಿಗೆ ಹೋಲಿಕೆಯಾಗಿದೆ.
ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ.
ಇದಲ್ಲದೆ ಪರಲೋಕ ರಾಜ್ಯವು ತಮ್ಮ ದೀಪಗಳನ್ನು ತಕ್ಕೊಂಡು ಮದಲಿಂಗ ನನ್ನು ಎದುರುಗೊಳ್ಳುವದಕ್ಕಾಗಿ ಹೊರಟುಹೋದ ಹತ್ತುಮಂದಿ ಕನ್ಯೆಯರಿಗೆ ಹೋಲಿಕೆಯಾಗಿರುವದು.
ಯಾಕಂದರೆ ಪರಲೋಕರಾಜ್ಯವು ದೂರ ದೇಶಕ್ಕೆ ಪ್ರಯಾಣಮಾಡುವ ಒಬ್ಬ ಮನುಷ್ಯನು ತನ್ನ ಸ್ವಂತ ಸೇವಕರನ್ನು ಕರೆದು ಅವರಿಗೆ ತನ್ನ ಆಸ್ತಿಯನ್ನು ಒಪ್ಪಿಸಿದಂತೆ ಇದೆ.
ಯೋಹಾನನು ಅಡವಿಯಲ್ಲಿ ಬಾಪ್ತಿಸ್ಮ ಮಾಡಿಸುತ್ತಾ ಪಾಪಗಳ ಪರಿ ಹಾರಕ್ಕಾಗಿ ಮಾನಸಾಂತರದ ಬಾಪ್ತಿಸ್ಮವನ್ನು ಸಾರಿದನು.
ಕಾಲವು ಪರಿಪೂರ್ಣವಾಯಿತು. ದೇವರ ರಾಜ್ಯವು ಸವಿಾಪ ವಾಗಿದೆ; ನೀವು ಮಾನಸಾಂತರಪಟ್ಟು ಸುವಾರ್ತೆ ಯನ್ನು ನಂಬಿರಿ ಅಂದನು.
ಅವರು ಹೊರಟು ಹೋಗಿ ಜನರು ಮಾನಸಾಂತರಪಡಬೇಕೆಂದು ಸಾರಿದರು.
ಆತನು ತನ್ನ ಕಣ್ಣುಗಳನ್ನೆತ್ತಿ ತನ್ನ ಶಿಷ್ಯರ ಕಡೆಗೆ ನೋಡಿ--ಬಡವರಾದ ನೀವು ಧನ್ಯರು; ಯಾಕಂದರೆ ದೇವರ ರಾಜ್ಯವು ನಿಮ್ಮದೇ.
ದೇವರ ರಾಜ್ಯವನ್ನು ಸಾರುವದಕ್ಕೂ ರೋಗಿಗಳನ್ನು ಸ್ವಸ್ಥಮಾಡುವದಕ್ಕೂ ಆತನು ಅವರನ್ನು ಕಳುಹಿಸಿಕೊಟ್ಟನು.
ಅಲ್ಲಿರುವ ರೋಗಿಗಳನ್ನು ಸ್ವಸ್ಥಮಾಡಿರಿ; ಮತ್ತು ಅವರಿಗೆ--ದೇವರ ರಾಜ್ಯವು ನಿಮ್ಮ ಸವಿಾಪಕ್ಕೆ ಬಂದಿದೆ ಎಂದು ಹೇಳಿರಿ.
ಆದರೆ ನಾನು ದೇವರ ಹಸ್ತದಿಂದಲೇ ದೆವ್ವಗಳನ್ನು ಹೊರಡಿಸುವದಾದರೆ ದೇವರ ರಾಜ್ಯವು ನಿಸ್ಸಂದೇಹವಾಗಿ ನಿಮ್ಮ ಬಳಿಗೆ ಬಂದಿದೆಯಲ್ಲಾ.
ಆದರೆ--ಹಾಗಲ್ಲವೆಂದು ನಾನು ನಿಮಗೆ ಹೇಳುತ್ತೇನೆ; ನೀವು ಮಾನಸಾಂತರ ಪಡದೆಹೋದರೆ ನೀವೆಲ್ಲರೂ ಅವರಂತೆಯೇ ನಾಶವಾ ಗುವಿರಿ.
ಆದರೆ--ಹಾಗಲ್ಲ ವೆಂದು ನಾನು ನಿಮಗೆ ಹೇಳುತ್ತೇನೆ; ನೀವು ಮಾನ ಸಾಂತರಪಡದೆ ಹೋದರೆ ನೀವೆಲ್ಲರೂ ಅವರಂತೆಯೇ ನಾಶವಾಗುವಿರಿ ಅಂದನು.