ಮತ್ತು -- ಅಬ್ರಹಾಮನು ನಮಗೆ ತಂದೆಯಾಗಿದ್ದಾನೆ ಎಂದು ನಿಮ್ಮ ನಿಮ್ಮೊಳಗೆ ಅಂದು ಕೊಳ್ಳಬೇಡಿರಿ; ಯಾಕಂದರೆ ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸ ಶಕ್ತನೆಂದು ನಾನು ನಿಮಗೆ ಹೇಳುತ್ತೇನೆ.
Cross references
ಮನುಷ್ಯಪುತ್ರನೇ, ಇಸ್ರಾಯೇಲಿನ ದೇಶದ ಹಾಳು ಪ್ರದೇಶಗಳಲ್ಲಿ ವಾಸಿಸುವರು-- ಅಬ್ರಹಾಮನೇ ಒಬ್ಬನಾಗಿದ್ದು ದೇಶವನ್ನು ಸ್ವತಂತ್ರಿಸಿ ಕೊಂಡನು, ಆದರೆ ನಾವು ಬಹಳ ಜನರಾಗಿದ್ದು ದೇಶವು ನಮಗೆ ಸ್ವಾಸ್ತ್ಯವಾಗಿ ಕೊಡಲ್ಪಟ್ಟಿದೆ ಎಂದು ಹೇಳುತ್ತಾರೆ.
ನಾನು ನಿಮಗೆ ಹೇಳುವದೇನಂದರೆ--ಬಹಳ ಜನರು ಪೂರ್ವದಿಂದಲೂ ಪಶ್ಚಿಮದಿಂದಲೂ ಬಂದು ಪರ ಲೋಕರಾಜ್ಯದಲ್ಲಿ ಅಬ್ರಹಾಮ್ ಇಸಾಕ್ ಯಾಕೋಬ್ ಅವರೊಂದಿಗೆ ಕೂತುಕೊಳ್ಳುವರು.
ಯಾಕಂದರೆ ಮನುಷ್ಯರ ಹೃದಯದೊಳಗಿಂದ ಹೊರಡುವಂಥದ್ದು ಅಂದರೆ ಕೆಟ್ಟಆಲೋಚನೆಗಳು ವ್ಯಭಿಚಾರಗಳು ಹಾದರಗಳು ಕೊಲೆಗಳು
ಹಾಗಾದರೆ ಮಾನಸಾ ಂತರಕ್ಕೆ ಯೋಗ್ಯವಾದ ಫಲಗಳನ್ನು ಫಲಿಸಿರಿ,--ಅಬ್ರಹಾಮನು ನಮಗೆ ತಂದೆಯಾಗಿದ್ದಾನೆಂದು ನಿಮ್ಮೊಳಗೆ ಅಂದುಕೊಳ್ಳುವದಕ್ಕೆ ಆರಂಭಿಸಬೇ ಡಿರಿ; ಯಾಕಂದರೆ--ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸಶಕ್ತನೆಂದು ನಾನು ನಿಮಗೆ ಹೇಳುತ್ತೇನೆ.
ಆದರೆ ಯೇಸು ಅವರ ಆಲೋಚನೆಗಳನ್ನು ತಿಳಿದು ಪ್ರತ್ಯುತ್ತರವಾಗಿ ಅವರಿಗೆ--ನೀವು ನಿಮ್ಮ ಹೃದಯಗಳಲ್ಲಿ ಅಂದು ಕೊಳ್ಳುತ್ತಿರುವದೇನು?
ಆಗ ಆತನನ್ನು ಕರೆದ ಫರಿಸಾಯನು ಅದನ್ನು ನೋಡಿ ತನ್ನೊಳಗೆ--ಈ ಮನುಷ್ಯನು ಒಬ್ಬ ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟುತ್ತಿದ್ದವಳು ಯಾರು ಎಂದೂ ಎಂಥತರವಾದ ಹೆಂಗಸು ಎಂದೂ ತಿಳಿದುಕೊಳ್ಳುತ್ತಿದ್ದನು; ಯಾಕಂದರೆ ಅವಳು ಒಬ್ಬ ಪಾಪಿ ಎಂದು ತನ್ನೊಳಗೆ ಅಂದು ಕೊಂಡನು.
ಆಗ ಅವನು ತನ್ನೊಳಗೆ--ನಾನೇನು ಮಾಡಲಿ? ನನಗಿರುವ ಬೆಳೆಯನ್ನು ತುಂಬಿಡುವದಕ್ಕೆ ನನಗೆ ಸ್ಥಳವಿಲ್ಲ ಎಂದು ಆಲೋಚಿಸಿ ಅವನು--
ಅವನು--ತಂದೆಯಾದ ಅಬ್ರಹಾ ಮನೇ, ನನ್ನ ಮೇಲೆ ಕರುಣೆ ಇಟ್ಟು ಲಾಜರನು ತನ್ನ ತುದಿಬೆರಳನ್ನು ನೀರಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡುವಂತೆ ಅವನನ್ನು ಕಳುಹಿಸು; ಯಾಕಂದರೆ ನಾನು ಈ ಉರಿಯಲ್ಲಿ ಯಾತನೆಪಡುತ್ತಾ ಇದ್ದೇನೆ ಎಂದು ಕೂಗಿ ಹೇಳಿದನು.
ಆಗ ಆತನು ಪ್ರತ್ಯುತ್ತರವಾಗಿ ಅವ ರಿಗೆ--ಇವರು ಸುಮ್ಮನಿರುವದಾದರೆ ಈ ಕಲ್ಲುಗಳು ಕೂಡಲೆ ಕೂಗುವವು ಎಂದು ನಾನು ನಿಮಗೆ ಹೇಳು ತ್ತೇನೆ ಅಂದನು.
ಅದಕ್ಕೆ ಅವರು ಪ್ರತ್ಯುತ್ತರವಾಗಿ ಆತನಿಗೆ--ನಾವು ಅಬ್ರಹಾಮನ ಸಂತತಿಯವರಾಗಿರಲಾಗಿ ಯಾವ ಮನುಷ್ಯನಿಗೂ ಎಂದಿಗೂ ಗುಲಾಮರಾಗಿರಲಿಲ್ಲ; ಹಾಗಾದರೆ--ನಿಮಗೆ ಬಿಡುಗಡೆಯಾಗುವದೆಂದು ನೀನು ಹೇಗೆ ಹೇಳುತ್ತೀ ಅಂದರು.
ಅವರು ಪ್ರತ್ಯುತ್ತರವಾಗಿ ಆತನಿಗೆ--ಅಬ್ರಹಾಮನು ನಮ್ಮ ತಂದೆ ಅಂದರು; ಅದಕ್ಕೆ ಯೇಸು ಅವರಿಗೆ--ನೀವು ಅಬ್ರಹಾಮನ ಮಕ್ಕಳಾಗಿದ್ದರೆ ಅಬ್ರಹಾಮನ ಕ್ರಿಯೆಗಳನ್ನು ಮಾಡು ತ್ತಿದ್ದಿರಿ.
ಸತ್ತುಹೋದ ನಮ್ಮ ತಂದೆ ಯಾದ ಅಬ್ರಹಾಮನಿಗಿಂತಲೂ ನೀನು ದೊಡ್ಡ ವನೋ? ಪ್ರವಾದಿಗಳೂ ಸತ್ತುಹೋದರು. ನಿನ್ನನ್ನು ಯಾರೆಂದು ನೀನು ಮಾಡಿಕೊಳ್ಳುತ್ತೀ ಎಂದು ಕೇಳಲು
ಜನರೇ, ಸಹೋದರರೇ, ಅಬ್ರಹಾಮನ ವಂಶ ಸ್ಥರೇ, ನಿಮ್ಮಲ್ಲಿ ದೇವರಿಗೆ ಭಯಪಡುವವರೇ, ನಿಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಿಯದೆ.
ದೇವರು ಮೊದಲೇ ಅನ್ಯಜನರನ್ನು ದರ್ಶಿಸಿ ತನ್ನ ಹೆಸರಿಗಾಗಿ ಅವರೊ ಳಗಿಂದ ಒಂದು ಪ್ರಜೆಯನ್ನು ಆರಿಸಿಕೊಂಡ ವಿಧವನ್ನು ಸಿಮೆಯೋನನು ವಿವರಿಸಿದನಷ್ಟೆ.
ಹಾಗಾದರೆ ನಮ್ಮ ಮೂಲಪಿತೃವಾಗಿರುವ ಅಬ್ರಹಾಮನು ಶರೀರಸಂಬಂಧವಾಗಿ ಏನು ಪಡೆದುಕೊಂಡನೆಂದು ಹೇಳಬೇಕು?
ಆಮೇಲೆ ನೀತಿಗೆ ಮುದ್ರೆಯಾಗಿ ಸುನ್ನತಿಯನ್ನು ಗುರುತಾಗಿ ಹೊಂದಿದನು. ಇದು ಸುನ್ನತಿಯಾಗುವದಕ್ಕೆ ಮೊದಲೇ ಅವನಿಗಿದ್ದ ನಂಬಿಕೆಯಿಂದಾಯಿತು. ಹೀಗೆ ಅವನು ನಂಬುವವರೆಲ್ಲರಿಗೆ ಅಂದರೆ ಅವರು ಸುನ್ನತಿ ಯಿಲ್ಲದವರಾದಾಗ್ಯೂ ಅವರಿಗೆ ತಂದೆಯಾದನು; ಹೀಗೆ ಅವರೂ ನೀತಿವಂತರೆಂದು ಎಣಿಸಲ್ಪಡುವರು.
ಇಲ್ಲವೆ ಅವರು ಅಬ್ರಹಾಮನ ಸಂತತಿಯವರಾದ ಕಾರಣ ಅವರೆ ಲ್ಲರೂ ಮಕ್ಕಳಲ್ಲ; ಆದರೆ--ಇಸಾಕನಲ್ಲಿಯೇ ನಿನ್ನ ಸಂತ ತಿಯು ಕರೆಯಲ್ಪಡುವದು ಎಂಬದೇ.
ಆದರೆ ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡಿದ್ದಾನೆ; ದೇವರು ಬಲಿಷ್ಟರನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬಲಹೀನರನ್ನು ಆರಿಸಿಕೊಂಡಿದ್ದಾನೆ;
ಹೇಗಂದರೆ ಕ್ರಿಸ್ತನಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡಿರುವ ನೀವೆಲ್ಲರು ಕ್ರಿಸ್ತನನ್ನು ಧರಿಸಿ ಕೊಂಡಿರಿ.
ಯಾಕಂದರೆ ದಾಸಿಯಿಂದ ಒಬ್ಬನು, ಸ್ವತಂತ್ರಳಿಂದ ಒಬ್ಬನು ಹೀಗೆ ಅಬ್ರಹಾಮನಿಗೆ ಇಬ್ಬರು ಪುತ್ರರಿದ್ದರೆಂದು ಬರೆಯಲ್ಪಟ್ಟಿದೆ.
ಇದಲ್ಲದೆ ನೀವು ಆ ಕಾಲದಲ್ಲಿ ಕ್ರಿಸ್ತನಿಲ್ಲದವರು ಇಸ್ರಾಯೇಲಿನ ಬಾಧ್ಯತೆಯಲ್ಲಿ ಹಕ್ಕಿಲ್ಲದವರೂ ಪರಕೀಯರು ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಿಗೆ ಅನ್ಯರೂ ನಿರೀಕ್ಷೆ ಯಿಲ್ಲದವರೂ ಈ ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂದು ಜ್ಞಾಪಕಮಾಡಿಕೊಳ್ಳಿರಿ.