ಮತ್ತು ಆತನು ನಜರೇತನ್ನು ಬಿಟ್ಟು ಜೆಬುಲೋನ್, ನೆಫ್ತಲೀಮ್ ಮೇರೆಗಳ ಸಮುದ್ರತೀರದಲ್ಲಿರುವ ಕಪೆರ್ನೌಮಿಗೆ ಬಂದು ಅಲ್ಲಿ ವಾಸಿಸಿದನು.
Cross references
ಮೂರನೇ ಚೀಟು ಬಿದ್ದ ಭಾಗ ಜೆಬುಲೂನನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಅವರ ಬಾಧ್ಯತೆಯ ಮೇರೆ ಸಾರೀದಿನ ವರೆಗೂ ಆಯಿತು.
ಆರನೇ ಚೀಟು ನಫ್ತಾಲಿಯ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಬಿತ್ತು.
ಆಕಾಶದವರೆಗೂ ಹೆಚ್ಚಿಸಲ್ಪಟ್ಟ ಕಪೆರ್ನೌಮೇ, ನೀನು ಕೆಳಗೆ ಪಾತಾಳಕ್ಕೆ ದೊಬ್ಬಲ್ಪಡುವಿ; ಯಾಕಂದರೆ ನಿನ್ನೊಳಗೆ ನಡೆದಿರುವ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ ಅದು ಈ ದಿನದವರೆಗೂ ಇರುತ್ತಿತ್ತು.
ತರುವಾಯ ಅವರು ಕಪೆರ್ನೌಮಿಗೆ ಬಂದಾಗ ತೆರಿಗೆ ಹಣವನ್ನು ವಸೂಲಿಮಾಡುವವರು ಪೇತ್ರನ ಬಳಿಗೆ ಬಂದು--ನಿಮ್ಮ ಬೋಧಕನು ತೆರಿಗೆಯನ್ನು ಸಲ್ಲಿಸುವದಿಲ್ಲವೋ ಎಂದು ಕೇಳಿದರು. ಅದಕ್ಕೆ ಅವನು--ಸಲ್ಲಿಸುವನು ಅಂದನು.
ಆಗ ಅವರು ಕಪೆರ್ನೌಮಿಗೆ ಹೋದರು; ಕೂಡಲೆ ಆತನು ಸಬ್ಬತ್ ದಿನದಲ್ಲಿ ಸಭಾಮಂದಿರ ದೊಳಗೆ ಪ್ರವೇಶಿಸಿ ಬೋಧಿಸಿದನು.
ಆತನು ಅವರಿಗೆ--ವೈದ್ಯನೇ, ನಿನ್ನನ್ನು ನೀನೇ ವಾಸಿ ಮಾಡಿಕೋ ಎಂಬ ಈ ನಾನ್ನುಡಿಯನ್ನು ನೀವು ನನಗೆ ನಿಶ್ಚಯವಾಗಿ ಹೇಳಿ ಕಪೆರ್ನೌಮಿನಲ್ಲಿ ಯಾವದು ನಡೆಯಿತೆಂದು ನಾವು ಕೇಳಿದೆವೋ ಅದನ್ನು ಇಲ್ಲಿ ನಿನ್ನ ದೇಶದಲ್ಲಿಯೂ ಮಾಡು ಎಂದು ಹೇಳುವಿರಿ ಅಂದನು.
ಆದರೆ ಆತನು ಅವರ ಮಧ್ಯದಿಂದ ಹಾದು ಹೊರಟು ಹೋದನು.
ಇದಾದ ಮೇಲೆ ಆತನೂ ಆತನ ತಾಯಿಯೂ ಆತನ ಸಹೋದರರೂ ಆತನ ಶಿಷ್ಯರೂ ಕಪೆರ್ನೌಮಿಗೆ ಹೋಗಿ ಅಲ್ಲಿ ಕೆಲವು ದಿವಸ ಇದ್ದರು.
ಹೀಗೆ ಯೇಸು ತಾನು ನೀರನ್ನು ದ್ರಾಕ್ಷಾರಸ ವನ್ನಾಗಿ ಮಾಡಿದ ಗಲಿಲಾಯದ ಕಾನಾನಿಗೆ ತಿರಿಗಿ ಬಂದನು. ಆಗ ಕಪೆರ್ನೌಮಿನಲ್ಲಿದ್ದ ಒಬ್ಬ ಪ್ರಧಾನನ ಮಗನು ಅಸ್ವಸ್ಥನಾಗಿದ್ದನು.
ದೋಣಿಯನ್ನು ಹತ್ತಿ ಸಮುದ್ರಮಾರ್ಗವಾಗಿ ಕಪೆರ್ನೌಮಿಗೆ ಹೋಗುತ್ತಿ ದ್ದರು. ಆಗಲೇ ಕತ್ತಲಾಗಿತ್ತು , ಯೇಸು ಅವರ ಬಳಿಗೆ ಬಂದಿರಲಿಲ್ಲ.
ಆಗ ಯೇಸು ಮತ್ತು ಆತನ ಶಿಷ್ಯರು ಅಲ್ಲಿ ಇಲ್ಲದಿರುವದನ್ನು ಜನರು ನೋಡಿ ಅವರು ಸಹ ದೋಣಿಗಳಲ್ಲಿ ಹತ್ತಿ ಯೇಸುವನ್ನು ಹುಡುಕುತ್ತಾ ಕಪೆರ್ನೌಮಿಗೆ ಬಂದರು.
ಕಪೆರ್ನೌಮಿನಲ್ಲಿ ಬೋಧಿಸುತ್ತಿರುವಾಗ ಸಭಾ ಮಂದಿರದಲ್ಲಿ ಆತನು ಇವುಗಳನ್ನು ಹೇಳಿದನು.