ಮತ್ತು ಯೇಸು ಗಲಿಲಾಯ ಸಮುದ್ರದ ತೀರದಲ್ಲಿ ನಡೆದುಹೋಗುತ್ತಿದ್ದಾಗ ಪೇತ್ರನೆಂದು ಕರೆಯಲ್ಪಟ್ಟ ಸೀಮೋನ, ಅವನ ಸಹೋದರನಾದ ಅಂದ್ರೆಯ ಎಂಬ ಇಬ್ಬರು ಸಹೋದರರು ಸಮುದ್ರ ದಲ್ಲಿ ಬಲೆ ಬೀಸುವದನ್ನು ಕಂಡನು; ಯಾಕಂದರೆ ಅವರು ಬೆಸ್ತರಾಗಿದ್ದರು.
Cross references
ಮೋಶೆಯು ತನ್ನ ಮಾವನಾಗಿರುವ ಮಿದ್ಯಾನಿನ ವೈದಿಕನಾದ ಇತ್ರೋವನ ಮಂದೆಯನ್ನು ಮೇಯಿಸುತ್ತಿರಲಾಗಿ ಅರಣ್ಯದ ಹಿಂಭಾ ಗಕ್ಕೆ ನಡಿಸಿಕೊಂಡುಹೋಗಿ ಹೋರೇಬ್ ಎಂಬ ದೇವರ ಬೆಟ್ಟಕ್ಕೆ ಬಂದನು.
ಆದದರಿಂದ ಈಗ ಬಾ, ನಾನು ನಿನ್ನನ್ನು ಫರೋಹನ ಬಳಿಗೆ ಕಳುಹಿಸುತ್ತೇನೆ. ಇಸ್ರಾಯೇಲ್ ಮಕ್ಕಳಾದ ನನ್ನ ಜನರನ್ನು ನೀನು ಐಗುಪ್ತದೊಳಗಿಂದ ಹೊರಗೆ ಬರಮಾಡಬೇಕು ಅಂದನು.
ಶೆಫಾಮಿನಿಂದ ಮೇರೆ ಆಯಿನಿನ ಪೂರ್ವದಲ್ಲಿರುವ ರಿಬ್ಲಕ್ಕೆ ಇಳಿದು ಕಿನ್ನೆರೆತ್ ಸಮುದ್ರದ ಪೂರ್ವ ತೀರವನ್ನು ಮುಟ್ಟಲಿ.
ಬೈಲನ್ನೂ ಯೊರ್ದನನ್ನೂ ಅದರ ಸೀಮೆಯನ್ನೂ ಕಿನ್ನೆರೆತ್ ಮೊದಲುಗೊಂಡು ಪೂರ್ವದಲ್ಲಿರುವ ಅಷ್ಡೋದ್ ಪಿಸ್ಗಾದ ಕೆಳಗಿರುವ ಉಪ್ಪಿನಸಮುದ್ರವಾದ ಬೈಲು ಸಮುದ್ರದ ವರೆಗೆ ಕೊಟ್ಟೆನು.
ಕರ್ತನ ದೂತನು ಬಂದು ಅಬೀಯೆಜೆರನಾದ ಯೋವಾಷನು ಹೊಂದಿದ ಒಫ್ರದಲ್ಲಿರುವ ಏಲಾ ಮರದ ಕೆಳಗೆ ಕುಳಿತನು. ಆಗ ಯೋವಾಷನ ಮಗ ನಾದ ಗಿದ್ಯೋನನು ಮಿದ್ಯಾನ್ಯರಿಗೆ ಮರೆಯಾಗುವ ಹಾಗೆ ದ್ರಾಕ್ಷೇ ಆಲೆಯ ಬಳಿಯಲ್ಲಿ ಗೋಧಿಯನ್ನು ಬಡಿಯುತ್ತಿದ್ದನು.
ಹಾಗೆಯೇ ಅವನು ಅಲ್ಲಿಂದ ಹೊರಟು ಶಾಫಾ ಟನ ಮಗನಾದ ಎಲೀಷನನ್ನು ಕಂಡುಕೊಂಡನು; ಅವನು ತನ್ನ ಮುಂದೆ ಇರುವ ಹನ್ನೆರಡು ಜೋಡು ಎತ್ತುಗಳಿಂದ ಉಳುತ್ತಿದ್ದನು; ಅವನು ಹನ್ನೆರಡನೇ ಜೋಡಿನ ಸಂಗಡ ಇದ್ದನು. ಎಲೀಯನು ಅವನ ಪಕ್ಕದಲ್ಲಿ ಹಾದು ಹೋಗಿ ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು.
ಇದಲ್ಲದೆ ತನ್ನ ಸೇವಕನಾದ ದಾವೀದನನ್ನು ಆದುಕೊಂಡು, ಕುರಿ ಹಟ್ಟಿಗಳಿಂದ ಅವನನ್ನು ತೆಗೆದು,
ಆಗ ಆಮೋಸನು ಅಮಚ್ಯನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ--ನಾನು ಪ್ರವಾದಿಯಲ್ಲ, ಪ್ರವಾ ದಿಯ ಮಗನೂ ಅಲ್ಲ; ಆದರೆ ನಾನು ಕುರುಬನೂ ಹತ್ತಿ ಹಣ್ಣುಗಳನ್ನು ಕೂಡಿಸುವವನೂ ಆಗಿದ್ದೇನೆ.
ಕ್ರಿಸ್ತನೆಂದು ಕರೆಯಲ್ಪಟ್ಟ ಯೇಸು ಮರಿ ಯಳಲ್ಲಿ ಹುಟ್ಟಿದನು; ಆಕೆಯ ಗಂಡನಾದ ಯೋಸೇ ಫನು ಯಾಕೋಬನಿಂದ ಹುಟ್ಟಿದನು.
ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು: ಮೊದಲನೆಯವನು ಪೇತ್ರನೆಂದು ಕರೆಯಲ್ಪಟ್ಟ ಸೀಮೋನ, ಅವನ ಸಹೋದರನಾದ ಅಂದ್ರೆಯ, ಜೆಬೆದಾಯನ ಮಗನಾದ ಯಾಕೋಬ ಮತ್ತು ಅವನ ಸಹೋದರನಾದ ಯೋಹಾನ,
ಇದಾದ ಮೇಲೆ ಯೇಸು ಅಲ್ಲಿಂದ ಹೊರಟು ಗಲಿಲಾಯ ಸಮುದ್ರದ ಸಮಾಪಕ್ಕೆ ಬಂದನು; ಮತು ಆತನು ಬೆಟ್ಟವನ್ನು ಹತ್ತಿ ಅಲ್ಲಿ ಕೂತುಕೊಂಡನು.
ನಾನು ಸಹ ನಿನಗೆ ಹೇಳುವದೇ ನಂದರೆ--ನೀನು ಪೇತ್ರನು, ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು; ನರಕದ ದ್ವಾರಗಳು ಅದನ್ನು ಜಯಿಸಲಾರವು.
ಆತನು ಗಲಿಲಾಯ ಸಮುದ್ರದ ಬಳಿಯಲ್ಲಿ ತಿರುಗಾಡುತ್ತಿರುವಾಗ ಸೀಮೋನನೂ ಅವನ ಸಹೋ ದರನಾದ ಅಂದ್ರೆಯನೂ ಸಮುದ್ರದಲ್ಲಿ ಬಲೆ ಬೀಸುತ್ತಿರುವದನ್ನು ಆತನು ಕಂಡನು; ಯಾಕಂದರೆ ಅವರು ಬೆಸ್ತರಾಗಿದ್ದರು.
ತಿರಿಗಿ ಆತನು ತೂರ್ ಸೀದೋನ್ ತೀರಗಳಿಂದ ಹೊರಟು ದೆಕಪೊಲಿಯ ತೀರಗಳ ಮಧ್ಯದಿಂದ ಗಲಿ ಲಾಯ ಸಮುದ್ರಕ್ಕೆ ಬಂದನು.
ಇದಾದ ಮೇಲೆ ಆತನು ಗೆನೇಜರೆತ್ ಕೆರೆಯ ಬಳಿಯಲ್ಲಿ ನಿಂತುಕೊಂಡಿದ್ದಾಗ ಜನರು ದೇವರ ವಾಕ್ಯವನ್ನು ಕೇಳುವದಕ್ಕಾಗಿ ಆತನ ಮೇಲೆ ನೂಕಾಡುತ್ತಿದ್ದರು.
ಅವರು (ಆತನು ಪೇತ್ರನೆಂದು ಕರೆದ) ಸೀಮೋನ, ಅವನ ಸಹೋದರನಾದ ಅಂದ್ರೆಯ, ಯಾಕೋಬ,ಯೋಹಾನ, ಫಿಲಿಪ್ಪ, ಬಾರ್ತೊಲೊಮಾಯ,
ಯೋಹಾ ನನ ಮಾತನ್ನು ಕೇಳಿ ಆತನನ್ನು ಹಿಂಬಾಲಿಸಿದ ಇಬ್ಬರಲ್ಲಿ ಸೀಮೋನ್ ಪೇತ್ರನ ಸಹೋದರನಾದ ಅಂದ್ರೆಯನು ಒಬ್ಬನಾಗಿದ್ದನು.
ಇವುಗಳಾದ ಮೇಲೆ ಯೇಸು ತಿಬೇರಿ ಯವೆಂಬ ಗಲಿಲಾಯ ಸಮುದ್ರದ ಆಚೆಗೆ ಹೋದನು.
ಆಗ ಆತನ ಶಿಷ್ಯರಲ್ಲಿ ಒಬ್ಬನಾಗಿರುವ ಸೀಮೋನ್ ಪೇತ್ರನ ಸಹೋದರನಾದ ಅಂದ್ರೆಯನು ಆತನಿಗೆ--
ಇವುಗಳಾದ ಮೇಲೆ ಯೇಸು ತಿಬೇರಿಯ ಸಮುದ್ರದ ಬಳಿಯಲ್ಲಿ ಶಿಷ್ಯರಿಗೆ ತನ್ನನ್ನು ತಿರಿಗಿ ತೋರಿಸಿಕೊಂಡನು. ಆತನು ತನ್ನನ್ನು ತೋರಿಸಿ ಕೊಂಡ ರೀತಿ ಹೇಗಂದರೆ--
ಆದರೆ ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡಿದ್ದಾನೆ; ದೇವರು ಬಲಿಷ್ಟರನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬಲಹೀನರನ್ನು ಆರಿಸಿಕೊಂಡಿದ್ದಾನೆ;