ನೀನು ದೇವ ಕುಮಾರನಾಗಿದ್ದರೆ ನೀನಾಗಿಯೇ ಕೆಳಗೆ ದುಮುಕು; ಯಾಕಂದರೆ--ಯಾವ ಸಮಯದಲ್ಲಿಯಾದರೂ ನಿನ್ನ ಕಾಲು ಕಲ್ಲಿಗೆ ಅಪ್ಪಳಿಸದಂತೆ ಆತನು ತನ್ನ ದೂತರಿಗೆ ನಿನ್ನ ವಿಷಯವಾಗಿ ಅಪ್ಪಣೆ ಕೊಡುವನು; ಮತ್ತು ಅವರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು ಎಂದು ಬರೆದದೆ ಅಂದ
Cross references
ನೀನು ಅವನಿಗೂ ಅವನ ಮನೆಗೂ ಅವನಿಗೆ ಉಂಟಾದ ಎಲ್ಲವುಗಳಿಗೂ ಸುತ್ತಲೂ ಬೇಲಿ ಕಟ್ಟಿದೆಯಲ್ಲಾ? ಅವನ ಕೈ ಕೆಲಸವನ್ನು ಆಶೀರ್ವದಿಸಿದಿ; ಅವನ ಸಂಪತ್ತು ದೇಶದಲ್ಲಿ ಹಬ್ಬಿಯದೆ.
ಹೊಲದ ಕಲ್ಲುಗಳ ಸಂಗಡ ನಿನಗೆ ಒಡಂಬಡಿಕೆ ಇರುವದು; ಹೊಲದ ಮೃಗಗಳು ನಿನ್ನೊಂದಿಗೆ ಸಮಾ ಧಾನವಾಗಿರುವವು.
ಆತನಿಗೆ ಭಯಪಡುವವರ ಸುತ್ತಲೂ ಕರ್ತನ ದೂತನು ಇಳು ಕೊಂಡು ಅವರನ್ನು ಕಾಪಾಡುತ್ತಾನೆ.
ಆತನ ಎಲುಬು ಗಳನ್ನೆಲ್ಲಾ ಕಾಪಾಡುತ್ತಾನೆ; ಅವುಗಳಲ್ಲಿ ಒಂದಾದರೂ ಮುರಿಯಲ್ಪಡುವದಿಲ್ಲ.
ನಿನ್ನ ಎಲ್ಲಾ ಮಾರ್ಗಗಳಲ್ಲಿ ನಿನ್ನನ್ನು ಕಾಪಾಡುವದಕ್ಕೆ ಆತನು ತನ್ನ ದೂತರಿಗೆ ನಿನ್ನ ವಿಷಯವಾಗಿ ಆಜ್ಞಾಪಿಸುವನು.
ಆದರೆ ಆತನು ಪ್ರತ್ಯುತ್ತರವಾಗಿ--ಮನುಷ್ಯನು ರೊಟ್ಟಿ ಮಾತ್ರದಿಂದಲೇ ಜೀವಿಸುವದಿಲ್ಲ, ಆದರೆ ದೇವರ ಬಾಯೊಳಗಿಂದ ಹೊರಡುವ ಪ್ರತಿಯೊಂದು ಮಾತಿನಿಂದ ಜೀವಿಸುವನು ಎಂದು ಬರೆದದೆ ಅಂದನು.
ಇದಲ್ಲದೆ ಅವನು ಆತನನ್ನು ಯೆರೂಸಲೇಮಿಗೆ ಕರತಂದು ದೇವಾಲಯ ಗೋಪುರದ ಮೇಲೆ ನಿಲ್ಲಿಸಿ ಆತನಿಗೆ--ನೀನು ದೇವಕುಮಾರನಾಗಿದ್ದರೆ ಇಲ್ಲಿಂದ ಕೆಳಗೆ ದುಮುಕು;
ಇದೇನೂ ಆಶ್ಚರ್ಯವಲ್ಲ; ಯಾಕಂದರೆ ಸೈತಾನನು ಬೆಳಕಿನ ದೂತನಂತೆ ಕಾಣಿಸಿಕೊಳ್ಳುವ ಹಾಗೆ ತನ್ನನ್ನು ತಾನೇ ಮಾರ್ಪಡಿಸಿಕೊಳ್ಳುತ್ತಾನೆ.
ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿ ಸಲ್ಪಟ್ಟ ಊಳಿಗದ ಆತ್ಮಗಳಲ್ಲವೋ?