ಆದದರಿಂದ ಯಾವನಾದರೂ ಈ ಆಜ್ಞೆಗಳಲ್ಲಿ ಚಿಕ್ಕದಾದ ಒಂದನ್ನು ಮಾರಿ ಹಾಗೆಯೇ ಜನರಿಗೆ ಬೋಧಿಸಿದರೆ ಅವನು ಪರಲೋಕರಾಜ್ಯದಲ್ಲಿ ಅಲ್ಪನೆಂದು ಕರೆಯಲ್ಪಡುವನು; ಯಾವನಾದರೂ ಇವುಗಳನ್ನು ಕೈಕೊಂಡು ಬೋಧಿಸಿದರೆ ಅವನೇ ಪರಲೋಕ ರಾಜ್ಯದಲ್ಲಿ ದೊಡ್ಡವನೆಂದು ಕರೆಯಲ್ಪಡು ವನು.
Cross references
ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಲಕ್ಷಿಸಿ ಕೈಕೊಳ್ಳಬೇಕು; ಅದಕ್ಕೆ ಕೂಡಿಸಬೇಡ; ಇಲ್ಲವೆ ಅದರಿಂದ ಕಡಿಮೆಮಾಡಬೇಡ.
ಈ ನ್ಯಾಯಪ್ರಮಾಣದ ಮಾತುಗಳನ್ನು ಸ್ಥಾಪಿ ಸದೆ, ಕೈಕೊಳ್ಳದೆ ಇರುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ ಎಂದು ಹೇಳಬೇಕು.
ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳುವ ದೇನಂದರೆ--ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಕರ್ತನು ಹೇಳುವದೇನಂದರೆ--ನನಗೆ ಅದು ದೂರವಾಗಿರಲಿ; ಯಾಕಂದರೆ ನನ್ನನ್ನು ಸನ್ಮಾನಿಸು ವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸು ವವರನ್ನು ನಾನು ತಿರಸ್ಕರಿಸುವೆನು.
ಆಗ ನಿನ್ನ ಆಜ್ಞೆಗಳನ್ನೆಲ್ಲಾ ದೃಷ್ಟಿಸುವಾಗ ನಾಚಿಕೆ ಪಡೆನು.
ನಿನ್ನ ಕಟ್ಟಳೆಗಳೆಲ್ಲಾ ಸರಿಯಾದ ವುಗಳೆಂದು ನಾನು ಎಣಿಸುತ್ತೇನೆ. ಮೋಸದ ಪ್ರತಿ ಯೊಂದು ಮಾರ್ಗವನ್ನು ಹಗೆಮಾಡುತ್ತೇನೆ.
ಬುದ್ಧಿವಂತರಾದವರು ಆಕಾಶದ ಕಾಂತಿಯ ಹಾಗೆ ಯೂ ಅನೇಕರನ್ನು ನೀತಿಯ ಕಡೆಗೆ ತಿರುಗಿಸಿದ ವರು ನಕ್ಷತ್ರಗಳ ಹಾಗೆಯೂ ಎಂದೆಂದಿಗೂ ಪ್ರಕಾಶಿಸು ವರು;
ಆದರೆ ನೀವು ಮಾರ್ಗವನ್ನು ಬಿಟ್ಟುಹೋಗಿದ್ದೀರಿ; ಅನೇಕರನ್ನು ನ್ಯಾಯಪ್ರಮಾಣಕ್ಕೆ ಎಡವುವಂತೆ ಮಾಡಿದ್ದೀರಿ; ಲೇವಿಯ ಒಡಂಬಡಿಕೆಯನ್ನು ಕೆಡಿಸಿದ್ದೀರೆಂದು ಸೈನ್ಯ ಗಳ ಕರ್ತನು ಹೇಳುತ್ತಾನೆ.
ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಸ್ತ್ರೀಯರಲ್ಲಿ ಹುಟ್ಟಿದವರೊ ಳಗೆ ಬಾಪ್ತಿಸ್ಮ ಮಾಡಿಸುವ ಯೋಹಾನನಿಗಿಂತ ದೊಡ್ಡವನು ಏಳಲಿಲ್ಲ; ಆದಾಗ್ಯೂ ಪರಲೋಕ ರಾಜ್ಯದಲ್ಲಿ ಅತ್ಯಲ್ಪನಾದವನು ಅವನಿಗಿಂತಲೂ ದೊಡ್ಡ ವನಾಗಿದ್ದಾನೆ.
ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವ ರಿಗೆ--ನೀವು ಸಹ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ಯಾಕೆ ಮಾರುತ್ತೀರಿ?
ಯೇಸು ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನ ದಲ್ಲಿ ಕೂತುಕೊಂಡಿರಲು ನನ್ನನ್ನು ಹಿಂಬಾಲಿಸಿದವರಾದ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾಯೇಲಿನ ಹನ್ನೆರಡು ಗೋತ್ರ ಗಳವರಿಗೆ ನ್ಯಾ
ನಿಮ್ಮಲ್ಲಿ ದೊಡ್ಡವನಾಗಿರಬೇಕೆಂದಿರುವವನು ನಿಮ್ಮ ಸೇವಕನಾಗಿ ರಲಿ
ಕುರುಡರಾದ ಮಾರ್ಗದರ್ಶಕರೇ, ನಿಮಗೆ ಅಯ್ಯೋ! ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟರೆ ಅದು ಏನೂ ಅಲ್ಲ ಅನ್ನುತ್ತೀರಿ; ಆದರೆ ಯಾವನಾದರೂ ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟರೆ ಅವನು ಸಾಲಗಾರನು ಎಂದು ಅನ್ನುತ್ತೀರಿ.
ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
ಯಾಕಂದರೆ ಅವನು ಕರ್ತನ ದೃಷ್ಟಿಯಲ್ಲಿ ದೊಡ್ಡವ ನಾಗಿದ್ದು ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿ ಯುವದೇ ಇಲ್ಲ; ಅವನು ತಾಯಿಯ ಗರ್ಭದಿಂದಲೇ ಪರಿಶುದ್ಧಾತ್ಮಭರಿತನಾಗಿರುವನು.
ಅವರಿಗೆ ಯಾವನಾದರೂ ಈ ಮಗುವನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿಕೊಂಡರೆ ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ; ಯಾವನಾದರೂ ನನ್ನನ್ನು ಅಂಗೀಕರಿಸಿಕೊಂಡರೆ ನನ್ನನ್ನು ಕಳುಹಿಸಿ ಕೊಟ್ಟಾತನನ್ನೇ ಅಂಗೀಕರಿಸಿಕೊಳ್ಳುತ್ತಾನೆ. ಯಾಕಂ ದರೆ ನಿಮ್ಮೆಲ್ಲರಲ್ಲಿ ಚಿಕ್ಕವನಾಗಿರುವವನೇ ದೊಡ್ಡ
ಆದರೆ ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಮರುಗಪತ್ರೆ ಸದಾಪು ಸಕಲ ವಿಧವಾದ ಸೊಪ್ಪುಗಳಲ್ಲಿ ದಶಮಭಾಗವನ್ನು ಕೊಟ್ಟು ನ್ಯಾಯತೀರ್ಪನ್ನೂ ದೇವರಪ್ರೀತಿಯನ್ನೂ ಲಕ್ಷಿಸದೆ ಹೋಗುತ್ತೀರಿ. ಇವುಗಳನ್ನು ತಪ್ಪದೆ ಮಾಡಿ ಬೇರೆಯವು ಗಳನ್ನು ಬಿಡದೆ ಮಾಡಬೇಕಾಗಿತ್ತು.
ಇದಲ್ಲದೆ ತಮ್ಮೊಳಗೆ ಯಾವನು ಅತಿ ದೊಡ್ಡವ ನೆಂದು ಎಣಿಸಲ್ಪಡುವನು ಎಂದು ಅವರಲ್ಲಿ ವಿವಾದವು ಸಹ ಇತ್ತು.
ಓ ಥೆಯೊಫಿಲನೇ, ಯೇಸು ತಾನು ಆರಿಸಿಕೊಂಡ ಅಪೊಸ್ತಲರಿಗೆ ಪವಿತ್ರಾತ್ಮನ ಮುಖಾಂತರ ಆಜ್ಞೆಗಳನ್ನು ಕೊಟ್ಟ ತರುವಾಯ
(ದೂಷಿಸಲ್ಪಡುವ ಪ್ರಕಾರವಾಗಿ ಯೂ ನಾವು ಹೇಳುತ್ತೇವೆಂದು ಕೆಲವರು ಅನ್ನುವ ಪ್ರಕಾರವಾಗಿಯೂ)--ಒಳ್ಳೆಯದು ಬರುವ ಹಾಗೆ ನಾವು ಕೆಟ್ಟದ್ದನ್ನು ಮಾಡೋಣವೇ? ಅಂಥವರ ದಂಡ ನೆಯು ನ್ಯಾಯವಾಗಿದೆ.
ಹಾಗಾದರೆ ಏನು ಹೇಳೋಣ? ಕೃಪೆಯು ಹೆಚ್ಚಲಿ ಎಂದು ನಾವು ಪಾಪದಲ್ಲಿ ಇನ್ನೂ ಇರಬೇಕೋ?
ಹಾಗಾದರೇನು? ನಾವು ನ್ಯಾಯಪ್ರಮಾಣಾ ಧೀನರಲ್ಲ, ಕೃಪೆಗೆ ಅಧೀನರಾಗಿದ್ದೇವೆಂದು ಪಾಪವನ್ನು ಮಾಡಬಹುದೋ? ಹಾಗೆ ಎಂದಿಗೂ ಅಲ್ಲ.
ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ಸಾಲವೂ ನಿಮಗೆ ಇರ ಬಾರದು. ಮತ್ತೊಬ್ಬರನ್ನು ಪ್ರೀತಿಸುವವನು ನ್ಯಾಯಪ್ರಮಾಣವನ್ನೆಲ್ಲಾ ನೆರವೇರಿಸಿದ್ದಾನೆ.
ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರ ಮಾಡಿಕೊಳ್ಳುವವ ರೆಲ್ಲರೂ ಶಾಪಾಧೀನರಾಗಿದ್ದಾರೆ. ಹೇಗಂದರೆ, ನ್ಯಾಯ ಪ್ರಮಾಣದ ಗ್ರಂಥದೊಳಗೆ ಬರೆದಿರುವವುಗಳನ್ನೆಲ್ಲಾ ನಿತ್ಯವೂ ಕೈಕೊಳ್ಳದಿರುವ ಪ್ರತಿಯೊಬ್ಬನು ಶಾಪಗ್ರಸ್ತ ನೆಂದು ಬರೆದದೆ.
ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು ಎಂಬ ಒಂದೇ ಮಾತಿನಲ್ಲಿ ನ್ಯಾಯಪ್ರಮಾಣವೆಲಾ ನೆರವೇರುತ್ತದೆ.
ಸಹೋದರರೇ, ನೀವೆಲ್ಲರೂ ನನ್ನನ್ನು ಅನುಸರಿ ಸುವವರಾಗಿರ್ರಿ; ನಾವು ನಿಮಗೆ ತೋರಿಸಿದ ಮಾದರಿಯ ಪ್ರಕಾರ ನಡೆದುಕೊಳ್ಳುವವರನ್ನು ಗುರುತಿ ಸಿರಿ.
ಕಡೇದಾಗಿ ಸಹೋದರರೇ, ಸತ್ಯವಾದವುಗಳು ಯಾವವೋ ಪ್ರಾಮಾಣಿಕವಾದವುಗಳು ಯಾವವೋ ನ್ಯಾಯವಾದವುಗಳು ಯಾವವೋ ಶುದ್ಧವಾದವುಗಳು ಯಾವವೋ ಪ್ರೀತಿಕರವಾದವುಗಳು ಯಾವವೋ ಮಾನ್ಯವಾದವುಗಳು ಯಾವವೋ ಅವುಗಳನ್ನು ಮತ್ತು ಸದ್ಗುಣವನ್ನೂ ಸ್ತುತ್ಯವಾದದ್ದನ್ನೂ ಯೊ
ನಂಬುವವರಾದ ನಿಮ್ಮ ವಿಷಯದಲ್ಲಿ ನಾವು ಎಷ್ಟೋ ಶುದ್ಧರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬದಕ್ಕೆ ನೀವು ಸಾಕ್ಷಿಗಳು. ದೇವರೂ ಸಾಕ್ಷಿ.
ಸಹೋದರರೇ, ನೀವು ಹೇಗೆ ನಡೆದು ಕೊಂಡು ದೇವರನ್ನು ಮೆಚ್ಚಿಸಬೇಕೆಂದು ನಮ್ಮಿಂದ ಕೇಳಿರುವ ಪ್ರಕಾರವೇ ನೀವು ಹೆಚ್ಚೆಚ್ಚಾಗಿ ಅಭಿವೃದ್ಧಿಯಾಗಬೇಕೆಂದು ನಾವು ಕರ್ತನಾದ ಯೇಸು ವಿನ ಮೂಲಕ ನಿಮ್ಮನ್ನು ಬೇಡಿಕೊಂಡು ಎಚ್ಚರಿಸುತ್ತೇವೆ.
ಈ ವಿಷಯಗಳನ್ನು ಆಜ್ಞಾಪಿಸಬೇಕು ಮತ್ತು ಬೋಧಿಸಬೇಕು.
ಯಾವನಾದರೂ ಬೇರೆ ವಿಧವಾದ ಉಪದೇಶ ವನ್ನು ಮಾಡಿ ಅಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಸ್ವಸ್ಥವಾದ ಮಾತುಗಳಿಗೂ ಭಕ್ತ್ಯನುಸಾರವಾದ ಬೋಧನೆಗೂ ಸಮ್ಮತಿಸದೆ ಹೋದರೆ
ಓ ದೇವರ ಮನುಷ್ಯನೇ, ನೀನಾದರೋ ಇವುಗಳಿಂದ ದೂರ ಓಡಿಹೋಗು; ನೀತಿ ಭಕ್ತಿ ನಂಬಿಕೆ ಪ್ರೀತಿ ತಾಳ್ಮೆ ಸಾತ್ವಿಕತ್ವ ಇವುಗಳನ್ನು ಅನುಸರಿಸು.
ಇದರಿಂದ ವಿರೋಧಪಕ್ಷ ದವನು ನಿಮ್ಮ ವಿಷಯದಲ್ಲಿ ಕೆಟ್ಟದ್ದು ಹೇಳುವದಕ್ಕೆ ಯಾವದೂ ಇಲ್ಲದೆ ನಾಚಿಕೆಪಡುವನು.
ಇದು ನಂಬತಕ್ಕ ಮಾತಾ ಗಿದೆ. ದೇವರಲ್ಲಿ ನಂಬಿಕೆ ಇಟ್ಟಿರುವವರು ಸತ್ಕ್ರಿಯೆಗಳನ್ನು ಮಾಡುವದರಲ್ಲಿ ಜಾಗರೂಕರಾಗಿರುವಂತೆ ನೀನು ಈ ಮಾತುಗಳನ್ನು ಯಾವಾಗಲೂ ದೃಢವಾಗಿ ಹೇಳಬೇಕೆಂದು ಅಪೇಕ್ಷಿಸುತ್ತೇನೆ. ಇವು ಮನುಷ್ಯರಿಗೆ ಉತ್ತಮವೂ ಪ್ರಯೋಜನಕರವೂ ಆಗಿವೆ.
ಯಾಕಂದರೆ ಯಾವನಾದರೂ ನ್ಯಾಯಪ್ರಮಾಣವನ್ನೆಲ್ಲಾ ಕೈಕೊಂಡು ನಡೆದು ಒಂದೇ ಒಂದರಲ್ಲಿ ತಪ್ಪಿದರೆ ಅವನು ಎಲ್ಲಾ ವಿಷಯದಲ್ಲಿಯೂ ಅಪರಾಧಿಯಾಗುತ್ತಾನೆ.
ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯುಳ್ಳ ಕಿರೀಟವನ್ನು ಹೊಂದುವಿರಿ.
ಆದರೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ. ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವ ದಕ್ಕೂ ಜಾರತ್ವ ಮಾಡುವದಕ್ಕೂ ಇಸ್ರಾಯೇಲಿನ ಮಕ್ಕಳ ಮುಂದೆ ಮುಗ್ಗರಿಸುವ ಬಂಡೆಯನ್ನು ಹಾಕ ಬೇಕೆಂದು ಬಿಳಾಮನು ಬಾಲಾಕನಿಗೆ ಹೇಳಿದ ಬೋಧನೆಯನ್ನು
ಆದಾಗ್ಯೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ; ಅದೇ ನಂದರೆ, ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿ ನಿಯೆಂದು ಹೇಳಿಕೊಂಡು ಜಾರತ್ವ ಮಾಡುವದಕ್ಕೂ ವಿಗ್ರಹಗಳಿಗೆ ಅರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವದಕ್ಕೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ವಂಚಿಸುತ್ತಿರು