ಆದದರಿಂದ ನೀನು ನಿನ್ನ ಕಾಣಿಕೆಯನ್ನು ಯಜ್ಞವೇದಿಯ ಬಳಿಗೆ ತಂದಾಗ ನಿನಗೆ ವಿರೋಧ ವಾದದ್ದು ನಿನ್ನ ಸಹೋದರನಿಗೆ ಇದೆಯೆಂದು ನೆನಪಿಗೆ ಬಂದರೆ
Cross references
ಆಗ ಪಾನದಾಯಕರ ಮುಖ್ಯಸ್ಥನು ಫರೋಹ ನಿಗೆ--ಈ ಹೊತ್ತು ನನ್ನ ತಪ್ಪುಗಳನ್ನು ಜ್ಞಾಪಕ ಮಾಡಿಕೊಳ್ಳುತ್ತೇನೆ;
ಆಗ ಅವರು--ನಿಶ್ಚಯವಾಗಿ ನಮ್ಮ ಸಹೋದರನ ಅಪರಾಧವು ನಮ್ಮ ಮೇಲೆ ಇದೆ. ಅವನು ನಮ್ಮನ್ನು ಬೇಡಿಕೊಂಡಾಗ ಅವನ ಪ್ರಾಣ ಸಂಕಟವನ್ನು ನೋಡಿಯೂ ಕೇಳದೆ ಹೋದೆವು. ಆದಕಾರಣ ಈ ಸಂಕಟವು ನಮ್ಮ ಮೇಲೆ ಬಂದಿತು ಎಂದು ಅಂದುಕೊಂಡರು.
ತಮ್ಮ ತಂದೆ ಸತ್ತುಹೋದದ್ದನ್ನು ಯೋಸೇಫನ ಸಹೋದರರು ನೋಡಿ--ಒಂದು ವೇಳೆ ಯೋಸೇಫನು ನಮ್ಮನ್ನು ಹಗೆಮಾಡಿ ನಾವು ಅವನಿಗೆ ಮಾಡಿದ್ದ ಎಲ್ಲಾ ಕೇಡಿಗೆ ನಿಶ್ಚಯವಾಗಿ ಪ್ರತೀಕಾರ ಮಾಡಾನು ಎಂದು ಅಂದುಕೊಂಡು
ಯಾವನಾದರೂ ಪಾಪಮಾಡಿ ಕರ್ತನಿಗೆ ವಿರುದ್ಧವಾಗಿ ಅತಿಕ್ರಮಿಸಿದರೆ ಮತ್ತು ಅವನ ನೆರೆಯ ವನು ಅವನ ವಶದಲ್ಲಿ ಇಟ್ಟುಕೊಳ್ಳಲು ಕೊಟ್ಟದ್ದರ ಲ್ಲಾಗಲಿ ಇಲ್ಲವೆ ಪಾಲುಗಾರಿಕೆಯಲ್ಲಾಗಲಿ ಬಲಾತ್ಕಾರ ವಾಗಿ ತೆಗೆದುಕೊಂಡಂಥ ವಸ್ತುವಿಗಾಗಲಿ ಸುಳ್ಳು ಹೇಳಿದರೆ ಅವನ ನೆರೆಯವನನ್ನು ಮೋಸಮಾಡಿದರೆ
ಅಥವಾ ಅವನು ಸುಳ್ಳಾಗಿ ಪ್ರಮಾಣಮಾಡಿ ಪಡೆದವುಗಳೆಲ್ಲವುಗಳನ್ನೂ ಅಲ್ಲದೆ ಅವನು ಅದರ ಅಸಲಿಗೆ ಐದನೇ ಪಾಲನ್ನೂ ಕೂಡಿಸಿ ಹಿಂದಕ್ಕೆ ಕೊಡಬೇಕು. ಅತಿಕ್ರಮ ಬಲಿ ಅರ್ಪಿಸುವ ದಿನದಲ್ಲಿ ಅದರ ಯಜಮಾನನು ಯಾವ ನಾಗಿರುವನೋ ಅವನಿಗೆ ಕೊಡಬೇಕು.
ವರುಷಕ್ಕೆ ಮೂರು ಸಾರಿ ನಿನ್ನ ಗಂಡಸರೆಲ್ಲರು ನಿನ್ನ ದೇವರಾದ ಕರ್ತನ ಮುಂದೆ ಆತನು ಆದುಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು, ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬದಲ್ಲಿ, ವಾರಗಳ ಹಬ್ಬದಲ್ಲಿ, ಗುಡಾರ ಗಳ ಹಬ್ಬದಲ್ಲಿ ಕಾಣಿಸಿಕೊಳ್ಳಬೇಕು. ಇದಲ್ಲದೆ ಅವರು ಕರ್ತನ ಸಮ್ಮುಖಕ್ಕೆ ಬರಿ ಕೈಯಾಗಿ ಬರಬಾರದು.
ಅದಕ್ಕೆ ಸಮುವೇಲನು--ಕರ್ತನ ವಾಕ್ಯಕ್ಕೆ ವಿಧೇಯನಾದರೆ ಕರ್ತನಿಗೆ ಆಗುವ ಸಂತೋಷ ದಹನ ಬಲಿಗಳಲ್ಲಿಯೂ ಬಲಿಗಳಲ್ಲಿಯೂ ಆಗುವದೋ? ಇಗೋ, ಬಲಿಗಿಂತ ವಿಧೇಯವಾಗುವದು ಟಗರುಗಳ ಕೊಬ್ಬಿಗಿಂತ ಆಲೈಸುವದು ಉತ್ತಮವಾಗಿರುವದು.
ಇದಲ್ಲದೆ ಅರಸನು ಶಿಮ್ಮಿಗೆ--ನೀನು ನನ್ನ ತಂದೆಯಾದ ದಾವೀ ದನಿಗೆ ಮಾಡಿದ ಕೆಟ್ಟತನವನ್ನೆಲ್ಲಾ ನಿನ್ನ ಹೃದಯಕ್ಕೆ ತಿಳಿದದೆ. ಕರ್ತನು ನಿನ್ನ ಕೆಟ್ಟತನವನ್ನು ನಿನ್ನ ತಲೆಯ ಮೇಲೆ ಬರಮಾಡುವನು.
ಸೊದೋಮಿನ ಅಧಿಪತಿಗಳೇ, ನೀವು ಕರ್ತನ ಮಾತನ್ನು ಕೇಳಿರಿ; ಗೊಮೋರದ ಪ್ರಜೆಗಳೇ, ನಮ್ಮ ದೇವರ ನ್ಯಾಯಪ್ರಮಾಣಕ್ಕೆ ಕಿವಿಗೊಡಿರಿ.
ನನ್ನ ಪ್ರಾಣವು ಇನ್ನೂ ಅವುಗಳನ್ನು ಜ್ಞಾಪಿಸಿ ಕೊಳ್ಳುತ್ತಾ ನನ್ನೊಳಗೆ ಕುಂದಿಹೋಗಿದೆ.
ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ ನೀನು ಅವು ಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿನ್ನ ಅವಮಾನದ ನಿಮಿತ್ತ ಇನ್ನು ನೀನು ಬಾಯಿ ತೆರೆಯಲೇಬಾರದೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
ನಾನು ಬಲಿಯನ್ನಲ್ಲ ಕರುಣೆಯನ್ನೇ ಮತ್ತು ದಹನ ಬಲಿಗಳಿಗಿಂತ ದೇವರ ತಿಳುವಳಿಕೆಯನ್ನೇ ಹೆಚ್ಚಾಗಿ ಅಪೇಕ್ಷಿಸಿದ್ದೇನೆ.
ನಿಮ್ಮ ನಿಮ್ಮ ಪರಿಶುದ್ಧ ಸಭೆಗಳನ್ನು ನಾನು ಮೂಸುವದಿಲ್ಲ.
ನಿನ್ನ ಕಾಣಿಕೆಯನ್ನು ನೀನು ಅಲ್ಲಿಯೇ ಯಜ್ಞವೇದಿಯ ಮುಂದೆ ಬಿಟ್ಟು ಹೊರಟು ಹೋಗಿ ಮೊದಲು ನಿನ್ನ ಸಹೋದರನೊಂದಿಗೆ ಒಂದಾಗು; ತರುವಾಯ ಬಂದು ನಿನ್ನ ಕಾಣಿಕೆಯನ್ನು ಅರ್ಪಿಸು.
ಯೇಸು ಅವನಿಗೆ--ನೀನು ಯಾರಿಗೂ ಹೇಳಬೇಡ ನೋಡು; ಹೊರಟುಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ಅವರಿಗೆ ಸಾಕ್ಷಿಯಾಗಿರುವಂತೆ ಮೋಶೆಯು ಆಜ್ಞಾಪಿಸಿದ ಕಾಣಿಕೆಯನ್ನು ಅರ್ಪಿಸು ಎಂದು ಹೇಳಿದನು.
ಮೂರ್ಖರೇ, ಕುರುಡರೇ, ಯಾವದು ದೊಡ್ಡದು? ಕಾಣಿಕೆಯೋ ಇಲ್ಲವೆ ಕಾಣಿಕೆಯನ್ನು ಪಾವನಮಾಡುವ ಯಜ್ಞವೇದಿಯೋ?
ನೀವು ನಿಂತು ಕೊಂಡು ಪ್ರಾರ್ಥಿಸುವಾಗ ಯಾವನಿಗಾದರೂ ವಿರೋ ಧವಾದದ್ದು ನಿಮ್ಮಲ್ಲಿದ್ದರೆ ಕ್ಷಮಿಸಿರಿ; ಆಗ ಪರಲೋಕ ದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ಅಪರಾಧಗಳನ್ನು ನಿಮಗೆ ಕ್ಷಮಿಸುವನು.
ಆಗ ಜಕ್ಕಾಯನು ನಿಂತುಕೊಂಡು ಕರ್ತನಿಗೆ--ಕರ್ತನೇ, ಇಗೋ, ನನ್ನ ಸೊತ್ತಿನಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ; ನಾನು ಯಾರಿಂದಲಾದರೂ ಸುಳ್ಳಾಗಿ ದೂರು ಹೇಳಿ ಏನಾದರೂ ತಕ್ಕೊಂಡಿದ್ದರೆ ಅವನಿಗೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ ಅಂದನು.