ನಿನ್ನ ಕಾಣಿಕೆಯನ್ನು ನೀನು ಅಲ್ಲಿಯೇ ಯಜ್ಞವೇದಿಯ ಮುಂದೆ ಬಿಟ್ಟು ಹೊರಟು ಹೋಗಿ ಮೊದಲು ನಿನ್ನ ಸಹೋದರನೊಂದಿಗೆ ಒಂದಾಗು; ತರುವಾಯ ಬಂದು ನಿನ್ನ ಕಾಣಿಕೆಯನ್ನು ಅರ್ಪಿಸು.
Cross references
ಹಾಗಾದರೆ ಈಗ ಏಳು ಎತ್ತುಗಳೂ ಏಳು ಹೋತಗಳೂ ನಿಮ ಗೋಸ್ಕರ ತಕ್ಕೊಂಡು ನನ್ನ ಸೇವಕನಾದ ಯೋಬನ ಬಳಿಗೆ ಬನ್ನಿರಿ; ಅವುಗಳನ್ನು ನಿಮಗೋಸ್ಕರ ದಹನ ಬಲಿಯಾಗಿ ಅರ್ಪಿಸಿರಿ; ನನ್ನ ಸೇವಕನಾದ ಯೋಬನು ನಿಮಗೋಸ್ಕರ ಪ್ರಾರ್ಥನೆ ಮಾಡುವನು. ನಾನು ನಿಮ್ಮ ಬುದ್ಧಿಹೀನತೆಯ ಪ್ರಕಾರ ಮಾಡದ ಹಾಗೆ ಅವನ ಪ್ರಾರ್ಥನೆಯನ್ನು ಅಂಗೀಕರಿಸುವೆನು. ಯಾಕಂ ದರೆ ನೀವು ನನ್ನ ಸೇವಕನಾದ ಯೋಬನ ಪ್ರಕಾರ ನನ್ನ ವಿಷಯವಾಗಿ ಸರಿಯಾದವುಗಳನ್ನು ಮಾತಾ ಡಲಿಲ್ಲ.
ನಿನ್ನ ನೆರೆಯವನೊಂದಿಗೆ ನಿನ್ನ ವ್ಯಾಜ್ಯವನ್ನು ಚರ್ಚಿಸು; ಗುಟ್ಟನ್ನು ಬೇರೊಬ್ಬನಿಗೆ ಹೊರಪಡಿಸಬೇಡ;
ಇದಲ್ಲದೆ ನಿನ್ನ ಸಹೋದರನು ನಿನಗೆ ವಿರೋಧ ವಾಗಿ ತಪ್ಪು ಮಾಡಿದರೆ ನೀನೂ ಅವನೂ ಮಾತ್ರ ಇರುವಾಗ ಅವನ ತಪ್ಪನ್ನು ಅವನಿಗೆ ತಿಳಿಸು; ಅವನು ನಿನ್ನ ಮಾತನ್ನು ಕೇಳಿದರೆ ನೀನು ನಿನ್ನ ಸಹೋದರನನ್ನು ಸಂಪಾದಿಸಿಕೊಂಡಿರುವಿ.
ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮರುಗ ಸೋಪು ಜೀರಿಗೆ ಗಳಲ್ಲಿ ದಶಮ ಭಾಗವನ್ನು ಸಲ್ಲಿಸುತ್ತೀರಿ. ಆದರೆ ನ್ಯಾಯ ಪ್ರಮಾಣದ ತೀರ್ಪು ಕರುಣೆ ನಂಬಿಕೆ ಎಂಬ ಈ ಪ್ರಾಮುಖ್ಯವಾದವುಗಳನ್ನು ಬಿಟ್ಟುಬಿಟ್ಟಿದ್ದೀರಿ. ಇವುಗ ಳೊಂದಿಗೆ ಆ ಬೇರೆಯವುಗಳನೂ
ಉಪ್ಪು ಒಳ್ಳೆಯದು; ಆದರೆ ಉಪ್ಪು ತನ್ನ ಸಾರವನ್ನು ಕಳೆದುಕೊಂಡರೆ ಇನ್ನಾತರಿಂದ ನೀವು ಅದನ್ನು ರುಚಿಗೊಳಿಸುವಿರಿ? ನಿಮ್ಮೊಳಗೆ ಉಪ್ಪು ಇರಲಿ; ಮತ್ತು ಒಬ್ಬರ ಸಂಗಡಲೊಬ್ಬರು ಸಮಾಧಾನ ವಾಗಿರ್ರಿ ಅಂದನು.
ಯಾರಿಗೂ ಕೆಟ್ಟದ್ದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿ ಯಾವದು ಗೌರವ ವಾದದ್ದೋ ಅದನ್ನೇ ಮಾಡುವವರಾಗಿರ್ರಿ.
ಆದದರಿಂದ ಈಗ ನಿಮ್ಮಲ್ಲಿ ಒಬ್ಬನಿಗೆ ವಿರೋಧವಾಗಿ ಇನ್ನೊಬ್ಬನು ನ್ಯಾಯಸ್ಥಾನಕ್ಕೆ ಹೋಗುವದು ಶುದ್ಧ ತಪ್ಪು; ಇದಕ್ಕಿಂತ ನೀವು ಅನ್ಯಾಯವನ್ನು ಯಾಕೆ ಸಹಿಸಬಾರದು? ಇಲ್ಲವೆ (ಸೊತ್ತನ್ನು ಅಪಹರಿಸುವದನ್ನು) ನೀವು ಯಾಕೆ ಸಹಿಸಿಕೊಳ್ಳಬಾರದು?
ಆದರೆ ಒಬ್ಬನು ತನ್ನನ್ನು ಪರೀಕ್ಷಿಸಿಕೊಂಡವನಾಗಿ ಆ ರೊಟ್ಟಿಯಲ್ಲಿ ತಕ್ಕೊಂಡು ತಿನ್ನಲಿ, ಆ ಪಾತ್ರೆಯಲ್ಲಿ ಕುಡಿಯಲಿ.
ಆದದರಿಂದ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೋಪವೂ ಸಂದೇಹವೂ ಇಲ್ಲದೆ ಪವಿತ್ರವಾದ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ನಾನು ಅಪೇಕ್ಷಿಸು ತ್ತೇನೆ.
ನಿಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಯೋಗ್ಯವಾಗಿ ನಡೆದುಕೊಂಡು ಜ್ಞಾನದ ಸಾತ್ವಿಕತ್ವದಲ್ಲಿ ತನ್ನ ಕ್ರಿಯೆಗಳನ್ನು ತೋರಿಸಲಿ.
ನೀವು ಸ್ವಸ್ಥವಾಗಬೇಕಾದರೆ ನಿಮ್ಮ ತಪ್ಪುಗಳನ್ನು ಒಬ್ಬರಿಗೊಬ್ಬರು ಅರಿಕೆಮಾಡಿ ಒಬ್ಬರಿ ಗೋಸ್ಕರ ಒಬ್ಬರು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಫಲಕಾರಿಯಾಗುತ್ತದೆ.
ಅದೇ ರೀತಿಯಾಗಿ ಪುರಷರೇ, ಸ್ತ್ರೀಯು ಬಲಹೀನ ಳೆಂಬದನ್ನು ತಿಳಿದು ನಿಮ್ಮ ಹೆಂಡತಿಯರ ಸಂಗಡ ವಿವೇಕದಿಂದ ಇರ್ರಿ. ಅವರು ಜೀವದ ಕೃಪೆಯಲ್ಲಿ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಮಾನವನ್ನು ಸಲ್ಲಿಸಿರಿ. ಹೀಗೆ ನಡೆದರೆ ನಿಮ್ಮ ಪ್ರಾರ್ಥನೆಗಳಿಗೆ ಅಡ್ಡಿಯಿರುವದಿಲ್ಲ.