ಆದರೆ ನಾನು ನಿಮಗೆ ಹೇಳುವದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ; ನಿಮ್ಮನ್ನು ನಿಂದಿಸುವವರಿಗಾಗಿಯೂ ಹಿಂಸಿಸುವವರಿಗಾಗಿಯೂ ಪ್ರಾರ್ಥಿಸಿರಿ.
Cross references
ನಿನ್ನ ವೈರಿಯ ಎತ್ತಾಗಲಿ ಕತ್ತೆಯಾಗಲಿ ತಪ್ಪಿಸಿಕೊಂಡು ಹೋಗುವಾಗ ಅದು ನಿನಗೆ ಸಿಕ್ಕಿದರೆ ನೀನು ಅದನ್ನು ಖಂಡಿತವಾಗಿ ತಿರಿಗಿ ಅವನಿಗೆ ತಂದುಕೊಡಬೇಕು.
ಅದಕ್ಕವನು--ಹೊಡೆಯಬೇಡ; ನೀನು ನಿನ್ನ ಕತ್ತಿಯಿಂದಲೂ ನಿನ್ನ ಬಿಲ್ಲಿನಿಂದಲೂ ಸೆರೆಯಾಗಿ ತೆಗೆದುಕೊಳ್ಳುವವರನ್ನು ಹೊಡೆಯುತ್ತೀ ಯೋ? ರೊಟ್ಟಿಯನ್ನೂ ನೀರನ್ನೂ ಇವರ ಮುಂದೆ ಇಡು; ಅವರು ತಿಂದು ಕುಡಿದು ತಮ್ಮ ಯಜಮಾನನ ಬಳಿಗೆ ಹೋಗಲಿ ಅಂದನು.
ಅಲ್ಲಿ ಕರ್ತನ ಒಬ್ಬ ಪ್ರವಾದಿ ಇದ್ದನು; ಅವನ ಹೆಸರು ಓದೇದನು. ಅವನು ಸಮಾರ್ಯಕ್ಕೆ ಬಂದ ಸೈನ್ಯೆಕ್ಕೆದುರಾಗಿ ಹೊರಟುಹೋಗಿ ಅವರಿಗೆ--ಇಗೋ, ನಿಮ್ಮ ಪಿತೃಗಳ ಕರ್ತನಾದ ದೇವರು ಯೆಹೂದದ ಮೇಲೆ ಉರಿಗೊಂಡದ್ದರಿಂದ ಆತನು ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿರಲಾಗಿ, ನೀವು ಆಕಾಶಕ್ಕೆ ಮುಟ್ಟುವ ಉಗ್ರದಿಂದ ಅವರನ್ನು ಕೊಂದುಹಾಕಿದ್ದೀರಿ.
ಹೌದು, ನನ್ನೊಂದಿಗೆ ಸಮಾಧಾನದಿಂದ ಇದ್ದವನಿಗೆ ನಾನು ಕೇಡು ಮಾಡಿದ್ದರೆ, ಯಾವ ಕಾರಣವಿಲ್ಲದೆ ನನಗೆ ವೈರಿಯಾಗಿರುವವನನ್ನು ನಾನು ಶತ್ರುವಿಗೆ ತಪ್ಪಿಸಿಬಿಟ್ಟೆನಲ್ಲಾ,
ನಾನಾ ದರೋ ಅವರು ಅಸ್ವಸ್ಥವಾದಾಗ, ಗೋಣೀ ತಟ್ಟು ಹೊದ್ದುಕೊಂಡು ನನ್ನ ಪ್ರಾಣವನ್ನು ಉಪವಾಸದಿಂದ ಕುಂದಿಸಿದೆನು; ನನ್ನ ಪ್ರಾರ್ಥನೆಯು ನನ್ನ ಎದೆಗೆ ತಿರುಗಿತು.
ನಿನ್ನ ಶತ್ರು ಹಸಿದಿದ್ದರೆ ತಿನ್ನುವ ದಕ್ಕೆ ಅವನಿಗೆ ರೊಟ್ಟಿ ಕೊಡು; ಅವನು ಬಾಯಾರಿದ್ದರೆ ಕುಡಿಯುವದಕ್ಕೆ ನೀರು ಕೊಡು.
ಆದರೆ ಕೇಳುವವರಾದ ನಿಮಗೆ ನಾನು ಹೇಳುವ ದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ.
ಯಾರಿಂದ ತಿರಿಗಿ ಪಡಕೊಳ್ಳಬೇಕೆಂದು ನಿರೀಕ್ಷಿಸುತ್ತಿರೋ ಅಂಥವರಿಗೆ ಸಾಲಕೊಟ್ಟರೆ ನಿಮಗೇನು ಹೊಗಳಿಕೆ ಬಂದೀತು? ಯಾಕಂದರೆ ಪಾಪಿಗಳು ಸಹ ಹಾಗೆಯೇ ತಾವು ಕೊಟ್ಟಷ್ಟು ತಿರಿಗಿ ಪಡೆಯುವಂತೆ ಪಾಪಿಗಳಿಗೆ ಸಾಲ ಕೊಡುತ್ತಾರೆ.
ಆಗ ಯೇಸು--ತಂದೆಯೇ, ಅವರನ್ನು ಕ್ಷಮಿಸು; ಯಾಕಂದರೆ ತಾವು ಏನು ಮಾಡುತ್ತೇವೆಂದು ಅವರು ಅರಿಯರು ಅಂದನು. ಅವರು ಆತನ ಉಡುಪನ್ನು ಪಾಲು ಮಾಡಿ ಚೀಟು ಹಾಕಿದರು.
ಮೊಣ ಕಾಲೂರಿ--ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು ಮಹಾಶಬ್ದದಿಂದ ಕೂಗಿದನು. ಇದನ್ನು ಹೇಳಿದ ತರುವಾಯ ನಿದ್ರೆಹೋದನು.
ಆದರೆ ಪೌಲನು ಮಹಾಧ್ವನಿಯಿಂದ ಕೂಗಿ ಅವನಿಗೆ--ನೀನೇನೂ ಕೇಡು ಮಾಡಿಕೊಳ್ಳಬೇಡ; ನಾವೆಲ್ಲರೂ ಇಲ್ಲೇ ಇದ್ದೇವೆ ಎಂದು ಹೇಳಿದನು.
ನಿಮ್ಮನ್ನು ಹಿಂಸಿಸುವವರನ್ನು ಆಶೀರ್ವದಿಸಿರಿ; ಶಪಿಸದೆ ಆಶೀ ರ್ವದಿಸಿರಿ.
ಹಾಗಾದರೆ ನಿನ್ನ ವೈರಿಯು ಹಸಿದಿದ್ದರೆ ಅವನಿಗೆ ಊಟಕ್ಕೆ ಬಡಿಸು; ಬಾಯಾರಿದ್ದರೆ ಕುಡಿಯುವದಕ್ಕೆ ಕೊಡು. ಹೀಗೆ ಮಾಡುವದರಿಂದ ಅವನ ತಲೆಯ ಮೇಲೆ ಕೆಂಡಗಳನ್ನು ಕೂಡಿಸಿಟ್ಟಂತಾಗುವದು.ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೇತನದಿಂದ ಕೆಟ್ಟತನವನ್ನು ಸೋಲಿಸು.
ಈ ಗಳಿಗೆಯ ವರೆಗೂ ನಾವು ಹಸಿದವರೂ ಬಾಯಾರಿಕೆಯುಳ್ಳವರೂ ವಸ್ತ್ರವಿಲ್ಲದವರೂ ಗುದ್ದುತಿನ್ನುವವರೂ ಮನೆಯಿಲ್ಲ ದವರೂ
ಪ್ರೀತಿ ಬಹು ತಾಳ್ಮೆಯುಳ್ಳದ್ದು, ಕರುಣೆಯುಳ್ಳದ್ದು; ಪ್ರೀತಿಯು ಹೊಟ್ಟೇಕಿಚ್ಚು ಪಡುವದಿಲ್ಲ, ಹೊಗಳಿ ಕೊಳ್ಳುವದಿಲ್ಲ, ಉಬ್ಬಿಕೊಳ್ಳುವದಿಲ್ಲ,
ಬೈಯುವವರನ್ನು ಆತನು ಪ್ರತಿಯಾಗಿ ಬೈಯಲಿಲ್ಲ; ಆತನು ಬಾಧೆಯನ್ನನು ಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವಾತನಿಗೆ ತನ್ನನ್ನು ಒಪ್ಪಿಸಿದನು.
ಅಪಕಾರಕ್ಕೆ ಅಪಕಾರವನ್ನೂ ನಿಂದೆಗೆ ನಿಂದೆಯನ್ನು ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದನಲ್ಲಾ; ಹೀಗೆ ಮಾಡುವವರಾದ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿ ರೆಂದು ನಿಮಗೆ ತಿಳಿದದೆಯಲ್ಲಾ.