ಜನರು ನೋಡಲಿ ಎಂದು ನೀವು ನಿಮ್ಮ ದಾನವನ್ನು ಅವರ ಮುಂದೆ ಮಾಡದಂತೆ ಎಚ್ಚರಿಕೆ ತಂದುಕೊಳ್ಳಿರಿ; ಇಲ್ಲವಾದರೆ ಪರಲೋಕ ದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ಸಿಗಲಾರದು.
Cross references
ಸೂರ್ಯನು ಮುಣುಗಿದಾಗ ಹೇಗಾದರೂ ಅವನಿಗೆ ಒತ್ತೆಯನ್ನು ಹಿಂದಕ್ಕೆ ಕೊಡಬೇಕು; ಆಗಲವನು ತನ್ನ ವಸ್ತ್ರದಲ್ಲಿ ಮಲಗಿಕೊಂಡು ನಿನ್ನನ್ನು ಆಶೀರ್ವದಿ ಸುವನು; ನಿನ್ನ ದೇವರಾದ ಕರ್ತನ ಮುಂದೆ ನೀತಿ ಉಂಟಾಗುವದು.
ನೀನು ನನ್ನ ಸಂಗಡ ಬಂದು ಕರ್ತನಿಗೋ ಸ್ಕರ ನನಗುಂಟಾದ ಆಸಕ್ತಿಯನ್ನು ನೋಡು ಎಂದು ಹೇಳಿ ಅವನನ್ನು ತನ್ನ ರಥದಲ್ಲಿ ಕೂಡ್ರಿಸಿಕೊಂಡನು.
ಆದರೆ ಯೇಹುವು ತನ್ನ ಪೂರ್ಣಹೃದಯ ದಿಂದ ಇಸ್ರಾಯೇಲಿನ ದೇವರಾದ ಕರ್ತನ ನ್ಯಾಯ ಪ್ರಮಾಣದಲ್ಲಿ ನಡೆಯುವ ಹಾಗೆ ಎಚ್ಚರಿಕೆಯಾಗಿರ ಲಿಲ್ಲ; ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿ ಸಿದ ಯಾರೊಬ್ಬಾಮನ ಪಾಪಗಳನ್ನು ತೊರೆದು ಬಿಡಲಿಲ್ಲ.
ಅವನು ಬಡವರಿಗೆ ಧಾರಾಳವಾಗಿ ಕೊಡುತ್ತಾನೆ; ಅವನ ನೀತಿ ಎಂದೆಂದಿಗೂ ನಿಲ್ಲು ತ್ತದೆ; ಅವನ ಕೊಂಬು ಘನದಿಂದ ಎತ್ತಲ್ಪಡುವದು.ದುಷ್ಟನು ನೋಡಿ ದುಃಖಪಡುವನು; ತನ್ನ ಹಲ್ಲು ಗಳನ್ನು ಕಡಿದು ಕರಗಿಹೋಗುವನು; ದುಷ್ಟರ ಆಶೆಯು ನಾಶವಾಗುವದು.
ಬೇರೆ ಜನರು ಬರುವ ಹಾಗೆ ಅವರು ನಿನ್ನ ಬಳಿಗೆ ಬಂದು ಜನರು ಕುಳಿತುಕೊಳ್ಳುವ ಹಾಗೆ ನಿನ್ನ ಮುಂದೆ ಕುಳಿತುಕೊಳ್ಳುವರು; ಅವರು ನಿನ್ನ ವಾಕ್ಯಗಳನ್ನು ಕೇಳುವರು, ಆದರೆ ಅವರು ಅವುಗಳನ್ನು ಮಾಡುವದಿಲ್ಲ. ಅವರು ತಮ್ಮ ಬಾಯಿಂದ ಹೆಚ್ಚಾದ ಪ್ರೀತಿಯನ್ನು ತೋರಿಸುವರು; ಆದರೆ ಅವರ ಹೃದಯವು ಲೋಭತ್ವದ ಕಡೆಗೆ ಹೋಗುವದು.
ಆದದರಿಂದ ಓ ಅರಸನೇ, ನನ್ನ ಆಲೋಚನೆಯು ನಿನಗೆ ಸಮ್ಮತಿ ಯಾಗಿ ನಿನ್ನ ಪಾಪಗಳನ್ನು ನೀತಿಯಿಂದ ಅಳಿಸಿ ನಿನ್ನ ಅನ್ಯಾಯಗಳನ್ನು ಬಡವರಿಗೆ ದಯೆ ತೋರಿಸುವದ ರಿಂದ ಬಿಟ್ಟುಬಿಡು. ಒಂದು ವೇಳೆ ಇದರಿಂದ ನಿನ್ನ ನೆಮ್ಮದಿಯು ಹೆಚ್ಚಾಗಬಹುದು.
ದೇಶದ ಜನರೆಲ್ಲರಿಗೂ ಯಾಜಕ ರಿಗೂ ಹೀಗೆ ಹೇಳು--ನೀವು ಈ ಎಪ್ಪತ್ತು ವರುಷಗಳು ಐದನೇ ಮತ್ತು ಏಳನೇ ತಿಂಗಳುಗಳಲ್ಲಿ ಉಪವಾಸ ಮಾಡಿ ದುಃಖಿಸಿದಾಗ ನನಗೆ ಏನಾದರೂ ಉಪವಾಸ ಮಾಡಿದ್ದೀರೋ?
ಆ ದಿವಸದಲ್ಲಿ ಆಗುವದೇನಂದರೆ, ಪ್ರವಾದಿಗಳು ಪ್ರವಾದಿಸುವಾಗ ಅವರು ತಮ್ಮ ತಮ್ಮ ದರ್ಶನಗಳಿಗೆ ನಾಚಿಕೆಪಡುವರು; ವಂಚಿಸುವ ಹಾಗೆ ಒರಟಾದ ವಸ್ತ್ರವನ್ನು ಹಾಕಿಕೊಳ್ಳರು.
ಅದರಂತೆಯೇ ಜನರು ನಿಮ್ಮ ಒಳ್ಳೇ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಮಹಿಮೆಪಡಿಸುವ ಹಾಗೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ.
ನಿಮ್ಮನ್ನು ಪ್ರೀತಿಮಾಡುವವರನ್ನೇ ನೀವು ಪ್ರೀತಿಮಾಡಿದರೆ ನಿಮಗೆ ಯಾವ ಪ್ರತಿಫಲ ಸಿಕ್ಕೀತು? ಸುಂಕದವರೂ ಹಾಗೆ ಮಾಡುತ್ತಾರಲ್ಲವೇ?
ಆದದರಿಂದ ಪರಲೋಕ ದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣ ನಾಗಿರುವಂತೆಯೇ ನೀವೂ ಪರಿಪೂರ್ಣರಾಗಿರ್ರಿ.
ಹೀಗೆ ನಿನ್ನ ದಾನವು ಅಂತರಂಗದಲ್ಲಿರುವದು; ಮತ್ತು ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ತಾನೇ ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು.
ಆದದರಿಂದ ನೀವು ಈ ರೀತಿಯಲ್ಲಿ ಪ್ರಾರ್ಥನೆ ಮಾಡಿರಿ--ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವಾಗಿರಲಿ. ನಿನ್ನ ರಾಜ್ಯವು ಬರಲಿ.
ಇದಲ್ಲದೆ ನೀವು ಉಪವಾಸ ಮಾಡುವಾಗ ಕಪಟಿಗಳ ಹಾಗೆ ವ್ಯಸನದ ಮುಖ ಮಾಡಿಕೊಳ್ಳ ಬೇಡಿರಿ. ಯಾಕಂದರೆ ತಾವು ಉಪವಾಸವಾಗಿ ದ್ದೇವೆಂದು ಜನರಿಗೆ ತೋರುವಂತೆ ಅವರು ತಮ್ಮ ಮುಖಗಳನ್ನು ವಿಕಾರ ಮಾಡಿಕೊಳ್ಳುತ್ತಾರೆ. ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವರು ತಮ್ಮ ಪ್ರತಿ
ಪ್ರವಾದಿಯ ಹೆಸರಿನಲ್ಲಿ ಪ್ರವಾದಿ ಯನ್ನು ಅಂಗೀಕರಿಸುವವನು ಪ್ರವಾದಿಯ ಪ್ರತಿಫಲ ವನ್ನು ಪಡಕೊಳ್ಳುವನು; ನೀತಿವಂತನ ಹೆಸರಿನಲ್ಲಿ ನೀತಿವಂತನನ್ನು ಅಂಗೀಕರಿಸುವವನು ನೀತಿವಂತನ ಪ್ರತಿಫಲವನ್ನು ಪಡಕೊಳ್ಳುವನು.ಯಾವನಾದರೂ ಶಿಷ್ಯನ ಹೆಸರಿನಲ್ಲಿ ಈ ಚಿಕ್ಕವರಾದ ಒಬ್ಬನಿಗೆ ಕೇವಲ ಒಂದು ತಂಬಿಗೆ ತಣ್ಣೀರನ್ನಾದರೂ ಕುಡಿಯುವದಕ್ಕೆ ಕೊಟ್ಟರೆ ಅವನು ತನ್ನ ಪ್ರತಿಫಲವನ್ನು ಕಳಕೊಳ್ಳುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
ಆಗ ಯೇಸು ಅವರಿಗೆ--ಫರಿಸಾಯರ ಮತ್ತು ಸದ್ದುಕಾಯರ ಹುಳಿಯ ವಿಷಯದಲ್ಲಿ ಎಚ್ಚರಿಕೆಯಿಂದ ಜಾಗರೂಕ ರಾಗಿರ್ರಿ ಎಂದು ಹೇಳಿದನು.
ಯಾಕಂದರೆ ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯಲ್ಲಿ ತನ್ನ ದೂತರೊಡನೆ ಬಂದಾಗ ಆತನು ಪ್ರತಿಯೊಬ್ಬ ನಿಗೂ ಅವನವನ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವನು ಎಂದು ಹೇಳಿದನು.ನಿಮಗೆ ನಿಜವಾಗಿ ಹೇಳುವದೇನಂದರೆ--ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಅಂದನು.
ಆದರೆ ತಾವು ಮಾಡುವ ತಮ್ಮ ಕ್ರಿಯೆಗಳನ್ನೆಲ್ಲಾ ಜನರು ನೋಡುವಂತೆ ಮಾಡು ತ್ತಾರೆ. ಅವರು ತಮ್ಮ ಜ್ಞಾಪಕಪಟ್ಟಿಗಳನ್ನು ಅಗಲಮಾಡಿ ಉಡುಪುಗಳ ಅಂಚುಗಳನ್ನು ಉದ್ದ ಮಾಡುತ್ತಾ
ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ.
ಅದರಂತೆಯೇ ನೀವು ಸಹ ಹೊರಗಡೆ ಮನುಷ್ಯರಿಗೆ ನೀತಿವಂತರಂತೆ ಕಾಣಿಸಿಕೊಳ್ಳುತ್ತೀರಿ; ಆದರೆ ನೀವು ಒಳಗೆ ಕಪಟದಿಂದಲೂ ದುಷ್ಟತನ ದಿಂದಲೂ ತುಂಬಿದವರಾಗಿದ್ದೀರಿ.
ಅದಕ್ಕೆ ಅರಸನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನೀವು ಈ ನನ್ನ ಸಹೋದರ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡಿದ್ದು ನನಗೂ ಮಾಡಿದಂತಾಯಿತು ಅಂದನು.
ಆತನು ಅವರಿಗೆ--ಫರಿಸಾಯರ ಹುಳಿಯ ವಿಷಯ ದಲ್ಲಿಯೂ ಹೆರೋದನ ಹುಳಿಯ ವಿಷಯದಲ್ಲಿಯೂ ನೀವು ಎಚ್ಚರಿಕೆಯಿಂದ ಇರ್ರಿ ಎಂದು ಖಂಡಿತವಾಗಿ ಹೇಳಿದನು.
ಆದದರಿಂದ ನಿನ್ನಲ್ಲಿರುವ ಬೆಳಕು ಕತ್ತಲೆಯಾಗದಂತೆ ನೋಡಿಕೋ;
ಅಷ್ಟರಲ್ಲಿ ಅಸಂಖ್ಯವಾದ ಜನಸಮೂಹವು ಒಬ್ಬರ ಮೇಲೊಬ್ಬರು ತುಳಿದಾಡುವಷ್ಟು ಒಟ್ಟುಗೂಡಿ ಬಂದಿರಲಾಗಿ ಆತನು ಎಲ್ಲಾದಕ್ಕಿಂತ ಮೊದಲು ತನ್ನ ಶಿಷ್ಯರಿಗೆ--ಫರಿಸಾಯರ ಕಪಟವೆಂಬ ಹುಳಿಯ ವಿಷಯದಲ್ಲಿ ನೀವು ಎಚ್ಚರವಾಗಿರ್ರಿ.
ಇದಲ್ಲದೆ ಆತನು ಅವರಿಗೆ--ಜಾಗ್ರತೆ ಯಾಗಿದ್ದು ಲೋಭಕ್ಕೆ ಎಚ್ಚರಿಕೆಯಾಗಿರ್ರಿ; ಯಾಕಂದರೆ ಒಬ್ಬ ಮನುಷ್ಯನಿಗೆ ಸಮೃದ್ಧಿಯಾದ ಆಸ್ತಿಯು ಅವನಿಗೆ ಜೀವಾಧಾರವಲ್ಲ ಅಂದನು.
ಆಗ ಆತನು ಅವರಿಗೆ--ಮನುಷ್ಯರ ಮುಂದೆ ನೀತಿವಂತರಾಗಿ ಮಾಡಿ ಕೊಳ್ಳುವವರು ನೀವೇ; ಆದರೆ ದೇವರು ನಿಮ್ಮ ಹೃದಯಗಳನ್ನು ತಿಳಿದಿದ್ದಾನೆ; ಯಾಕಂದರೆ ಮನುಷ್ಯರಲ್ಲಿ ಯಾವದು ಶ್ರೇಷ್ಠವೆಂದು ಎಣಿಸಲ್ಪ ಡುತ್ತದೋ ಅದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.
ದೇವರಿಂದ ಮಾತ್ರ ಬರುವ ಮಾನವನ್ನು ಹುಡುಕದೆ ಒಬ್ಬರಿಂದೊ ಬ್ಬರಿಗೆ ಬರುವ ಮಾನವನ್ನು ಹೊಂದುವ ನೀವು ಹೇಗೆ ನಂಬೀರಿ?
ಯಾಕಂದರೆ ಅವರು ದೇವರ ಹೊಗಳಿ ಕೆಗಿಂತ ಮನುಷ್ಯರ ಹೊಗಳಿಕೆಯನ್ನೇ ಹೆಚ್ಚಾಗಿ ಪ್ರೀತಿಸಿದರು.
ನಾನು ಇದನ್ನು ಇಷ್ಟಪೂರ್ವಕವಾಗಿ ಮಾಡಿದರೆ ನನಗೆ ಬಹುಮಾನವುಂಟು. ನನ್ನ ಇಷ್ಟಕ್ಕೆ ವಿರೋಧ ವಾಗಿ ಮಾಡಿದರೆ ಸುವಾರ್ತೆಯ ವಿಷಯವಾದ ದೈವನೇಮವು ನನ್ನ ವಶಕ್ಕೆ ಕೊಡಲ್ಪಟ್ಟಿದೆ.
(ಬರೆದಿರುವ ಪ್ರಕಾರ--ಆತನು ಬಡವರಿಗೆ ಧಾರಾಳವಾಗಿ ಹಂಚಿಕೊಟ್ಟನು; ಆತನ ನೀತಿಯು ಸದಾಕಾಲವೂ ಇರುವದು ಎಂಬದೇ.
ಶರೀರದಲ್ಲಿ ಅಂದವಾಗಿ ಕಾಣಬೇಕೆಂದು ಇಷ್ಟಪಡು ವವರೆಲ್ಲರೂ ತಮಗೆ ಕ್ರಿಸ್ತನ ಶಿಲುಬೆಯ ದೆಸೆಯಿಂದ ಹಿಂಸೆಯಾಗಬಾರದೆಂಬದಕ್ಕಾಗಿಯೇ ಸುನ್ನತಿಮಾಡಿಸಿ ಕೊಳ್ಳಬೇಕೆಂದು ನಿಮ್ಮನ್ನು ಬಲಾತ್ಕರಿಸುತ್ತಾರೆ.
ಆದದರಿಂದ ನಾವು ಕೇಳಿದ ಸಂಗತಿಗಳಿಗೆ ಯಾವಾಗಲಾದರೂ ಜಾರಿ ಹೋದೇ ವೆಂದು ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿ ರತಕ್ಕದ್ದು.
ನೀವು ಪರಿಶುದ್ಧರಿಗೆ ಉಪಚಾರ ಮಾಡಿದಿರಿ, ಇನ್ನು ಮಾಡುತ್ತಾ ಇದ್ದೀರಿ. ಈ ನಿಮ್ಮ ಕೆಲಸವನ್ನೂ ಇದರಲ್ಲಿ ನೀವು ಆತನ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯ ಪ್ರಯಾಸವನ್ನೂ ಮರೆಯು ವದಕ್ಕೆ ದೇವರು ಅನ್ಯಾಯಸ್ಥನಲ್ಲ.
ಐಗುಪ್ತದಲ್ಲಿನ ಐಶ್ವರ್ಯಗಳಿಗಿಂತಲೂ ಕ್ರಿಸ್ತನ ವಿಷಯವಾದ ನಿಂದೆಯು ಅಧಿಕ ಐಶ್ವರ್ಯ ವೆಂದೆಣಿಸಿಕೊಂಡನು; ಯಾಕಂದರೆ ಪ್ರತಿಫಲದ ಬಹು ಮಾನವನ್ನು ಅವನು ಗೌರವಿಸಿದನು.
ನಾವು ಪ್ರಯಾಸಪಟ್ಟು ಮಾಡಿದವು ಗಳನ್ನು ಕಳಕೊಳ್ಳದೆ ಪ್ರತಿಫಲವನ್ನು ಹೊಂದುವಂತೆ ನಿಮ್ಮನ್ನು ನೀವೇ ನೋಡಿಕೊಳ್ಳಿರಿ.