ನಮ್ಮನ್ನು ಶೋಧನೆಯೊಳಗೆ ನಡಿಸದೆ ಕೇಡಿನಿಂದ ತಪ್ಪಿಸು. ಯಾಕಂದರೆ ರಾಜ್ಯವೂ ಬಲವೂ ಮಹಿಮೆಯೂ ಎಂದೆಂದಿಗೂ ನಿನ್ನವೇ. ಆಮೆನ್.
Cross references
ಇವುಗಳಾದ ಮೇಲೆ ದೇವರು ಅಬ್ರಹಾಮನನ್ನು ಶೋಧಿಸುವದಕ್ಕಾಗಿ ಆತನು ಅವನಿಗೆ--ಅಬ್ರಹಾಮನೇ ಅಂದನು. ಅದಕ್ಕವನು --ಇಗೋ, ಇಲ್ಲಿದ್ದೇನೆ ಅಂದನು.
ಕರ್ತನು ಯುಗಯುಗಾಂತರಗಳ ವರೆಗೆ ಆಳುವನು.
ಶಪಿಸುವಂಥ ಈ ನೀರು ಹೊಟ್ಟೆಯನ್ನು ಉಬ್ಬಿಸುವದಕ್ಕೂ ತೊಡೆಯನ್ನು ಕ್ಷೀಣಿಸುವದಕ್ಕೂ ನಿನ್ನ ಕರುಳುಗಳ ಒಳಗೆ ಹೋಗು ವದು; ಈ ಪ್ರಕಾರ ಯಾಜಕನು ಆ ಸ್ತ್ರೀಯನ್ನು ಶಾಪದ ಪ್ರಮಾಣದಿಂದ ಪ್ರಮಾಣ ಮಾಡಿಸಬೇಕು. ಅದಕ್ಕೆ ಆ ಸ್ತ್ರೀಯು--ಹಾಗೆಯೇ ಆಗಲಿ ಅನ್ನಬೇಕು.
ನೀನು ತಗ್ಗಿಸಿಕೊಳ್ಳುವ ನಿಮಿತ್ತವೂ ಹೃದಯದಲ್ಲಿ ಇರುವದನ್ನು ಅಂದರೆ ನೀನು ಆತನ ಆಜ್ಞೆಗಳನ್ನು ಕಾಪಾಡುವಿಯೋ ಇಲ್ಲವೋ ಎಂದು ತಿಳುಕೊಳ್ಳುವ ದಕ್ಕೂ ನಿನ್ನ ದೇವರಾದ ಕರ್ತನು ನಿನ್ನನ್ನು ಈ ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿದ ಮಾರ್ಗವನ್ನೆಲ್ಲಾ ಜ್ಞಾಪಕಮಾಡಿಕೊಳ್ಳಬೇಕು.
ನಿನ್ನನ್ನು ಕುಂದಿಸಿ ಶೋಧಿಸಿ ಕಡೆಯಲ್ಲಿ ನಿನಗೆ ಒಳ್ಳೇದನ್ನು ಮಾಡುವಂತೆ, ನಿನ್ನ ಪಿತೃಗಳು ಅರಿಯದ ಮನ್ನವನ್ನು ಅರಣ್ಯದಲ್ಲಿ ನಿನಗೆ ತಿನ್ನಿಸಿ ದಂಥ ನಿನ್ನ ದೇವರಾದ ಕರ್ತನನ್ನು ಮರೆತು--
ಕರ್ತನಿಗೆ ಅಸಹ್ಯ ವಾಗಿರುವ ವಿಗ್ರಹವನ್ನಾಗಲಿ ಎರಕ ಹೊಯಿದದ್ದ ನ್ನಾಗಲಿ ಮಾಡಿಕೊಂಡು ಶಿಲ್ಪಿಯ ಕೈಯಿಂದ ಮಾಡಿಸಿಗುಪ್ತವಾಗಿ ನಿಲ್ಲಿಸುವವನಿಗೆ ಶಾಪ. ಜನವೆಲ್ಲಾ ಉತ್ತರ ಕೊಟ್ಟು ಆಮೆನ್ ಎಂದು ಹೇಳಲಿ.
ಯೆಹೋಯಾದಾವನ ಮಗನಾದ ಬೆನಾಯನು ಅರಸನಿಗೆ ಪ್ರತ್ಯುತ್ತರವಾಗಿ--ಆಮೆನ್: ಅರಸನಾದ ನನ್ನ ಒಡೆಯನ ದೇವರಾದ ಕರ್ತನು ಹಾಗೆಯೇ ಹೇಳಲಿ.
ಆದರೆ ಯಾಬೇಚನು ಇಸ್ರಾಯೇಲಿನ ದೇವರನ್ನು ಕೂಗಿ ಹೇಳಿದ್ದು--ನೀನು ನನ್ನನು ನಿಜವಾಗಿ ಆಶೀರ್ವ ದಿಸಬೇಕು; ನನ್ನ ಮೇರೆಯನ್ನು ವಿಸ್ತರಿಸಬೇಕು; ನಿನ್ನ ಕೈ ನನ್ನ ಸಂಗಡ ಇರಲಿ; ಅದು ನನ್ನನ್ನು ವ್ಯಥೆಪಡಿಸದ ಹಾಗೆ ನನ್ನನು ಕೇಡಿನಿಂದ ತಪ್ಪಿಸು. ಮತ್ತು ಅವನು ಬೇಡಿಕೊಂಡದ್ದನ್ನು ದೇವರು ದೊರಕಿಸಿದನು.
ಇಸ್ರಾಯೇಲಿನ ಕರ್ತ ನಾದ ದೇವರು ಯುಗಯುಗಾಂತರಗಳಲ್ಲಿ ಸ್ತುತಿ ಸಲ್ಪಡಲಿ ಎಂದು ಹೇಳಿರಿ. ಸಮಸ್ತ ಜನರು ಆಮೆನ್ ಎಂದು ಹೇಳಿ ಕರ್ತನನ್ನು ಸ್ತುತಿಸಿದರು.
ಕರ್ತನೇ, ದೊಡ್ಡಸ್ತಿಕೆಯೂ ಪರಾಕ್ರಮವೂ ಸೌಂದರ್ಯವೂ ಜಯವೂ ಮಹಿಮೆಯೂ ನಿನ್ನದೇ; ಆಕಾಶಗಳಲ್ಲಿಯೂ ಭೂಮಿಯಲ್ಲಿಯೂ ಇರುವದೆಲ್ಲಾ ನಿನ್ನದೇ. ಕರ್ತನೇ, ರಾಜ್ಯವು ನಿನ್ನದು; ನೀನು ಸಮಸ್ತಕ್ಕೂ ತಲೆಯಾಗಿ ಉನ್ನತವಾಗಿದ್ದೀ. ಐಶ್ವರ್ಯವೂ ಘನವೂ ನಿನ್ನ ಬಳಿ ಯಿಂದ ಬರುತ್ತದೆ.
ಕರ್ತನು ಯುಗ ಯುಗಾಂತರಗಳಿಗೂ ಅರಸನಾಗಿದ್ದಾನೆ; ಅನ್ಯಜನಾಂಗಗಳು ಆತನ ದೇಶದೊ ಳಗಿಂದ ನಾಶವಾದರು.
ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಕ್ಕೂ ಕೊಂಡಾಟ ವಾಗಲಿ. ಆಮೆನ್. ಆಮೆನ್.
ಮಹೋನ್ನತನಾದ ಕರ್ತನು ಭಯಂಕ ರನೂ ಭೂಮಿಯ ಮೇಲೆಲ್ಲಾ ಮಹಾಅರಸನೂ ಆಗಿದ್ದಾನೆ.
ದೇವರು ಭೂಮಿಗೆಲ್ಲಾ ಅರಸನು; ತಿಳುವಳಿಕೆಯಿಂದ ಸ್ತುತಿಗಳನ್ನು ಹಾಡಿರಿ.
ಆತನ ಮಹಿಮೆಯುಳ್ಳ ಹೆಸರಿಗೆ ಎಂದೆಂದಿಗೂ ಸ್ತೋತ್ರವಾಗಲಿ; ಆತನ ಮಹಿ ಮೆಯು ಭೂಮಿಯನ್ನೆಲ್ಲಾ ತುಂಬಲಿ. ಆಮೆನ್. ಆಮೆನ್.ಇಷಯನ ಮಗನಾದ ದಾವೀದನ ಪ್ರಾರ್ಥನೆಗಳು ಮುಗಿದವೆ.
ಕರ್ತನಿಗೆ ಯುಗಯುಗಕ್ಕೂ ಸ್ತುತಿಯಾಗಲಿ. ಆಮೆನ್, ಅಮೆನ್.
ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಾಂತರಕ್ಕೂ ಸ್ತುತಿಯುಂಟಾಗಲಿ. ಜನರೆಲ್ಲಾ ಆಮೆನ್ ಎಂದು ಹೇಳಲಿ. ನೀವು ಕರ್ತನನ್ನು ಸ್ತುತಿಸಿರಿ.
ಕರ್ತನು ಎಲ್ಲಾ ಕೇಡಿನಿಂದ ನಿನ್ನನೂ ನಿನ್ನ ಪ್ರಾಣವನ್ನೂ ಕಾಪಾಡುವನು.ಕರ್ತನು ನಿನ್ನ ಹೋಗೋಣವನ್ನೂ ಬರೋಣವನ್ನೂ ಇಂದಿನಿಂದ ಸದಾಕಾಲವೂ ಕಾಪಾಡುವನು.
ಓ ಕರ್ತನೇ, ನಿನ್ನ ಕೆಲಸಗಳೆಲ್ಲಾ ನಿನ್ನನ್ನು ಕೊಂಡಾಡುವವು; ನಿನ್ನ ಪರಿಶುದ್ಧರು ನಿನ್ನನ್ನು ಸ್ತುತಿಸುವರು.
ವ್ಯರ್ಥತ್ವವನ್ನೂ ಸುಳ್ಳುಗಳನ್ನೂ ನನ್ನಿಂದ ದೂರವಾಗಿ ತೆಗೆದುಹಾಕು. ಬಡತನವಾಗಲಿ ಐಶ್ವರ್ಯವಾಗಲಿ ನನಗೆ ಕೊಡಬೇಡ; ನನಗೆ ತಕ್ಕಷ್ಟು ಆಹಾರವನ್ನು ಭೋಜನ ಮಾಡಿಸು;
ಆದದರಿಂದ ಇಗೋ, ನಾನು--ಇದೊಂದು ಸಾರಿ ಅವರಿಗೆ ತಿಳಿಯುವಂತೆ ಮಾಡುವೆನು. ನನ್ನ ಕೈಯನ್ನೂ ಪರಾಕ್ರಮವನ್ನೂ ಅವರಿಗೆ ತಿಳಿಸುವೆನು. ನನ್ನ ಹೆಸರು ಕರ್ತನೇ ಎಂದು ಅವರು ತಿಳುಕೊಳ್ಳುವರು.
ನಿಮ್ಮ ಕುಮಾರರಿಗೆ ಹೆಂಡತಿಯರನ್ನು ತಕ್ಕೊಳ್ಳಿರಿ; ನಿಮ್ಮ ಕುಮಾರ್ತೆಯರನ್ನು ಪುರಷರಿಗೆ ಕೊಡಿರಿ, ಅವರು ಕುಮಾರ ಕುಮಾರ್ತೆಯರನ್ನು ಹೆರಲಿ; ಹೀಗೆ ನೀವು ಕಡಿಮೆಯಾಗದೆ ಅಲ್ಲಿ ಹೆಚ್ಚಿರಿ.
ಅವರು ನಿನ್ನನ್ನು ಮನುಷ್ಯರೊಳಗಿಂದ ತಳ್ಳಿ ಬಿಡುವರು; ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವದು; ನಿನಗೆ ಎತ್ತುಗಳ ಸಂಗಡ ಹುಲ್ಲನ್ನು ಮೇಯಿಸುವರು. ಆಕಾಶದ ಮಂಜಿನಿಂದ ನಿನ್ನನ್ನು ತೇವ ಮಾಡುವರು. ಮಹೋನ್ನತನು ಮನುಷ್ಯರ ರಾಜ್ಯವನ್ನು ಆಳುವನೆಂದೂ ತನ್ನ ಮನಸ್ಸಿಗೆ ಸರಿಬಂದ ವರಿಗೆ ಅದನ್ನು ಕೊಡುತ್ತಾನೆಂದೂ ನೀನು ತಿಳಿಯುವ ವರೆಗೂ ಆ ಏಳು ಕಾಲಗಳು ಕಳೆದು ಹೋಗುವವು.
ಆ ಕೊನೆಯ ದಿನಗಳಲ್ಲಿ ನೆಬೂಕದ್ನೆಚ್ಚರನಾದ ನಾನು ನನ್ನ ಕಣ್ಣುಗಳನ್ನು ಪರ ಲೋಕದ ಕಡೆಗೆ ಎತ್ತಿದೆನು; ನನ್ನ ತಿಳುವಳಿಕೆ ನನಗೆ ತಿರುಗಿ ಬಂತು; ಆಗ ನಾನು ಮಹೋನ್ನತನನ್ನು ಸ್ತುತಿಸಿ ನಿರಂತರವಾಗಿ ಜೀವಿಸುವಾತನೂ ನಿತ್ಯವಾದ ಆಳ್ವಿಕೆ ಯನ್ನು ಆಳುವಾತನನ್ನು ತಲತಲಾಂತರಗಳ ವರೆಗೂ ರಾಜ್ಯ ಉಳ್ಳಾತನನ್ನು ಹೊಗಳಿ ಘನಪಡಿಸಿದೆನು.
ಆದರೆ ಆ ಮಹೋನ್ನತನ ಪರಿಶುದ್ಧರು ರಾಜ್ಯವನ್ನು ವಶಪಡಿಸಿಕೊಂಡು ಅದನ್ನು ಎಂದಿಗೂ ಹೌದು, ಎಂದೆಂದಿಗೂ ವಶಪಡಿಸಿಕೊಳ್ಳು ವರು.
ಆದರೆ ನಿನ್ನ ಮಾತು ಹೌದಾಗಿದ್ದರೆ ಹೌದು, ಅಲ್ಲವಾಗಿದ್ದರೆ ಅಲ್ಲ ಎಂದಿರಲಿ; ಇವುಗಳಿಗಿಂತ ಹೆಚ್ಚಾದದ್ದು ಕೆಟ್ಟದ್ದ ರಿಂದ ಬರುವಂಥದ್ದು.
ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರು ವಂತೆ ಭೂಲೋಕದಲ್ಲಿಯೂ ನೆರೆವೇರಲಿ.
ನೀವು ಶೋಧನೆಗೆ ಒಳಗಾ ಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ಸಿದ್ಧವಾಗಿದೆ ನಿಜವೇ; ಆದರೆ ಶರೀರವು ಬಲಹೀನ ವಾಗಿದೆ ಅಂದನು.
ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
ತರುವಾಯ ಕರ್ತನು--ಸೀಮೋನನೇ, ಸೀಮೋ ನನೇ, ಇಗೋ, ಸೈತಾನನು ನಿಮ್ಮನ್ನು ಗೋಧಿಯಂತೆ ಒನೆಯಬೇಕೆಂದು ಅಪೇಕ್ಷೆಪಟ್ಟಿದ್ದಾನೆ.
ನೀನು ಅವರನ್ನು ಲೋಕದೊಳಗಿಂದ ತೆಗೆಯಬೇಕೆಂತಲ್ಲ; ಅವರನ್ನು ಕೇಡಿನಿಂದ ಕಾಪಾಡಬೇಕೆಂದು ನಾನು ಕೇಳಿಕೊಳ್ಳು ತ್ತೇನೆ.
ಮನುಷ್ಯನಿಗೆ ಸಾಮಾನ್ಯ ವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವದೂ ನಿಮಗೆ ಸಂಭವಿಸಲಿಲ್ಲ; ಆದರೆ ದೇವರು ನಂಬಿಗಸ್ತನು; ನೀವು ಸಹಿಸುವದಕ್ಕಿಂತ ಹೆಚ್ಚಿನ ಶೋಧನೆಯನ್ನು ಆತನು ನಿಮಗೆ ಬರಮಾಡುವದಿಲ್ಲ; ಆದರೆ ನೀವು ಅದನ್ನು ಸಹಿಸುವದಕ್ಕೆ ಶಕ್ತರಾಗುವಂತೆ ಶೋಧ
ಇದಲ್ಲದೆ ನೀನು ಆತ್ಮದಿಂದ ಸ್ತೋತ್ರ ಮಾಡುವಾಗ ತಿಳುವಳಿಕೆ ಯಿಲ್ಲದವನು ನೀನು ಮಾಡುವ ಕೃತಜ್ಞತಾಸ್ತುತಿಯನ್ನು ತಿಳಿಯದೆ ಇರುವದರಿಂದ ನೀನು ಹೇಳುವದಕ್ಕೆ ಆಮೆನ್ ಎಂದು ಹೇಳುವದು ಹೇಗೆ?
ಆದದರಿಂದ ನಮ್ಮ ಮೂಲಕ ದೇವರಿಗೆ ಮಹಿಮೆಯುಂಟಾಗುವಂತೆ ದೇವರ ಎಲ್ಲಾ ವಾಗ್ದಾನ ಗಳು ಆತನಲ್ಲಿ ಹೌದಾಗಿವೆ, ಆತನಲ್ಲಿಯೇ ಆಮೆನ್ ಆಗಿವೆ.
ಇದಲ್ಲದೆ ಹೇರಳವಾದ ಪ್ರಕಟಣೆಗಳ ಮೂಲಕ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಬಾರದೆಂದು ನನ್ನನ್ನು ಗುದ್ದುವದಕ್ಕಾಗಿ ಸೈತಾನನ ದೂತನಂತೆ ನನ್ನ ಶರೀರದಲ್ಲಿ ಒಂದು ಮುಳ್ಳು ನನಗೆ ಕೊಡಲ್ಪಟ್ಟಿದೆ; ಹೀಗೆ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಲಾರದಂತೆ ಇದಾಯಿತು.
ಈತನು ನಮ್ಮನ್ನು ಕೆಟ್ಟದ್ದಾಗಿರುವ ಈಗಿನ ಪ್ರಪಂಚದೊಳಗಿಂದ ಬಿಡಿಸಬೇಕೆಂದು ನಮ್ಮ ತಂದೆ ಯಾದ ದೇವರ ಚಿತ್ತಕ್ಕನುಸಾರವಾಗಿ ನಮ್ಮ ಪಾಪಗಳಿಗೋಸ್ಕರ ತನ್ನನ್ನು ತಾನೇ ಒಪ್ಪಿಸಿದನು.
ಇದಲ್ಲದೆ ಆತನು ಸತ್ತವರೊಳ ಗಿಂದ ಎಬ್ಬಿಸಿದಂಥ ಮತ್ತು ಪರಲೋಕದಿಂದ ಬರುವಂಥ ಆತನ ಕುಮಾರನನ್ನು ಎದುರು ನೋಡುವವರಾದಿರೆಂಬ ದನ್ನೂ ತಿಳಿಸುತ್ತಾರೆ. ಈ ಯೇಸುವು ಮುಂದೆ ಬರುವ ಕೋಪದಿಂದ ನಮ್ಮನ್ನು ತಪ್ಪಿಸಿದನು.
ಆದರೆ ಕರ್ತನು ನಂಬಿಗಸ್ತನು; ಆತನು ನಿಮ್ಮನ್ನು ದೃಢಪಡಿಸಿ ನಿಮ್ಮನ್ನು ಕೇಡಿನಿಂದ ತಪ್ಪಿಸುವನು.
ನಿತ್ಯನಾದ ಅರಸನೂ ನಿರ್ಲಯನೂ ಅದೃಶ್ಯನೂ ಆಗಿರುವ ಜ್ಞಾನಿಯಾದ ಒಬ್ಬನೇ ದೇವರಿಗೆ ಘನವೂ ಮಹಿಮೆಯೂ ಎಂದೆಂದಿಗೂ ಇರಲಿ. ಆಮೆನ್.
ಸ್ತುತಿ ಹೊಂದತಕ್ಕ ಒಬ್ಬನೇ ಸರ್ವ ಶಕ್ತನು. ತನ್ನ ಸಮಯಗಳಲ್ಲೇ ಆತನನ್ನು ಪ್ರತ್ಯಕ್ಷ ಪಡಿಸುವನು; ಆ ಸರ್ವಶಕ್ತನು ರಾಜಾಧಿರಾಜನೂ ಕರ್ತರ ಕರ್ತನೂ ಆಗಿದ್ದಾನೆ;