ಯಾವ ಮನುಷ್ಯನೂ ಇಬ್ಬರು ಯಜಮಾನರಿಗೆ ಸೇವೆ ಮಾಡಲಾರನು; ಯಾಕಂದರೆ ಅವನು ಒಬ್ಬನನ್ನು ಹಗೆಮಾಡಿ ಇನ್ನೊಬ್ಬನನ್ನು ಪ್ರೀತಿಮಾಡುವನು; ಇಲ್ಲವಾದರೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬ ನನ್ನು ಅಸಡ್ಡೆ ಮಾಡುವನು. ನೀವು ದೇವರನ್ನೂ ಧನವನ್ನೂ ಸೇವಿಸಲಾರಿರಿ.
Cross references
ಆಗ ಅವರು ತಮ್ಮ ಪಶುಗಳನ್ನು ಯೋಸೇಫನ ಬಳಿಗೆ ತಂದರು. ಯೋಸೇಫನು ಅವರ ಕುದುರೆ ಮಂದೆ ದನ ಕತ್ತೆ ಇವುಗಳ ಬದಲಾಗಿ ರೊಟ್ಟಿಯನ್ನು ಕೊಟ್ಟು. ಆ ವರುಷವೆಲ್ಲಾ ಅವರನ್ನು ಪೋಷಿಸಿದನು.
ಕರ್ತನನ್ನು ಸೇವಿಸುವದು ನಿಮಗೆ ಕೆಟ್ಟದ್ದಾಗಿ ಕಂಡರೆ ಈಹೊತ್ತು ನೀವು ಯಾರನ್ನು ಸೇವಿಸುವಿರಿ? ನಿಮ್ಮ ತಂದೆಗಳು ನದಿಯ ಆಚೆ ಸೇವಿ ಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ಅಮೋರಿಯರ ದೇವರುಗಳನ್ನೋ? ನೀವು ಆರಿಸಿ ಕೊಳ್ಳಿರಿ; ಆದರೆ ನಾನೂ ನನ್ನ ಮನೆಯವರೂ ಕರ್ತನನ್ನೇ ಸೇವಿಸುವೆವು ಅಂದನು.
ಅದಕ್ಕೆ ಯೆಹೋ ಶುವನು ಜನರಿಗೆ--ನೀವು ಕರ್ತನನ್ನು ಸೇವಿಸಲಾರಿರಿ; ಯಾಕಂದರೆ ಆತನು ಪರಿಶುದ್ಧನಾದ ದೇವರು, ರೋಷ ವುಳ್ಳ ದೇವರು; ಆತನು ನಿಮ್ಮ ದ್ರೋಹಗಳನ್ನೂ ಪಾಪಗಳನ್ನೂ ಮನ್ನಿಸನು.
ಆಗ ಸಮುವೇಲನು ಇಸ್ರಾಯೇಲ್ ಮನೆಯವರಿಗೆಲ್ಲಾ ಮಾತನಾಡಿ--ನೀವು ನಿಮ್ಮ ಪೂರ್ಣಹೃದಯದಿಂದ ಕರ್ತನ ಕಡೆಗೆ ತಿರುಗಿ ನಿಮ್ಮಲ್ಲಿರುವ ಅನ್ಯದೇವರುಗಳನ್ನೂ ಅಷ್ಟೋ ರೆತ್ನ್ನೂ ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಿ ನಿಮ್ಮ ಹೃದಯವನ್ನು ಕರ್ತನಿಗೆ ಸಿದ್ಧಮಾಡಿ ಆತನೊಬ್ಬನನ್ನೇ ಸೇವಿಸಿದರೆ ಆತನು ನಿಮ್ಮನ್ನು ಫಿಲಿಷ್ಟಿಯರ ಕೈಗಳೊ ಳಗಿಂದ ತಪ್ಪಿಸುವನು.
ಆಗ ಎಲೀಯನು ಸಕಲ ಜನರ ಬಳಿಗೆ ಬಂದು--ನೀವು ಎರಡು ಅಭಿಪ್ರಾಯಗಳ ಮಧ್ಯದಲ್ಲಿ ಎಷ್ಟರ ವರೆಗೂ ನಿಂತವರಾಗಿ ಇರುವಿರಿ. ಕರ್ತನು ದೇವರಾಗಿದ್ದರೆ ಆತನನ್ನು ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ ಅವನನ್ನು ಹಿಂಬಾಲಿಸಿರಿ ಅಂದನು. ಜನರು ಅವನಿಗೆ ಒಂದು ಮಾತಾದರೂ ಹೇಳಲಿಲ್ಲ.
ಅವರು ಕರ್ತನಿಗೆ ಭಯಪಟ್ಟು ಅವರು ಅಲ್ಲಿಂದ ಒಯ್ದು ಜನಾಂಗಗಳ ಪದ್ಧತಿಯ ಪ್ರಕಾರ ತಮ್ಮ ದೇವರುಗಳನ್ನು ಸೇವಿಸಿದರು.
ಹೀಗೆಯೇ ಈ ಜನಾಂಗಗಳು ಕರ್ತನಿಗೆ ಭಯಪಡದೆ ತಮ್ಮ ಕೆತ್ತಿದ ವಿಗ್ರಹಗಳನ್ನು ಸೇವಿಸಿದರು; ಅವರ ಪಿತೃಗಳು ಮಾಡಿದ ಹಾಗೆ ಅವರೂ ಅವರ ಮಕ್ಕಳೂ ಮೊಮ್ಮಕ್ಕಳೂ ಇಂದಿನ ವರೆಗೂ ಮಾಡುತ್ತಿರುತ್ತಾರೆ.
ನಿಮ್ಮ ವಿಷಯ ವಾಗಿ ಓ ಇಸ್ರಾಯೇಲಿನ ಮನೆತನದವರೇ, ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನೀವು ನನಗೆ ಕಿವಿಗೊಡದಿದ್ದರೆ ಹೋಗಿ ಇನ್ನು ಮೇಲೆಯೂ ನಿಮ್ಮ ನಿಮ್ಮ ವಿಗ್ರಹಗಳನ್ನು ಸೇವಿಸಿರಿ; ಆದರೆ ನಿಮ್ಮ ದಾನಗ ಳಿಂದಲೂ ವಿಗ್ರಹಗಳಿಂದಲೂ ಇನ್ನು ಮೇಲೆ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಪಡಿಸಬೇಡಿರಿ.
ಮಾಳಿಗೆಗಳ ಮೇಲೆ ಆಕಾಶದ ಸೈನ್ಯವನ್ನು ಆರಾಧಿಸುವವರನ್ನೂ ಕರ್ತನ ಮೇಲೆಯೂ ಮಲ್ಕಾಮನ ಮೇಲೆಯೂ ಆಣೆ ಇಟ್ಟುಕೊಳ್ಳುವವರನ್ನೂ
ಆಗ ಯೇಸು ಅವನಿಗೆ--ಸೈತಾನನೇ, ಇಲ್ಲಿಂದ ತೊಲಗಿಹೋಗು; ಯಾಕಂದರೆ--ನೀನು ನಿನ್ನ ದೇವ ರಾದ ಕರ್ತನನ್ನು ಮಾತ್ರ ಆರಾಧಿಸಿ ಆತನೊಬ್ಬನನ್ನೇ ಸೇವಿಸಬೇಕು ಎಂಬದಾಗಿ ಬರೆದದೆ ಅಂದನು.
ನಾನು ನಿಮಗೆ ಹೇಳುವದೇ ನಂದರೆ--ಅನ್ಯಾಯದ ಧನದಿಂದ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ; ಅದು ನಿಮ್ಮನ್ನು ಬಿಟ್ಟು ಹೋದಾಗ ಅವರು ನಿಮ್ಮನ್ನು ನಿತ್ಯವಾದ ನಿವಾಸಗಳಲ್ಲಿ ಸೇರಿಸಿ ಕೊಳ್ಳುವರು.
ಆದದರಿಂದ ಅನ್ಯಾಯವಾದ ಧನದಲ್ಲಿ ನೀವು ನಂಬಿಗಸ್ತರಾಗಿರದಿದ್ದರೆ ನಿಜವಾದ ಧನವನ್ನು ನಿಮ್ಮ ವಶಕ್ಕೆ ಯಾರು ಒಪ್ಪಿಸುವರು?
ಯಾವ ಸೇವಕನೂ ಇಬ್ಬರು ಯಜಮಾನರನ್ನು ಸೇವಿಸಲಾರನು; ಯಾಕಂದರೆ ಅವನು ಒಬ್ಬನನ್ನು ಹಗೆಮಾಡಿ ಮತ್ತೊಬ್ಬನನ್ನು ಪ್ರೀತಿ ಸುವನು; ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಿರಸ್ಕರಿಸುವನು; ನೀವು ದೇವರನ್ನೂ ಧನವನ್ನೂ ಸೇವಿಸಲಾರಿರಿ ಅಂದನು.
ನೀವು ಯಾರಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ಒಪ್ಪಿಸಿಕೊಡುತ್ತಿರೋ ಅವರಿಗೆ ದಾಸರಾಗಿಯೇ ವಿಧೇ ಯರಾಗಿರುವಿರೆಂಬದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ; ಇಲ್ಲವೆ ವಿಧೇಯತ್ವಕ್ಕೆ ದಾಸ ರಾದರೆ ನೀತಿಯೇ.
ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯ ರನ್ನು ಮೆಚ್ಚಿಸುವದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ದಾಸನಲ್ಲ.
ಆದರೆ ಐಶ್ವರ್ಯವಂತರಾಗ ಬೇಕೆಂದು ಮನಸ್ಸು ಮಾಡುವವರು ಶೋಧನೆಯಲ್ಲಿಯೂ ಉರ್ಲಿನಲ್ಲಿಯೂ ಸಿಕ್ಕಿಕೊಂಡು ಅನೇಕ ಬುದ್ಧಿಹೀನತೆಯ ಮತ್ತು ಹಾನಿಕರವಾದ ದುರಾಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ನಾಶನಗಳಲ್ಲಿ ಮುಳುಗಿಸುತ್ತವೆ.
ಈ ಲೋಕದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿ ಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ಭರವಸ ವನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲ ವನ್ನೂ ಹೇರಳವಾಗಿ ದಯಪಾಲಿಸುವ ಜೀವವುಳ್ಳ ದೇವರ ಮೇಲೆ ಭರವಸವನ್ನಿಡಬೇಕೆಂತಲೂ
ಯಾಕಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ತೊರೆದುಬಿಟ್ಟು ಥೆಸಲೋನಿಕಕ್ಕೆ ಹೋದನು; ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು;
ವ್ಯಭಿಚಾರಿಗಳೇ, ವ್ಯಭಿಚಾರಿಣಿ ಯರೇ, ಇಹಲೋಕ ಸ್ನೇಹವು ದೇವವೈರವೆಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಿರ ಬೇಕೆಂದಿರುವವನು ದೇವರಿಗೆ ವೈರಿಯಾಗಿದ್ದಾನೆ.
ಲೋಕವನ್ನಾಗಲಿ ಲೋಕದಲ್ಲಿರುವವುಗಳ ನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕ ವನ್ನು ಪ್ರೀತಿಸಿದರೆ ತಂದೆಯ ಪ್ರೀತಿಯು ಅವನಲ್ಲಿಲ್ಲ.