ಆದಕಾರಣ ನಾನು ನಿಮಗೆ ಹೇಳುವದೇ ನಂದರೆ--ನಿಮ್ಮ ಪ್ರಾಣಕ್ಕೋಸ್ಕರ ನೀವು ಏನು ತಿನ್ನಬೇಕು ಮತ್ತು ಏನು ಕುಡಿಯಬೇಕು ಎಂಬದರ ವಿಷಯಕ್ಕಾಗಲೀ ಇಲ್ಲವೆ ನಿಮ್ಮ ಶರೀರಕ್ಕೆ ನೀವು ಏನು ಹೊದ್ದುಕೊಳ್ಳಬೇಕೆಂತಾಗಲೀ ಚಿಂತೆ ಮಾಡ ಬೇಡಿರಿ; ಊಟಕ್ಕಿಂತ ಪ್ರಾಣವೂ ಉಡುಪಿಗಿಂತ ಶರೀರವೂ ಹೆ
Cross references
ನಿನ್ನ ಭಾರವನ್ನು ಕರ್ತನ ಮೇಲೆ ಹಾಕು; ಆತನು ನಿನಗೆ ಆಧಾರವಾಗಿರುವನು. ಆತನು ಎಂದೆಂದಿಗೂ ನೀತಿವಂತನನ್ನು ಕದಲಗೊಡಿಸನು.ಓ ದೇವರೇ, ನೀನು ಅವರನ್ನು ನಾಶನದ ಕುಣಿಯಲ್ಲಿ ಇಳಿಯ ಮಾಡುವಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಯದ ದಿವಸಗಳಲ್ಲಿ ಅರ್ದದಷ್ಟಾದರೂ ಜೀವಿ ಸುವದಿಲ್ಲ; ನಾನು ನಿನ್ನಲ್ಲಿ ಭರವಸವಿಡುತ್ತೇನೆ.
ನಾನು ನಿಮಗೆ ಹೇಳುವದೇನಂದರೆ-- ನಿಷ್ಕಾರಣವಾಗಿ ತನ್ನ ಸಹೋದರನ ಮೇಲೆ ಯಾವನಾದರೂ ಸಿಟ್ಟುಗೊಂಡರೆ ಅವನು ನ್ಯಾಯತೀರ್ಪಿನ ಅಪಾಯಕ್ಕೆ ಒಳಗಾಗುವನು; ಮತ್ತು ಯಾವನಾದರೂ ತನ್ನ ಸಹೋದರನಿಗೆ-- ವ್ಯರ್ಥವಾದವನೇ ಎಂದು ಹೇಳಿದರೆ ಅವನು ನ್ಯಾಯಸಭೆಯ ಅಪಾಯಕ್ಕೆ ಒಳಗಾಗುವನು
ನಿಮ್ಮಲ್ಲಿ ಯಾವ ನಾದರೂ ಚಿಂತೆಮಾಡಿ ತನ್ನ ನೀಳವನ್ನು ಒಂದು ಮೊಳ ಉದ್ದ ಬೆಳೆಸಿಕೊಳ್ಳಲು ಸಾಧ್ಯವಾದೀತೇ?
ಆದಕಾರಣ--ನಾವು ಏನು ಊಟಮಾಡಬೇಕು? ಇಲ್ಲವೆ ಏನು ಕುಡಿಯಬೇಕು? ಇಲ್ಲವೆ ಯಾವದನ್ನು ಧರಿಸಿಕೊಳ್ಳಬೇಕು ಎಂದು ಹೇಳುತ್ತಾ ಚಿಂತೆಮಾಡ ಬೇಡಿರಿ.
ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.
ಆದರೆ ಅವರು ನಿಮ್ಮನ್ನು ಒಪ್ಪಿಸಿ ಕೊಟ್ಟಾಗ ನೀವು ಹೇಗೆ ಇಲ್ಲವೆ ಏನು ಮಾತನಾಡ ಬೇಕೆಂಬದಾಗಿ ಯೋಚಿಸಬೇಡಿರಿ; ಯಾಕಂದರೆ ನೀವು ಏನು ಮಾತನಾಡಬೇಕೆಂಬದು ಆ ಗಳಿಗೆಯಲ್ಲಿಯೇ ನಿಮಗೆ ತಿಳಿಸಲ್ಪಡುವದು.
ಮುಳ್ಳುಗಳಲ್ಲಿ ಬೀಜವನ್ನು ಅಂಗೀಕರಿಸಿದವನು ಸಹ ಇವನೇ; ಇವನು ವಾಕ್ಯವನ್ನು ಕೇಳುತ್ತಾನೆ; ಆದರೆ ಈ ಪ್ರಪಂಚದ ಚಿಂತೆಯೂ ಐಶ್ವರ್ಯದ ಮೋಸವೂ ವಾಕ್ಯವನ್ನು ಅಡಗಿಸುವ ದರಿಂದ ಅವನು ಫಲ ಕೊಡಲಾರನು.
ಈ ಲೋಕದ ಚಿಂತೆಗಳೂ ಐಶ್ವರ್ಯದ ಮೋಸವೂ ಇತರ ವಿಷಯಗಳ ಆಶೆಗಳೂ ಒಳಗೆ ಸೇರಿ ವಾಕ್ಯವನ್ನು ಅಡಗಿಸುವದರಿಂದ ಅದು ನಿಷ್ಫಲವಾಗುವದು.
ಆದರೆ ಅವರು ನಿಮ್ಮನ್ನು ಒಪ್ಪಿಸುವದಕ್ಕಾಗಿ ತಕ್ಕೊಂಡು ಹೋಗುವಾಗ ನೀವು ಏನು ಮಾತನಾಡಬೇಕೆಂಬದನ್ನು ಮುಂಚಿತವಾಗಿ ಚಿಂತಿಸಬೇಡಿರಿ, ಆಲೋಚಿಸಲೂ ಬೇಡಿರಿ; ಆದರೆ ಆ ಗಳಿಗೆಯಲ್ಲಿ ನಿಮಗೆ ಯಾವದು ಕೊಡಲ್ಪಡುವದೋ ಅದನ್ನೇ ಮಾತನಾಡಿರಿ; ಯಾಕಂ ದರೆ ಮಾತನಾಡುವವರು ನೀವಲ್ಲ, ಆದರೆ ಪರಿಶು
ಮುಳ್ಳುಗಳ ಮಧ್ಯದಲ್ಲಿ ಬಿದ್ದ ಬೀಜದವರು ಯಾರಂದರೆ ಅವರು ಕೇಳಿದ ಮೇಲೆ ಮುಂದರಿದು ಈ ಜೀವನದ ಚಿಂತೆಗಳಿಂದಲೂ ಐಶ್ವರ್ಯಗಳಿಂದಲೂ ಭೋಗಗಳಿಂದಲೂ ಅಡಗಿಸ ಲ್ಪಟ್ಟು ಪರಿಪೂರ್ಣವಾಗಿ ಫಲಿಸದವರು.
ಆದರೆ ಮಾರ್ಥಳು ಬಹಳ ಕೆಲಸದ ನಿಮಿತ್ತವಾಗಿ ಬೇಸರಗೊಂಡು ಆತನ ಬಳಿಗೆ ಬಂದು--ಕರ್ತನೇ, ಕೆಲಸ ಮಾಡುವದಕ್ಕೆ ನನ್ನ ಸಹೋದರಿಯು ನನ್ನೊಬ್ಬಳನ್ನೇ ಬಿಟ್ಟಿರುವದು ನಿನಗೆ ಚಿಂತೆಯಿಲ್ಲವೋ? ಆದದರಿಂದ ನನಗೆ ಸಹಾಯಮಾಡುವದಕ್ಕಾಗಿ ಅವಳಿಗೆ ಹೇಳು ಅಂದಳು.
ನನ್ನ ಸ್ನೇಹಿತರಾದ ನಿಮಗೆ ನಾನು ಹೇಳುವದೇನಂದರೆ--ದೇಹವನ್ನು ಕೊಂದು ಅದಕ್ಕಿಂತ ಹೆಚ್ಚೇನೂ ಮಾಡಲಾರ ದವರಿಗೆ ಹೆದರಬೇಡಿರಿ.
ಇದಲ್ಲದೆ ನಾನೂ ನಿಮಗೆ ಹೇಳುವದೇನಂದರೆ--ಯಾವನಾದರೂ ಮನು ಷ್ಯರ ಮುಂದೆ ನನ್ನನ್ನು ಒಪ್ಪಿಕೊಂಡರೆ ಮನುಷ್ಯ ಕುಮಾರನು ಸಹ ದೇವದೂತರ ಮುಂದೆ ಅವನನ್ನು ಒಪ್ಪಿಕೊಳ್ಳುವನು.
ಅವರು ನಿಮ್ಮನ್ನು ಸಭಾ ಮಂದಿರಗಳಿಗೂ ನ್ಯಾಯಾಧಿಪತಿಗಳ ಮುಂದೆಯೂ ಅಧಿಕಾರಿಗಳ ಮುಂದೆಯೂ ತಂದಾಗ ಹೇಗೆ ಇಲ್ಲವೆ ಯಾವದನ್ನು ಉತ್ತರಕೊಡಬೇಕೆಂದು ಇಲ್ಲವೆ ಏನು ಹೇಳಬೇಕೆಂದು ಯೋಚಿಸಬೇಡಿರಿ.
ಆತನು ತನ್ನ ಶಿಷ್ಯರಿಗೆ--ನೀವು ನಿಮ್ಮ ಪ್ರಾಣಕ್ಕೆ ಏನು ತಿನ್ನಬೇಕು ಇಲ್ಲವೆ ನಿಮ್ಮ ದೇಹಕ್ಕೆ ಏನು ಹೊದ್ದು ಕೊಳ್ಳಬೇಕು ಎಂದು ಚಿಂತೆ ಮಾಡಬೇಡಿರಿ ಎಂದು ನಾನು ನಿಮಗೆ ಹೇಳುತ್ತೇನೆ.
ದೇವರು ತನ್ನ ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೊಸ್ಕರ ಒಪ್ಪಿಸಿಕೊಟ್ಟ ಮೇಲೆ ಆತನೊಂದಿಗೆ ಎಲ್ಲವುಗಳನ್ನು ಉಚಿತವಾಗಿ ನಮಗೆ ಕೊಡದೆ ಇರುವನೇ?
ಆದರೆ ನೀವು ಚಿಂತೆಯಿಲ್ಲದವರಾಗಿರಬೇಕೆಂಬದು ನನ್ನ ಇಷ್ಟ. ಮದುವೆಯಿಲ್ಲದವನು ತಾನು ಕರ್ತನನ್ನು ಹೇಗೆ ಮೆಚ್ಚಿಸಬೇಕೆಂದು ಕರ್ತನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾನೆ.
ಯಾವ ಸಂಬಂಧ ವಾಗಿಯೂ ಚಿಂತೆಮಾಡದೆ ಸರ್ವವಿಷಯದಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆ ಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ತಿಳಿಯ ಪಡಿಸಿರಿ.
ಯುದ್ಧಕ್ಕೆ ಹೋಗುವವನು ಈ ಜೀವನದ ವ್ಯವಹಾರಗಳಲ್ಲಿ ಸಿಕ್ಕಿಕೊಳ್ಳದೆ ತನ್ನನ್ನು ಸೈನಿಕನನ್ನಾಗಿ ಆರಿಸಿಕೊಂಡವನನ್ನು ಮೆಚ್ಚಿಸುವದಕ್ಕೆ ಪ್ರಯಾಸಪಡು ತ್ತಾನೆ.
ನಿಮ್ಮ ನಡತೆಯು ದ್ರವ್ಯಾಶೆ ಯಿಲ್ಲದ್ದಾಗಿರಲಿ; ನಿಮಗಿರುವವುಗಳಲ್ಲಿ ತೃಪ್ತರಾಗಿರ್ರಿ; ಯಾಕಂದರೆ--ನಾನು ನಿನ್ನನ್ನು ಎಂದಿಗೂ ಕೈಬಿಡುವದಿಲ್ಲ ಇಲ್ಲವೆ ತೊರೆಯುವದಿಲ್ಲವೆಂದು ಆತನು ಹೇಳಿದ್ದಾನೆ.
ನಿಮ್ಮ ಚಿಂತೆಯನ್ನೆಲ್ಲಾ ಆತನ ಮೇಲೆ ಹಾಕಿರಿ, ಆತನು ನಿಮಗೋಸ್ಕರ ಚಿಂತಿಸುತ್ತಾನೆ.