ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.
Cross references
ನೀವು--ಇಗೋ, ನಾವು ಬಿತ್ತುವದಿಲ್ಲ ಇಲ್ಲವೆ ನಮ್ಮ ಹುಟ್ಟುವಳಿಯಲ್ಲಿ ಕೂಡಿಸಿಕೊಳ್ಳುವದಿಲ್ಲ, ಏಳ ನೆಯ ವರುಷದಲ್ಲಿ ನಾವು ಏನು ತಿನ್ನೋಣ ಎಂದು ಅನ್ನುವಿರಿ.
ಆದದರಿಂದ ದೇವರು ಅವನಿಗೆ--ನೀನು ನಿನಗೋಸ್ಕರ ಹೆಚ್ಚಾದ ದಿವಸಗಳನ್ನು ಕೇಳದೆ ನಿನಗೋಸ್ಕರ ಐಶ್ವರ್ಯವನ್ನು ಕೇಳದೆ ನಿನ್ನ ಶತ್ರುಗಳ ಪ್ರಾಣವನ್ನು ಕೇಳದೆ ನ್ಯಾಯವನ್ನು ತಿಳಿಯಲು ನಿನಗೋಸ್ಕರ ಜ್ಞಾನವನ್ನು ಕೇಳಿದ್ದ ರಿಂದ
ಆಗ ಎಲೀಯನು ಅವಳಿಗೆ--ಭಯಪಡಬೇಡ; ನೀನು ಹೋಗಿ ನಿನ್ನ ಮಾತಿನ ಪ್ರಕಾರವೇ ಮಾಡು. ಆದರೆ ಮೊದಲು ಅದರಲ್ಲಿ ನನಗೆ ಒಂದು ಚಿಕ್ಕ ರೊಟ್ಟಿ ಮಾಡಿ, ನನ್ನ ಬಳಿಗೆ ತಕ್ಕೊಂಡು ಬಾ; ತರು ವಾಯ ನಿನಗೂ ನಿನ್ನ ಮಗನಿಗೂ ಸಿದ್ದಮಾಡಿಕೋ.
ಅದೇ ರಾತ್ರಿಯಲ್ಲಿ ದೇವರು ಸೊಲೊಮೋನನಿಗೆ ಕಾಣಿಸಿಕೊಂಡು--ನಾನು ನಿನಗೆ ಕೊಡಬೇಕಾದದ್ದನ್ನು ಕೇಳಿಕೋ ಅಂದನು.
ಹೀಗೆಯೇ ಹಿಜ್ಕೀಯನು ಸಮಸ್ತ ಯೆಹೂದದಲ್ಲಿ ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಉತ್ತಮವಾದ ದ್ದನ್ನೂ ಸರಿಯಾದದ್ದನ್ನೂ ಸತ್ಯವಾದದ್ದನ್ನೂ ನಡಿಸಿ ದನು.ಇದಲ್ಲದೆ ದೇವರ ಆಲಯದ ಸೇವೆಯ ಲ್ಲಿಯೂ ನ್ಯಾಯಪ್ರಮಾಣದಲ್ಲಿಯೂ ಆಜ್ಞೆಗಳಲ್ಲಿಯೂ ತನ್ನ ದೇವರನ್ನು ಹುಡುಕಲು ಆರಂಭಿಸಿದ ಸಮಸ್ತ ಕಾರ್ಯಗಳಲ್ಲಿ ಅವನು ತನ್ನ ಪೂರ್ಣಹೃದಯದಿಂದ ಮಾಡಿ ವೃದ್ಧಿಹೊಂದಿದನು.
ಆತನ ಪರಿ ಶುದ್ಧರೇ, ನೀವು ಕರ್ತನಿಗೆ ಭಯಪಡಿರಿ; ಆತನಿಗೆ ಭಯಪಡುವವರಿಗೆ ಏನೂ ಕೊರತೆ ಇಲ್ಲ.
ಕರ್ತನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ಆಗ ದೇಶದಲ್ಲಿ ವಾಸಮಾಡಿ ನಿಜವಾಗಿ ತೃಪ್ತಿ ಹೊಂದು ವಿ.
ಕರ್ತನು ಯಥಾರ್ಥರ ದಿನಗಳನ್ನು ಅರಿತಿದ್ದಾನೆ; ಅವರ ಬಾಧ್ಯತೆಯು ಯುಗಯುಗಕ್ಕೂ ಇರುವದು.
ನಾನು ಬಾಲಕನಾಗಿದ್ದೆನು, ಈಗ ಮುದುಕನಾಗಿದ್ದೇನೆ; ಆದರೆ ನೀತಿವಂತನು ಕೈಬಿಡಲ್ಪಟ್ಟದ್ದನ್ನೂ ಅವನ ಸಂತತಿಯು ರೊಟ್ಟಿಗಾಗಿ ಭಿಕ್ಷೆಬೇಡುವದನ್ನೂ ನಾನು ನೋಡಲಿಲ್ಲ.
ದೇವರಾದ ಕರ್ತನು ಸೂರ್ಯ ನೂ ಗುರಾಣಿಯೂ ಆಗಿದ್ದಾನೆ; ಕರ್ತನು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾನೆ; ಸಂಪೂರ್ಣವಾಗಿ ನಡೆದುಕೊಳ್ಳುವವರಿಗೆ ಆತನು ಯಾವ ಒಳ್ಳೇದನ್ನು ಹಿಂದೆಗೆಯುವದಿಲ್ಲ.ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.
ನನ್ನ ಮಗನೇ, ನನ್ನ ಮಾತುಗಳನ್ನು ನೀನು ಅಂಗೀಕರಿಸಿ ನನ್ನ ಆಜ್ಞೆಗಳನ್ನು ನಿನ್ನಲ್ಲಿ ಬಚ್ಚಿಟ್ಟುಕೊಂಡರೆ
ನಿನ್ನ ಆಸ್ತಿಯಿಂದಲೂ ಅಭಿವೃದ್ಧಿಯ ಎಲ್ಲಾ ಪ್ರಥಮ ಫಲಗಳಿಂದಲೂ ಕರ್ತನನ್ನು ಸನ್ಮಾನಿಸು.
ಕರ್ತನಲ್ಲಿ ಮಾತ್ರ ನನಗೆ ನೀತಿಯೂ ಬಲವೂ ಉಂಟೆಂದು ಮನುಷ್ಯರೂ ಸಹ ಆತನ ಬಳಿಗೆ ಬರುವರು; ಆತನ ಮೇಲೆ ಉರಿಗೊಂಡವ ರೆಲ್ಲರೂ ನಾಚಿಕೆಗೆ ಈಡಾಗುವರು ಎಂದು ಒಬ್ಬನು ನಿಶ್ಚಯವಾಗಿ ಹೇಳುತ್ತಾನೆ.ಇಸ್ರಾಯೇಲಿನ ಸಂತಾನದವರೆಲ್ಲರೂ ಕರ್ತನಲ್ಲಿ ನೀತಿವಂತರಾಗಿ ಹೆಚ್ಚಳಪಡುವರು.
ನಾನು ನನ್ನ ಕಣ್ಣುಗಳನ್ನು ಅವರ ಮೇಲೆ ಒಳ್ಳೇದಕ್ಕಾಗಿ ಇಡುವೆನು. ಈ ದೇಶಕ್ಕೆ ಅವರನ್ನು ತಿರಿಗಿ ಬರಮಾಡುವೆನು; ಕೆಡವಿ ಹಾಕದೆ ಅವರನ್ನು ಕಟ್ಟುವೆನು, ಕೀಳದೆ ಅವರನ್ನು ನೆಡುವೆನು.
ಸೈನ್ಯಗಳ ಕರ್ತನು ಮಾತನಾಡಿ ಹೀಗೆ ಹೇಳುತ್ತಾನೆ, ಏನಂದರೆ--ಕಾಲವು ಅಂದರೆ ಕರ್ತನ ಆಲಯವನ್ನು ಕಟ್ಟುವ ಕಾಲವು ಬರಲಿಲ್ಲ ಎಂದು ಈ ಜನರು ಅನ್ನು ತ್ತಾರೆ.
ಆ ದಿವಸಗಳು ಇದ್ದದ್ದು ಮೊದಲುಗೊಂಡು ಒಬ್ಬನು ಇಪ್ಪತ್ತು ಸೇರಿನ ರಾಶಿಗೆ ಬಂದಾಗ ಹತ್ತು ಸೇರು ಮಾತ್ರವಾಗಿತ್ತು; ಒಬ್ಬನು ಐವತ್ತು ಪಾತ್ರೆಗಳನ್ನು ತುಂಬಿ ಸುವದಕ್ಕೆ ತೊಟ್ಟಿಗೆ ಬಂದಾಗ ಇಪ್ಪತ್ತು ಮಾತ್ರ ದೊರೆ ಯುತ್ತಿತ್ತಷ್ಟೆ.
ನೀವು ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪ ವಾಗಿದೆ ಎಂದು ಹೇಳಿದನು.
ಅಂದಿನಿಂದ ಯೇಸು--ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪಿಸಿತು ಎಂದು ಸಾರಿ ಹೇಳುವದಕ್ಕೆ ಪ್ರಾರಂಭಿಸಿದನು.
ನೀತಿಗೋಸ್ಕರ ಹಸಿದು ಬಾಯಾರಿದವರು ಧನ್ಯರು; ಯಾಕಂದರೆ ಅವರು ತೃಪ್ತಿ ಹೊಂದುವರು.
ಪರಲೋಕರಾಜ್ಯವು ಹೊಲದಲ್ಲಿ ಬಚ್ಚಿಟ್ಟಿದ ಸಂಪತ್ತಿಗೆ ಹೋಲಿಕೆಯಾಗಿದೆ; ಅದನ್ನು ಒಬ್ಬ ಮನು ಷ್ಯನು ಕಂಡುಕೊಂಡು ಬಚ್ಚಿಟ್ಟು ಅದರ ಸಂತೋಷದ ನಿಮಿತ್ತ ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಳ್ಳುತ್ತಾನೆ.
ಮತ್ತು ತನ್ನ ಮನೆಗಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ತಂದೆಯನ್ನಾಗಲೀ ತಾಯಿಯನ್ನಾಗಲೀ ಮಕ್ಕಳನ್ನಾಗಲೀ ಭೂಮಿಯನ್ನಾಗಲೀ ನನ್ನ ಹೆಸರಿ ನಿಮಿತ್ತವಾಗಿ ಬಿಟ್ಟುಬಿಡುವ ಪ್ರತಿಯೊಬ್ಬನು ನೂರರಷ್ಟು ಹೊಂದಿಕೊಳ್ಳುವನು; ಮತ್ತು ನಿತ್ಯಜೀವವನ್ನು ಬಾಧ್ಯ ವಾಗಿ ಹೊಂದುವನುಆದರೆ ಮೊದಲನೆಯ ವರಾದ ಬಹುಮಂದಿ ಕಡೆಯವರಾಗುವರು; ಮತ್ತು ಕಡೆಯವರಾದವರು ಮೊದಲನೆಯವರಾಗುವರು.
ಅದಕ್ಕೆ ಯೇಸು ಪ್ರತ್ಯುತ್ತರವಾಗಿ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ; ಯಾವನಾದರೂ ನನ್ನ ನಿಮಿತ್ತವಾಗಿಯೂ ಸುವಾರ್ತೆಯ ನಿಮಿತ್ತವಾಗಿಯೂ ಮನೆಯನ್ನಾಗಲೀ ಸಹೋದರರನ್ನಾಗಲೀ ಸಹೋದರಿಯರನ್ನಾಗಲೀ ತಂದೆಯನ್ನಾಗಲೀ ತಾಯಿಯನ್ನಾಗಲೀ ಹೆಂಡತಿಯನ್ನಾಗಲೀ ಮಕ್ಕಳನ್ನಾಗಲೀ ಭೂಮಿಯ ನ್ನಾಗಲೀ ಬಿಟು
ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ ನ್ಯಾಯವಿಧಿಗಳನ್ನು ತಪ್ಪಿಲ್ಲದೆ ಕೈಕೊಂಡು ದೇವರ ಮುಂದೆ ನೀತಿವಂತರಾಗಿದ್ದರು.
ಆದರೆ ನೀವು ದೇವರ ರಾಜ್ಯವನ್ನೇ ಹುಡುಕಿರಿ. ಆಗ ಇವೆಲ್ಲವುಗಳು ನಿಮಗೆ ಕೂಡಿಸಲ್ಪಡುವವು.
ಆತನು ಅವರಿಗೆ--ಒಬ್ಬನು ಮನೆ ಯನ್ನಾದರೂ ತಂದೆತಾಯಿಗಳನ್ನಾದರೂ ಸಹೋದರರನ್ನಾದರೂ ಹೆಂಡತಿಯನ್ನಾದರೂ ಇಲ್ಲವೆ ಮಕ್ಕಳ ನ್ನಾದರೂ ದೇವರ ರಾಜ್ಯಕ್ಕೋಸ್ಕರ ಬಿಟ್ಟುಬಿಡುವವನು
ಆಯಾ ಕಾಲದಲ್ಲಿ ಒಬ್ಬ ದೂತನು ಕೊಳ ದೊಳಗೆ ಇಳಿದುಹೋಗಿ ನೀರನ್ನು ಕದಲಿಸುತ್ತಿದ್ದನು; ನೀರು ಕದಲಿಸಲ್ಪಟ್ಟ ಮೇಲೆ ಮೊದಲು ಯಾರು ನೀರಿನೊಳಗೆ ಹೆಜ್ಜೆಯಿಡುತ್ತಿದ್ದರೋ ಅವರಿಗೆ ಯಾವ ರೋಗವಿದ್ದರೂ ಸ್ವಸ್ಥವಾಗುತ್ತಿತ್ತು.
ನಾಶವಾಗುವ ಆಹಾರಕ್ಕಾಗಿ ಅಲ್ಲ, ನಿತ್ಯಜೀವ ವನ್ನುಂಟು ಮಾಡುವ ಆಹಾರಕ್ಕೋಸ್ಕರ ದುಡಿಯಿರಿ; ಅದನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ತಂದೆಯಾದ ದೇವರು (ಇದಕ್ಕಾಗಿ) ಆತನಿಗೆ ಮುದ್ರೆ ಹಾಕಿದ್ದಾನೆ ಅಂದನು.
ಇಗೋ, ನಿಮ್ಮಲ್ಲಿ ಸಂಚಾರ ಮಾಡಿ ದೇವರ ರಾಜ್ಯವನ್ನು ಸಾರಿದವನಾದ ನನ್ನ ಮುಖವನ್ನು ಇನ್ನು ಮೇಲೆ ನಿಮ್ಮಲ್ಲಿ ಒಬ್ಬರೂ ಕಾಣುವದಿಲ್ಲವೆಂದು ನಾನು ಬಲ್ಲೆನು.
ಅವನು ತುಂಬಾ ಧೈರ್ಯ ದೊಂದಿಗೆ ದೇವರರಾಜ್ಯವನ್ನು ಸಾರುತ್ತಾ ಕರ್ತನಾದ ಯೇಸು ಕ್ರಿಸ್ತನ ವಿಷಯವಾದವುಗಳನ್ನು ಬೋಧಿಸುತ್ತಿ ದ್ದನು. ಯಾವ ಮನುಷ್ಯನೂಅವನಿಗೆ ಅಡ್ಡಿಮಾಡಲಿಲ್ಲ.
ನೀತಿವಂತನು ನಂಬಿಕೆಯಿಂದಲೇ ಜೀವಿಸುವನು ಎಂದು ಬರೆಯಲ್ಪಟ್ಟಂತೆ ದೇವರ ನೀತಿಯು ಅದರಲ್ಲಿ ವಿಶ್ವಾಸದಿಂದ ವಿಶ್ವಾಸಕ್ಕೆ ಪ್ರಕಟವಾಯಿತು.
ಈಗಲಾದರೋ ದೇವರ ನೀತಿಯು ನ್ಯಾಯ ಪ್ರಮಾಣವಿಲ್ಲದೆ ಪ್ರಕಟವಾಗಿದೆ. ಅದು ನ್ಯಾಯ ಪ್ರಮಾಣದಿಂದಲೂ ಪ್ರವಾದಿಗಳಿಂದಲೂ ಸಾಕ್ಷಿಗೊಂ ಡಿದೆ.
ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು?
ಅವರು ದೇವ ರಿಂದ ದೊರಕುವ ನೀತಿಯನ್ನರಿಯದೆ ಸ್ವನೀತಿಯನ್ನೇ ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.
ಯಾಕಂದರೆ ತಿನ್ನುವದೂ ಕುಡಿಯುವದೂ ದೇವರ ರಾಜ್ಯವಲ್ಲ; ಆದರೆ ನೀತಿಯೂ ಸಮಾಧಾನವೂ ಪವಿತ್ರಾತ್ಮನಲ್ಲಿರುವ ಆನಂದವೂ ಆಗಿದೆ.
ಆದರೆ ನೀವು ಕ್ರಿಸ್ತ ಯೇಸುವಿನಲ್ಲಿ ರುವದು ಆತನಿಂದಲೇ; ಆತನು ನಮಗೆ ದೇವರ ಕಡೆಯಿಂದ ಜ್ಞಾನವು ನೀತಿ ಶುದ್ಧೀಕರಣ ವಿಮೋಚನೆ ಗಳಾಗಿ ಮಾಡಲ್ಪಟ್ಟಿದ್ದಾನೆ.ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು.
ಪೌಲನಾಗಲಿ ಅಪೊಲ್ಲೋಸನಾಗಲಿ ಕೇಫನಾಗಲಿ ಲೋಕವಾಗಲಿ ಜೀವವಾಗಲಿ ಮರಣವಾಗಲಿ ಈಗಿನ ಸಂಗತಿ ಗಳಾಗಲಿ ಮುಂದಣ ಸಂಗತಿಗಳಾಗಲೀ ಸಮಸ್ತವೂ ನಿಮ್ಮವೇ;ನೀವಂತೂ ಕ್ರಿಸ್ತನವರು, ಕ್ರಿಸ್ತನು ದೇವರವನು.
ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
ನಾನು ಕ್ರಿಸ್ತನಲ್ಲಿರುವ ವನಾಗಿ ಕಾಣಿಸಿಕೊಳ್ಳಬೇಕೆಂದು ನ್ಯಾಯಪ್ರಮಾಣ ದಿಂದಾಗುವ ಸ್ವನೀತಿಯನ್ನಾಶ್ರಯಿಸದೆ ಆತನನ್ನು ನಂಬು ವದರಿಂದ ದೊರಕುವಂಥ ಅಂದರೆ ನಂಬಿಕೆಯ ಆಧಾರ ದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ದ್ದೇನೆ.
ಆತನು (ದೇವರು) ನಮ್ಮನ್ನು ಅಂಧಕಾರದ ಶಕ್ತಿಯಿಂದ ಬಿಡಿಸಿ ತನ್ನ ಪ್ರಿಯಕುಮಾರನ ರಾಜ್ಯ ದೊಳಗೆ ಸೇರಿಸಿದನು.
ನೀವು ಯಾವದಕ್ಕಾಗಿ ಶ್ರಮೆಪಡುತ್ತೀರೋ ದೇವರ ಆ ರಾಜ್ಯಕ್ಕೆ ನೀವು ಯೋಗ್ಯರೆಂದು ಎಣಿಸಲ್ಪಡುವಂತೆ ದೇವರ ನೀತಿಯುಳ್ಳ ತೀರ್ಪಿಗೆ ಅದು ಸ್ಪಷ್ಟವಾದ ನಿದರ್ಶನವಾಗಿದೆ.