Home Bibles ಮತ್ತಾಯ 7:14 · ಕನ್ನಡ ಬೈಬಲ್
ಮತ್ತಾಯ 7:14 · ಕನ್ನಡ ಬೈಬಲ್

ಜೀವಕ್ಕೆ ನಡಿಸುವ ದ್ವಾರವು ಇಕ್ಕಟ್ಟಾದದ್ದೂ ದಾರಿಯು ಬಿಕ್ಕಟ್ಟಾದದ್ದೂ ಆಗಿದೆ; ಆದದರಿಂದ ಅದನ್ನು ಕಂಡುಕೊಳ್ಳುವವರು ಸ್ವಲ್ಪ ಜನ.

Cross references

ಸಾಮೇತಿಗಳು 4:26

ನೀನು ನಡೆಯುವ ದಾರಿ ಯನ್ನು ವಿಮರ್ಶಿಸಿ ನೋಡು; ನಿನ್ನ ಎಲ್ಲಾ ಮಾರ್ಗ ಗಳು ಸ್ಥಿರವಾಗಿರಲಿ.ನಿನ್ನ ಬಲಕ್ಕಾಗಲಿ ಎಡಕ್ಕಾಗಲಿ ತಿರುಗಬೇಡ; ಕೇಡಿನಿಂದ ನಿನ್ನ ಪಾದವನ್ನು ತಪ್ಪಿಸು.

ಸಾಮೇತಿಗಳು 8:20

ನೀತಿಯ ಮಾರ್ಗದಲ್ಲಿ ನ್ಯಾಯದ ದಾರಿಗಳ ಮಧ್ಯದಲ್ಲಿ ನಾನು ನಡಿಸುತ್ತೇನೆ.

ಯೆಶಾಯ 30:21

ನೀವು ಬಲಕ್ಕಾಗಲಿ ಎಡಕ್ಕಾಗಲಿ ತಿರುಗಿ ಕೊಳ್ಳುವಾಗ ಇದೇ ಮಾರ್ಗ, ಇದರಲ್ಲೇ ನಡೆಯಿರಿ ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವದು.

ಯೆಶಾಯ 35:8

ಅಲ್ಲಿ ರಾಜ ಮಾರ್ಗವಿರುವದು, ಅದು ಪರಿಶುದ್ಧ ಮಾರ್ಗವೆನಿಸಿಕೊಳ್ಳುವದು; ಯಾವ ಅಶು ದ್ಧನು ಅದರ ಮೇಲೆ ಹಾದುಹೋಗನು; ಅವರಿಗೋ ಸ್ಕರವೇ ಇರುವದು; ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.

ಯೆಶಾಯ 57:14

ನೀವು ಎತ್ತರ ಮಾಡಿರಿ, ಎತ್ತರ ಮಾಡಿರಿ ಮಾರ್ಗ ವನ್ನು ಸಿದ್ಧಮಾಡಿರಿ, ನನ್ನ ಜನರ ಮಾರ್ಗದಿಂದ ಎಡ ವುದನ್ನು ಎತ್ತಿಹಾಕಿರಿ ಎಂದು ಹೇಳುವನು.

ಯೆರೆಮಿಯ 6:16

ಆದದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ; ಅವರಿಗೋಸ್ಕರ ಮೊರೆ ಯನ್ನೂ ಪ್ರಾರ್ಥನೆಯನ್ನೂ ಎತ್ತಬೇಡ ಇಲ್ಲವೆ ನನಗೆ ವಿಜ್ಞಾಪನೆ ಮಾಡಬೇಡ; ನಾನು ಅದನ್ನು ಕೇಳಿಸಿಕೊಳ್ಳು ವದಿಲ್ಲ.

ಮತ್ತಾಯ 16:24

ತರುವಾಯ ಯೇಸು ತನ್ನ ಶಿಷ್ಯರಿಗೆ--ಯಾವ ನಾದರೂ ನನ್ನ ಹಿಂದೆ ಬರುವದಕ್ಕೆ ಅಪೇಕ್ಷಿಸಿದರೆ ಅವನು ತನ್ನನ್ನು ತಾನೇ ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.

ಮತ್ತಾಯ 20:16

ಹೀಗೆ ಕಡೆಯವರು ಮೊದಲನೆಯವರಾಗುವರು; ಮೊದಲನೆಯವರು ಕಡೆಯವರಾಗುವರು. ಯಾಕಂದರೆ ಕರೆಯಲ್ಪಟ್ಟವರು ಅನೇಕರು; ಆದರೆ ಆಯಲ್ಪಟ್ಟವರು ಸ್ವಲ್ಪ ಜನ ಎಂದು ಹೇಳಿದನು.

ಮತ್ತಾಯ 22:14

ಯಾಕಂದರೆ ಕರೆಯಲ್ಪಟ್ಟವರು ಅನೇಕರು; ಆದರೆ ಆಯಲ್ಪಟ್ಟವರು ಸ್ವಲ್ಪ ಜನ ಅಂದನು.

ಮತ್ತಾಯ 25:1

ಇದಲ್ಲದೆ ಪರಲೋಕ ರಾಜ್ಯವು ತಮ್ಮ ದೀಪಗಳನ್ನು ತಕ್ಕೊಂಡು ಮದಲಿಂಗ ನನ್ನು ಎದುರುಗೊಳ್ಳುವದಕ್ಕಾಗಿ ಹೊರಟುಹೋದ ಹತ್ತುಮಂದಿ ಕನ್ಯೆಯರಿಗೆ ಹೋಲಿಕೆಯಾಗಿರುವದು.

ಮಾರ್ಕ 8:34

ಆತನು ಜನರನ್ನು ತನ್ನ ಶಿಷ್ಯರ ಕೂಡ ತನ್ನ ಬಳಿಗೆ ಕರೆದು ಅವರಿಗೆ--ಯಾವನಾದರೂ ನನ್ನ ಹಿಂದೆ ಬರುವದಾದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿ ಸಲಿ.

ಲೂಕ 12:32

ಚಿಕ್ಕ ಹಿಂಡೇ, ಭಯಪಡಬೇಡ; ಯಾಕಂದರೆ ನಿಮಗೆ ರಾಜ್ಯವನ್ನು ಕೊಡುವದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.

ಲೂಕ 13:23

ಆಗ ಒಬ್ಬನು ಆತನಿಗೆ--ಕರ್ತನೇ, ರಕ್ಷಣೆ ಹೊಂದುವವರು ಸ್ವಲ್ಪ ಜನರೋ ಎಂದು ಕೇಳಲು ಆತನು ಅವರಿಗೆ--

ಯೋಹಾನ 15:18

ಲೋಕವು ನಿಮ್ಮನ್ನು ದ್ವೇಷಮಾಡಿದರೆ ನಿಮಗಿಂತ ಮೊದಲು ಅದು ನನ್ನನ್ನು ದ್ವೇಷಮಾಡಿದೆ ಎಂದು ನಿಮಗೆ ತಿಳಿದದೆ.

ಯೋಹಾನ 16:2

ಅವರು ನಿಮ್ಮನ್ನು ಸಭಾಮಂದಿರಗಳಿಂದ ಹೊರಗೆ ಹಾಕುವರು; ಹೌದು, ನಿಮ್ಮನ್ನು ಕೊಲ್ಲುವವನು ದೇವರ ಸೇವೆ ಮಾಡುತ್ತಾನೆಂದು ನೆನಸುವ ಗಳಿಗೆ ಬರುತ್ತದೆ.

ಯೋಹಾನ 16:33

ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.

ಅಪೋಸ್ತಲರ ಕೃತ್ಯಗಳು 14:22

ನಾವು ಬಹು ಸಂಕಟಗಳನ್ನು ಅನುಭವಿಸಿ ದೇವರ ರಾಜ್ಯದೊಳಗೆ ಸೇರಬೇಕೆಂಬ ದಾಗಿ ಹೇಳಿ ನಂಬಿಕೆಯಲ್ಲಿ ಸ್ಥಿರವಾಗಿರಬೇಕೆಂದು ಅವರನ್ನು ಎಚ್ಚರಿಸಿದರು.

ರೋಮಾಪುರದವರಿಗೆ 9:27

ಯೆಶಾಯನು ಸಹ ಇಸ್ರಾಯೇಲ್ಯರ ವಿಷಯವಾಗಿ--ಇಸ್ರಾಯೇಲ್ಯರ ಮಕ್ಕಳ ಸಂಖ್ಯೆಯು ಸಮುದ್ರದ ಮರಳಿನೋಪಾದಿಯಲ್ಲಿದ್ದರೂ ಒಂದು ಅಂಶ ಮಾತ್ರ ರಕ್ಷಣೆ ಹೊಂದುವದು ಎಂದು ಕೂಗಿ ಹೇಳುತ್ತಾನೆ.

ರೋಮಾಪುರದವರಿಗೆ 9:32

ಅದಕ್ಕೆ ಕಾರಣವೇನು? ಅವರು ನಂಬಿಕೆಯನ್ನು ಆಧಾರಮಾಡಿಕೊಳ್ಳದೆ ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರಮಾಡಿಕೊಂಡದ್ದೇ ಕಾರಣ.ಇಗೋ, ನಾನು ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇ ನೆಂತಲೂ ಅದರ ಮೇಲೆ ನಂಬಿಕೆಯಿಡುವವನು ಆಶಾ ಭಂಗಪಡುವದಿಲ್ಲವೆಂತಲೂ ಬರೆದಿರುವ ಪ್ರಕಾರ ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು ಎಂಬದೇ.

ರೋಮಾಪುರದವರಿಗೆ 11:5

ಅದರಂತೆ ಈಗಿನ ಕಾಲದಲ್ಲಿ ಕೃಪೆಯ ಆಯ್ಕೆಯ ಪ್ರಕಾರ ಒಂದಂಶವು ಉಳಿದಿದೆ.

ರೋಮಾಪುರದವರಿಗೆ 12:2

ಇಹಲೋಕವನ್ನು ಅನುಸರಿಸದೆ ಉತ್ತಮ ವಾದದ್ದೂ ಮೆಚ್ಚಿಕೆಯಾದದ್ದೂ ಪರಿಪೂರ್ಣ ವಾದದ್ದೂ ಆಗಿರುವ ದೇವರ ಚಿತ್ತವೇನೆಂದು ನೀವು ವಿವೇಚಿಸಿ ತಿಳಿದುಕೊಳ್ಳುವಂತೆ ನೂತನ ಮನಸ್ಸನ್ನು ಹೊಂದಿಕೊಂಡು ರೂಪಾಂತರಗೊಂಡವರಾಗಿರ್ರಿ.

ಎಫೆಸದವರಿಗೆ 2:2

ನೀವು ಪೂರ್ವದಲ್ಲಿ ಅಪರಾಧ ಗಳನ್ನೂ ಪಾಪಗಳನ್ನೂ ಮಾಡುವವರಾಗಿದ್ದು ಇಹ ಲೋಕಾಚಾರಕ್ಕೆ ಅನುಸಾರವಾಗಿ ನಡೆದುಕೊಂಡಿರಿ; ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡಿಸುವ ಆತ್ಮನಿಗನುಸಾರವಾಗಿ ನಡೆದುಕೊಂಡಿರಿ;

1 ತೆಸಲೋನಿಕದವರಿಗೆ 3:2

ನಿಮ್ಮನ್ನು ದೃಢಪಡಿಸುವದಕ್ಕೂ ನಿಮ್ಮ ನಂಬಿಕೆಯ ವೃದ್ಧಿಗಾಗಿ ನಿಮ್ಮನ್ನು ಆದರಿಸುವದಕ್ಕೂ ನಮ್ಮ ಸಹೋದರನೂ ದೇವರ ಸೇವಕನೂ ಕ್ರಿಸ್ತನ ಸುವಾರ್ತೆಯಲ್ಲಿ ನಮ್ಮ ಜೊತೆ ಸೇವಕನೂ ಆಗಿರುವ ತಿಮೊಥೆಯನನ್ನು ಕಳುಹಿಸಿದೆವು.

1 ಪೇತ್ರ 3:20

ಆದರೆ ನೋಹನ ದಿನಗಳಲ್ಲಿ ನಾವೆಯನ್ನು ಕಟ್ಟುತ್ತಿರಲು ದೇವರ ದೀರ್ಘಶಾಂತಿಯು ಒಂದು ಸಾರಿ ಕಾದಿದ್ದಾಗ ಆತನಿಗೆ ಅವಿಧೇಯರಾ ಗಿದ್ದವರ ಬಳಿಗೆ ಹೋಗಿ ಆತನು ಸಾರಿದನು. ಆ ನಾವೆಯೊಳಗೆ ಕೆಲವರು ಅಂದರೆ ಎಂಟೇ ಜನರು ನೀರಿನ ಮೂಲಕ ರಕ್ಷಣೆ ಹೊಂದಿದರು.

Interlinear

Choose Theme