ಜೀವಕ್ಕೆ ನಡಿಸುವ ದ್ವಾರವು ಇಕ್ಕಟ್ಟಾದದ್ದೂ ದಾರಿಯು ಬಿಕ್ಕಟ್ಟಾದದ್ದೂ ಆಗಿದೆ; ಆದದರಿಂದ ಅದನ್ನು ಕಂಡುಕೊಳ್ಳುವವರು ಸ್ವಲ್ಪ ಜನ.
Cross references
ನೀನು ನಡೆಯುವ ದಾರಿ ಯನ್ನು ವಿಮರ್ಶಿಸಿ ನೋಡು; ನಿನ್ನ ಎಲ್ಲಾ ಮಾರ್ಗ ಗಳು ಸ್ಥಿರವಾಗಿರಲಿ.ನಿನ್ನ ಬಲಕ್ಕಾಗಲಿ ಎಡಕ್ಕಾಗಲಿ ತಿರುಗಬೇಡ; ಕೇಡಿನಿಂದ ನಿನ್ನ ಪಾದವನ್ನು ತಪ್ಪಿಸು.
ನೀತಿಯ ಮಾರ್ಗದಲ್ಲಿ ನ್ಯಾಯದ ದಾರಿಗಳ ಮಧ್ಯದಲ್ಲಿ ನಾನು ನಡಿಸುತ್ತೇನೆ.
ನೀವು ಬಲಕ್ಕಾಗಲಿ ಎಡಕ್ಕಾಗಲಿ ತಿರುಗಿ ಕೊಳ್ಳುವಾಗ ಇದೇ ಮಾರ್ಗ, ಇದರಲ್ಲೇ ನಡೆಯಿರಿ ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವದು.
ಅಲ್ಲಿ ರಾಜ ಮಾರ್ಗವಿರುವದು, ಅದು ಪರಿಶುದ್ಧ ಮಾರ್ಗವೆನಿಸಿಕೊಳ್ಳುವದು; ಯಾವ ಅಶು ದ್ಧನು ಅದರ ಮೇಲೆ ಹಾದುಹೋಗನು; ಅವರಿಗೋ ಸ್ಕರವೇ ಇರುವದು; ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.
ನೀವು ಎತ್ತರ ಮಾಡಿರಿ, ಎತ್ತರ ಮಾಡಿರಿ ಮಾರ್ಗ ವನ್ನು ಸಿದ್ಧಮಾಡಿರಿ, ನನ್ನ ಜನರ ಮಾರ್ಗದಿಂದ ಎಡ ವುದನ್ನು ಎತ್ತಿಹಾಕಿರಿ ಎಂದು ಹೇಳುವನು.
ಆದದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ; ಅವರಿಗೋಸ್ಕರ ಮೊರೆ ಯನ್ನೂ ಪ್ರಾರ್ಥನೆಯನ್ನೂ ಎತ್ತಬೇಡ ಇಲ್ಲವೆ ನನಗೆ ವಿಜ್ಞಾಪನೆ ಮಾಡಬೇಡ; ನಾನು ಅದನ್ನು ಕೇಳಿಸಿಕೊಳ್ಳು ವದಿಲ್ಲ.
ತರುವಾಯ ಯೇಸು ತನ್ನ ಶಿಷ್ಯರಿಗೆ--ಯಾವ ನಾದರೂ ನನ್ನ ಹಿಂದೆ ಬರುವದಕ್ಕೆ ಅಪೇಕ್ಷಿಸಿದರೆ ಅವನು ತನ್ನನ್ನು ತಾನೇ ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
ಹೀಗೆ ಕಡೆಯವರು ಮೊದಲನೆಯವರಾಗುವರು; ಮೊದಲನೆಯವರು ಕಡೆಯವರಾಗುವರು. ಯಾಕಂದರೆ ಕರೆಯಲ್ಪಟ್ಟವರು ಅನೇಕರು; ಆದರೆ ಆಯಲ್ಪಟ್ಟವರು ಸ್ವಲ್ಪ ಜನ ಎಂದು ಹೇಳಿದನು.
ಯಾಕಂದರೆ ಕರೆಯಲ್ಪಟ್ಟವರು ಅನೇಕರು; ಆದರೆ ಆಯಲ್ಪಟ್ಟವರು ಸ್ವಲ್ಪ ಜನ ಅಂದನು.
ಇದಲ್ಲದೆ ಪರಲೋಕ ರಾಜ್ಯವು ತಮ್ಮ ದೀಪಗಳನ್ನು ತಕ್ಕೊಂಡು ಮದಲಿಂಗ ನನ್ನು ಎದುರುಗೊಳ್ಳುವದಕ್ಕಾಗಿ ಹೊರಟುಹೋದ ಹತ್ತುಮಂದಿ ಕನ್ಯೆಯರಿಗೆ ಹೋಲಿಕೆಯಾಗಿರುವದು.
ಆತನು ಜನರನ್ನು ತನ್ನ ಶಿಷ್ಯರ ಕೂಡ ತನ್ನ ಬಳಿಗೆ ಕರೆದು ಅವರಿಗೆ--ಯಾವನಾದರೂ ನನ್ನ ಹಿಂದೆ ಬರುವದಾದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿ ಸಲಿ.
ಚಿಕ್ಕ ಹಿಂಡೇ, ಭಯಪಡಬೇಡ; ಯಾಕಂದರೆ ನಿಮಗೆ ರಾಜ್ಯವನ್ನು ಕೊಡುವದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.
ಆಗ ಒಬ್ಬನು ಆತನಿಗೆ--ಕರ್ತನೇ, ರಕ್ಷಣೆ ಹೊಂದುವವರು ಸ್ವಲ್ಪ ಜನರೋ ಎಂದು ಕೇಳಲು ಆತನು ಅವರಿಗೆ--
ಲೋಕವು ನಿಮ್ಮನ್ನು ದ್ವೇಷಮಾಡಿದರೆ ನಿಮಗಿಂತ ಮೊದಲು ಅದು ನನ್ನನ್ನು ದ್ವೇಷಮಾಡಿದೆ ಎಂದು ನಿಮಗೆ ತಿಳಿದದೆ.
ಅವರು ನಿಮ್ಮನ್ನು ಸಭಾಮಂದಿರಗಳಿಂದ ಹೊರಗೆ ಹಾಕುವರು; ಹೌದು, ನಿಮ್ಮನ್ನು ಕೊಲ್ಲುವವನು ದೇವರ ಸೇವೆ ಮಾಡುತ್ತಾನೆಂದು ನೆನಸುವ ಗಳಿಗೆ ಬರುತ್ತದೆ.
ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.
ನಾವು ಬಹು ಸಂಕಟಗಳನ್ನು ಅನುಭವಿಸಿ ದೇವರ ರಾಜ್ಯದೊಳಗೆ ಸೇರಬೇಕೆಂಬ ದಾಗಿ ಹೇಳಿ ನಂಬಿಕೆಯಲ್ಲಿ ಸ್ಥಿರವಾಗಿರಬೇಕೆಂದು ಅವರನ್ನು ಎಚ್ಚರಿಸಿದರು.
ಯೆಶಾಯನು ಸಹ ಇಸ್ರಾಯೇಲ್ಯರ ವಿಷಯವಾಗಿ--ಇಸ್ರಾಯೇಲ್ಯರ ಮಕ್ಕಳ ಸಂಖ್ಯೆಯು ಸಮುದ್ರದ ಮರಳಿನೋಪಾದಿಯಲ್ಲಿದ್ದರೂ ಒಂದು ಅಂಶ ಮಾತ್ರ ರಕ್ಷಣೆ ಹೊಂದುವದು ಎಂದು ಕೂಗಿ ಹೇಳುತ್ತಾನೆ.
ಅದಕ್ಕೆ ಕಾರಣವೇನು? ಅವರು ನಂಬಿಕೆಯನ್ನು ಆಧಾರಮಾಡಿಕೊಳ್ಳದೆ ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರಮಾಡಿಕೊಂಡದ್ದೇ ಕಾರಣ.ಇಗೋ, ನಾನು ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇ ನೆಂತಲೂ ಅದರ ಮೇಲೆ ನಂಬಿಕೆಯಿಡುವವನು ಆಶಾ ಭಂಗಪಡುವದಿಲ್ಲವೆಂತಲೂ ಬರೆದಿರುವ ಪ್ರಕಾರ ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು ಎಂಬದೇ.
ಅದರಂತೆ ಈಗಿನ ಕಾಲದಲ್ಲಿ ಕೃಪೆಯ ಆಯ್ಕೆಯ ಪ್ರಕಾರ ಒಂದಂಶವು ಉಳಿದಿದೆ.
ಇಹಲೋಕವನ್ನು ಅನುಸರಿಸದೆ ಉತ್ತಮ ವಾದದ್ದೂ ಮೆಚ್ಚಿಕೆಯಾದದ್ದೂ ಪರಿಪೂರ್ಣ ವಾದದ್ದೂ ಆಗಿರುವ ದೇವರ ಚಿತ್ತವೇನೆಂದು ನೀವು ವಿವೇಚಿಸಿ ತಿಳಿದುಕೊಳ್ಳುವಂತೆ ನೂತನ ಮನಸ್ಸನ್ನು ಹೊಂದಿಕೊಂಡು ರೂಪಾಂತರಗೊಂಡವರಾಗಿರ್ರಿ.
ನೀವು ಪೂರ್ವದಲ್ಲಿ ಅಪರಾಧ ಗಳನ್ನೂ ಪಾಪಗಳನ್ನೂ ಮಾಡುವವರಾಗಿದ್ದು ಇಹ ಲೋಕಾಚಾರಕ್ಕೆ ಅನುಸಾರವಾಗಿ ನಡೆದುಕೊಂಡಿರಿ; ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡಿಸುವ ಆತ್ಮನಿಗನುಸಾರವಾಗಿ ನಡೆದುಕೊಂಡಿರಿ;
ನಿಮ್ಮನ್ನು ದೃಢಪಡಿಸುವದಕ್ಕೂ ನಿಮ್ಮ ನಂಬಿಕೆಯ ವೃದ್ಧಿಗಾಗಿ ನಿಮ್ಮನ್ನು ಆದರಿಸುವದಕ್ಕೂ ನಮ್ಮ ಸಹೋದರನೂ ದೇವರ ಸೇವಕನೂ ಕ್ರಿಸ್ತನ ಸುವಾರ್ತೆಯಲ್ಲಿ ನಮ್ಮ ಜೊತೆ ಸೇವಕನೂ ಆಗಿರುವ ತಿಮೊಥೆಯನನ್ನು ಕಳುಹಿಸಿದೆವು.
ಆದರೆ ನೋಹನ ದಿನಗಳಲ್ಲಿ ನಾವೆಯನ್ನು ಕಟ್ಟುತ್ತಿರಲು ದೇವರ ದೀರ್ಘಶಾಂತಿಯು ಒಂದು ಸಾರಿ ಕಾದಿದ್ದಾಗ ಆತನಿಗೆ ಅವಿಧೇಯರಾ ಗಿದ್ದವರ ಬಳಿಗೆ ಹೋಗಿ ಆತನು ಸಾರಿದನು. ಆ ನಾವೆಯೊಳಗೆ ಕೆಲವರು ಅಂದರೆ ಎಂಟೇ ಜನರು ನೀರಿನ ಮೂಲಕ ರಕ್ಷಣೆ ಹೊಂದಿದರು.