ನಾನು ನಿಮಗೆ ಹೇಳುವದೇನಂದರೆ--ಬಹಳ ಜನರು ಪೂರ್ವದಿಂದಲೂ ಪಶ್ಚಿಮದಿಂದಲೂ ಬಂದು ಪರ ಲೋಕರಾಜ್ಯದಲ್ಲಿ ಅಬ್ರಹಾಮ್ ಇಸಾಕ್ ಯಾಕೋಬ್ ಅವರೊಂದಿಗೆ ಕೂತುಕೊಳ್ಳುವರು.
Cross references
ನಿನ್ನನ್ನು ಆಶೀರ್ವದಿಸುವವರನ್ನು ಆಶೀರ್ವದಿಸು ವೆನು. ನಿನ್ನನ್ನು ಶಪಿಸುವವರನ್ನು ಶಪಿಸುವೆನು; ನಿನ್ನಲ್ಲಿ ಭೂಮಿಯ ಎಲ್ಲಾ ಜನಾಂಗಗಳು ಆಶೀರ್ವದಿಸಲ್ಪಡು ವವು ಎಂದು ಹೇಳಿದನು.
ನೀನು ನನ್ನ ಸ್ವರಕ್ಕೆ ವಿಧೇಯ ನಾದದ್ದರಿಂದ ಭೂಮಿಯ ಜನಾಂಗಗಳೆಲ್ಲಾ ನಿನ್ನ ಸಂತಾನದಲ್ಲಿ ಆಶೀರ್ವದಿಸಲ್ಪಡುವವು ಎಂಬದೇ.
ನಿನ್ನ ಸಂತತಿಯು ಭೂಮಿಯ ಧೂಳಿನಷ್ಟು ಆಗುವದು; ನೀನು ಪಶ್ಚಿಮ ಪೂರ್ವ ಉತ್ತರ ದಕ್ಷಿಣಗಳಿಗೆ ಹರಡಿಕೊಳ್ಳುತ್ತೀ. ನಿನ್ನಿಂದಲೂ ನಿನ್ನ ಸಂತತಿಯಿಂದಲೂ ಭೂಮಿಯ ಎಲ್ಲಾ ಕುಲದವರು ಆಶೀರ್ವದಿಸಲ್ಪ ಡುವರು.
ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು.
ಲೋಕದಂತ್ಯದಲ್ಲಿರುವ ಎಲ್ಲಾ ಜನರು ಜ್ಞಾಪಕ ಮಾಡಿ ಕರ್ತನ ಕಡೆಗೆ ತಿರಿಗಿಕೊಳ್ಳುವರು; ಜನಾಂಗ ಗಳ ಗೋತ್ರಗಳೆಲ್ಲರೂ ನಿನ್ನ ಮುಂದೆ ಆರಾಧಿಸುವರು.
ತನ್ನ ಕರುಣೆ ಯನ್ನೂ ಸತ್ಯತೆಯನ್ನೂ ಇಸ್ರಾಯೇಲಿನ ಮನೆಗೋಸ್ಕರ ಜ್ಞಾಪಕ ಮಾಡಿಕೊಂಡಿದ್ದಾನೆ; ಭೂಮಿಯ ಕೊನೆಗಳೆಲ್ಲಾ ನಮ್ಮ ದೇವರ ರಕ್ಷಣೆಯನ್ನು ನೋಡಿವೆ.
ಆ ಅಂತ್ಯ ದಿನಗಳಲ್ಲಿ ಆಗುವದೇನಂದರೆ--ಕರ್ತನ ಆಲಯದ ಪರ್ವತವು ಗುಡ್ಡಗಳಿಗಿಂತ ಎತ್ತರ ವಾಗಿ ಪರ್ವತಗಳ ತುದಿಯಲ್ಲಿ ನೆಲೆಯಾಗಿರುವದು. ಎಲ್ಲಾ ಜನಾಂಗಗಳು ಅದರ ಕಡೆಗೆ ತಂಡ ತಂಡವಾಗಿ ಬರುವವು.
ಆ ದಿನದಲ್ಲಿ ಹುಡುಕುವ ಅನ್ಯಜನರಿಗೆ ಇಷ ಯನ ಬೇರು ಒಂದು ಗುರುತಾಗಿ ನಿಲ್ಲುವದು; ಅವನ ವಿಶ್ರಾಂತಿ ವೈಭವವುಳ್ಳದ್ದಾಗಿರುವದು.
ಆತನೇ ಈಗ ಹೀಗನ್ನುತ್ತಾನೆ--ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬನ ಕುಲಗಳನ್ನು ಉನ್ನತಪಡಿ ಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪ ಕಾರ್ಯವೇ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯ ವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೆ ಬೆಳಕನ್ನಾಗಿ ದಯಪಾಲಿಸುವೆನು.
ಇಗೋ, ಇವರು ದೂರದಿಂದ ಬರುತ್ತಾರೆ. ಇಗೋ, ಇವರು ಬಡಗಣದಿಂದ ಮತ್ತು ಪಡುವಣದಿಂದ, ಇವರು ಸೀನೀಮ್ ದೇಶದಿಂದ ಬರುತ್ತಿದ್ದಾರೆ.
ಕರ್ತನು ತನ್ನ ಪರಿ ಶುದ್ಧವಾದ ಬಾಹುವನ್ನು ಸಕಲ ಜನಾಂಗಗಳ ಕಣ್ಣು ಗಳಿಗೆ ತೋರಮಾಡಿದ್ದಾನೆ. ಭೂಮಿಯ ಅಂತ್ಯದವ ರೆಲ್ಲಾ ನಮ್ಮ ದೇವರ ರಕ್ಷಣೆಯನ್ನು ನೋಡುವರು.
ಆಗ ಪಶ್ಚಿ ಮದ ಕಡೆಯವರು ಕರ್ತನ ಹೆಸರಿಗೂ ಸೂರ್ಯೋ ದಯದ ಕಡೆಯವರು ಆತನ ಘನಕ್ಕೂ ಭಯಪಡು ವರು. ವೈರಿಯು ಪ್ರಳಯದಂತೆ ಬರುವಾಗ ಕರ್ತನ ಆತ್ಮನು ಅವನಿಗೆ ವಿರೋಧವಾಗಿ ಧ್ವಜವನ್ನೆತ್ತುವನು.
ಏಳು, ಪ್ರಕಾಶಿಸು; ಯಾಕಂದರೆ, ನಿನ್ನ ಬೆಳಕು ಬಂತು; ಕರ್ತನ ಮಹಿಮೆಯು ನಿನ್ನ ಮೇಲೆ ಉದಯವಾಯಿತು.
ಕರ್ತನು ನನಗೆ ಹೀಗೆ ಹೇಳಿದನು--ಹೋಗಿ ಜನರ ಮಕ್ಕಳ ಬಾಗಿಲಲ್ಲಿಯೂ ಯೆಹೂದದ ಅರಸರು ಪ್ರವೇಶಿಸುವಲ್ಲಿಯೂ ಹೊರಡುವಲ್ಲಿಯೂ ಯೆರೂಸ ಲೇಮಿನ ಎಲ್ಲಾ ಬಾಗಿಲುಗಳಲ್ಲಿಯೂ ನಿಂತುಕೊಂಡು
ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.
ಅಂತ್ಯದಿವಸಗಳಲ್ಲಿ ಆಗುವದೇನಂದರೆ, ಕರ್ತನ ಆಲಯದ ಪರ್ವತವು ಬೆಟ್ಟಗಳ ತುದಿಯಲ್ಲಿ ನೆಲೆಯಾಗಿ ಗುಡ್ಡಗಳಿಗಿಂತ ಎತ್ತರ ವಾಗಿರುವದು; ಜನಗಳು ಅದರ ಬಳಿಗೆ ಪ್ರವಾಹದಂತೆ ಬರುವರು.
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಜನಗಳೂ ಅನೇಕ ಪಟ್ಟಣಗಳ ನಿವಾಸಿಗಳೂ ಇನ್ನು ಬರುವರು;
ಸೂರ್ಯೋದಯವು ಮೊದಲುಗೊಂಡು ಅದರ ಅಸ್ತಮಾನದ ವರೆಗೂ ನನ್ನ ಹೆಸರು ಅನ್ಯಜನಾಂಗ ಗಳಲ್ಲಿ ಘನವಾಗಿರುವದು; ಸಕಲ ಸ್ಥಳಗಳಲ್ಲಿ ನನ್ನ ಹೆಸರಿಗೆ ಧೂಪವೂ ಶುದ್ಧಕಾಣಿಕೆಯೂ ಅರ್ಪಿಸ ಲ್ಪಡುವದು; ನನ್ನ ಹೆಸರು ಅನ್ಯಜನಾಂಗಗಳಲ್ಲಿ ಘನ ವಾಗಿ ರುವದೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ನೀವು ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪ ವಾಗಿದೆ ಎಂದು ಹೇಳಿದನು.
ತರುವಾಯ ಆತನು ತನ್ನ ದೂತರನ್ನು ತುತೂರಿಯ ಮಹಾಶಬ್ದದೊಂದಿಗೆ ಕಳುಹಿಸುವನು; ಆಗ ಅವರು ಆತನಿಂದ ಆಯಲ್ಪಟ್ಟವರನ್ನು ನಾಲ್ಕು ದಿಕ್ಕುಗಳಿಂದ ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ಒಟ್ಟುಗೂಡಿಸುವರು.
ಒಡೆಯನು ಬಂದಾಗ ಯಾರು ಎಚ್ಚರವಾಗಿರುವದನ್ನು ಅವನು ಕಾಣುವನೋ ಆ ಸೇವಕರು ಧನ್ಯರು; ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಅವನು ಬಂದು ನಡುಕಟ್ಟಿಕೊಂಡು ಅವರನ್ನು ಊಟಕ್ಕೆ ಕೂಡ್ರಿಸಿ ಅವರಿಗೆ ತಾನೇ ಉಪಚರಿಸುವನು.
ಆದರೆ ನೀವು ಅಬ್ರಹಾಮ ಇಸಾಕ ಯಾಕೋಬ ಮತ್ತು ಎಲ್ಲಾ ಪ್ರವಾದಿಗಳು ದೇವರರಾಜ್ಯದಲ್ಲಿ ಇರುವದನ್ನೂ ನೀವು ಮಾತ್ರ ಹೊರಗೆ ದೊಬ್ಬಲ್ಪಟ್ಟಿರುವದನ್ನೂ ನೋಡು ವಾಗ ಅಲ್ಲಿ ನಿಮಗೆ ಗೋಳಾಟವೂ ಹಲ್ಲುಕಡಿ ಯೋಣವೂ ಇರುವವು.
ಆಗ ಯಜ ಮಾನನು ಸೇವಕನಿಗೆ--ನೀನು ಬೀದಿಗಳಿಗೂ ಬೇಲಿಗಳ ಬಳಿಗೂ ಹೊರಟುಹೋಗಿ ನನ್ನ ಮನೆ ತುಂಬಿಕೊಳ್ಳುವಂತೆ ಒಳಗೆ ಬರಲು ಅವರನ್ನು ಬಲ ವಂತಮಾಡು;
ಇದಾದ ಮೇಲೆ ಆ ಭಿಕ್ಷುಕನು ಸತ್ತನು; ದೂತರು ಅವನನ್ನು ಅಬ್ರಹಾಮನ ಎದೆಗೆ ತೆಗೆದುಕೊಂಡು ಹೋದರು; ಐಶ್ವರ್ಯವಂತನು ಸಹ ಸತ್ತನು; ಅವನನ್ನು ಹೂಣಿ ಟ್ಟರು.
ಪೇತ್ರನ ಸಂಗಡ ಬಂದಿದ್ದ ಸುನ್ನತಿಯಾದವರಲ್ಲಿ ನಂಬಿದವರೆಲ್ಲಾ ಅನ್ಯಜನಗಳ ಮೇಲೆಯೂ ಪವಿತ್ರಾತ್ಮನು ಸುರಿಸಲ್ಪಟ್ಟದ್ದರಿಂದ ಅತ್ಯಾ ಶ್ಚರ್ಯಪಟ್ಟರು.
ಅವರು ಇವುಗಳನ್ನು ಕೇಳಿ ಮೌನವಾಗಿದ್ದು ದೇವ ರನ್ನು ಕೊಂಡಾಡಿ--ಹಾಗಾದರೆ ಅನ್ಯ ಜನಾಂಗದವ ರಿಗೂ ಜೀವಕ್ಕಾಗಿ ಮಾನಸಾಂತರವನ್ನು ದೇವರು ದಯಪಾಲಿಸಿದ್ದಾನೆ ಎಂದು ಹೇಳಿದರು.
ನಾವು ಬಹು ಸಂಕಟಗಳನ್ನು ಅನುಭವಿಸಿ ದೇವರ ರಾಜ್ಯದೊಳಗೆ ಸೇರಬೇಕೆಂಬ ದಾಗಿ ಹೇಳಿ ನಂಬಿಕೆಯಲ್ಲಿ ಸ್ಥಿರವಾಗಿರಬೇಕೆಂದು ಅವರನ್ನು ಎಚ್ಚರಿಸಿದರು.
ಅವರು ಬಂದಾಗ ಸಭೆಯನ್ನು ಕೂಡಿಸಿ ದೇವರು ತಮ್ಮೊಂದಿಗಿದ್ದು ಮಾಡಿದ್ದೆಲ್ಲವನ್ನೂ ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲನ್ನು ತೆರೆ ದದ್ದನ್ನೂ ವಿವರವಾಗಿ ಹೇಳಿದರು.ತರುವಾಯ ಅವರು ಅಲ್ಲಿ ಶಿಷ್ಯರ ಸಂಗಡ ಬಹುಕಾಲ ಇದ್ದರು.
ಈ ಕಾರಣದಿಂದ ನಾನು ಅನ್ಯಜನಗಳ ಮಧ್ಯದಲ್ಲಿ ನಿನ್ನನು ಅರಿಕೆ ಮಾಡಿ ನಿನ್ನ ನಾಮವನ್ನು ಸಂಕೀರ್ತಿಸುವೆನು ಎಂದು ಬರೆದಿರುವ ಪ್ರಕಾರ ಅನ್ಯಜನಗಳು ದೇವರ ಕರುಣೆಗಾಗಿ ಆತನನ್ನು ಮಹಿಮೆಪಡಿಸುವರು.
ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು
ಆದರೆ ಈಗ ಕ್ರಿಸ್ತನು ಸತ್ತವರೊಳಗಿಂದ ಎದ್ದು ಬಂದು ನಿದ್ರೆಹೋದವರಲ್ಲಿ ಪ್ರಥಮಫಲವಾದನು.
ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ ದಾಸನು ಸ್ವತಂತ್ರನು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.
ಆದಕಾರಣ ಪೂರ್ವಕಾಲದಲ್ಲಿ ಶಾರೀರಿಕವಾಗಿ ಅನ್ಯಜನರಾಗಿದ್ದು ಶರೀರದಲ್ಲಿ ಕೈಗಳಿಂದ ಮಾಡಲ್ಪಟ ಸುನ್ನತಿಯಿದ್ದವರೆಂದು ಕರೆಯಲ್ಪಟ್ಟವರಿಂದ ಸುನ್ನತಿಯಿಲ್ಲ ದವರೆಂದು ನೀವು ಕರೆಯಲ್ಪಟ್ಟಿದ್ದೀರಿ.
ಅದೇನಂದರೆ, ಅನ್ಯಜನರು (ಯೆಹೂದ್ಯರೊಂದಿಗೆ) ಸಹ ಬಾಧ್ಯರೂ ಒಂದೇ ದೇಹದವರೂ ಸುವಾರ್ತೆಯಿಂದ ಕ್ರಿಸ್ತನ ಮೂಲಕ ಆತನ ವಾಗ್ದಾನದಲ್ಲಿ ಪಾಲುಗಾರರೂ ಆಗಿರಬೇಕೆಂ ಬದೇ.
ಇದರಲ್ಲಿ ಗ್ರೀಕನು ಯೆಹೂದ್ಯನು ಎಂಬ ಭೇದವಿಲ್ಲ; ಸುನ್ನತಿ ಮಾಡಿಸಿ ಕೊಂಡವರು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ಮ್ಲೇಚ್ಛ ಹೂನರೆಂದಿಲ್ಲ; ದಾಸನು ಸ್ವತಂತ್ರನು ಎಂಬ ಭೇದವಿಲ್ಲ; ಆದರೆ ಕ್ರಿಸ್ತನೇ ಸಮಸ್ತರಲ್ಲಿಯೂ ಸಮಸ್ತವೂ ಆಗಿದ್ದಾನೆ.
ನೀವು ಯಾವದಕ್ಕಾಗಿ ಶ್ರಮೆಪಡುತ್ತೀರೋ ದೇವರ ಆ ರಾಜ್ಯಕ್ಕೆ ನೀವು ಯೋಗ್ಯರೆಂದು ಎಣಿಸಲ್ಪಡುವಂತೆ ದೇವರ ನೀತಿಯುಳ್ಳ ತೀರ್ಪಿಗೆ ಅದು ಸ್ಪಷ್ಟವಾದ ನಿದರ್ಶನವಾಗಿದೆ.
ಇಗೋ, ನಾನು ಬಾಗಿಲ ಬಳಿಯಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ; ಯಾವನಾದರೂ ನನ್ನ ಸ್ವರವನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು, ಅವನು ನನ್ನ ಸಂಗಡ ಊಟ ಮಾಡುವನು.
ಅಷೇರನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆ ರಡು ಸಾವಿರ, ನೆಫ್ತಲೀಮನ ಗೋತ್ರದವರಲ್ಲಿ ಮುದ್ರಿಸ ಲ್ಪಟ್ಟವರು ಹನ್ನೆರಡು ಸಾವಿರ, ಮನಸ್ಸೆಯ ಗೋತ್ರದವ ರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ.