ಆಗ ಆತನು ಅವರಿಗೆ--ಓ ಅಲ್ಪ ವಿಶ್ವಾಸಿಗಳೇ, ನೀವು ಯಾಕೆ ಭಯಪಡುತ್ತೀರಿ ಎಂದು ಹೇಳಿ ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು. ಆಗ ಅಲ್ಲಿ ದೊಡ್ಡ ಶಾಂತತೆ ಉಂಟಾಯಿತು.
Cross references
ಸಮುದ್ರವು ಗರ್ಭದೊಳಗಿಂದ ಹೊರಬಂದಂತೆ, ಅದು ಬೇಧಿಸಿಕೊಂಡು ಬಂದಾಗ ಸಮುದ್ರವನ್ನು ಬಾಗಲುಗಳಿಂದ ಮುಚ್ಚಿದವನಾರು?
ಸಮುದ್ರ ಗಳ ಘೋಷವನ್ನೂ ಅವುಗಳ ತೆರೆಗಳ ಘೋಷವನ್ನೂ ಪ್ರಜೆಗಳ ಕೋಲಾಹಲವನ್ನೂ ಅಣಗಿಸುವಾತನೇ,
ನೀನು ಸಮುದ್ರದ ಉಬ್ಬರವನ್ನು ಆಳುತ್ತೀ; ಅದರ ತೆರೆಗಳು ಏಳುವಾಗ ಅವುಗಳನ್ನು ಸುಮ್ಮನಿರಿಸುತ್ತೀ.
ಕರ್ತನೇ, ಪ್ರವಾಹಗಳು ಎತ್ತಲ್ಪಟ್ಟಿವೆ; ಪ್ರವಾಹಗಳು ತಮ್ಮ ಶಬ್ದವನ್ನು ಎತ್ತಿವೆ; ಪ್ರವಾಹ ಗಳು ತಮ್ಮ ತೆರೆಗಳನ್ನು ಎತ್ತುತ್ತವೆ.
ನೀನು ಜಲಾಗಾಧದಿಂದ ವಸ್ತ್ರದ ಹಾಗೆ ಅದನ್ನು ಮುಚ್ಚಿದ್ದೀ; ಬೆಟ್ಟಗಳ ಮೇಲೆ ನೀರುಗಳು ನಿಂತವು.
ಆಗ ಅವರು ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಿದರು; ಆತನು ಅವರ ಸಂಕಟಗಳೊಳಗಿಂದ ಅವರನ್ನು ಹೊರಗೆ ಬರಮಾಡಿ
ಸಮುದ್ರವು ನೋಡಿ ಓಡಿಹೋಯಿತು; ಯೊರ್ದನ್ ಹಿಂತಿರುಗಿತು.
ಮೇಲೆ ಮೇಘಗಳನ್ನು ಆತನು ಸ್ಥಾಪಿಸಿದಾಗ ಅಗಾಧದ ಬುಗ್ಗೆಗಳನ್ನು ಆತನು ಬಲಪಡಿಸಿದಾಗ
ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.
ನಾನು ಬಂದಾಗ ಯಾಕೆ ಅಲ್ಲಿ ಒಬ್ಬನೂ ಇರಲಿಲ್ಲ? ನಾನು ಕರೆದಾಗ ಯಾಕೆ ಯಾರೂ ಉತ್ತರ ಕೊಡಲಿಲ್ಲ? ನನ್ನ ಹಸ್ತವು ವಿಮೋಚಿಸದಂಥಾ ಮೋಟುಗೈಯೋ? ಇಲ್ಲವೇ ಬಿಡಿಸುವದಕ್ಕೆ ನನ್ನಲ್ಲಿ ಶಕ್ತಿಯಿಲ್ಲವೋ? ಇಗೋ, ನನ್ನ ಗದರಿಕೆಯಿಂದ ನಾನು ಸಮುದ್ರವನ್ನು ಒಣಗಿಸುತ್ತೇನೆ. ನಾನು ನದಿಗಳನ್ನು ಅರಣ್ಯವನ್ನಾಗಿ ಮಾಡುತ್ತೇನೆ. ನೀರಿಲ್ಲದ ಕಾರಣ ಅಲ್ಲಿಯ ವಿಾನುಗಳು ಬಾಯಾರಿ ಸತ್ತುನಾರುವವು.
ಮೋಶೆಯ ಬಲಗೈಯ ಮುಖಾಂ ತರ, ತನ್ನ ಮಹಿಮೆಯುಳ್ಳ ತೋಳಿನಿಂದ ಅವರನ್ನು ನಡಿಸಿದವನೂ ತನಗೆ ನಿತ್ಯವಾದ ಹೆಸರನ್ನುಂಟು ಮಾಡುವ ಹಾಗೆ ಅವರ ಮುಂದೆ ನೀರುಗಳನ್ನು ಭೇದಿಸಿದವನು ಎಲ್ಲಿ?
ಆತನು ಸಮುದ್ರವನ್ನು ಗದರಿಸಿ ಅದನ್ನು ಒಣಗುವಂತೆ ಮಾಡುತ್ತಾನೆ; ನದಿಗಳನ್ನೆಲ್ಲಾ ಬತ್ತಿಹೋಗುವಂತೆ ಮಾಡುತ್ತಾನೆ; ಬಾಷಾನೂ ಕರ್ಮೆಲೂ ಬಾಡಿಹೋಗುತ್ತವೆ, ಲೆಬನೋನಿನ ಹೂವು ಬಾಡಿಹೋಗುತ್ತದೆ.
ಕರ್ತನು ನದಿಗಳ ಮೇಲೆ ಉರಿಗೊಂಡನೋ? ನದಿಗಳ ಮೇಲೆ ನಿನ್ನ ಕೋಪವಿತ್ತೋ? ಸಮುದ್ರದ ಮೇಲೆ ನಿನ್ನ ರೌದ್ರ ವಿತ್ತೋ? ಇದಕ್ಕಾಗಿ ನಿನ್ನ ಕುದುರೆ ಗಳ ಮೇಲೆ ಸವಾರಿ ಮಾಡಿ ನಿನ್ನ ರಕ್ಷಣೆಯ ರಥಗ ಳಲ್ಲಿ ಹತ್ತಿದಿಯೋ?
ಆದದರಿಂದ ಈ ಹೊತ್ತು ಇದ್ದು ನಾಳೆ ಒಲೆಗೆ ಹಾಕಲ್ಪಡುವ ಹೊಲದ ಹುಲ್ಲಿಗೆ ದೇವರು ಹೀಗೆ ಉಡಿಸಿದರೆ ಓ ಅಲ್ಪ ವಿಶ್ವಾಸಿಗಳೇ, ಆತನು ಇನ್ನೂ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸುವನಲ್ಲವೇ?
ಆದರೆ ಅವರು ಆಶ್ಚರ್ಯದಿಂದ--ಈತನು ಎಂಥಾ ಮನುಷ್ಯ ನಾಗಿರಬಹುದು! ಗಾಳಿಯೂ ಸಮುದ್ರವೂ ಈತನಿಗೆ ವಿಧೇಯವಾಗುತ್ತವಲ್ಲಾ ಅಂದರು.
ಆದರೆ ಬಲ ವಾದ ಗಾಳಿಯನ್ನು ನೋಡಿದಾಗ ಅವನು ಭಯಪಟ್ಟು ಮುಣುಗುತ್ತಾ--ಕರ್ತನೇ, ನನ್ನನ್ನು ರಕ್ಷಿಸು ಎಂದು ಕೂಗಿ ಹೇಳಿದನು.
ಯೇಸು ಅದನ್ನು ತಿಳುಕೊಂಡವನಾಗಿ ಅವರಿಗೆ--ಓ ಅಲ್ಪ ವಿಶ್ವಾಸಿಗಳೇ, ನೀವು ರೊಟ್ಟಿಯನ್ನು ತಕ್ಕೊಂಡು ಬರಲಿಲ್ಲವೆಂದು ನಿಮ್ಮಲ್ಲಿ ಯಾಕೆ ಅಂದುಕೊಳ್ಳುತ್ತೀರಿ?
ಆಗ ಆತನು ಎದ್ದು ಗಾಳಿಯನ್ನು ಗದರಿಸಿ ಸಮುದ್ರಕ್ಕೆ--ಶಾಂತವಾಗಿ ಮೌನವಾಗಿರು ಎಂದು ಹೇಳಿದನು. ಆಗ ಗಾಳಿಯು ನಿಂತು ಅಲ್ಲಿ ದೊಡ್ಡ ಶಾಂತತೆ ಉಂಟಾಯಿತು.
ಗಾಳಿಯು ಅವರಿಗೆ ಎದುರಾಗಿ ಇದ್ದದರಿಂದ ಅವರು ಕಷ್ಟಪಟ್ಟು ಹುಟ್ಟು ಹಾಕುತ್ತಿರು ವದನ್ನು ಆತನು ನೋಡಿ ಸುಮಾರು ರಾತ್ರಿಯ ನಾಲ್ಕನೇ ಜಾವದಲ್ಲಿ ಸಮುದ್ರದ ಮೇಲೆ ನಡೆಯುತ್ತಾ ಅವರ ಬಳಿಗೆ ಬಂದು ಅವರನ್ನು ದಾಟಿ ಹೋಗಬೇಕೆಂದಿದ್ದನು.
ಆಗ ಅವರು ಆತನ ಬಳಿಗೆ ಬಂದು ಆತನನ್ನು ಎಬ್ಬಿಸಿ--ಬೋಧ ಕನೇ, ಬೋಧಕನೇ, ನಾವು ನಾಶವಾಗುತ್ತೇವೆ ಅಂದರು. ಆಗ ಆತನು ಎದ್ದು ಗಾಳಿಯನ್ನೂ ಏರಿ ಬರುತ್ತಿದ್ದ ನೀರನ್ನೂ ಗದರಿಸಿದನು; ಆಗ ಅವು ನಿಂತು ಹೋಗಿ ಅಲ್ಲಿ ಶಾಂತತೆ ಉಂಟಾಯಿತು.
ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಅಪನಂಬಿಕೆಯಿಂದ ಚಂಚಲಚಿತ್ತನಾಗಲಿಲ್ಲ; ಆದರೆ ದೇವರನ್ನು ಘನಪಡಿಸುವವನಾಗಿ ದೃಢನಂಬಿಕೆಯುಳ್ಳ ವನಾದನು.
ತೆರೆದಿದ್ದ ಒಂದು ಚಿಕ್ಕ ಪುಸ್ತಕವು ಅವನ ಕೈಯಲ್ಲಿ ಇತ್ತು; ಅವನು ತನ್ನ ಬಲಗಾಲನ್ನು ಸಮುದ್ರದ ಮೇಲೆಯೂ ಎಡಗಾಲನ್ನು ಭೂಮಿಯ ಮೇಲೆಯೂ ಇಟ್ಟು