ಇದಾದ ಮೇಲೆ ಯೇಸು ಕಪೆರ್ನೌಮಿನಲ್ಲಿ ಪ್ರವೇಶಿಸಿದಾಗ ಒಬ್ಬ ಶತಾಧಿಪತಿಯು ಆತನ ಬಳಿಗೆ ಬಂದು--
Cross references
ಮತ್ತು ಆತನು ನಜರೇತನ್ನು ಬಿಟ್ಟು ಜೆಬುಲೋನ್, ನೆಫ್ತಲೀಮ್ ಮೇರೆಗಳ ಸಮುದ್ರತೀರದಲ್ಲಿರುವ ಕಪೆರ್ನೌಮಿಗೆ ಬಂದು ಅಲ್ಲಿ ವಾಸಿಸಿದನು.
ಆಗ ಆತನು ದೋಣಿಯನ್ನು ಹತ್ತಿ ಅಲ್ಲಿಂದ ಹೊರಟು ತನ್ನ ಸ್ವಂತ ಪಟ್ಟಣಕ್ಕೆ ಬಂದನು.
ಆಕಾಶದವರೆಗೂ ಹೆಚ್ಚಿಸಲ್ಪಟ್ಟ ಕಪೆರ್ನೌಮೇ, ನೀನು ಕೆಳಗೆ ಪಾತಾಳಕ್ಕೆ ದೊಬ್ಬಲ್ಪಡುವಿ; ಯಾಕಂದರೆ ನಿನ್ನೊಳಗೆ ನಡೆದಿರುವ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ ಅದು ಈ ದಿನದವರೆಗೂ ಇರುತ್ತಿತ್ತು.
ಆಗ ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ಬೇರೆ ಸಂಭವಗಳು ನಡೆದದ್ದನ್ನೂ ನೋಡಿ ಬಹಳವಾಗಿ ಭಯಪಟ್ಟು-- ನಿಜವಾಗಿಯೂ ಈತನು ದೇವಕುಮಾರನಾಗಿದ್ದನು ಅಂದರು
ಕೆಲವು ದಿವಸಗಳಾದ ಮೇಲೆ ಆತನು ತಿರಿಗಿ ಕಪೆರ್ನೌಮಿಗೆ ಬಂದನು; ಆಗ ಆತನು ಮನೆಯಲ್ಲಿದ್ದ ಸುದ್ದಿಯು ಹರಡಿತು.
ಆತನು ಹೀಗೆ ಕೂಗಿ ಪ್ರಾಣ ಬಿಟ್ಟದ್ದನ್ನು ಆತನ ಎದುರಿಗೆ ನಿಂತಿದ್ದ ಶತಾಧಿಪತಿಯು ನೋಡಿ-- ನಿಜವಾಗಿಯೂ ಈ ಮನುಷ್ಯನು ದೇವಕುಮಾರನಾಗಿ ದ್ದನು ಅಂದನು.
ತನ್ನ ಎಲ್ಲಾ ಮಾತುಗಳನ್ನು ಜನರೆಲ್ಲರೂ ಕೇಳುವಂತೆ ಹೇಳಿ ಮುಗಿಸಿದ ಮೇಲೆ ಆತನು ಕಪೆರ್ನೌಮಿನಲ್ಲಿ ಪ್ರವೇಶಿಸಿದನು.
ಕೈಸರೈಯದಲ್ಲಿ ಇತಾಲ್ಯದ ಪಟಾಲಮೆನಿಸಿ ಕೊಳ್ಳುವ ಒಂದು ಪಟಾಲಮಿನ ಶತಾ ಧಿಪತಿ ಯಾದ ಕೊರ್ನೇಲ್ಯನೆಂಬ ಒಬ್ಬ ಮನುಷ್ಯ ನಿದ್ದನು.
ಅವರು ಅವನನ್ನು ಬಾರುಗಳಿಂದ ಕಟ್ಟುತ್ತಿರುವಾಗ ಪೌಲನು ಹತ್ತಿರ ನಿಂತಿದ್ದ ಶತಾಧಿಪತಿಗೆ--ರೋಮ್ ನವನಾದ ಒಬ್ಬನನ್ನು ನ್ಯಾಯವಿಚಾರಣೆ ಮಾಡದೆ ಕೊರಡೆಯಿಂದ ಹೊಡಿಸುವದು ನಿಮಗೆ ನ್ಯಾಯವೋ ಎಂದು ಕೇಳಿದನು.
ಆಗ ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆದು--ಈ ಯೌವನಸ್ಥನನ್ನು ಮುಖ್ಯ ನಾಯಕನ ಬಳಿಗೆ ಕರಕೊಂಡು ಹೋಗು; ಅವನಿಗೆ ತಿಳಿಸಬೇಕಾದ ಒಂದು ವಿಷಯ ಇದೆ ಎಂದು ಹೇಳಿದನು.
ಆಗ ಅವನು ಇಬ್ಬರು ಶತಾಧಿಪತಿ ಗಳನ್ನು ತನ್ನ ಬಳಿಗೆ ಕರೆದು--ರಾತ್ರಿ ಮೂರು ಘಂಟೆಗೆ ಕೈಸರೈಯಕ್ಕೆ ಹೋಗುವದಕ್ಕಾಗಿ ಇನ್ನೂರು ಮಂದಿ ಸೈನಿಕರನ್ನೂ ಎಪ್ಪತ್ತು ಮಂದಿ ಕುದುರೆ ಸವಾರರನೂ ಇನ್ನೂರು ಮಂದಿ ಭಲ್ಲೆಯವರನ್ನೂ ಸಿದ್ಧಮಾಡಿ,
ಇದಾದ ಮೇಲೆ ದಕ್ಷಿಣದ ಗಾಳಿಯು ಮೆಲ್ಲಗೆ ಬೀಸಿದಾಗ ಅವರು ತಮ್ಮ ಉದ್ದೇಶವು ಸಾರ್ಥಕವಾಯಿತೆಂದು ಭಾವಿಸಿ ಅಲ್ಲಿಂದ ಹೊರಟು ಕ್ರೇತಕ್ಕೆ ಸವಿಾಪವಾಗಿ ಪ್ರಯಾಣಮಾಡಿದರು.
ಆಗ ಪೌಲನು ಶತಾಧಿಪತಿಗೆ ಮತ್ತು ಸೈನಿಕರಿಗೆ--ಇವರು ಹಡಗಿನಲ್ಲಿ ನಿಲ್ಲದೆ ಹೋದರೆ ನೀವು ತಪ್ಪಿಸಿಕೊಳ್ಳಲಾರಿರಿ ಎಂದು ಹೇಳಿದನು.
ಆದರೆ ಶತಾಧಿಪತಿಯು ಪೌಲನನ್ನು ಉಳಿಸ ಬೇಕೆಂದು ಅಪೇಕ್ಷಿಸಿ ಅವರ ಉದ್ದೇಶವನ್ನು ತಡೆದು ಈಜು ಬಲ್ಲವರು ಮೊದಲು ಸಮುದ್ರದಲ್ಲಿ ಧುಮುಕ ಬೇಕೆಂತಲೂಉಳಿದವರಲ್ಲಿ ಕೆಲವರು ಹಲಿಗೆಗಳ ಮೇಲೆ ಇನ್ನೂ ಕೆಲವರು ಹಡಗಿನ ತುಂಡುಗಳ ಮೇಲೆ ತೀರಕ್ಕೆ ಹೋಗಬೇಕೆಂತಲೂ ಅಪ್ಪಣೆಕೊಟ್ಟನು. ಹೀಗೆ ಎಲ್ಲರೂ ಸುರಕ್ಷಿತವಾಗಿ ತೀರಕ್ಕೆ ಸೇರಿದರು.