ನೀವು ಹೋಗಿ--ನಾನು ಯಜ್ಞವನ್ನಲ್ಲ; ಕರುಣೆಯನ್ನೇ ಅಪೇಕ್ಷಿಸುತ್ತೇನೆ ಎಂಬದರ ಅರ್ಥವನ್ನು ಕಲಿಯಿರಿ; ಯಾಕಂದರೆ ನಾನು ನೀತಿ ವಂತರನ್ನಲ್ಲ, ಪಾಪಿಗಳನ್ನು ಮಾನಸಾಂತರಪಡು ವದಕ್ಕಾಗಿ ಕರೆಯಲು ಬಂದೆನು ಎಂದು ಹೇಳಿದನು.
Cross references
ಯಜ್ಞಕ್ಕಿಂತ ನೀತಿನ್ಯಾಯಗಳನ್ನು ನಡಿಸುವದು ಕರ್ತ ನಿಗೆ ಎಷ್ಟೋ ಮೆಚ್ಚಿಕೆಯಾಗಿದೆ.
ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ.
ನಾನು ಬಲಿಯನ್ನಲ್ಲ ಕರುಣೆಯನ್ನೇ ಮತ್ತು ದಹನ ಬಲಿಗಳಿಗಿಂತ ದೇವರ ತಿಳುವಳಿಕೆಯನ್ನೇ ಹೆಚ್ಚಾಗಿ ಅಪೇಕ್ಷಿಸಿದ್ದೇನೆ.
ನಾನು ಯಾವದರೊಂದಿಗೆ ಕರ್ತನ ಮುಂದೆ ಬರಲಿ? ಯಾವದರೊಂದಿಗೆ ಉನ್ನತವಾದ ದೇವರ ಮುಂದೆ ಅಡ್ಡಬೀಳಲಿ? ದಹನಬಲಿಗಳ ಸಂಗಡವೂ ಒಂದು ವರುಷದ ಕರುಗಳ ಸಂಗಡವೂ ಆತನ ಮುಂದೆ ಬರಲೋ?
ನೀವು ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪ ವಾಗಿದೆ ಎಂದು ಹೇಳಿದನು.
ಹಾಗಾದರೆ ಮಾನಸಾಂತರಕ್ಕೆ ತಕ್ಕ ಫಲ ಗಳನ್ನು ಫಲಿಸಿರಿ;
ಅಂದಿನಿಂದ ಯೇಸು--ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪಿಸಿತು ಎಂದು ಸಾರಿ ಹೇಳುವದಕ್ಕೆ ಪ್ರಾರಂಭಿಸಿದನು.
ತರುವಾಯ ತಾನು ಹೆಚ್ಚಾದ ಮಹತ್ಕಾರ್ಯ ಗಳನ್ನು ನಡಿಸಿದ ಪಟ್ಟಣಗಳು ಮಾನಸಾಂತರಪಡದೆ ಇದ್ದದರಿಂದ ಆತನು ಅವುಗಳನ್ನು ಗದರಿಸತೊ ಡಗಿ --
ಅದಕ್ಕೆ ಆತನು ಅವರಿಗೆ--ದಾವೀದನು ತಾನೂ ತನ್ನ ಸಂಗಡ ಇದ್ದವರೂ ಹಸಿದಾಗ ಏನು ಮಾಡಿದನೆಂದು ನೀವು ಓದಲಿಲ್ಲವೋ?
ಇದಲ್ಲದೆ ಸಬ್ಬತ್ ದಿನಗಳಲ್ಲಿ ಯಾಜಕರು ದೇವಾಲಯದಲ್ಲಿ ಸಬ್ಬತ್ತನ್ನು ಅಪವಿತ್ರಪಡಿಸಿದರೂ ನಿರಪರಾಧಿಗಳಾಗಿದ್ದಾ ರೆಂದು ನೀವು ನ್ಯಾಯಪ್ರಮಾಣದಲ್ಲಿ ಓದಲಿಲ್ಲವೇ?
ಆದರೆ--ನನಗೆ ಯಜ್ಞವಲ್ಲ, ಕರುಣೆಯೇ ಬೇಕು ಎಂಬದರ ಅರ್ಥವನ್ನು ನೀವು ತಿಳಿದಿದ್ದರೆ ನಿರಪರಾಧಿಗಳನ್ನು ಅಪರಾಧಿಗಳೆಂದು ತೀರ್ಪುಮಾಡು ತ್ತಿದ್ದಿಲ್ಲ.
ಚಿಕ್ಕವರಲ್ಲಿ ಒಬ್ಬನನ್ನಾದರೂ ನೀವು ತಾತ್ಸಾರ ಮಾಡದಂತೆ ನೋಡಿಕೊಳ್ಳಿರಿ; ಯಾಕಂದರೆ ನಾನು ನಿಮಗೆ ಹೇಳುವದೇನಂದರೆ--ಪರಲೋಕದಲ್ಲಿ ಅವರ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಾರೆ.
ಆತನು ಪ್ರತ್ಯುತ್ತರವಾಗಿ ಅವರಿಗೆ-- ಆದಿಯಲ್ಲಿ ಉಂಟುಮಾಡಿದಾತನು ಅವರನ್ನು ಗಂಡು ಹೆಣ್ಣಾಗಿ ಉಂಟುಮಾಡಿದನು.
ನೀವು ನೆನಸುವದೇನು? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು; ಅವನು ಮೊದಲನೆಯವನ ಬಳಿಗೆ ಬಂದು--ಮಗನೇ, ಹೋಗಿ ಈ ಹೊತ್ತು ನನ್ನ ದ್ರಾಕ್ಷೇತೋಟದಲ್ಲಿ ಕೆಲಸಮಾಡು ಎಂದು ಹೇಳಿದನು.
ಯೇಸು ಅವರಿಗೆ--ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಮತ್ತು ಇದು ಕರ್ತನಿಂದಲೇ ಆಯಿತು. ಅದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾದದ್ದು ಎಂದು ಬರಹಗಳಲ್ಲಿ ಎಂದಾದರೂ ನೀವು ಓದಲಿಲ್ಲವೋ?
ಆದರೆ ಸತ್ತವರ ಪುನರುತ್ಥಾನದ ವಿಷಯವಾಗಿ--
ಯೇಸು ಅದನ್ನು ಕೇಳಿ--ಕ್ಷೇಮದಿಂದಿರುವವರಿಗೆ ಅಲ್ಲ, ಕ್ಷೇಮವಿಲ್ಲದವರಿಗೆ ವೈದ್ಯನುಬೇಕು; ನಾನು ನೀತಿವಂತರನ್ನಲ್ಲ, ಆದರೆ ಪಾಪಿಗಳನ್ನು ಮಾನಸಾಂತರಕ್ಕಾಗಿ ಕರೆಯುವದಕ್ಕೆ ಬಂದೆನು ಎಂದು ಅವರಿಗೆ ಹೇಳಿದನು.
ಸತ್ತವರು ಎದ್ದು ಬರುವದರ ವಿಷಯವಾಗಿ--ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಆಗಿದ್ದೇನೆ ಎಂದು ಪೊದೆಯಲ್ಲಿ ದೇವರು ಮೋಶೆಯ ಸಂಗಡ ಹೇಗೆ ಮಾತನಾಡಿದನೆಂದು ಮೋಶೆಯ ಗ್ರಂಥದಲ್ಲಿ ನೀವು ಓದಲಿಲ್ಲವೋ?
ನಾನು ನೀತಿವಂತರನ್ನಲ್ಲ, ಆದರೆ ಪಾಪಿಗಳನ್ನು ಮಾನಸಾಂತರಕ್ಕೆ ಕರೆಯುವದಕ್ಕಾಗಿ ಬಂದೆನು ಎಂದು ಹೇಳಿದನು.
ಆತನು ಅವನಿಗೆ-- ನ್ಯಾಯಪ್ರಮಾಣದಲ್ಲಿ ಏನು ಬರೆದದೆ? ನೀನು ಹೇಗೆ ಓದುತ್ತೀ ಎಂದು ಕೇಳಿದನು.
ಆತನು ಅವರಿಗೆ ಈ ಸಾಮ್ಯವನ್ನು ಹೇಳಿ ದನು--
ಯಾಕಂದರೆ ಮನುಷ್ಯಕುಮಾರನು ತಪ್ಪಿ ಹೋದದ್ದನ್ನು ಹುಡುಕಿ ರಕ್ಷಿಸುವದಕ್ಕೆ ಬಂದನು ಎಂದು ಹೇಳಿದನು.
ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ.
ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ದೇವರುಗಳಾ ಗಿದ್ದೀರಿ ಎಂದು ನಾನು ಹೇಳಿದೆನು ಎಂಬದಾಗಿ ನಿಮ್ಮ ನ್ಯಾಯಪ್ರಮಾಣದಲ್ಲಿ ಬರೆದಿರುವದಿಲ್ಲವೋ?
ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.
ಆದದರಿಂದ ನಿಮ್ಮ ಪಾಪಗಳು ಅಳಿಸಲ್ಪಡು ವಂತೆ ನೀವು ಮಾನಸಾಂತರಪಟ್ಟು ತಿರುಗಿಕೊಳ್ಳಿರಿ; ಆಗ ಕರ್ತನ ಸನ್ನಿಧಾನದಿಂದ ನಿಮಗೆ ವಿಶ್ರಾಂತಿಕಾಲಗಳು ಒದಗುವವು.
ಇಸ್ರಾಯೇಲ್ಯ ರಲ್ಲಿ ಮಾನಸಾಂತರ ಉಂಟುಮಾಡಿ ಪಾಪಗಳ ಪರಿಹಾರವನ್ನು ಕೊಡುವ ಹಾಗೆ ಆತನು ಪ್ರಭುವೂ ರಕ್ಷಕನೂ ಆಗಿರುವಂತೆ ದೇವರು ತನ್ನ ಬಲಗೈಯಿಂದ ಆತನನ್ನು ಉನ್ನತಕ್ಕೆ ಏರಿಸಿದ್ದಾನೆ.
ಅವರು ಇವುಗಳನ್ನು ಕೇಳಿ ಮೌನವಾಗಿದ್ದು ದೇವ ರನ್ನು ಕೊಂಡಾಡಿ--ಹಾಗಾದರೆ ಅನ್ಯ ಜನಾಂಗದವ ರಿಗೂ ಜೀವಕ್ಕಾಗಿ ಮಾನಸಾಂತರವನ್ನು ದೇವರು ದಯಪಾಲಿಸಿದ್ದಾನೆ ಎಂದು ಹೇಳಿದರು.
ಈ ಅಜ್ಞಾನಕಾಲಗಳನ್ನು ದೇವರುಲಕ್ಷ್ಯಕ್ಕೆ ತರಲಿಲ್ಲ; ಈಗಲಾದರೋ ಆತನು ಎಲ್ಲಾ ಕಡೆಯಲ್ಲಿರುವ ಮನು ಷ್ಯರೆಲ್ಲರೂ ಮಾನಸಾಂತರಪಡಬೇಕೆಂದು ಅಪ್ಪಣೆ ಕೊಡುತ್ತಾನೆ.
ಯೆಹೂ ದ್ಯರೂ ಗ್ರೀಕರೂ ದೇವರ ಕಡೆಗೆ ಮಾನಸಾಂತರಪಟ್ಟು ನಮ್ಮ ಕರ್ತನಾದ ಯೇಸುಕ್ರಿಸ್ತನ ಮೇಲೆ ನಂಬಿಕೆಯಿಡಬೇಕೆಂದು ಸಾಕ್ಷೀಕರಿಸುವವನಾಗಿದ್ದೆನು.
ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು
ಇಲ್ಲವೆ ದೇವರ ದಯೆಯು ನಿನ್ನನ್ನು ಮಾನಸಾಂತರಕ್ಕೆ ನಡಿಸುತ್ತದೆಯೆಂದು ನೀನು ತಿಳಿಯದೆ ಆತನ ಅಪಾರವಾದ ದಯೆ ಸಹನೆ ದೀರ್ಘ ಶಾಂತಿ ಇವುಗಳನ್ನು ಅಸಡ್ಡೆಮಾಡುತ್ತೀಯೋ?
ಬರೆದಿರುವ ಪ್ರಕಾರ--ನೀತಿವಂತನು ಇಲ್ಲ, ಒಬ್ಬನಾದರೂ ಇಲ್ಲ;
ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು
ಮೊದಲು ದೇವದೂಷಕನೂ ಹಿಂಸಕನೂ ಕೇಡು ಮಾಡುವವನೂ ಆಗಿದ್ದ ನಾನು ಅವಿಶ್ವಾಸಿಯಾಗಿ ತಿಳಿಯದೆ ಹಾಗೆ ಮಾಡಿದ್ದರಿಂದ ನನ್ನ ಮೇಲೆ ಕರುಣೆ ಉಂಟಾಯಿತು.
ಎದುರಿಸುವವರನ್ನು ಸಾತ್ವಿಕತ್ವದಿಂದ ತಿದ್ದುವವನು ಆಗಿರಬೇಕು. ಒಂದು ವೇಳೆ ದೇವರು ಆ ಎದುರಿಸುವವರಲ್ಲಿ ಪಶ್ಚಾತ್ತಾಪವನ್ನುಂಟುಮಾಡಿ ಸತ್ಯದ ತಿಳುವಳಿಕೆಯನ್ನು ಅವರಿಗೆ ಕೊಟ್ಟಾನು.ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು.
ಕರ್ತನು ತನ್ನ ವಾಗ್ದಾನದ ವಿಷಯವಾಗಿ ತಡಮಾಡುತ್ತಾನೆಂಬದಾಗಿ ಕೆಲವರು ಎಣಿಸುವ ಪ್ರಕಾರ ಆತನು ತಡಮಾಡುವಾತನಲ್ಲ. ಆದರೆ ಯಾವನಾದರೂ ನಾಶವಾಗುವದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಮ್ಮ ಕಡೆಗೆ ದೀರ್ಘಶಾಂತಿ ಯುಳ್ಳವ