Home Bibles ಮತ್ತಾಯ 9:13 · ಕನ್ನಡ ಬೈಬಲ್
ಮತ್ತಾಯ 9:13 · ಕನ್ನಡ ಬೈಬಲ್

ನೀವು ಹೋಗಿ--ನಾನು ಯಜ್ಞವನ್ನಲ್ಲ; ಕರುಣೆಯನ್ನೇ ಅಪೇಕ್ಷಿಸುತ್ತೇನೆ ಎಂಬದರ ಅರ್ಥವನ್ನು ಕಲಿಯಿರಿ; ಯಾಕಂದರೆ ನಾನು ನೀತಿ ವಂತರನ್ನಲ್ಲ, ಪಾಪಿಗಳನ್ನು ಮಾನಸಾಂತರಪಡು ವದಕ್ಕಾಗಿ ಕರೆಯಲು ಬಂದೆನು ಎಂದು ಹೇಳಿದನು.

Cross references

ಸಾಮೇತಿಗಳು 21:3

ಯಜ್ಞಕ್ಕಿಂತ ನೀತಿನ್ಯಾಯಗಳನ್ನು ನಡಿಸುವದು ಕರ್ತ ನಿಗೆ ಎಷ್ಟೋ ಮೆಚ್ಚಿಕೆಯಾಗಿದೆ.

ಯೆಶಾಯ 55:6

ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ.

ಹೊಶೇಯ 6:6

ನಾನು ಬಲಿಯನ್ನಲ್ಲ ಕರುಣೆಯನ್ನೇ ಮತ್ತು ದಹನ ಬಲಿಗಳಿಗಿಂತ ದೇವರ ತಿಳುವಳಿಕೆಯನ್ನೇ ಹೆಚ್ಚಾಗಿ ಅಪೇಕ್ಷಿಸಿದ್ದೇನೆ.

ಮೀಕ 6:6

ನಾನು ಯಾವದರೊಂದಿಗೆ ಕರ್ತನ ಮುಂದೆ ಬರಲಿ? ಯಾವದರೊಂದಿಗೆ ಉನ್ನತವಾದ ದೇವರ ಮುಂದೆ ಅಡ್ಡಬೀಳಲಿ? ದಹನಬಲಿಗಳ ಸಂಗಡವೂ ಒಂದು ವರುಷದ ಕರುಗಳ ಸಂಗಡವೂ ಆತನ ಮುಂದೆ ಬರಲೋ?

ಮತ್ತಾಯ 3:2

ನೀವು ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪ ವಾಗಿದೆ ಎಂದು ಹೇಳಿದನು.

ಮತ್ತಾಯ 3:8

ಹಾಗಾದರೆ ಮಾನಸಾಂತರಕ್ಕೆ ತಕ್ಕ ಫಲ ಗಳನ್ನು ಫಲಿಸಿರಿ;

ಮತ್ತಾಯ 4:17

ಅಂದಿನಿಂದ ಯೇಸು--ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪಿಸಿತು ಎಂದು ಸಾರಿ ಹೇಳುವದಕ್ಕೆ ಪ್ರಾರಂಭಿಸಿದನು.

ಮತ್ತಾಯ 11:20

ತರುವಾಯ ತಾನು ಹೆಚ್ಚಾದ ಮಹತ್ಕಾರ್ಯ ಗಳನ್ನು ನಡಿಸಿದ ಪಟ್ಟಣಗಳು ಮಾನಸಾಂತರಪಡದೆ ಇದ್ದದರಿಂದ ಆತನು ಅವುಗಳನ್ನು ಗದರಿಸತೊ ಡಗಿ --

ಮತ್ತಾಯ 12:3

ಅದಕ್ಕೆ ಆತನು ಅವರಿಗೆ--ದಾವೀದನು ತಾನೂ ತನ್ನ ಸಂಗಡ ಇದ್ದವರೂ ಹಸಿದಾಗ ಏನು ಮಾಡಿದನೆಂದು ನೀವು ಓದಲಿಲ್ಲವೋ?

ಮತ್ತಾಯ 12:5

ಇದಲ್ಲದೆ ಸಬ್ಬತ್‌ ದಿನಗಳಲ್ಲಿ ಯಾಜಕರು ದೇವಾಲಯದಲ್ಲಿ ಸಬ್ಬತ್ತನ್ನು ಅಪವಿತ್ರಪಡಿಸಿದರೂ ನಿರಪರಾಧಿಗಳಾಗಿದ್ದಾ ರೆಂದು ನೀವು ನ್ಯಾಯಪ್ರಮಾಣದಲ್ಲಿ ಓದಲಿಲ್ಲವೇ?

ಮತ್ತಾಯ 12:7

ಆದರೆ--ನನಗೆ ಯಜ್ಞವಲ್ಲ, ಕರುಣೆಯೇ ಬೇಕು ಎಂಬದರ ಅರ್ಥವನ್ನು ನೀವು ತಿಳಿದಿದ್ದರೆ ನಿರಪರಾಧಿಗಳನ್ನು ಅಪರಾಧಿಗಳೆಂದು ತೀರ್ಪುಮಾಡು ತ್ತಿದ್ದಿಲ್ಲ.

ಮತ್ತಾಯ 18:10

ಚಿಕ್ಕವರಲ್ಲಿ ಒಬ್ಬನನ್ನಾದರೂ ನೀವು ತಾತ್ಸಾರ ಮಾಡದಂತೆ ನೋಡಿಕೊಳ್ಳಿರಿ; ಯಾಕಂದರೆ ನಾನು ನಿಮಗೆ ಹೇಳುವದೇನಂದರೆ--ಪರಲೋಕದಲ್ಲಿ ಅವರ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಾರೆ.

ಮತ್ತಾಯ 19:4

ಆತನು ಪ್ರತ್ಯುತ್ತರವಾಗಿ ಅವರಿಗೆ-- ಆದಿಯಲ್ಲಿ ಉಂಟುಮಾಡಿದಾತನು ಅವರನ್ನು ಗಂಡು ಹೆಣ್ಣಾಗಿ ಉಂಟುಮಾಡಿದನು.

ಮತ್ತಾಯ 21:28

ನೀವು ನೆನಸುವದೇನು? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು; ಅವನು ಮೊದಲನೆಯವನ ಬಳಿಗೆ ಬಂದು--ಮಗನೇ, ಹೋಗಿ ಈ ಹೊತ್ತು ನನ್ನ ದ್ರಾಕ್ಷೇತೋಟದಲ್ಲಿ ಕೆಲಸಮಾಡು ಎಂದು ಹೇಳಿದನು.

ಮತ್ತಾಯ 21:42

ಯೇಸು ಅವರಿಗೆ--ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಮತ್ತು ಇದು ಕರ್ತನಿಂದಲೇ ಆಯಿತು. ಅದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾದದ್ದು ಎಂದು ಬರಹಗಳಲ್ಲಿ ಎಂದಾದರೂ ನೀವು ಓದಲಿಲ್ಲವೋ?

ಮತ್ತಾಯ 22:31

ಆದರೆ ಸತ್ತವರ ಪುನರುತ್ಥಾನದ ವಿಷಯವಾಗಿ--

ಮಾರ್ಕ 2:17

ಯೇಸು ಅದನ್ನು ಕೇಳಿ--ಕ್ಷೇಮದಿಂದಿರುವವರಿಗೆ ಅಲ್ಲ, ಕ್ಷೇಮವಿಲ್ಲದವರಿಗೆ ವೈದ್ಯನುಬೇಕು; ನಾನು ನೀತಿವಂತರನ್ನಲ್ಲ, ಆದರೆ ಪಾಪಿಗಳನ್ನು ಮಾನಸಾಂತರಕ್ಕಾಗಿ ಕರೆಯುವದಕ್ಕೆ ಬಂದೆನು ಎಂದು ಅವರಿಗೆ ಹೇಳಿದನು.

ಮಾರ್ಕ 12:26

ಸತ್ತವರು ಎದ್ದು ಬರುವದರ ವಿಷಯವಾಗಿ--ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಆಗಿದ್ದೇನೆ ಎಂದು ಪೊದೆಯಲ್ಲಿ ದೇವರು ಮೋಶೆಯ ಸಂಗಡ ಹೇಗೆ ಮಾತನಾಡಿದನೆಂದು ಮೋಶೆಯ ಗ್ರಂಥದಲ್ಲಿ ನೀವು ಓದಲಿಲ್ಲವೋ?

ಲೂಕ 5:32

ನಾನು ನೀತಿವಂತರನ್ನಲ್ಲ, ಆದರೆ ಪಾಪಿಗಳನ್ನು ಮಾನಸಾಂತರಕ್ಕೆ ಕರೆಯುವದಕ್ಕಾಗಿ ಬಂದೆನು ಎಂದು ಹೇಳಿದನು.

ಲೂಕ 10:26

ಆತನು ಅವನಿಗೆ-- ನ್ಯಾಯಪ್ರಮಾಣದಲ್ಲಿ ಏನು ಬರೆದದೆ? ನೀನು ಹೇಗೆ ಓದುತ್ತೀ ಎಂದು ಕೇಳಿದನು.

ಲೂಕ 15:3

ಆತನು ಅವರಿಗೆ ಈ ಸಾಮ್ಯವನ್ನು ಹೇಳಿ ದನು--

ಲೂಕ 19:10

ಯಾಕಂದರೆ ಮನುಷ್ಯಕುಮಾರನು ತಪ್ಪಿ ಹೋದದ್ದನ್ನು ಹುಡುಕಿ ರಕ್ಷಿಸುವದಕ್ಕೆ ಬಂದನು ಎಂದು ಹೇಳಿದನು.

ಲೂಕ 24:47

ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ.

ಯೋಹಾನ 10:34

ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ದೇವರುಗಳಾ ಗಿದ್ದೀರಿ ಎಂದು ನಾನು ಹೇಳಿದೆನು ಎಂಬದಾಗಿ ನಿಮ್ಮ ನ್ಯಾಯಪ್ರಮಾಣದಲ್ಲಿ ಬರೆದಿರುವದಿಲ್ಲವೋ?

ಅಪೋಸ್ತಲರ ಕೃತ್ಯಗಳು 2:38

ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.

ಅಪೋಸ್ತಲರ ಕೃತ್ಯಗಳು 3:19

ಆದದರಿಂದ ನಿಮ್ಮ ಪಾಪಗಳು ಅಳಿಸಲ್ಪಡು ವಂತೆ ನೀವು ಮಾನಸಾಂತರಪಟ್ಟು ತಿರುಗಿಕೊಳ್ಳಿರಿ; ಆಗ ಕರ್ತನ ಸನ್ನಿಧಾನದಿಂದ ನಿಮಗೆ ವಿಶ್ರಾಂತಿಕಾಲಗಳು ಒದಗುವವು.

ಅಪೋಸ್ತಲರ ಕೃತ್ಯಗಳು 5:31

ಇಸ್ರಾಯೇಲ್ಯ ರಲ್ಲಿ ಮಾನಸಾಂತರ ಉಂಟುಮಾಡಿ ಪಾಪಗಳ ಪರಿಹಾರವನ್ನು ಕೊಡುವ ಹಾಗೆ ಆತನು ಪ್ರಭುವೂ ರಕ್ಷಕನೂ ಆಗಿರುವಂತೆ ದೇವರು ತನ್ನ ಬಲಗೈಯಿಂದ ಆತನನ್ನು ಉನ್ನತಕ್ಕೆ ಏರಿಸಿದ್ದಾನೆ.

ಅಪೋಸ್ತಲರ ಕೃತ್ಯಗಳು 11:18

ಅವರು ಇವುಗಳನ್ನು ಕೇಳಿ ಮೌನವಾಗಿದ್ದು ದೇವ ರನ್ನು ಕೊಂಡಾಡಿ--ಹಾಗಾದರೆ ಅನ್ಯ ಜನಾಂಗದವ ರಿಗೂ ಜೀವಕ್ಕಾಗಿ ಮಾನಸಾಂತರವನ್ನು ದೇವರು ದಯಪಾಲಿಸಿದ್ದಾನೆ ಎಂದು ಹೇಳಿದರು.

ಅಪೋಸ್ತಲರ ಕೃತ್ಯಗಳು 17:30

ಈ ಅಜ್ಞಾನಕಾಲಗಳನ್ನು ದೇವರುಲಕ್ಷ್ಯಕ್ಕೆ ತರಲಿಲ್ಲ; ಈಗಲಾದರೋ ಆತನು ಎಲ್ಲಾ ಕಡೆಯಲ್ಲಿರುವ ಮನು ಷ್ಯರೆಲ್ಲರೂ ಮಾನಸಾಂತರಪಡಬೇಕೆಂದು ಅಪ್ಪಣೆ ಕೊಡುತ್ತಾನೆ.

ಅಪೋಸ್ತಲರ ಕೃತ್ಯಗಳು 20:21

ಯೆಹೂ ದ್ಯರೂ ಗ್ರೀಕರೂ ದೇವರ ಕಡೆಗೆ ಮಾನಸಾಂತರಪಟ್ಟು ನಮ್ಮ ಕರ್ತನಾದ ಯೇಸುಕ್ರಿಸ್ತನ ಮೇಲೆ ನಂಬಿಕೆಯಿಡಬೇಕೆಂದು ಸಾಕ್ಷೀಕರಿಸುವವನಾಗಿದ್ದೆನು.

ಅಪೋಸ್ತಲರ ಕೃತ್ಯಗಳು 26:18

ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು

ರೋಮಾಪುರದವರಿಗೆ 2:4

ಇಲ್ಲವೆ ದೇವರ ದಯೆಯು ನಿನ್ನನ್ನು ಮಾನಸಾಂತರಕ್ಕೆ ನಡಿಸುತ್ತದೆಯೆಂದು ನೀನು ತಿಳಿಯದೆ ಆತನ ಅಪಾರವಾದ ದಯೆ ಸಹನೆ ದೀರ್ಘ ಶಾಂತಿ ಇವುಗಳನ್ನು ಅಸಡ್ಡೆಮಾಡುತ್ತೀಯೋ?

ರೋಮಾಪುರದವರಿಗೆ 3:10

ಬರೆದಿರುವ ಪ್ರಕಾರ--ನೀತಿವಂತನು ಇಲ್ಲ, ಒಬ್ಬನಾದರೂ ಇಲ್ಲ;

1 ಕೊರಿಂಥದವರಿಗೆ 6:9

ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು

1 ತಿಮೋಥೆಯ 1:13

ಮೊದಲು ದೇವದೂಷಕನೂ ಹಿಂಸಕನೂ ಕೇಡು ಮಾಡುವವನೂ ಆಗಿದ್ದ ನಾನು ಅವಿಶ್ವಾಸಿಯಾಗಿ ತಿಳಿಯದೆ ಹಾಗೆ ಮಾಡಿದ್ದರಿಂದ ನನ್ನ ಮೇಲೆ ಕರುಣೆ ಉಂಟಾಯಿತು.

2 ತಿಮೋಥೆಯ 2:25

ಎದುರಿಸುವವರನ್ನು ಸಾತ್ವಿಕತ್ವದಿಂದ ತಿದ್ದುವವನು ಆಗಿರಬೇಕು. ಒಂದು ವೇಳೆ ದೇವರು ಆ ಎದುರಿಸುವವರಲ್ಲಿ ಪಶ್ಚಾತ್ತಾಪವನ್ನುಂಟುಮಾಡಿ ಸತ್ಯದ ತಿಳುವಳಿಕೆಯನ್ನು ಅವರಿಗೆ ಕೊಟ್ಟಾನು.ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು.

2 ಪೇತ್ರ 3:9

ಕರ್ತನು ತನ್ನ ವಾಗ್ದಾನದ ವಿಷಯವಾಗಿ ತಡಮಾಡುತ್ತಾನೆಂಬದಾಗಿ ಕೆಲವರು ಎಣಿಸುವ ಪ್ರಕಾರ ಆತನು ತಡಮಾಡುವಾತನಲ್ಲ. ಆದರೆ ಯಾವನಾದರೂ ನಾಶವಾಗುವದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಮ್ಮ ಕಡೆಗೆ ದೀರ್ಘಶಾಂತಿ ಯುಳ್ಳವ

Interlinear

Choose Theme