ಆತನು ಮನೆಯೊಳಕ್ಕೆ ಬಂದಾಗ ಆ ಕುರುಡರು ಆತನ ಬಳಿಗೆ ಬಂದರು; ಆಗ ಯೇಸು ಅವರಿಗೆ--ನಾನು ಇದನ್ನು ಮಾಡಲು ಶಕ್ತನೆಂದು ನೀವು ನಂಬುತ್ತೀರೋ ಎಂದು ಕೇಳಿದಾಗ ಅವರು ಆತನಿಗೆ--ಕರ್ತನೇ, ಹೌದು ಎಂದು ಅಂದರು.
Cross references
ಕರ್ತನು ಎಲೀಯನ ಮುಖಾಂತರ ಹೇಳಿದ ವಾಕ್ಯದ ಪ್ರಕಾರವೇ ಮಡಕೆಯಲ್ಲಿರುವ ಹಿಟ್ಟು ತೀರದೆ ತಂಬಿಗೆ ಯಲ್ಲಿರುವ ಎಣ್ಣೆಯು ಮುಗಿಯದೆ ಇತ್ತು.
ಆಗ ಇಗೋ, ಒಬ್ಬ ಕುಷ್ಠರೋಗಿಯು ಬಂದು ಆತನನ್ನು ಆರಾಧಿಸಿ--ಕರ್ತನೇ, ನಿನಗೆ ಮನಸ್ಸಿದ್ದರೆ ನೀನು ನನ್ನನ್ನು ಶುದ್ಧ ಮಾಡಬಲ್ಲೆ ಅಂದನು.
ಇದಾದ ಮೇಲೆ ಯೇಸು ಪೇತ್ರನ ಮನೆಗೆ ಬಂದು ಅವನ ಹೆಂಡತಿಯ ತಾಯಿಯು ಜ್ವರದಿಂದ ಮಲಗಿರುವದನ್ನು ಕಂಡನು.
ಆದರೆ ಯೇಸು ಹಿಂತಿರುಗಿ ಆಕೆಯನ್ನು ನೋಡಿ--ಮಗಳೇ, ಸಮಾಧಾನದಿಂದಿರು; ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥ ಮಾಡಿಯದೆ ಅಂದನು. ಅದೇ ಗಳಿಗೆಯಲ್ಲಿ ಆ ಸ್ತ್ರೀಯು ಸ್ವಸ್ಥಳಾದಳು.
ತರುವಾಯ ಯೇಸು ಜನಸಮೂಹವನ್ನು ಕಳು ಹಿಸಿಬಿಟ್ಟು ಮನೆಯೊಳಕ್ಕೆ ಹೋದನು; ಆಗ ಶಿಷ್ಯರು ಆತನ ಬಳಿಗೆ ಬಂದು ಆತನಿಗೆ--ಹೊಲದ ಹಣಜಿಯ ಸಾಮ್ಯವನ್ನು ನಮಗೆ ವಿವರಿಸು ಅಂದರು.
ಆತನು ಅವರ ಅಪನಂಬಿಕೆಯ ದೆಸೆ ಯಿಂದ ಅಲ್ಲಿ ಬಹಳ ಮಹತ್ಕಾರ್ಯಗಳನ್ನು ನಡಿಸಲಿಲ್ಲ.
ಆಗ ಯೇಸು ಅವನಿಗೆ--ನೀನು ನಂಬುವದಾದರೆ ಆಗುವದು; ನಂಬುವವನಿಗೆ ಎಲ್ಲವು ಸಾಧ್ಯವೇ ಎಂದು ಹೇಳಿದನು.
ಯೇಸು ಅವನಿಗೆ--ನೀವು ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ನೋಡದ ಹೊರತು ನಂಬು ವದೇ ಇಲ್ಲ ಅಂದನು.
ಯಾವನಾದರೂ ಬದುಕುತ್ತಾ ನನ್ನಲ್ಲಿ ನಂಬಿಕೆಯಿಡುವದಾದರೆ ಅವನು ಎಂದಿಗೂ ಸಾಯುವ ದಿಲ್ಲ. ಇದನ್ನು ನೀನು ನಂಬುತ್ತೀಯೋ ಎಂದು ಕೇಳಿದ್ದಕ್ಕೆ
ಯೇಸು ಆಕೆಗೆ--ನೀನು ನಂಬುವದಾದರೆ ದೇವರ ಮಹಿಮೆಯನ್ನು ನೋಡುವಿ ಎಂದು ನಾನು ನಿನಗೆ ಹೇಳಲಿಲ್ಲವೇ ಅಂದನು.