ತರುವಾಯ ಯೇಸು ಎಲ್ಲಾ ಹಳ್ಳಿಗಳಲ್ಲಿಯೂ ಪಟ್ಟಣಗಳಲ್ಲಿಯೂ ಸಂಚರಿ ಸುತ್ತಾ ಅವರ ಸಭಾಮಂದಿರಗಳಲ್ಲಿ ಉಪದೇಶಿಸುತಾ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಪ್ರತಿಯೊಂದು ಅಸ್ವಸ್ಥತೆಯನ್ನೂ ರೋಗವನ್ನೂ ವಾಸಿಮಾಡಿದರು.
Cross references
ಬಳಿಕ ಯೇಸು ಗಲಿಲಾಯವನ್ನೆಲ್ಲಾ ಸಂಚರಿಸಿ ಅವರ ಸಭಾಮಂದಿರಗಳಲ್ಲಿ ಬೋಧಿಸುವಾತನಾಗಿ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಎಲ್ಲಾ ತರದ ರೋಗಗಳನ್ನು ಸಕಲ ವಿಧವಾದ ಜಾಡ್ಯಗಳನ್ನೂ ಗುಣಮಾಡುತ್ತಾ ಇದ್ದನು.
ಮತ್ತು ಆದದ್ದೇನಂದರೆ, ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ ಅಪ್ಪಣೆ ಕೊಡು ವದನ್ನು ಮುಗಿಸಿದ ಮೇಲೆ ಅವರ ಪಟ್ಟಣಗಳಲ್ಲಿ ಬೋಧಿಸುವದಕ್ಕೂ ಸಾರುವದಕ್ಕೂ ಅಲ್ಲಿಂದ ಹೊರಟು ಹೋದನು.
ಕುರುಡರು ದೃಷ್ಟಿ ಹೊಂದುತ್ತಾರೆ, ಕುಂಟರು ನಡೆಯುತ್ತಾರೆ,ಕುಷ್ಟರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲ್ಪಡುತ್ತದೆ.
ಸಂಜೆಯಲ್ಲಿ ಸೂರ್ಯನು ಮುಣುಗಿದ್ದಾಗ ಅವರು ಅಸ್ವಸ್ಥತೆಯುಳ್ಳವರೆಲ್ಲರನ್ನೂ ದೆವ್ವ ಹಿಡಿದವರನ್ನೂ ಆತನ ಬಳಿಗೆ ತಂದರು.
ಆತನು ಅವರ ಅಪನಂಬಿಕೆ ಯ ದೆಸೆಯಿಂದ ಆಶ್ಚರ್ಯಪಟ್ಟನು; ಮತ್ತು ಸುತ್ತಲಿನ ಹಳ್ಳಿಗಳಿಗೆ ಹೋಗಿ ಬೋಧಿಸುತ್ತಾ ಇದ್ದನು.
ತರುವಾಯ ಆತನು ಯಾವ ಯಾವ ಹಳ್ಳಿಗಳಲ್ಲಿ, ಪಟ್ಟಣಗಳಲ್ಲಿ, ಸೀಮೆಯಲ್ಲಿ ಪ್ರವೇಶಿಸಿದನೋ ಅಲ್ಲೆಲ್ಲಾ ಅವರು ಅಸ್ವಸ್ಥ ವಾದವರನ್ನು ಬೀದಿಗಳಲ್ಲಿ ಮಲಗಿಸಿ ಆತನ ಉಡುಪಿನ ಅಂಚನ್ನಾದರೂ ಅವರು ಮುಟ್ಟಗೊಡಿಸಬೇಕೆಂದು ಆತನನ್ನು ಬೇಡಿಕೊಂಡರು; ಯಾರಾರು ಆತನನ್ನು ಮುಟ್ಟಿದರೋ ಅವರು ಸ್ವಸ
ಆದರೆ ಆತನು ಅವರಿಗೆ--ಬೇರೆ ಪಟ್ಟಣಗಳಿಗೂ ದೇವರ ರಾಜ್ಯವನ್ನು ನಾನು ಸಾರಲೇಬೇಕು; ಇದಕ್ಕಾಗಿಯೇ ನಾನು ಕಳುಹಿಸಲ್ಪಟ್ಟಿದ್ದೇನೆ ಅಂದನು.ಆತನು ಗಲಿಲಾಯದ ಸಭಾಮಂದಿರಗಳಲ್ಲಿ ಸಾರಿದನು.
ಆತನು ಪಟ್ಟಣಗಳನ್ನೂ ಹಳ್ಳಿಗಳನ್ನೂ ಹಾದು, ಬೋಧಿಸುತ್ತಾ ಯೆರೂಸಲೇಮಿನ ಕಡೆಗೆ ಪ್ರಯಾಣ ಮಾಡಿದನು.
ಇಸ್ರಾಯೇಲ್ ಜನರೇ, ಈ ಮಾತುಗಳನ್ನು ಕೇಳಿರಿ; ನಿಮಗೂ ತಿಳಿದಿರುವಂತೆ ನಜರೇತಿನ ಯೇಸುವು ದೇವರಿಗೆ ಮೆಚ್ಚಿಕೆಯಾದ ನೆಂಬದಕ್ಕೆ ದೇವರು ಆತನಿಂದ ಮಹತ್ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯ ಗಳನ್ನೂ ನಿಮ್ಮ ಮಧ್ಯದಲ್ಲಿ ನಡಿಸಿದನು.
ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮನಿಂದಲೂ ಬಲದಿಂದಲೂ ಅಭಿಷೇಕಿಸಿದ ನೆಂಬದನ್ನೂ ಹೇಗೆ ಆತನು ಒಳ್ಳೇದನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣ ಮಾಡುತ್ತಾ ಸಂಚರಿಸಿದನೆಂಬದನ್ನು ನೀವು ತಿಳಿದಿದ್ದೀರಿ; ಯಾಕಂದರೆ ದೇವರು ಆತನ ಸಂಗಡ ಇದ್ದನು.