ಆದರೆ ಆತನು ಜನರ ಸಮೂಹಗಳನ್ನು ಕಂಡು ಅವರ ಮೇಲೆ ಕನಿಕರಪಟ್ಟನು; ಯಾಕಂದರೆ ಅವರು ಕುರುಬನಿಲ್ಲದ ಕುರಿಗಳಂತೆ ಚದರಿಸಲ್ಪಟ್ಟು ಬಳಲಿದವರಾಗಿದ್ದರು.
Cross references
ಕರ್ತನ ಸಭೆಯು ಕುರುಬನಿಲ್ಲದ ಕುರಿಗಳ ಹಾಗೆ ಇರಬಾರದು ಎಂದು ಅಂದನು.
ಅದಕ್ಕ ವನು ಕಾಯುವವನಿಲ್ಲದ ಕುರಿಗಳ ಹಾಗೆಯೇ ಬೆಟ್ಟ ಗಳ ಮೇಲೆ ಚದರಿಸಲ್ಪಟ್ಟ ಸಮಸ್ತ ಇಸ್ರಾಯೇಲನ್ನು ನೋಡಿದೆನು. ಆಗ ಕರ್ತನು--ಇವರಿಗೆ ಯಜಮಾ ನನು ಇಲ್ಲದೆ ಪ್ರತಿ ಮನುಷ್ಯನು ತನ್ನ ತನ್ನ ಮನೆಗೆ ಸಮಾಧಾನವಾಗಿ ಹಿಂತಿರಿಗಿ ಹೋಗಲಿ ಅಂದನು.
ಅದ ಕ್ಕವನು--ಕಾಯುವವನಿಲ್ಲದ ಕುರಿಗಳ ಹಾಗೆ ಬೆಟ್ಟಗಳ ಮೇಲೆ ಚದರಿಸಲ್ಪಟ್ಟ ಸಮಸ್ತ ಇಸ್ರಾಯೇಲ್ಯರನ್ನು ಕಂಡೆನು. ಆಗ ಕರ್ತನು--ಇವರಿಗೆ ಯಜಮಾನನು ಇಲ್ಲ; ಪ್ರತಿ ಮನುಷ್ಯನು ತನ್ನ ಮನೆಗೆ ಸಮಾಧಾನ ವಾಗಿ ತಿರುಗಲಿ ಅಂದನು.
ಅರಣ್ಯದ ಸಕಲ ಮೃಗಗಳೇ, ಹೌದು, ಕಾಡಿನ ಎಲ್ಲಾ ಮೃಗಗಳೇ, ನುಂಗಿಬಿಡುವದಕ್ಕೆ ಬನ್ನಿರಿ.
ಬಾಬೆಲಿನೊಳಗಿಂದ ಓಡಿಹೋಗಿರಿ, ಒಬ್ಬೊಬ್ಬನು ತನ್ನ ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳಲಿ; ಅದರ ಅಕ್ರಮದಲ್ಲಿ ನಾಶವಾಗ ಬೇಡಿರಿ; ಇದು ಕರ್ತನ ಪ್ರತಿದಂಡನೆಯ ಕಾಲವು; ಆತನೇ ಅದಕ್ಕೆ ಮುಯ್ಯಿಗೆಮುಯ್ಯಿ ಕೊಡುತ್ತಾನೆ.
ನೀವು ಕೊಬ್ಬನ್ನು ತಿನ್ನುತ್ತೀರಿ, ಉಣ್ಣೆಯ ಬಟ್ಟೆಯನ್ನು ಹಾಕುತ್ತೀರಿ, ಅವುಗಳಲ್ಲಿ ಕೊಬ್ಬಿದ್ದನ್ನು ಕೊಲ್ಲುತ್ತೀರಿ, ಆದರೆ ಮಂದೆಯನ್ನು ನೀವು ಮೇಯಿ ಸುವದಿಲ್ಲ,
ವಿಗ್ರಹಗಳು ವ್ಯರ್ಥವಾಗಿ ಮಾತ ನಾಡಿವೆ; ಶಕುನಗಾರರು ಸುಳ್ಳನ್ನು ನೋಡಿದ್ದಾರೆ; ಮೋಸವಾದ ಕನಸುಗಳನ್ನು ತಿಳಿಸಿದ್ದಾರೆ; ವ್ಯರ್ಥವಾಗಿ ಆದರಿಸುತ್ತಾರೆ; ಆದದರಿಂದ ಮಂದೆಯ ಹಾಗೆ ತಮ್ಮ ದಾರಿಯಲ್ಲಿ ಹೋಗಿದ್ದಾರೆ; ಕುರುಬನಿಲ್ಲದ ಕಾರಣ ಕಳವಳಗೊಂಡಿದ್ದಾರೆ.
ಇಗೋ, ನಾನು ದೇಶದಲ್ಲಿ ಒಬ್ಬ ಕುರುಬನನ್ನು ಎಬ್ಬಿಸುವೆನು; ಅವನು ಕೆಟ್ಟು ಹೋಗುವ ವುಗಳನ್ನು ವಿಚಾರಿಸುವದಿಲ್ಲ; ಇಲ್ಲವೆ ಮರಿಯನ್ನು ಅವನು ಹುಡುಕುವದಿಲ್ಲ; ಮುರಿದದ್ದನ್ನು ಅವನು ಗುಣಮಾಡುವದಿಲ್ಲ; ಇನ್ನೂ ನಿಂತಿರುವದನ್ನು ಅವನು ಪೋಷಿಸುವದಿಲ್ಲ; ಆದರೆ ಕೊಬ್ಬಿದವುಗಳ ಮಾಂಸ ವನ್ನು ತಿನ್ನುವನು; ಅವುಗಳ ಗೊರಸುಗಳನ್ನು ಮುರಿದು ಬಿಡುವನು.ಮಂದೆಯನ್ನು ಕೈಬಿಡುವಂಥ ಮೈಗಳ್ಳನಾದ ಕುರುಬನಿಗೆ ಅಯ್ಯೋ! ಕತ್ತಿಯು ಅವನ ತೋಳಿನ ಮೇಲೆಯೂ ಅವನ ಬಲಗಣ್ಣಿನ ಮೇಲೆಯೂ ಇರುವದು; ಅವನ ತೋಳು ತೀರಾ ಒಣಗುವದು; ಅವನ ಬಲಗಣ್ಣು ಪೂರ್ಣವಾಗಿ ಕತ್ತಲಾಗುವದು.
ಓ ಕತ್ತಿಯೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ, ಎಚ್ಚರವಾಗು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಕುರುಬನನ್ನು ಹೊಡೆ, ಆಗ ಕುರಿಗಳು ಚದರಿ ಹೋಗುವವು; ಆದರೆ ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು ಎಂದು ಹೇಳುತ್ತಾನೆ.
ಆದರೆ ತಪ್ಪಿಸಿಕೊಂಡ ಕುರಿಗಳಾದ ಇಸ್ರಾಯೇಲಿನ ಮನೆತನದವರ ಬಳಿಗೆ ಮಾತ್ರ ಹೋಗಿರಿ.
ಆಗ ಯೇಸು ಹೊರಟುಹೋಗಿ ಜನರ ಮಹಾಸಮೂಹವನ್ನು ಕಂಡು ಅವರ ಮೇಲೆ ಕನಿಕರ ಪಟ್ಟು ಅವರಲ್ಲಿದ್ದ ರೋಗಿಗಳನ್ನು ಸ್ವಸ್ಥಮಾಡಿದನು.
ಆದರೆ ಆತನು ಪ್ರತ್ಯು ತ್ತರವಾಗಿ-- ತಪ್ಪಿಸಿಕೊಂಡ ಕುರಿಗಳಾಗಿರುವ ಇಸ್ರಾ ಯೇಲಿನ ಮನೆತನದವರ ಬಳಿಗೆ ಮಾತ್ರ ನಾನು ಕಳುಹಿಸಲ್ಪಟ್ಟಿದ್ದೇನೆ ಅಂದನು.
ತರುವಾಯ ಯೇಸು ತನ್ನ ಶಿಷ್ಯರನ್ನು ಕರೆದು-- ನಾನು ಈ ಜನಸಮೂಹವನ್ನು ಕನಿಕರಿಸುತ್ತೇನೆ; ಯಾಕ ಂದರೆ ಈಗ ಬಿಟ್ಟೂಬಿಡದೆ ಮೂರು ದಿನಗಳಿಂದ ಅವರು ನನ್ನೊಂದಿಗಿದ್ದಾರೆ; ಮತ್ತು ಅವರಿಗೆ ತಿನ್ನುವದಕ್ಕೆ ಏನೂ ಇಲ್ಲ; ದಾರಿಯಲ್ಲಿ ಅವರು ಬಳಲಿಹೋದಾರೆಂದು ಅವ ರನ್ನು ಉಪವಾಸವಾಗಿ ಕಳುಹಿಸು
ಯೇಸು ಹೊರಗೆ ಬಂದು ಬಹು ಜನರನ್ನು ನೋಡಿ ಅವರ ಮೇಲೆ ಕನಿಕರ ಪಟ್ಟನು; ಅವರು ಕುರುಬನಿಲ್ಲದ ಕುರಿಗಳಂತೆ ಇದ್ದರು; ಆತನು ಅವರಿಗೆ ಅನೇಕ ವಿಷಯಗಳನ್ನು ಬೋಧಿಸಲಾರಂಭಿಸಿದನು.
ಯಾಕಂದರೆ ನಮಗಿ ರುವ ಮಹಾಯಾಜಕನು ನಮ್ಮ ನಿರ್ಬಲಾವಸ್ಥೆಯನ್ನು ಕುರಿತು ಅನುತಾಪವಿಲ್ಲದವನಲ್ಲ; ಆತನು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿ ಯಾದರೂ ಪಾಪರಹಿತನಾಗಿದ್ದನು.ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.
ತಾನೂ ಬಲಹೀನನಾಗಿರುವದರಿಂದ ಅವನು ಜ್ಞಾನವಿಲ್ಲದವರ ಮೇಲೆಯೂ ಮಾರ್ಗ ತಪ್ಪಿದವರ ಮೇಲೆಯೂ ಕರುಣೆ ತೋರಿಸಬಲ್ಲನು.