Home Bibles ಮತ್ತಾಯ 9:36 · ಕನ್ನಡ ಬೈಬಲ್
ಮತ್ತಾಯ 9:36 · ಕನ್ನಡ ಬೈಬಲ್

ಆದರೆ ಆತನು ಜನರ ಸಮೂಹಗಳನ್ನು ಕಂಡು ಅವರ ಮೇಲೆ ಕನಿಕರಪಟ್ಟನು; ಯಾಕಂದರೆ ಅವರು ಕುರುಬನಿಲ್ಲದ ಕುರಿಗಳಂತೆ ಚದರಿಸಲ್ಪಟ್ಟು ಬಳಲಿದವರಾಗಿದ್ದರು.

Cross references

ಅಂಕೆಗಳ ಪುಸ್ತಕ 27:17

ಕರ್ತನ ಸಭೆಯು ಕುರುಬನಿಲ್ಲದ ಕುರಿಗಳ ಹಾಗೆ ಇರಬಾರದು ಎಂದು ಅಂದನು.

1 ಅರಸುಗಳು 22:17

ಅದಕ್ಕ ವನು ಕಾಯುವವನಿಲ್ಲದ ಕುರಿಗಳ ಹಾಗೆಯೇ ಬೆಟ್ಟ ಗಳ ಮೇಲೆ ಚದರಿಸಲ್ಪಟ್ಟ ಸಮಸ್ತ ಇಸ್ರಾಯೇಲನ್ನು ನೋಡಿದೆನು. ಆಗ ಕರ್ತನು--ಇವರಿಗೆ ಯಜಮಾ ನನು ಇಲ್ಲದೆ ಪ್ರತಿ ಮನುಷ್ಯನು ತನ್ನ ತನ್ನ ಮನೆಗೆ ಸಮಾಧಾನವಾಗಿ ಹಿಂತಿರಿಗಿ ಹೋಗಲಿ ಅಂದನು.

2 ದಿನವೃತ್ತಾಂತ 18:16

ಅದ ಕ್ಕವನು--ಕಾಯುವವನಿಲ್ಲದ ಕುರಿಗಳ ಹಾಗೆ ಬೆಟ್ಟಗಳ ಮೇಲೆ ಚದರಿಸಲ್ಪಟ್ಟ ಸಮಸ್ತ ಇಸ್ರಾಯೇಲ್ಯರನ್ನು ಕಂಡೆನು. ಆಗ ಕರ್ತನು--ಇವರಿಗೆ ಯಜಮಾನನು ಇಲ್ಲ; ಪ್ರತಿ ಮನುಷ್ಯನು ತನ್ನ ಮನೆಗೆ ಸಮಾಧಾನ ವಾಗಿ ತಿರುಗಲಿ ಅಂದನು.

ಯೆಶಾಯ 56:9

ಅರಣ್ಯದ ಸಕಲ ಮೃಗಗಳೇ, ಹೌದು, ಕಾಡಿನ ಎಲ್ಲಾ ಮೃಗಗಳೇ, ನುಂಗಿಬಿಡುವದಕ್ಕೆ ಬನ್ನಿರಿ.

ಯೆರೆಮಿಯ 50:6

ಬಾಬೆಲಿನೊಳಗಿಂದ ಓಡಿಹೋಗಿರಿ, ಒಬ್ಬೊಬ್ಬನು ತನ್ನ ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳಲಿ; ಅದರ ಅಕ್ರಮದಲ್ಲಿ ನಾಶವಾಗ ಬೇಡಿರಿ; ಇದು ಕರ್ತನ ಪ್ರತಿದಂಡನೆಯ ಕಾಲವು; ಆತನೇ ಅದಕ್ಕೆ ಮುಯ್ಯಿಗೆಮುಯ್ಯಿ ಕೊಡುತ್ತಾನೆ.

ಯೆಹೆಜ್ಕೇಲ 34:3

ನೀವು ಕೊಬ್ಬನ್ನು ತಿನ್ನುತ್ತೀರಿ, ಉಣ್ಣೆಯ ಬಟ್ಟೆಯನ್ನು ಹಾಕುತ್ತೀರಿ, ಅವುಗಳಲ್ಲಿ ಕೊಬ್ಬಿದ್ದನ್ನು ಕೊಲ್ಲುತ್ತೀರಿ, ಆದರೆ ಮಂದೆಯನ್ನು ನೀವು ಮೇಯಿ ಸುವದಿಲ್ಲ,

ಜೆಕರ್ಯ 10:2

ವಿಗ್ರಹಗಳು ವ್ಯರ್ಥವಾಗಿ ಮಾತ ನಾಡಿವೆ; ಶಕುನಗಾರರು ಸುಳ್ಳನ್ನು ನೋಡಿದ್ದಾರೆ; ಮೋಸವಾದ ಕನಸುಗಳನ್ನು ತಿಳಿಸಿದ್ದಾರೆ; ವ್ಯರ್ಥವಾಗಿ ಆದರಿಸುತ್ತಾರೆ; ಆದದರಿಂದ ಮಂದೆಯ ಹಾಗೆ ತಮ್ಮ ದಾರಿಯಲ್ಲಿ ಹೋಗಿದ್ದಾರೆ; ಕುರುಬನಿಲ್ಲದ ಕಾರಣ ಕಳವಳಗೊಂಡಿದ್ದಾರೆ.

ಜೆಕರ್ಯ 11:16

ಇಗೋ, ನಾನು ದೇಶದಲ್ಲಿ ಒಬ್ಬ ಕುರುಬನನ್ನು ಎಬ್ಬಿಸುವೆನು; ಅವನು ಕೆಟ್ಟು ಹೋಗುವ ವುಗಳನ್ನು ವಿಚಾರಿಸುವದಿಲ್ಲ; ಇಲ್ಲವೆ ಮರಿಯನ್ನು ಅವನು ಹುಡುಕುವದಿಲ್ಲ; ಮುರಿದದ್ದನ್ನು ಅವನು ಗುಣಮಾಡುವದಿಲ್ಲ; ಇನ್ನೂ ನಿಂತಿರುವದನ್ನು ಅವನು ಪೋಷಿಸುವದಿಲ್ಲ; ಆದರೆ ಕೊಬ್ಬಿದವುಗಳ ಮಾಂಸ ವನ್ನು ತಿನ್ನುವನು; ಅವುಗಳ ಗೊರಸುಗಳನ್ನು ಮುರಿದು ಬಿಡುವನು.ಮಂದೆಯನ್ನು ಕೈಬಿಡುವಂಥ ಮೈಗಳ್ಳನಾದ ಕುರುಬನಿಗೆ ಅಯ್ಯೋ! ಕತ್ತಿಯು ಅವನ ತೋಳಿನ ಮೇಲೆಯೂ ಅವನ ಬಲಗಣ್ಣಿನ ಮೇಲೆಯೂ ಇರುವದು; ಅವನ ತೋಳು ತೀರಾ ಒಣಗುವದು; ಅವನ ಬಲಗಣ್ಣು ಪೂರ್ಣವಾಗಿ ಕತ್ತಲಾಗುವದು.

ಜೆಕರ್ಯ 13:7

ಓ ಕತ್ತಿಯೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ, ಎಚ್ಚರವಾಗು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಕುರುಬನನ್ನು ಹೊಡೆ, ಆಗ ಕುರಿಗಳು ಚದರಿ ಹೋಗುವವು; ಆದರೆ ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು ಎಂದು ಹೇಳುತ್ತಾನೆ.

ಮತ್ತಾಯ 10:6

ಆದರೆ ತಪ್ಪಿಸಿಕೊಂಡ ಕುರಿಗಳಾದ ಇಸ್ರಾಯೇಲಿನ ಮನೆತನದವರ ಬಳಿಗೆ ಮಾತ್ರ ಹೋಗಿರಿ.

ಮತ್ತಾಯ 14:14

ಆಗ ಯೇಸು ಹೊರಟುಹೋಗಿ ಜನರ ಮಹಾಸಮೂಹವನ್ನು ಕಂಡು ಅವರ ಮೇಲೆ ಕನಿಕರ ಪಟ್ಟು ಅವರಲ್ಲಿದ್ದ ರೋಗಿಗಳನ್ನು ಸ್ವಸ್ಥಮಾಡಿದನು.

ಮತ್ತಾಯ 15:24

ಆದರೆ ಆತನು ಪ್ರತ್ಯು ತ್ತರವಾಗಿ-- ತಪ್ಪಿಸಿಕೊಂಡ ಕುರಿಗಳಾಗಿರುವ ಇಸ್ರಾ ಯೇಲಿನ ಮನೆತನದವರ ಬಳಿಗೆ ಮಾತ್ರ ನಾನು ಕಳುಹಿಸಲ್ಪಟ್ಟಿದ್ದೇನೆ ಅಂದನು.

ಮತ್ತಾಯ 15:32

ತರುವಾಯ ಯೇಸು ತನ್ನ ಶಿಷ್ಯರನ್ನು ಕರೆದು-- ನಾನು ಈ ಜನಸಮೂಹವನ್ನು ಕನಿಕರಿಸುತ್ತೇನೆ; ಯಾಕ ಂದರೆ ಈಗ ಬಿಟ್ಟೂಬಿಡದೆ ಮೂರು ದಿನಗಳಿಂದ ಅವರು ನನ್ನೊಂದಿಗಿದ್ದಾರೆ; ಮತ್ತು ಅವರಿಗೆ ತಿನ್ನುವದಕ್ಕೆ ಏನೂ ಇಲ್ಲ; ದಾರಿಯಲ್ಲಿ ಅವರು ಬಳಲಿಹೋದಾರೆಂದು ಅವ ರನ್ನು ಉಪವಾಸವಾಗಿ ಕಳುಹಿಸು

ಮಾರ್ಕ 6:34

ಯೇಸು ಹೊರಗೆ ಬಂದು ಬಹು ಜನರನ್ನು ನೋಡಿ ಅವರ ಮೇಲೆ ಕನಿಕರ ಪಟ್ಟನು; ಅವರು ಕುರುಬನಿಲ್ಲದ ಕುರಿಗಳಂತೆ ಇದ್ದರು; ಆತನು ಅವರಿಗೆ ಅನೇಕ ವಿಷಯಗಳನ್ನು ಬೋಧಿಸಲಾರಂಭಿಸಿದನು.

ಹೆಬ್ರಿಯರಿಗೆ 4:15

ಯಾಕಂದರೆ ನಮಗಿ ರುವ ಮಹಾಯಾಜಕನು ನಮ್ಮ ನಿರ್ಬಲಾವಸ್ಥೆಯನ್ನು ಕುರಿತು ಅನುತಾಪವಿಲ್ಲದವನಲ್ಲ; ಆತನು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿ ಯಾದರೂ ಪಾಪರಹಿತನಾಗಿದ್ದನು.ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.

ಹೆಬ್ರಿಯರಿಗೆ 5:2

ತಾನೂ ಬಲಹೀನನಾಗಿರುವದರಿಂದ ಅವನು ಜ್ಞಾನವಿಲ್ಲದವರ ಮೇಲೆಯೂ ಮಾರ್ಗ ತಪ್ಪಿದವರ ಮೇಲೆಯೂ ಕರುಣೆ ತೋರಿಸಬಲ್ಲನು.

Interlinear

Choose Theme