ಆಗ ಆತನು ತನ್ನ ಶಿಷ್ಯ ರಿಗೆ--ಬೆಳೆಯು ನಿಜವಾಗಿಯೂ ಬಹಳ; ಆದರೆ ಕೆಲಸದವರು ಸ್ವಲ್ಪ.ಆದದರಿಂದ ಬೆಳೆಯ ಯಜ ಮಾನನು ಕೆಲಸಗಾರರನ್ನು ತನ್ನ ಬೆಳೆಗೆ ಕಳುಹಿಸುವಂತೆ ಆತನನ್ನು ಪ್ರಾರ್ಥಿಸಿರಿ ಅಂದನು.
Cross references
ಕರ್ತನು ವಾಕ್ಯ ವನ್ನು ಕೊಟ್ಟನು; ಅದನ್ನು ಪ್ರಕಟಿಸಿದವರ ಗುಂಪು ದೊಡ್ಡದಾಗಿತ್ತು.
ಆದದರಿಂದ ನೀವು ಹೋಗಿ ಎಲ್ಲಾ ಜನಾಂಗಗಳಿಗೆ ಬೋಧಿಸಿ ತಂದೆಯ, ಮಗನ, ಪರಿಶುದ್ಧಾತ್ಮನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿರಿ;ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
ಆತನು ಅವರಿಗೆ--ನೀವು ಸಮಸ್ತ ಲೋಕಕ್ಕೆ ಹೋಗಿ ಎಲ್ಲಾ ಸೃಷ್ಟಿಗೆ ಸುವಾರ್ತೆಯನ್ನು ಸಾರಿರಿ.
ಆತನು ಅವರಿಗೆ--ಬೆಳೆಯು ನಿಜವಾಗಿಯೂ ಬಹಳ; ಆದರೆ ಕೆಲಸದವರು ಸ್ವಲ್ಪ; ಆದದರಿಂದ ಬೆಳೆಯ ಯಜಮಾನನು ತನ್ನ ಬೆಳೆಗೆ ಕೆಲಸದವರನ್ನು ಕಳುಹಿಸಬೇಕೆಂದು ನೀವು ಪ್ರಾರ್ಥನೆಮಾಡಿರಿ.
ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ.
ನೀವು--ಸುಗ್ಗಿಯು ಬರುವದಕ್ಕೆ ಇನ್ನೂ ನಾಲ್ಕು ತಿಂಗಳುಗಳು ಇವೆಯೆಂದು ಹೇಳುತ್ತೀರಲ್ಲವೋ? ಮತ್ತು--ಇಗೋ, ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಹೊಲಗಳನ್ನು ನೋಡಿರಿ, ಯಾಕಂದರೆ ಅವು ಈಗಾ ಗಲೇ ಬೆಳ್ಳಗಾಗಿ ಕೊಯ್ಲಿಗೆ ಬಂದವೆ ಎಂದು ನಾನು ನಿಮಗೆ ಹೇಳುತ್ತೇನೆ.
ಆಗ ರಾತ್ರಿ ಕಾಲದಲ್ಲಿ ಪೌಲನಿಗೆ ಒಂದು ದರ್ಶನವಾಯಿತು; ಏನಂ ದರೆ--ಮಕೆದೋನ್ಯ ದೇಶದವನಾದ ಒಬ್ಬ ಮನುಷ್ಯನು ನಿಂತುಕೊಂಡು--ಮಕೆದೋನ್ಯಕ್ಕೆ ಬಂದು ನಮಗೆ ನೆರವಾಗಬೇಕು ಎಂದು ಅವನನ್ನು ಬೇಡಿಕೊಂಡನು.
ನಾನೇ ನಿನ್ನೊಂದಿಗಿದ್ದೇನೆ; ಯಾರೂ ನಿನ್ನ ಮೇಲೆ ಬಿದ್ದು ಕೇಡುಮಾಡುವದಿಲ್ಲ; ಈ ಪಟ್ಟಣದಲ್ಲಿ ಬಹಳ ಮಂದಿ ನನಗೆ ಇದ್ದಾರೆ ಎಂದು ಹೇಳಿದನು.
ನಾವು ದೇವರ ಜೊತೆ ಕೆಲಸದವರು; ನೀವು ದೇವರ ಹೊಲವೂ ದೇವರ ಕಟ್ಟಡವೂ ಆಗಿದ್ದೀರಿ.
ಆದದರಿಂದ ನಾವು ಆತನೊಂದಿಗೆ ಕೆಲಸ ನಡಿಸುವವರಾಗಿದ್ದೇವೆ; ನೀವು ಸಹ ಹೊಂದಿದ ದೇವರ ಕೃಪೆಯನ್ನು ವ್ಯರ್ಥಮಾಡಿ ಕೊಳ್ಳಬೇಡಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ.
ನಾನು ತಿಮೊಥೆಯನನ್ನು ಬೇಗನೆ ನಿಮ್ಮ ಬಳಿಗೆ ಕಳುಹಿಸುವದಕ್ಕೆ ಕರ್ತನಾದ ಯೇಸುವಿನಲ್ಲಿ ನಿರೀಕ್ಷಿಸುತ್ತೇನೆ. ಅವನ ಮುಖಾಂತರ ನಿಮ್ಮ ವಿಷಯವನ್ನು ತಿಳಿದು ನಾನು ಸಹ ಆದರಣೆಹೊಂದೇನು.
ಯೂಸ್ತನೆನಿಸಿಕೊಳ್ಳುವ ಯೇಸುವೂ ನಿಮ್ಮನ್ನು ವಂದಿಸುತ್ತಾರೆ. ಇವರು ಸುನ್ನತಿಯವರಾಗಿ ದ್ದಾರೆ. ದೇವರ ರಾಜ್ಯಕ್ಕಾಗಿ ಇವರು ಮಾತ್ರ ನನ್ನ ಜೊತೆಗೆಲಸದವರಾಗಿದ್ದು ನನಗೆ ಆದರಣೆಯಾಗಿದ್ದಾರೆ.
ಸಹೋದರರೇ, ಯಾರು ನಿಮ್ಮಲ್ಲಿ ಪ್ರಯಾಸಪಟ್ಟು ಕರ್ತನ ಕಾರ್ಯಗಳಲ್ಲಿ ನಿಮ್ಮ ಮೇಲೆ ಮುಖ್ಯಸ್ಥರಾಗಿದ್ದು ನಿಮಗೆ ಬುದ್ಧಿಹೇಳುತ್ತಾರೋ ಅವರನ್ನು ಲಕ್ಷಿಸಿರಿ.
ಚೆನ್ನಾಗಿ ಅಧಿಕಾರ ನಡಿಸುವ ಹಿರಿಯರನ್ನು, ಅವ ರೊಳಗೆ ವಿಶೇಷವಾಗಿ ವಾಕ್ಯದಲ್ಲಿಯೂ ಬೋಧನೆ ಯಲ್ಲಿಯೂ ಕಷ್ಟಪಡುವವರನ್ನು ಇಮ್ಮಡಿಯಾದ ಮಾನಕ್ಕೆ ಯೋಗ್ಯರೆಂದು ಎಣಿಸಬೇಕು.