ಯೇಸು ಅವರ ಆಲೋಚನೆಗಳನ್ನು ತಿಳಿದು--ನೀವು ಯಾಕೆ ನಿಮ್ಮ ಹೃದಯಗಳಲ್ಲಿ ಕೆಟ್ಟದ್ದನ್ನು ಯೋಚಿಸುತ್ತೀರಿ?
Cross references
ದೇವರು ಅದನ್ನು ವಿಚಾರಿಸನೋ? ಆತನು ಹೃದಯದ ಮರ್ಮ ಗಳನ್ನು ತಿಳಿದಿದ್ದಾನೆ.
ನಾನು ಕೂತು ಕೊಳ್ಳುವದನ್ನೂ ಏಳುವದನ್ನೂ ನೀನು ತಿಳುಕೊಂಡಿದ್ದೀ; ನನ್ನ ಆಲೋಚನೆಯನ್ನು ದೂರದಿಂದ ಗ್ರಹಿಸಿ ಕೊಂಡ್ಡಿದ್ದೀ;
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇದೂ ಸಹ ಆಗುವದು, ಅದೇ ಸಮಯದಲ್ಲಿ ನಿನ್ನ ಮನಸ್ಸಿಗೆ ಕೆಲವು ಸಂಗತಿಗಳು ಬರುವವು ನೀನು ಒಂದು ಕೆಟ್ಟಯೋಚನೆಯನ್ನು ಯೋಚಿಸುವಿ,
ಆಗ ಯೇಸು ಅವರ ಆಲೋಚನೆ ಗಳನ್ನು ತಿಳಿದು ಅವರಿಗೆ--ತನ್ನಲ್ಲಿ ವಿರೋಧವುಂಟಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ರಾಜ್ಯವು ಹಾಳಾಗುತ್ತದೆ; ಮತ್ತು ತನ್ನಲ್ಲಿ ವಿರೋಧವುಂಟಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ಪಟ್ಟಣವಾಗಲೀ ಮನೆಯಾಗಲೀ ನಿಲ್ಲುವದಿಲ್ಲ.
ಅದಕ್ಕೆ ಅವರು ತಮ್ಮ ತಮ್ಮಲ್ಲಿಯೇ--ನಾವು ರೊಟ್ಟಿಯನ್ನು ತಕ್ಕೊಳ್ಳದೆ ಇರುವ ದರಿಂದ (ಹೀಗೆ ಹೇಳುತ್ತಾನೆ) ಎಂದು ಅಂದು ಕೊಂಡರು.
ಹೀಗೆ ಅವರು ತಮ್ಮೊಳಗೆ ಅಂದುಕೊಂಡದ್ದನ್ನು ಯೇಸು ಕೂಡಲೆ ತನ್ನ ಆತ್ಮದಲ್ಲಿ ತಿಳಿದುಕೊಂಡು ಅವರಿಗೆ--ನೀವು ನಿಮ್ಮ ಹೃದಯ ಗಳಲ್ಲಿ ಯಾಕೆ ಇವುಗಳನ್ನು ಆಲೋಚಿಸುತ್ತೀರಿ ಎಂದು ಹೇಳಿ
ಆಗ ಅವರು ತಮ್ಮೊಳಗೆ--ನಮಗೆ ರೊಟ್ಟಿ ಇಲ್ಲದಿರುವದರಿಂದಲೇ ಹೀಗೆ ಹೇಳುತ್ತಾನೆಂದು ಅವರು ತರ್ಕಿಸಿಕೊಂಡರು.
ನಾವು ಕೊಡಬೇಕೋ ಇಲ್ಲವೆ ಕೊಡಬಾರದೋ ಎಂದು ಕೇಳಿದರು. ಆದರೆ ಆತನು ಅವರ ಕಪಟವನ್ನು ತಿಳಿದು ಅವರಿಗೆ--ನೀವು ನನ್ನನ್ನು ಯಾಕೆ ಶೋಧಿ ಸುತ್ತೀರಿ? ಒಂದು ನಾಣ್ಯವನ್ನು ತಂದು ನನಗೆ ತೋರಿಸಿರಿ ಎಂದು ಹೇಳಿದನು.
ಆದರೆ ಯೇಸು ಅವರ ಆಲೋಚನೆಗಳನ್ನು ತಿಳಿದು ಪ್ರತ್ಯುತ್ತರವಾಗಿ ಅವರಿಗೆ--ನೀವು ನಿಮ್ಮ ಹೃದಯಗಳಲ್ಲಿ ಅಂದು ಕೊಳ್ಳುತ್ತಿರುವದೇನು?
ಆದರೆ ಆತನು ಅವರ ಆಲೋಚನೆಗಳನ್ನು ತಿಳಿದುಕೊಂಡು ಕೈ ಬತ್ತಿದವನಾದ ಆ ಮನುಷ್ಯನಿಗೆ--ಎದ್ದು ನಡುವೆ ನಿಂತುಕೋ ಅಂದಾಗ ಅವನು ಎದ್ದು ನಿಂತುಕೊಂಡನು.
ಆಗ ಯೇಸು ಅವನಿಗೆ--ಸೀಮೋ ನನೇ, ನಾನು ನಿನಗೆ ಹೇಳುವದಕ್ಕೆ ಒಂದು ಮಾತು ಇದೆ ಅನ್ನಲು ಅವನು ಆತನಿಗೆ--ಗುರುವೇ, ಹೇಳು ಅಂದಾಗ, ಆತನು--
ಆಗ ತಮ್ಮಲ್ಲಿ ಯಾವನು ಎಲ್ಲರಿಗಿಂತ ದೊಡ್ಡ ವನು ಎಂಬ ತರ್ಕವು ಅವರೊಳಗೆ ಎದ್ದಿತು.
ಆದರೆ ಆತನು ಅವರ ಅಲೋಚನೆಗಳನ್ನು ತಿಳಿದವನಾಗಿ ಅವರಿಗೆ--ತನ್ನಲ್ಲಿ ವಿರೋಧವಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ರಾಜ್ಯವು ಹಾಳಾಗುವದು; ಒಂದು ಮನೆಯು ತನಗೆ ವಿರೋಧವಾಗಿ ವಿಭಾಗಿಸಲ್ಪಟ್ಟರೆ ಅದು ಬಿದ್ದು ಹೋಗುವದು.
ಆದರೆ ಯೇಸು ತನ್ನನ್ನು ಅವರಿಗೆ ವಶಪಡಿಸಿ ಕೊಳ್ಳಲಿಲ್ಲ; ಯಾಕಂದರೆ ಆತನು ಎಲ್ಲರನ್ನೂ ಅರಿತ ವನಾಗಿದ್ದನು.ಆತನು ಮನುಷ್ಯರ ಅಂತರಂಗವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿಕೊಡಬೇಕಾದ ಅವಶ್ಯವಿರಲಿಲ್ಲ.
ತನ್ನ ಶಿಷ್ಯರೂ ಇದಕ್ಕೆ ಗುಣು ಗುಟ್ಟುತ್ತಾರೆಂದು ಯೇಸು ತನ್ನಲ್ಲಿ ತಿಳಿದುಕೊಂಡು ಅವರಿಗೆ--ಇದು ನಿಮಗೆ ಅಭ್ಯಂತರವಾಯಿತೋ?
ಆದರೆ ನಂಬದವರು ಕೆಲವರು ನಿಮ್ಮಲ್ಲಿ ಇದ್ದಾರೆ ಅಂದನು. ಯಾಕಂದರೆ ನಂಬದವರು ಯಾರೆಂದೂ ತನ್ನನ್ನು ಹಿಡುಕೊಡು ವವನು ಯಾರೆಂದೂ ಮೊದಲಿನಿಂದಲೇ ಯೇಸು ತಿಳಿದಿದ್ದನು.
ಯೇಸು ತನ್ನನ್ನು ಪ್ರಶ್ನಿಸುವದಕ್ಕೆ ಅಪೇಕ್ಷಿಸುತ್ತಿ ದ್ದಾರೆಂದು ತಿಳಿದು ಅವರಿಗೆ--ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ನೋಡುವದಿಲ್ಲ; ತಿರಿಗಿ ಸ್ವಲ್ಪಕಾಲವಾದ ಮೇಲೆ ನನ್ನನ್ನು ನೋಡುವಿರಿ ಎಂದು ನಾನು ನಿಮಗೆ ಹೇಳಿದ್ದಕ್ಕೆ ನಿಮ್ಮ ನಿಮ್ಮೊಳಗೆ ವಿಚಾರಿಸಿಕೊಳ್ಳುತ್ತೀರೋ?
ನೀನು ಎಲ್ಲಾ ವಿಷಯಗಳನ್ನು ತಿಳಿದಾತನೆಂದೂ ಯಾವ ಮನುಷ್ಯನು ನಿನ್ನನ್ನು ಕೇಳು ವದು ಅಗತ್ಯವಿಲ್ಲವೆಂದೂ ಈಗ ನಮಗೆ ನಿಶ್ಚಯ ವಾಯಿತು; ಇದರಿಂದ ನೀನು ದೇವರ ಕಡೆಯಿಂದ ಹೊರಟು ಬಂದಿದ್ದೀ ಎಂದು ನಾವು ನಂಬುತ್ತೇವೆ ಅಂದರು.
ಆತನು ಮೂರನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಿದನು. ಆತನು ಮೂರನೆಯ ಸಾರಿ--ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು--ಕರ್ತನೇ, ನಿನಗೆ ಎಲ್ಲವುಗಳು ತಿಳಿದವೆ; ನಾನು ನಿನ
ಆಗ ಪೇತ್ರನು--ಅನನೀಯನೇ, ಪವಿತ್ರಾತ್ಮನಿಗೆ ಸುಳ್ಳು ಹೇಳಿ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ತೆಗೆದಿಡುವಂತೆ ಸೈತಾನನು ನಿನ್ನ ಹೃದಯವನ್ನು ತುಂಬಿ ಕೊಂಡದ್ದು ಯಾಕೆ?
ಆಗ ಪೇತ್ರನು ಆಕೆಗೆ--ಕರ್ತನ ಆತ್ಮನನ್ನು ಶೋಧಿಸುವದಕ್ಕಾಗಿ ನೀವು ಹೇಗೆ ಒಟ್ಟಾಗಿ ಸಮ್ಮತಿಸಿ ದ್ದೀರಿ? ಇಗೋ, ನಿನ್ನ ಗಂಡನನ್ನು ಹೂಣಿಟ್ಟವರ ಪಾದಗಳು ಬಾಗಿಲಲ್ಲಿ ಇವೆ, ಅವರು ನಿನ್ನನ್ನೂ ಹೊತ್ತು ಕೊಂಡು ಹೋಗುವರು ಅಂದನು.
ಆದರೆ ಪೇತ್ರನು ಅವನಿಗೆ--ನಿನ್ನ ಹಣವು ನಿನ್ನ ಕೂಡ ಹಾಳಾಗಿ ಹೋಗಲಿ; ನೀನು ದೇವರ ದಾನವನ್ನು ಹಣಕ್ಕೆ ಕೊಂಡುಕೊಳ್ಳಬಹುದೆಂದು ಯೋಚಿಸುತ್ತೀ ಯಲ್ಲಾ.
ಯಾಕಂದರೆ ದೇವರ ವಾಕ್ಯವು ಸಜೀವ ವಾದದ್ದು, ಶಕ್ತಿಯುಳ್ಳದ್ದು, ಯಾವ ಇಬ್ಬಾಯಿ ಕತ್ತಿ ಗಿಂತಲೂ ಹದವಾದದ್ದು, ಪ್ರಾಣ ಆತ್ಮಗಳನ್ನೂ ಕೀಲು ಮಜ್ಜೆಗಳನ್ನೂ ವಿಭಾಗಿಸುವಷ್ಟರ ಮಟ್ಟಿಗೆ ತೂರಿ ಹೋಗುವಂಥದ್ದೂ ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.
ಅವಳ ಮಕ್ಕಳನ್ನು ಕೊಂದೇಕೊಲ್ಲುವೆನು; ಆಗ ನಾನು ಅಂತರಿಂದ್ರಿಯಗ ಳನ್ನೂ ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆ ಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು; ನಿಮ್ಮಲ್ಲಿ ಪ್ರತಿಯೊಬ್ಬನಿಗೆ ನಿಮ್ಮ ಕೃತ್ಯಗಳ ಪ್ರಕಾರ ಕೊಡುವೆನು.